HomeUncategorizedಅರುಣಾಚಲ ಪ್ರದೇಶ ಸೇರಿಸಿ ಚೀನಾ ಮ್ಯಾಪ್ ರಿಲೀಸ್: ಮೋದಿ ಪ್ರತಿಕ್ರಿಯಿಸುವಂತೆ ರಾಹುಲ್ ಗಾಂಧಿ ಆಗ್ರಹ

ಅರುಣಾಚಲ ಪ್ರದೇಶ ಸೇರಿಸಿ ಚೀನಾ ಮ್ಯಾಪ್ ರಿಲೀಸ್: ಮೋದಿ ಪ್ರತಿಕ್ರಿಯಿಸುವಂತೆ ರಾಹುಲ್ ಗಾಂಧಿ ಆಗ್ರಹ

- Advertisement -
- Advertisement -

ಅಕ್ಸಾಯ್ ಚಿನ್ ಮತ್ತು ಅರುಣಾಚಲ ಪ್ರದೇಶವನ್ನು ಸೇರಿಸಿ ಚೀನಾ ಬಿಡುಗಡೆ ಮಾಡಿದ ಹೊಸ ಮ್ಯಾಪ್‌ನ ಬಗ್ಗೆ ಪ್ರತಿಕ್ರಿಯಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಆಗ್ರಹಿಸಿದ್ದಾರೆ.

ಲಡಾಖ್‌ನಲ್ಲಿ ಒಂದು ಇಂಚು ಭೂಮಿಯೂ ನಷ್ಟವಾಗಿಲ್ಲ ಎಂದು ಪ್ರಧಾನಿ ಹೇಳಿದ್ದು ಸುಳ್ಳು ಎಂದು ನಾನು ವರ್ಷಗಳಿಂದ ಹೇಳುತ್ತಿದ್ದೇನೆ. ಚೀನಾ ಭೂಮಿ ಅತಿಕ್ರಮಿಸಿದೆ ಎಂದು ಇಡೀ ಲಡಾಖ್‌ಗೆ ತಿಳಿದಿದೆ. ಈ ನಕ್ಷೆಯ ವಿಷಯವು ತುಂಬಾ ಗಂಭೀರವಾಗಿದೆ. ಅವರು ನಮ್ಮ ಭೂಮಿಯನ್ನು ಕಿತ್ತುಕೊಂಡಿದ್ದಾರೆ. ಈ ಬಗ್ಗೆ ಪ್ರಧಾನಿ ಪ್ರತಿಕ್ರಿಯಿಸಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಪ್ರದೇಶ, ತೈವಾನ್ ಮತ್ತು ವಿವಾದಿತ ದಕ್ಷಿಣ ಚೀನಾ ಸಮುದ್ರವನ್ನು ಒಳಗೊಂಡಿರುವ 2023ರ ಮ್ಯಾಪ್‌ನ್ನು ಚೀನಾ ಸೋಮವಾರ ಬಿಡುಗಡೆ ಮಾಡಿದೆ.

ಗ್ಲೋಬಲ್ ಟೈಮ್ಸ್ ಪ್ರದರ್ಶಿಸಿದ ನಕ್ಷೆಯು ದಕ್ಷಿಣ ಟಿಬೆಟ್ ಎಂದು ಚೀನಾ ಹೇಳಿಕೊಳ್ಳುವ ಅರುಣಾಚಲ ಪ್ರದೇಶ ಮತ್ತು 1962ರ ಯುದ್ಧದಲ್ಲಿ ಆಕ್ರಮಿಸಿಕೊಂಡ ಅಕ್ಸಾಯ್ ಚಿನ್‌ನ್ನು ಚೀನಾದ ಭಾಗವಾಗಿ ತೋರಿಸಿದೆ. ನಕ್ಷೆಯಲ್ಲಿ ಇದಲ್ಲದೆ ಚೀನಾದ ಭೂಪ್ರದೇಶವಾಗಿ ತೈವಾನ್ ದ್ವೀಪ ಮತ್ತು ದಕ್ಷಿಣ ಚೀನಾ ಸಮುದ್ರದ ಹೆಚ್ಚಿನ ಭಾಗವನ್ನು ತೋರಿಸಲಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಎನ್‌ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ನಕ್ಷೆಗೆ ಪ್ರಾಮುಖ್ಯತೆ ಕೊಡಬೇಕಾಗಿಲ್ಲ ಮತ್ತು ಚೀನಾವು ಅಂತಹ ನಕ್ಷೆಗಳನ್ನು ಬಿಡುಗಡೆ ಮಾಡುವ  ಕೆಟ್ಟ ಅಭ್ಯಾಸ ಹೊಂದಿದೆ ಎಂದು ಹೇಳಿದರು.

ಚೀನಾವು ತಮ್ಮದಲ್ಲದ ಪ್ರದೇಶಗಳ ನಕ್ಷೆಗಳನ್ನು ಹಾಕಿದೆ. ಇದು ಹಳೆಯ ಅಭ್ಯಾಸ. ಕೇವಲ ಭಾರತದ ಕೆಲವು ಭಾಗಗಳೊಂದಿಗೆ ನಕ್ಷೆಗಳನ್ನು ಹಾಕುವುದರಿಂದ ಏನೂ ಬದಲಾಗುವುದಿಲ್ಲ. ನಮ್ಮ ಭೂಭಾಗದ ಬಗ್ಗೆ ಸರಕಾರಕ್ಕೆ ಸರಿಯಾಗಿ ತಿಳಿದಿದೆ ಎಂದು ಹೇಳಿದ್ದಾರೆ.

ಭಾರತವು  ನಕ್ಷೆಯ  ವಿರುದ್ಧ ರಾಜತಾಂತ್ರಿಕವಾಗಿ  ಪ್ರತಿಭಟನೆಗಳನ್ನು ಪ್ರಾರಂಭಿಸಿದೆ. ನಾವು ಚೀನಾದ ಹಕ್ಕುಸ್ವಾಮ್ಯವನ್ನು ತಿರಸ್ಕರಿಸುತ್ತೇವೆ. ಏಕೆಂದರೆ ಅವುಗಳಿಗೆ ಯಾವುದೇ ಆಧಾರವಿಲ್ಲ. ಚೀನಾದ ಕಡೆಯಿಂದ ಇಂತಹ ಕ್ರಮಗಳು ಗಡಿ ಪ್ರಶ್ನೆಯ ಪರಿಹಾರವನ್ನು ಸಂಕೀರ್ಣಗೊಳಿಸುತ್ತವೆ ಎಂದು ವಿದೇಶಾಗ ವ್ಯವಹಾರಗಳ ಇಲಾಖೆಯ ವಕ್ತಾರ ಅರಿಂದಮ್ ಬಾಗ್ಚಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ಗಾಜಿಯಾಬಾದ್: ಮೇಲ್ವಿಚಾರಕರಿಂದ ಅತ್ಯಾಚಾರಕ್ಕೊಳಗಾದ ಬಳಿಕ ಮಹಿಳಾ ಭದ್ರತಾ ಸಿಬ್ಬಂದಿ ಸಾವು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...