Homeಮುಖಪುಟರಾಹುಲ್ ಗಾಂಧಿ ಟ್ವಿಟರ್‌ ಖಾತೆ ಅನ್‌ಲಾಕ್‌: ಕಾಂಗ್ರೆಸ್‌

ರಾಹುಲ್ ಗಾಂಧಿ ಟ್ವಿಟರ್‌ ಖಾತೆ ಅನ್‌ಲಾಕ್‌: ಕಾಂಗ್ರೆಸ್‌

- Advertisement -
- Advertisement -

ಒಂಬತ್ತು ವರ್ಷದ ದಲಿತ ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಫೋಟೋಗಳನ್ನು ಟ್ವೀಟ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಟ್ವಿಟರ್‌ ಖಾತೆ ಅಮಾನತುಗೊಂಡಿತ್ತು. ಇದೀಗ ಆಗಸ್ಟ್‌ 14 ರ ಶನಿವಾರದಂದು ಅವರ ಖಾತೆಯನ್ನು ಮತ್ತೇ ಮರುಸ್ಥಾಪಿಸಲಾಗಿದೆ.

“ರಾಹುಲ್ ಗಾಂಧಿಯ ಟ್ವಿಟರ್ ಖಾತೆಯನ್ನು ಅನ್‌ಲಾಕ್ ಮಾಡಲಾಗಿದೆ” ಎಂದು ಪಕ್ಷದ ವಕ್ತಾರರೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ರಾಹುಲ್‌ ಗಾಂಧಿಯ ಖಾತೆಯೊಂದಿಗೆ ಅಮಾನತುಗೊಂಡ ಇತರ ಕೆಲವು ನಾಯಕರ ಖಾತೆಗಳನ್ನು ಸಹ ಮರುಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಟ್ವಿಟರ್‌ ಖಾತೆ ಸ್ಥಗಿತ: ‘ಪ್ರಜಾಪ್ರಭುತ್ವದ ಮೇಲಿನ ದಾಳಿ’ ಎಂದ ರಾಹುಲ್ ಗಾಂಧಿ

‘ಪ್ರಜಾಪ್ರಭುತ್ವದ ರಚನೆಯ ಮೇಲೆ ದಾಳಿ’: ಗಾಂಧಿ

ಟ್ವಿಟರ್ ಕಾಂಗ್ರೆಸ್ ಪಕ್ಷ ಮತ್ತು ಅದರ ಹಲವು ನಾಯಕರ ಖಾತೆಗಳನ್ನು ಲಾಕ್ ಮಾಡಿದ ಒಂದು ದಿನದ ನಂತರ, ಆಗಸ್ಟ್ 13 ರ ಶುಕ್ರವಾರದಂದು ವಿಡಿಯೋವೊಂದನ್ನು ಯೂಟ್ಯೂಬ್‌ನಲ್ಲಿ ಪೋಸ್ಟ್ ಮಾಡಿದ್ದ ರಾಹುಲ್ ಗಾಂಧ, ಟ್ವಿಟರ್‌ನ ಈ ಕ್ರಮದ ವಿರುದ್ಧ ತನ್ನ ಪ್ರತಿಭಟನೆಯನ್ನು ದಾಖಲಿಸಿದ್ದರು.

“ಇದು ದೇಶದ ಪ್ರಜಾಪ್ರಭುತ್ವ ಸಂರಚನೆಯ ಮೇಲಿನ ದಾಳಿ” ಎಂದು ರಾಹುಲ್‌ ಗಾಂಧಿ “ಟ್ವಿಟ್ಟರ್‌ನ ಅಪಾಯಕಾರಿ ಆಟ” ಎಂಬ ಶೀರ್ಷಿಕೆಯಿರುವ ವೀಡಿಯೊದಲ್ಲಿ ಹೇಳಿದ್ದರು.

“ನನ್ನ ಟ್ವಿಟ್ಟರ್‌ ಅನ್ನು ಲಾಕ್‌ ಮಾಡುವ ಮೂಲಕ, ಅವರು ನಮ್ಮ ರಾಜಕೀಯ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ನಮ್ಮ ರಾಜಕೀಯವನ್ನು ವ್ಯಾಖ್ಯಾನಿಸಿ ಒಂದು ಕಂಪೆನಿಯು ತನ್ನ ವ್ಯವಹಾರವನ್ನು ಮಾಡುತ್ತಿದೆ. ಒಬ್ಬ ರಾಜಕಾರಣಿಯಾಗಿ, ನಾನು ಅದನ್ನು ಇಷ್ಟಪಡುವುದಿಲ್ಲ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದರು.

“ಟ್ವಿಟರ್‌ ಖಾತೆ ನಿರ್ಬಂಧ ರಾಹುಲ್ ಗಾಂಧಿಯ ಮೇಲಿನ ದಾಳಿ ಅಲ್ಲ. ನಾನು 19 ರಿಂದ 20 ಮಿಲಿಯನ್ ಫಾಲೋವರ್ಸ್ ಹೊಂದಿದ್ದೇನೆ. ನೀವು ಅವರ ಅಭಿಪ್ರಾಯದ ಹಕ್ಕನ್ನು ಕೂಡ ನಿರಾಕರಿಸುತ್ತಿದ್ದೀರಿ” ಎಂದು ರಾಹುಲ್ ಗಾಂಧಿ ಯೂಟ್ಯೂಬ್ ವಿಡಿಯೊ ಮೂಲಕ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಜೊತೆಯಲ್ಲಿರುತ್ತೇನೆ: ರಾಹುಲ್ ಗಾಂಧಿ

ಟ್ವಿಟ್ಟರ್ ಕಂಪನಿಯನ್ನು ಪಕ್ಷಪಾತಿ ಎಂದು ಕರೆದಿದ್ದ ರಾಹುಲ್ ಗಾಂಧಿ, “ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿಯಾಗುತ್ತಿದೆ. ಸಂಸತ್ತಿನಲ್ಲಿ ನಮಗೆ ಮಾತನಾಡಲು ಅವಕಾಶವಿಲ್ಲ. ಮಾಧ್ಯಮವನ್ನು ನಿಯಂತ್ರಿಸಲಾಗುತ್ತಿದೆ. ಇಂತಹ ಸಮಯದಲ್ಲಿ ನಾವು ಟ್ವಿಟರ್‌ನಲ್ಲಿ ನಮ್ಮ ಆಲೋಚನೆಗಳನ್ನು ಹಾಕಬಹುದು ಎಂದು ನಾನು ಭಾವಿಸಿದೆ. ಆದರೆ ಅದು ಸಾಧ್ಯವಿಲ್ಲ. ಟ್ವಿಟರ್ ವಾಸ್ತವವಾಗಿ ತಟಸ್ಥ, ವಸ್ತುನಿಷ್ಠ ವೇದಿಕೆಯಲ್ಲ ಎಂಬುದು ಈಗ ಸ್ಪಷ್ಟವಾಗಿದೆ. ಅದು ಸರ್ಕಾರ ಹೇಳುವುದನ್ನು ಕೇಳುತ್ತದೆ” ಎಂದು ಆರೋಪಿಸಿದ್ದರು.

ಟ್ವಿಟರ್ ಪ್ರತಿಕ್ರಿಯೆ

ಟ್ವಿಟರ್ ತಾನು ಯಾವುದೆ ಪ್ರಭಾವಕ್ಕೆ ಒಳಗಾಗಿಲ್ಲ ಎಂದು ಹೇಳಿದ್ದು, “ನಿಯಮಗಳನ್ನು ನ್ಯಾಯಯುತವಾಗಿ ಮತ್ತು ನಿಷ್ಪಕ್ಷಪಾತವಾಗಿ ಜಾರಿಗೊಳಿಸಲಾಗಿದೆ” ಎಂದು ತಿಳಿಸಿದೆ.

“ನಮ್ಮ ನಿಯಮಗಳನ್ನು ಉಲ್ಲಂಘಿಸಿ ಚಿತ್ರವನ್ನು ಪೋಸ್ಟ್ ಮಾಡಿದ ಹಲವಾರು ಟ್ವೀಟ್‌ಗಳ ಮೇಲೆ ನಾವು ಕ್ರಿಯಾಶೀಲ ಕ್ರಮ ಕೈಗೊಂಡಿದ್ದೇವೆ. ಕೆಲವು ಖಾಸಗಿ ಮಾಹಿತಿಯು ಹೆಚ್ಚಿನ ಅಪಾಯವನ್ನು ಹೊಂದಿದೆ. ಟ್ವಿಟರ್‌ನ ಗುರಿ ಯಾವಾಗಲೂ ವ್ಯಕ್ತಿಗಳ ಗೌಪ್ಯತೆ ಮತ್ತು ಸುರಕ್ಷತೆಯನ್ನು ರಕ್ಷಿಸುವುದು” ಎಂದು ಟ್ವಿಟರ್‌‌ ಹೇಳಿದೆ.

ಇದನ್ನೂ ಓದಿ: ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ವಿಡಿಯೋ ನೋಡಿ: ಬೇಗೂರು ಕೆರೆ ಉಳಿಸುವಂತೆ ಹೈಕೋರ್ಟ್ ಆದೇಶ. ಅಕ್ರಮವಾಗಿ ಶಿವ ವಿಗ್ರಹ ಅನಾವರಣಗೊಳಿಸಿದವರ ವಿರುದ್ಧ ಕ್ರಮಕ್ಕೆ ತಾಕೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...