Homeಮುಖಪುಟಕಾಂಗ್ರೆಸ್‌ನಲ್ಲಿದ್ದು ಬಿಜೆಪಿಗೆ ಕೆಲಸ ಮಾಡುವವರನ್ನು ಮೊದಲು ಹೊರಗಿಡಬೇಕಿದೆ : ರಾಹುಲ್ ಗಾಂಧಿ

ಕಾಂಗ್ರೆಸ್‌ನಲ್ಲಿದ್ದು ಬಿಜೆಪಿಗೆ ಕೆಲಸ ಮಾಡುವವರನ್ನು ಮೊದಲು ಹೊರಗಿಡಬೇಕಿದೆ : ರಾಹುಲ್ ಗಾಂಧಿ

- Advertisement -
- Advertisement -

ಬಿಜೆಪಿಗಾಗಿ ಕೆಲಸ ಮಾಡುತ್ತಿರುವ ತಮ್ಮ ಪಕ್ಷದ ಕಾರ್ಯಕರ್ತರು ಮತ್ತು ನಾಯಕರನ್ನು ಹೊರಗಿಡುವ ಅವಶ್ಯಕತೆಯಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ (ಮಾ.8) ಹೇಳಿದ್ದಾರೆ.

ಎರಡು ದಿನಗಳ ಗುಜರಾತ್ ಭೇಟಿಯ ಎರಡನೇ ದಿನದಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ನಮ್ಮ ಪಕ್ಷ ತನ್ನ ಜವಾಬ್ದಾರಿಗಳನ್ನು ಪೂರೈಸುವವರೆಗೆ ರಾಜ್ಯದ ಜನರು ಮತ ಚಲಾಯಿಸುವುದಿಲ್ಲ” ಎಂದಿದ್ದಾರೆ.

ಮೂರು ದಶಕಗಳಿಗೂ ಹೆಚ್ಚು ಕಾಲದ ಬಿಜೆಪಿ ಆಡಳಿತದಲ್ಲಿ ತೋರಿದ ದೃಷ್ಠಿಕೋನ ವಿಫಲವಾದ ಕಾರಣ ಗುಜರಾತ್ ಜನರು ಹೊಸ ದೃಷ್ಟಿಕೋನಕ್ಕಾಗಿ ಎದುರು ನೋಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ರಾಜ್ಯವು ಹೊಸ ದಾರಿಯನ್ನು ನೋಡುತ್ತಿಲ್ಲ. ಕಾಂಗ್ರೆಸ್‌ಗೆ ಹೊಸ ದಾರಿ ತೋರಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

“ಗುಜರಾತ್‌ ಕಾಂಗ್ರೆಸ್‌ನಲ್ಲಿ ಎರಡು ರೀತಿಯ ನಾಯಕರು ಮತ್ತು ಕಾರ್ಯಕರ್ತರಿದ್ದಾರೆ. ಒಂದು ಜನರೊಂದಿಗೆ ಪ್ರಾಮಾಣಿಕರಾಗಿರುವವರು, ಅವರಿಗಾಗಿ ಹೋರಾಡುವವರು, ಅವರನ್ನು ಗೌರವಿಸುವವರು ಮತ್ತು ಕಾಂಗ್ರೆಸ್‌ನ ಸಿದ್ಧಾಂತವನ್ನು ಹೃದಯದಲ್ಲಿ ಇಟ್ಟುಕೊಂಡಿರುವವರು. ಮತ್ತೊಂದು ಜನರಿಂದ ದೂರವಾಗಿರುವರು. ಅವರು ದೂರದಲ್ಲಿ ಕುಳಿತುಕೊಳ್ಳುತ್ತಾರೆ. ಜನರನ್ನು ಗೌರವಿಸುವುದಿಲ್ಲ ಮತ್ತು ಅವರಲ್ಲಿ ಅರ್ಧದಷ್ಟು ಜನರು ಬಿಜೆಪಿಯೊಂದಿಗಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ನಮ್ಮ ಮೊದಲ ಕೆಲಸ ಈ ಎರಡು ಗುಂಪುಗಳನ್ನು ಬೇರ್ಪಡಿಸುವುದು. ನಾವು ಕಠಿಣ ಕ್ರಮ ತೆಗೆದುಕೊಂಡು 30-40 ಜನರನ್ನು ತೆಗೆದು ಹಾಕಬೇಕಾದರೆ, ಅದನ್ನೂ ಮಾಡಬೇಕು. ಒಳಗಿನಿಂದ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದರೆ, ಅವರನ್ನು ತೆಗೆದುಹಾಕಿ, ಅವರು ಹೊರಗಿನಿಂದ ಬಿಜೆಪಿಗಾಗಿ ಕೆಲಸ ಮಾಡಲು ಬಿಡಬೇಕು” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಜನರಿಂದ ಮತ ಕೇಳುವ ಮೊದಲು ತನ್ನ ಜವಾಬ್ದಾರಿಗಳನ್ನು ಪೂರೈಸಬೇಕು ಎಂದು ರಾಹುಲ್ ಒತ್ತಿ ಹೇಳಿದ್ದಾರೆ.

“ನಾವು ಇಲ್ಲಿ ಅಧಿಕಾರಕ್ಕೆ ಬಂದು ಹೋಗಿ ಸುಮಾರು 30 ವರ್ಷಗಳು ಕಳೆದಿವೆ. ನಾನು ಇಲ್ಲಿಗೆ ಬಂದಾಗಲೆಲ್ಲಾ, 2007, 2012, 2017, 2022, 2027 ರ ವಿಧಾನಸಭಾ ಚುನಾವಣೆಗಳ ಬಗ್ಗೆ ಚರ್ಚೆ ನಡೆಯುತ್ತದೆ. ಆದರೆ, ಇಲ್ಲಿ ಪ್ರಶ್ನೆ ಚುನಾವಣೆಗಳದ್ದಲ್ಲ. ನಾವು ನಮ್ಮ ಜವಾಬ್ದಾರಿಗಳನ್ನು ಪೂರೈಸುವವರೆಗೆ ಗುಜರಾತ್ ಜನರು ನಮ್ಮನ್ನು ಚುನಾವಣೆಯಲ್ಲಿ ಗೆಲ್ಲಿಸುವುದಿಲ್ಲ” ಎಂದು ರಾಹುಲ್ ಗಾಂಧಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ನಾವು ನಮ್ಮ ಜವಾಬ್ದಾರಿಗಳನ್ನು ಪೂರೈಸುವವರೆಗೆ ಗುಜರಾತ್ ಜನರನ್ನು ಅಧಿಕಾರಕ್ಕೆ ತನ್ನಿ ಎಂದು ಕೇಳಬಾರದು. ನಾವು ಇದನ್ನು ಮಾಡುವ ದಿನ ಗುಜರಾತ್ ಜನರು ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಬೆಂಬಲವನ್ನು ನೀಡುತ್ತಾರೆ ಎಂದು ನಾನು ನಿಮಗೆ ಖಾತರಿ ನೀಡುತ್ತೇನೆ” ಎಂದಿದ್ದಾರೆ.

ಗುಜರಾತ್‌ ಕಾಂಗ್ರೆಸ್‌ ಘಟಕದ ಕಾರ್ಯವೈಖರಿಯನ್ನು ಟೀಕಿಸಿದ ರಾಹುಲ್ ಗಾಂಧಿ, “ಗುಜರಾತ್ ಮುಂದುವರಿಯಲು ಸಿದ್ದವಿದೆ. ನಾನು ಕಾಂಗ್ರೆಸ್ ಪಕ್ಷದ ಸದಸ್ಯ, ಆದರೆ ನಾನು ದಾರಿ ತೋರಿಸಲು ಸಾಧ್ಯವಿಲ್ಲ ಎನ್ನುತ್ತಿದ್ದೇನೆ. ನಾನು ನಾಚಿಕೆಯಿಂದ, ಭಯದಿಂದ ಮಾತನಾಡುತ್ತಿಲ್ಲ” ಎಂದು ಹೇಳಿದ್ದಾರೆ.

“ನಮ್ಮ ಕಾರ್ಯಕರ್ತರಾಗಲಿ, ರಾಹುಲ್ ಗಾಂಧಿಯಾಗಲಿ, ನಮ್ಮ ಪ್ರಧಾನ ಕಾರ್ಯದರ್ಶಿಯಾಗಲಿ, ನಮ್ಮ ಪಿಸಿಸಿ ಅಧ್ಯಕ್ಷರಾಗಲಿ, ಗುಜರಾತ್‌ಗೆ ದಾರಿ ತೋರಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎಂಬುದನ್ನು ನಾನು ನಿಮ್ಮ ಮುಂದೆ ಹೇಳಲು ಬಯಸುತ್ತೇನೆ. ಇಲ್ಲಿಯವರೆಗೆ, ಕಳೆದ 30 ವರ್ಷಗಳಲ್ಲಿ ಗುಜರಾತ್ ನಮ್ಮಿಂದ, ನನ್ನಿಂದ, ನಮ್ಮ ಪಿಸಿಸಿ ಅಧ್ಯಕ್ಷರಿಂದ, ನಮ್ಮ ಉಸ್ತುವಾರಿಯಿಂದ ಏನನ್ನು ನಿರೀಕ್ಷಿಸಿದೆಯೋ ಅದನ್ನು ನಾವು ಪೂರೈಸಲು ಸಾಧ್ಯವಾಗಿಲ್ಲ” ಎಂದು ರಾಹುಲ್ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ.

ಕಾಂಗ್ರೆಸ್‌ನ ಚುನಾವಣಾ ಬಲದ ಬಗ್ಗೆ ಮಾತನಾಡಿದ ಅವರು, “ಗುಜರಾತ್‌ನಲ್ಲಿ ವಿರೋಧ ಪಕ್ಷಗಳು ಶೇಕಡಾ 40 ರಷ್ಟು ಮತಗಳನ್ನು ಹೊಂದಿವೆ. ಗೆಲ್ಲಲು ನಮಗೆ ಕೇವಲ ಶೇಕಡಾ 5ರಷ್ಟು ಹೆಚ್ಚಳ ಮಾತ್ರ ಬೇಕು. ತೆಲಂಗಾಣದಲ್ಲಿ ನಾವು ಮತ ​​ಪಾಲನ್ನು ಶೇಕಡಾ 22ರಷ್ಟು ಹೆಚ್ಚಿಸಿದ್ದೇವೆ. ಇಲ್ಲಿಯೂ ಸಹ ಅದನ್ನು ಮಾಡಬಹುದು. ಆದರೆ ಪಕ್ಷವನ್ನು ಫಿಲ್ಟರ್ ಮಾಡದೆ, ಅದು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಜನರೊಂದಿಗೆ ಮತ್ತೆ ಸಂಪರ್ಕ ಸಾಧಿಸುವಂತೆ ರಾಹುಲ್ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ ಮತ್ತು ಅವರ ಬದ್ಧತೆಯ ಭರವಸೆ ನೀಡಿದ್ದಾರೆ. “ನಾನು ಗುಜರಾತ್ ಅನ್ನು ಅರ್ಥಮಾಡಿಕೊಳ್ಳಲು ಬಯಸುತ್ತೇನೆ, ಗುಜರಾತ್ ಜನರೊಂದಿಗೆ ಸಂಬಂಧವನ್ನು ಬೆಳೆಸಲು ಬಯಸುತ್ತೇನೆ. ವಿಶ್ವಾಸವು ನಿಮ್ಮೊಳಗೆ ಇದೆ; ಅದನ್ನು ಹೊರತರುವುದು ನನ್ನ ಕೆಲಸ” ಎಂದು ಹೇಳಿದ್ದಾರೆ.

ಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್‌ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Rahul Gandhiji… Am telling u behind ur Circle all Entire Leaders including #kcvenugopal #mallikarjunkarge#Change these people. They need Priyaka Gandhi to become prime minister not for u.. watch social media people like priyanka Gandhi
    My SUGGESTION TRY..

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...