Homeಮುಖಪುಟಕಾಂಗ್ರೆಸ್‌ನಲ್ಲಿದ್ದು ಬಿಜೆಪಿಗೆ ಕೆಲಸ ಮಾಡುವವರನ್ನು ಮೊದಲು ಹೊರಗಿಡಬೇಕಿದೆ : ರಾಹುಲ್ ಗಾಂಧಿ

ಕಾಂಗ್ರೆಸ್‌ನಲ್ಲಿದ್ದು ಬಿಜೆಪಿಗೆ ಕೆಲಸ ಮಾಡುವವರನ್ನು ಮೊದಲು ಹೊರಗಿಡಬೇಕಿದೆ : ರಾಹುಲ್ ಗಾಂಧಿ

- Advertisement -
- Advertisement -

ಬಿಜೆಪಿಗಾಗಿ ಕೆಲಸ ಮಾಡುತ್ತಿರುವ ತಮ್ಮ ಪಕ್ಷದ ಕಾರ್ಯಕರ್ತರು ಮತ್ತು ನಾಯಕರನ್ನು ಹೊರಗಿಡುವ ಅವಶ್ಯಕತೆಯಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ (ಮಾ.8) ಹೇಳಿದ್ದಾರೆ.

ಎರಡು ದಿನಗಳ ಗುಜರಾತ್ ಭೇಟಿಯ ಎರಡನೇ ದಿನದಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ನಮ್ಮ ಪಕ್ಷ ತನ್ನ ಜವಾಬ್ದಾರಿಗಳನ್ನು ಪೂರೈಸುವವರೆಗೆ ರಾಜ್ಯದ ಜನರು ಮತ ಚಲಾಯಿಸುವುದಿಲ್ಲ” ಎಂದಿದ್ದಾರೆ.

ಮೂರು ದಶಕಗಳಿಗೂ ಹೆಚ್ಚು ಕಾಲದ ಬಿಜೆಪಿ ಆಡಳಿತದಲ್ಲಿ ತೋರಿದ ದೃಷ್ಠಿಕೋನ ವಿಫಲವಾದ ಕಾರಣ ಗುಜರಾತ್ ಜನರು ಹೊಸ ದೃಷ್ಟಿಕೋನಕ್ಕಾಗಿ ಎದುರು ನೋಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ರಾಜ್ಯವು ಹೊಸ ದಾರಿಯನ್ನು ನೋಡುತ್ತಿಲ್ಲ. ಕಾಂಗ್ರೆಸ್‌ಗೆ ಹೊಸ ದಾರಿ ತೋರಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

“ಗುಜರಾತ್‌ ಕಾಂಗ್ರೆಸ್‌ನಲ್ಲಿ ಎರಡು ರೀತಿಯ ನಾಯಕರು ಮತ್ತು ಕಾರ್ಯಕರ್ತರಿದ್ದಾರೆ. ಒಂದು ಜನರೊಂದಿಗೆ ಪ್ರಾಮಾಣಿಕರಾಗಿರುವವರು, ಅವರಿಗಾಗಿ ಹೋರಾಡುವವರು, ಅವರನ್ನು ಗೌರವಿಸುವವರು ಮತ್ತು ಕಾಂಗ್ರೆಸ್‌ನ ಸಿದ್ಧಾಂತವನ್ನು ಹೃದಯದಲ್ಲಿ ಇಟ್ಟುಕೊಂಡಿರುವವರು. ಮತ್ತೊಂದು ಜನರಿಂದ ದೂರವಾಗಿರುವರು. ಅವರು ದೂರದಲ್ಲಿ ಕುಳಿತುಕೊಳ್ಳುತ್ತಾರೆ. ಜನರನ್ನು ಗೌರವಿಸುವುದಿಲ್ಲ ಮತ್ತು ಅವರಲ್ಲಿ ಅರ್ಧದಷ್ಟು ಜನರು ಬಿಜೆಪಿಯೊಂದಿಗಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ನಮ್ಮ ಮೊದಲ ಕೆಲಸ ಈ ಎರಡು ಗುಂಪುಗಳನ್ನು ಬೇರ್ಪಡಿಸುವುದು. ನಾವು ಕಠಿಣ ಕ್ರಮ ತೆಗೆದುಕೊಂಡು 30-40 ಜನರನ್ನು ತೆಗೆದು ಹಾಕಬೇಕಾದರೆ, ಅದನ್ನೂ ಮಾಡಬೇಕು. ಒಳಗಿನಿಂದ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದರೆ, ಅವರನ್ನು ತೆಗೆದುಹಾಕಿ, ಅವರು ಹೊರಗಿನಿಂದ ಬಿಜೆಪಿಗಾಗಿ ಕೆಲಸ ಮಾಡಲು ಬಿಡಬೇಕು” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಜನರಿಂದ ಮತ ಕೇಳುವ ಮೊದಲು ತನ್ನ ಜವಾಬ್ದಾರಿಗಳನ್ನು ಪೂರೈಸಬೇಕು ಎಂದು ರಾಹುಲ್ ಒತ್ತಿ ಹೇಳಿದ್ದಾರೆ.

“ನಾವು ಇಲ್ಲಿ ಅಧಿಕಾರಕ್ಕೆ ಬಂದು ಹೋಗಿ ಸುಮಾರು 30 ವರ್ಷಗಳು ಕಳೆದಿವೆ. ನಾನು ಇಲ್ಲಿಗೆ ಬಂದಾಗಲೆಲ್ಲಾ, 2007, 2012, 2017, 2022, 2027 ರ ವಿಧಾನಸಭಾ ಚುನಾವಣೆಗಳ ಬಗ್ಗೆ ಚರ್ಚೆ ನಡೆಯುತ್ತದೆ. ಆದರೆ, ಇಲ್ಲಿ ಪ್ರಶ್ನೆ ಚುನಾವಣೆಗಳದ್ದಲ್ಲ. ನಾವು ನಮ್ಮ ಜವಾಬ್ದಾರಿಗಳನ್ನು ಪೂರೈಸುವವರೆಗೆ ಗುಜರಾತ್ ಜನರು ನಮ್ಮನ್ನು ಚುನಾವಣೆಯಲ್ಲಿ ಗೆಲ್ಲಿಸುವುದಿಲ್ಲ” ಎಂದು ರಾಹುಲ್ ಗಾಂಧಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ನಾವು ನಮ್ಮ ಜವಾಬ್ದಾರಿಗಳನ್ನು ಪೂರೈಸುವವರೆಗೆ ಗುಜರಾತ್ ಜನರನ್ನು ಅಧಿಕಾರಕ್ಕೆ ತನ್ನಿ ಎಂದು ಕೇಳಬಾರದು. ನಾವು ಇದನ್ನು ಮಾಡುವ ದಿನ ಗುಜರಾತ್ ಜನರು ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಬೆಂಬಲವನ್ನು ನೀಡುತ್ತಾರೆ ಎಂದು ನಾನು ನಿಮಗೆ ಖಾತರಿ ನೀಡುತ್ತೇನೆ” ಎಂದಿದ್ದಾರೆ.

ಗುಜರಾತ್‌ ಕಾಂಗ್ರೆಸ್‌ ಘಟಕದ ಕಾರ್ಯವೈಖರಿಯನ್ನು ಟೀಕಿಸಿದ ರಾಹುಲ್ ಗಾಂಧಿ, “ಗುಜರಾತ್ ಮುಂದುವರಿಯಲು ಸಿದ್ದವಿದೆ. ನಾನು ಕಾಂಗ್ರೆಸ್ ಪಕ್ಷದ ಸದಸ್ಯ, ಆದರೆ ನಾನು ದಾರಿ ತೋರಿಸಲು ಸಾಧ್ಯವಿಲ್ಲ ಎನ್ನುತ್ತಿದ್ದೇನೆ. ನಾನು ನಾಚಿಕೆಯಿಂದ, ಭಯದಿಂದ ಮಾತನಾಡುತ್ತಿಲ್ಲ” ಎಂದು ಹೇಳಿದ್ದಾರೆ.

“ನಮ್ಮ ಕಾರ್ಯಕರ್ತರಾಗಲಿ, ರಾಹುಲ್ ಗಾಂಧಿಯಾಗಲಿ, ನಮ್ಮ ಪ್ರಧಾನ ಕಾರ್ಯದರ್ಶಿಯಾಗಲಿ, ನಮ್ಮ ಪಿಸಿಸಿ ಅಧ್ಯಕ್ಷರಾಗಲಿ, ಗುಜರಾತ್‌ಗೆ ದಾರಿ ತೋರಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎಂಬುದನ್ನು ನಾನು ನಿಮ್ಮ ಮುಂದೆ ಹೇಳಲು ಬಯಸುತ್ತೇನೆ. ಇಲ್ಲಿಯವರೆಗೆ, ಕಳೆದ 30 ವರ್ಷಗಳಲ್ಲಿ ಗುಜರಾತ್ ನಮ್ಮಿಂದ, ನನ್ನಿಂದ, ನಮ್ಮ ಪಿಸಿಸಿ ಅಧ್ಯಕ್ಷರಿಂದ, ನಮ್ಮ ಉಸ್ತುವಾರಿಯಿಂದ ಏನನ್ನು ನಿರೀಕ್ಷಿಸಿದೆಯೋ ಅದನ್ನು ನಾವು ಪೂರೈಸಲು ಸಾಧ್ಯವಾಗಿಲ್ಲ” ಎಂದು ರಾಹುಲ್ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ.

ಕಾಂಗ್ರೆಸ್‌ನ ಚುನಾವಣಾ ಬಲದ ಬಗ್ಗೆ ಮಾತನಾಡಿದ ಅವರು, “ಗುಜರಾತ್‌ನಲ್ಲಿ ವಿರೋಧ ಪಕ್ಷಗಳು ಶೇಕಡಾ 40 ರಷ್ಟು ಮತಗಳನ್ನು ಹೊಂದಿವೆ. ಗೆಲ್ಲಲು ನಮಗೆ ಕೇವಲ ಶೇಕಡಾ 5ರಷ್ಟು ಹೆಚ್ಚಳ ಮಾತ್ರ ಬೇಕು. ತೆಲಂಗಾಣದಲ್ಲಿ ನಾವು ಮತ ​​ಪಾಲನ್ನು ಶೇಕಡಾ 22ರಷ್ಟು ಹೆಚ್ಚಿಸಿದ್ದೇವೆ. ಇಲ್ಲಿಯೂ ಸಹ ಅದನ್ನು ಮಾಡಬಹುದು. ಆದರೆ ಪಕ್ಷವನ್ನು ಫಿಲ್ಟರ್ ಮಾಡದೆ, ಅದು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಜನರೊಂದಿಗೆ ಮತ್ತೆ ಸಂಪರ್ಕ ಸಾಧಿಸುವಂತೆ ರಾಹುಲ್ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ ಮತ್ತು ಅವರ ಬದ್ಧತೆಯ ಭರವಸೆ ನೀಡಿದ್ದಾರೆ. “ನಾನು ಗುಜರಾತ್ ಅನ್ನು ಅರ್ಥಮಾಡಿಕೊಳ್ಳಲು ಬಯಸುತ್ತೇನೆ, ಗುಜರಾತ್ ಜನರೊಂದಿಗೆ ಸಂಬಂಧವನ್ನು ಬೆಳೆಸಲು ಬಯಸುತ್ತೇನೆ. ವಿಶ್ವಾಸವು ನಿಮ್ಮೊಳಗೆ ಇದೆ; ಅದನ್ನು ಹೊರತರುವುದು ನನ್ನ ಕೆಲಸ” ಎಂದು ಹೇಳಿದ್ದಾರೆ.

ಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್‌ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Rahul Gandhiji… Am telling u behind ur Circle all Entire Leaders including #kcvenugopal #mallikarjunkarge#Change these people. They need Priyaka Gandhi to become prime minister not for u.. watch social media people like priyanka Gandhi
    My SUGGESTION TRY..

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...