Homeಮುಖಪುಟರಾಹುಲ್ ಗಾಂಧಿ ಟ್ವಿಟರ್‌ ಖಾತೆ ಅನ್‌ಲಾಕ್‌: ಕಾಂಗ್ರೆಸ್‌

ರಾಹುಲ್ ಗಾಂಧಿ ಟ್ವಿಟರ್‌ ಖಾತೆ ಅನ್‌ಲಾಕ್‌: ಕಾಂಗ್ರೆಸ್‌

- Advertisement -
- Advertisement -

ಒಂಬತ್ತು ವರ್ಷದ ದಲಿತ ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಫೋಟೋಗಳನ್ನು ಟ್ವೀಟ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಟ್ವಿಟರ್‌ ಖಾತೆ ಅಮಾನತುಗೊಂಡಿತ್ತು. ಇದೀಗ ಆಗಸ್ಟ್‌ 14 ರ ಶನಿವಾರದಂದು ಅವರ ಖಾತೆಯನ್ನು ಮತ್ತೇ ಮರುಸ್ಥಾಪಿಸಲಾಗಿದೆ.

“ರಾಹುಲ್ ಗಾಂಧಿಯ ಟ್ವಿಟರ್ ಖಾತೆಯನ್ನು ಅನ್‌ಲಾಕ್ ಮಾಡಲಾಗಿದೆ” ಎಂದು ಪಕ್ಷದ ವಕ್ತಾರರೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ರಾಹುಲ್‌ ಗಾಂಧಿಯ ಖಾತೆಯೊಂದಿಗೆ ಅಮಾನತುಗೊಂಡ ಇತರ ಕೆಲವು ನಾಯಕರ ಖಾತೆಗಳನ್ನು ಸಹ ಮರುಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಟ್ವಿಟರ್‌ ಖಾತೆ ಸ್ಥಗಿತ: ‘ಪ್ರಜಾಪ್ರಭುತ್ವದ ಮೇಲಿನ ದಾಳಿ’ ಎಂದ ರಾಹುಲ್ ಗಾಂಧಿ

‘ಪ್ರಜಾಪ್ರಭುತ್ವದ ರಚನೆಯ ಮೇಲೆ ದಾಳಿ’: ಗಾಂಧಿ

ಟ್ವಿಟರ್ ಕಾಂಗ್ರೆಸ್ ಪಕ್ಷ ಮತ್ತು ಅದರ ಹಲವು ನಾಯಕರ ಖಾತೆಗಳನ್ನು ಲಾಕ್ ಮಾಡಿದ ಒಂದು ದಿನದ ನಂತರ, ಆಗಸ್ಟ್ 13 ರ ಶುಕ್ರವಾರದಂದು ವಿಡಿಯೋವೊಂದನ್ನು ಯೂಟ್ಯೂಬ್‌ನಲ್ಲಿ ಪೋಸ್ಟ್ ಮಾಡಿದ್ದ ರಾಹುಲ್ ಗಾಂಧ, ಟ್ವಿಟರ್‌ನ ಈ ಕ್ರಮದ ವಿರುದ್ಧ ತನ್ನ ಪ್ರತಿಭಟನೆಯನ್ನು ದಾಖಲಿಸಿದ್ದರು.

“ಇದು ದೇಶದ ಪ್ರಜಾಪ್ರಭುತ್ವ ಸಂರಚನೆಯ ಮೇಲಿನ ದಾಳಿ” ಎಂದು ರಾಹುಲ್‌ ಗಾಂಧಿ “ಟ್ವಿಟ್ಟರ್‌ನ ಅಪಾಯಕಾರಿ ಆಟ” ಎಂಬ ಶೀರ್ಷಿಕೆಯಿರುವ ವೀಡಿಯೊದಲ್ಲಿ ಹೇಳಿದ್ದರು.

“ನನ್ನ ಟ್ವಿಟ್ಟರ್‌ ಅನ್ನು ಲಾಕ್‌ ಮಾಡುವ ಮೂಲಕ, ಅವರು ನಮ್ಮ ರಾಜಕೀಯ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ನಮ್ಮ ರಾಜಕೀಯವನ್ನು ವ್ಯಾಖ್ಯಾನಿಸಿ ಒಂದು ಕಂಪೆನಿಯು ತನ್ನ ವ್ಯವಹಾರವನ್ನು ಮಾಡುತ್ತಿದೆ. ಒಬ್ಬ ರಾಜಕಾರಣಿಯಾಗಿ, ನಾನು ಅದನ್ನು ಇಷ್ಟಪಡುವುದಿಲ್ಲ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದರು.

“ಟ್ವಿಟರ್‌ ಖಾತೆ ನಿರ್ಬಂಧ ರಾಹುಲ್ ಗಾಂಧಿಯ ಮೇಲಿನ ದಾಳಿ ಅಲ್ಲ. ನಾನು 19 ರಿಂದ 20 ಮಿಲಿಯನ್ ಫಾಲೋವರ್ಸ್ ಹೊಂದಿದ್ದೇನೆ. ನೀವು ಅವರ ಅಭಿಪ್ರಾಯದ ಹಕ್ಕನ್ನು ಕೂಡ ನಿರಾಕರಿಸುತ್ತಿದ್ದೀರಿ” ಎಂದು ರಾಹುಲ್ ಗಾಂಧಿ ಯೂಟ್ಯೂಬ್ ವಿಡಿಯೊ ಮೂಲಕ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಜೊತೆಯಲ್ಲಿರುತ್ತೇನೆ: ರಾಹುಲ್ ಗಾಂಧಿ

ಟ್ವಿಟ್ಟರ್ ಕಂಪನಿಯನ್ನು ಪಕ್ಷಪಾತಿ ಎಂದು ಕರೆದಿದ್ದ ರಾಹುಲ್ ಗಾಂಧಿ, “ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿಯಾಗುತ್ತಿದೆ. ಸಂಸತ್ತಿನಲ್ಲಿ ನಮಗೆ ಮಾತನಾಡಲು ಅವಕಾಶವಿಲ್ಲ. ಮಾಧ್ಯಮವನ್ನು ನಿಯಂತ್ರಿಸಲಾಗುತ್ತಿದೆ. ಇಂತಹ ಸಮಯದಲ್ಲಿ ನಾವು ಟ್ವಿಟರ್‌ನಲ್ಲಿ ನಮ್ಮ ಆಲೋಚನೆಗಳನ್ನು ಹಾಕಬಹುದು ಎಂದು ನಾನು ಭಾವಿಸಿದೆ. ಆದರೆ ಅದು ಸಾಧ್ಯವಿಲ್ಲ. ಟ್ವಿಟರ್ ವಾಸ್ತವವಾಗಿ ತಟಸ್ಥ, ವಸ್ತುನಿಷ್ಠ ವೇದಿಕೆಯಲ್ಲ ಎಂಬುದು ಈಗ ಸ್ಪಷ್ಟವಾಗಿದೆ. ಅದು ಸರ್ಕಾರ ಹೇಳುವುದನ್ನು ಕೇಳುತ್ತದೆ” ಎಂದು ಆರೋಪಿಸಿದ್ದರು.

ಟ್ವಿಟರ್ ಪ್ರತಿಕ್ರಿಯೆ

ಟ್ವಿಟರ್ ತಾನು ಯಾವುದೆ ಪ್ರಭಾವಕ್ಕೆ ಒಳಗಾಗಿಲ್ಲ ಎಂದು ಹೇಳಿದ್ದು, “ನಿಯಮಗಳನ್ನು ನ್ಯಾಯಯುತವಾಗಿ ಮತ್ತು ನಿಷ್ಪಕ್ಷಪಾತವಾಗಿ ಜಾರಿಗೊಳಿಸಲಾಗಿದೆ” ಎಂದು ತಿಳಿಸಿದೆ.

“ನಮ್ಮ ನಿಯಮಗಳನ್ನು ಉಲ್ಲಂಘಿಸಿ ಚಿತ್ರವನ್ನು ಪೋಸ್ಟ್ ಮಾಡಿದ ಹಲವಾರು ಟ್ವೀಟ್‌ಗಳ ಮೇಲೆ ನಾವು ಕ್ರಿಯಾಶೀಲ ಕ್ರಮ ಕೈಗೊಂಡಿದ್ದೇವೆ. ಕೆಲವು ಖಾಸಗಿ ಮಾಹಿತಿಯು ಹೆಚ್ಚಿನ ಅಪಾಯವನ್ನು ಹೊಂದಿದೆ. ಟ್ವಿಟರ್‌ನ ಗುರಿ ಯಾವಾಗಲೂ ವ್ಯಕ್ತಿಗಳ ಗೌಪ್ಯತೆ ಮತ್ತು ಸುರಕ್ಷತೆಯನ್ನು ರಕ್ಷಿಸುವುದು” ಎಂದು ಟ್ವಿಟರ್‌‌ ಹೇಳಿದೆ.

ಇದನ್ನೂ ಓದಿ: ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ವಿಡಿಯೋ ನೋಡಿ: ಬೇಗೂರು ಕೆರೆ ಉಳಿಸುವಂತೆ ಹೈಕೋರ್ಟ್ ಆದೇಶ. ಅಕ್ರಮವಾಗಿ ಶಿವ ವಿಗ್ರಹ ಅನಾವರಣಗೊಳಿಸಿದವರ ವಿರುದ್ಧ ಕ್ರಮಕ್ಕೆ ತಾಕೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...