Homeಮುಖಪುಟ'ರಾಹುಲ್ ಗಾಂಧಿ ಅವಿವಾಹಿತ, ಎಚ್ಚರಿಕೆಯಿಂದಿರಿ': ಮಾಜಿ ಸಂಸದನ ಹೇಳಿಕೆಗೆ ಭಾರಿ ವಿರೋಧ

‘ರಾಹುಲ್ ಗಾಂಧಿ ಅವಿವಾಹಿತ, ಎಚ್ಚರಿಕೆಯಿಂದಿರಿ’: ಮಾಜಿ ಸಂಸದನ ಹೇಳಿಕೆಗೆ ಭಾರಿ ವಿರೋಧ

- Advertisement -
- Advertisement -

ಕೆಲವು ದಿನಗಳ ಹಿಂದೆ ಕೇರಳದ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ವಿರುದ್ಧ ಎಡಪಕ್ಷ ಸಿಪಿಎಂ ಬೆಂಬಲಿತ ಮಾಜಿ ಸಂಸದರು ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಭಾರಿ ಆಕ್ರೋಶ ವ್ಯಕ್ತಪಡಿಸಿವೆ. ರಾಹುಲ್ ಗಾಂಧಿ ಅವಿವಾಹಿತ. ಅವರು ಮಹಿಳಾ ಕಾಲೇಜುಗಳಿಗೆ ತೆರಳುತ್ತಿದ್ದಾರೆ.. ಅವರಿಂದ ದೂರವಿರಿ ಎಂಬ ಹೇಳಿಕೆಗಳನ್ನು ನೀಡಿದ್ದರು.

ಉಡುಂಬಂಚೋಳ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ರಾಜ್ಯ ವಿದ್ಯುತ್ ಸಚಿವ ಎಂ.ಎಂ.ಮಣಿ ಅವರ ಚುನಾವಣಾ ರ್‍ಯಾಲಿಯಲ್ಲಿ ಇಡುಕ್ಕಿ ಕ್ಷೇತ್ರದ ಮಾಜಿ ಸ್ವತಂತ್ರ ಸಂಸದ ಜಾಯ್ಸ್ ಜಾರ್ಜ್ ಈ ಹೇಳಿಕೆಗಳನ್ನು ನೀಡಿದ್ದರು. ಈ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೇರಳದಲ್ಲಿ ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸಿದೆ.

ವಿವಾದಕ್ಕೆ ಪ್ರತಿಕ್ರಿಯಿಸಿರುವ, ಸಿಪಿಎಂ ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಹೇಳುವ ಮೂಲಕ ವಿವಾದದಿಂದ ದೂರವಿರಲು ಪ್ರಯತ್ನಿಸಿದೆ.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

“ಅವರು (ರಾಹುಲ್ ಗಾಂಧಿ) ಮಹಿಳಾ ಕಾಲೇಜುಗಳಿಗೆ ಮಾತ್ರ ಭೇಟಿ ನೀಡುತ್ತಾರೆ. ಹುಡುಗಿಯರಿಗೆ ಹಲವು ಪಟ್ಟುಗಳನ್ನು ಹೇಳಿ ಕೊಡುತ್ತಾರೆ. ಆದರೆ, ನನ್ನ ಪ್ರೀತಿಯ ಮಕ್ಕಳೇ ಕೇಳಿ, ಅವರ ಮುಂದೆ ಬಾಗುವುದು ಮತ್ತು ತಿರುಗುವುದು ಮಾಡಬೇಡಿ. ಏಕೆಂದರೆ ಅವರು ಅವಿವಾಹಿತ” ಎಂದು ಎಚ್ಚರಿಕೆ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ತೆರಳಿದ್ದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, ಕೊಚ್ಚಿಯ ಪ್ರಸಿದ್ಧ ಸೇಂಟ್ ತೆರೇಸಾ ಕಾಲೇಜಿನಲ್ಲಿ ‘ಐಕಿಡೊ’ ಪಾಠ ಹೇಳಿಕೊಟ್ಟು, ಸಂವಾದ ನಡೆಸಿದ್ದರು. ಅಕಿಡೊ ಜಪಾನಿನ ಸಮರ ಕಲೆಯಾಗಿದೆ. ಇದನ್ನೇ ಇಟ್ಟುಕೊಂಡು ಜಾಯ್ಸ್ ಜಾರ್ಜ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

“ಮಾಜಿ ಸಂಸದ ಜಾಯ್ಸ್ ಜಾರ್ಜ್ ಅವರ ಹೇಳಿಕೆ ಅತ್ಯಂತ ಶೋಚನೀಯವಾಗಿದೆ. ಅವರು ರಾಷ್ಟ್ರೀಯ ನಾಯಕನ ವಿರುದ್ಧ ಇಂತಹ ಭಾಷೆಯನ್ನು ಬಳಸಿದ್ದಾರೆ. ಕೇರಳದಲ್ಲಿ ರಾಹುಲ್ ಗಾಂಧಿಯವರ ಕಾರ್ಯಕ್ರಮಗಳಲ್ಲಿ ಲಕ್ಷಾಂತರ ಜನರು ಭಾಗವಹಿಸುತ್ತಿರುವುದರಿಂದ ಸಿಪಿಎಂ ಆತಂಕಕ್ಕೊಳಗಾಗಿದೆ” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ರಮೇಶ್ ಚೆನ್ನಿಥಾಲಾ ಹೇಳಿದ್ದಾರೆ.

ಇದನ್ನೂ ಓದಿ: 50ನೇ ವರ್ಷದಲ್ಲಿಯೂ ಫಿಟ್ನೆಸ್ ತೋರಿಸಿದ ರಾಹುಲ್ ಗಾಂಧಿ: ಪುಷ್-ಅಪ್ ವಿಡಿಯೋ ವೈರಲ್

“ಮಾಜಿ ಸಂಸದರ ಹೇಳಿಕೆ ಮಹಿಳೆಯರಿಗೆ ಮಾಡಿದ ಅವಮಾನ ಮಾತ್ರವಲ್ಲ, ಒಟ್ಟಾರೆಯಾಗಿ ಕೇರಳದ ಸಮಾಜಕ್ಕೆ ಮಾಡಿದ ಅವಮಾನ. ಸಿಪಿಎಂ ಮಹಿಳಾ ವಿರೋಧಿ ಹೇಳಿಕೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಕ್ಷಮೆಯಾಚಿಸಬೇಕು” ಎಂದು ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹೇಳಿದ್ದಾರೆ.

ಆದರೆ, ತಾವು ಯಾವುದೇ ಮಹಿಳಾ ವಿರೋಧಿ ಟೀಕೆಗಳನ್ನು ಮಾಡಿಲ್ಲ. ರಾಹುಲ್ ಗಾಂಧಿ ಅವರನ್ನು ಮಾತ್ರ ಟೀಕಿಸಿದ್ದೇನೆ ಎಂದು ಸಂಸದ ಜಾರ್ಜ್ ಅವರ ಸಮರ್ಥನೆಯನ್ನು ಪಿಟಿಐ ಉಲ್ಲೇಖಿಸಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ “ರಾಹುಲ್ ಗಾಂಧಿಯನ್ನು ವೈಯಕ್ತಿಕ ಮಟ್ಟದಲ್ಲಿ ಟೀಕಿಸುವುದು ನಮ್ಮ ಶೈಲಿಯಲ್ಲ. ರಾಜಕೀಯವಾಗಿ, ನಾವು ಅಗತ್ಯವಿರುವ ಕಡೆ ಅವರನ್ನು ವಿರೋಧಿಸುವುದನ್ನು ಮುಂದುವರಿಸುತ್ತೇವೆ. ಆದರೆ ಈ ರೀತಿಯಲ್ಲಿ ಅಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...