Homeಮುಖಪುಟ'ರಾಹುಲ್ ಗಾಂಧಿ ಅವಿವಾಹಿತ, ಎಚ್ಚರಿಕೆಯಿಂದಿರಿ': ಮಾಜಿ ಸಂಸದನ ಹೇಳಿಕೆಗೆ ಭಾರಿ ವಿರೋಧ

‘ರಾಹುಲ್ ಗಾಂಧಿ ಅವಿವಾಹಿತ, ಎಚ್ಚರಿಕೆಯಿಂದಿರಿ’: ಮಾಜಿ ಸಂಸದನ ಹೇಳಿಕೆಗೆ ಭಾರಿ ವಿರೋಧ

- Advertisement -
- Advertisement -

ಕೆಲವು ದಿನಗಳ ಹಿಂದೆ ಕೇರಳದ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ವಿರುದ್ಧ ಎಡಪಕ್ಷ ಸಿಪಿಎಂ ಬೆಂಬಲಿತ ಮಾಜಿ ಸಂಸದರು ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಭಾರಿ ಆಕ್ರೋಶ ವ್ಯಕ್ತಪಡಿಸಿವೆ. ರಾಹುಲ್ ಗಾಂಧಿ ಅವಿವಾಹಿತ. ಅವರು ಮಹಿಳಾ ಕಾಲೇಜುಗಳಿಗೆ ತೆರಳುತ್ತಿದ್ದಾರೆ.. ಅವರಿಂದ ದೂರವಿರಿ ಎಂಬ ಹೇಳಿಕೆಗಳನ್ನು ನೀಡಿದ್ದರು.

ಉಡುಂಬಂಚೋಳ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ರಾಜ್ಯ ವಿದ್ಯುತ್ ಸಚಿವ ಎಂ.ಎಂ.ಮಣಿ ಅವರ ಚುನಾವಣಾ ರ್‍ಯಾಲಿಯಲ್ಲಿ ಇಡುಕ್ಕಿ ಕ್ಷೇತ್ರದ ಮಾಜಿ ಸ್ವತಂತ್ರ ಸಂಸದ ಜಾಯ್ಸ್ ಜಾರ್ಜ್ ಈ ಹೇಳಿಕೆಗಳನ್ನು ನೀಡಿದ್ದರು. ಈ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೇರಳದಲ್ಲಿ ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸಿದೆ.

ವಿವಾದಕ್ಕೆ ಪ್ರತಿಕ್ರಿಯಿಸಿರುವ, ಸಿಪಿಎಂ ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಹೇಳುವ ಮೂಲಕ ವಿವಾದದಿಂದ ದೂರವಿರಲು ಪ್ರಯತ್ನಿಸಿದೆ.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

“ಅವರು (ರಾಹುಲ್ ಗಾಂಧಿ) ಮಹಿಳಾ ಕಾಲೇಜುಗಳಿಗೆ ಮಾತ್ರ ಭೇಟಿ ನೀಡುತ್ತಾರೆ. ಹುಡುಗಿಯರಿಗೆ ಹಲವು ಪಟ್ಟುಗಳನ್ನು ಹೇಳಿ ಕೊಡುತ್ತಾರೆ. ಆದರೆ, ನನ್ನ ಪ್ರೀತಿಯ ಮಕ್ಕಳೇ ಕೇಳಿ, ಅವರ ಮುಂದೆ ಬಾಗುವುದು ಮತ್ತು ತಿರುಗುವುದು ಮಾಡಬೇಡಿ. ಏಕೆಂದರೆ ಅವರು ಅವಿವಾಹಿತ” ಎಂದು ಎಚ್ಚರಿಕೆ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ತೆರಳಿದ್ದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, ಕೊಚ್ಚಿಯ ಪ್ರಸಿದ್ಧ ಸೇಂಟ್ ತೆರೇಸಾ ಕಾಲೇಜಿನಲ್ಲಿ ‘ಐಕಿಡೊ’ ಪಾಠ ಹೇಳಿಕೊಟ್ಟು, ಸಂವಾದ ನಡೆಸಿದ್ದರು. ಅಕಿಡೊ ಜಪಾನಿನ ಸಮರ ಕಲೆಯಾಗಿದೆ. ಇದನ್ನೇ ಇಟ್ಟುಕೊಂಡು ಜಾಯ್ಸ್ ಜಾರ್ಜ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

“ಮಾಜಿ ಸಂಸದ ಜಾಯ್ಸ್ ಜಾರ್ಜ್ ಅವರ ಹೇಳಿಕೆ ಅತ್ಯಂತ ಶೋಚನೀಯವಾಗಿದೆ. ಅವರು ರಾಷ್ಟ್ರೀಯ ನಾಯಕನ ವಿರುದ್ಧ ಇಂತಹ ಭಾಷೆಯನ್ನು ಬಳಸಿದ್ದಾರೆ. ಕೇರಳದಲ್ಲಿ ರಾಹುಲ್ ಗಾಂಧಿಯವರ ಕಾರ್ಯಕ್ರಮಗಳಲ್ಲಿ ಲಕ್ಷಾಂತರ ಜನರು ಭಾಗವಹಿಸುತ್ತಿರುವುದರಿಂದ ಸಿಪಿಎಂ ಆತಂಕಕ್ಕೊಳಗಾಗಿದೆ” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ರಮೇಶ್ ಚೆನ್ನಿಥಾಲಾ ಹೇಳಿದ್ದಾರೆ.

ಇದನ್ನೂ ಓದಿ: 50ನೇ ವರ್ಷದಲ್ಲಿಯೂ ಫಿಟ್ನೆಸ್ ತೋರಿಸಿದ ರಾಹುಲ್ ಗಾಂಧಿ: ಪುಷ್-ಅಪ್ ವಿಡಿಯೋ ವೈರಲ್

“ಮಾಜಿ ಸಂಸದರ ಹೇಳಿಕೆ ಮಹಿಳೆಯರಿಗೆ ಮಾಡಿದ ಅವಮಾನ ಮಾತ್ರವಲ್ಲ, ಒಟ್ಟಾರೆಯಾಗಿ ಕೇರಳದ ಸಮಾಜಕ್ಕೆ ಮಾಡಿದ ಅವಮಾನ. ಸಿಪಿಎಂ ಮಹಿಳಾ ವಿರೋಧಿ ಹೇಳಿಕೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಕ್ಷಮೆಯಾಚಿಸಬೇಕು” ಎಂದು ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹೇಳಿದ್ದಾರೆ.

ಆದರೆ, ತಾವು ಯಾವುದೇ ಮಹಿಳಾ ವಿರೋಧಿ ಟೀಕೆಗಳನ್ನು ಮಾಡಿಲ್ಲ. ರಾಹುಲ್ ಗಾಂಧಿ ಅವರನ್ನು ಮಾತ್ರ ಟೀಕಿಸಿದ್ದೇನೆ ಎಂದು ಸಂಸದ ಜಾರ್ಜ್ ಅವರ ಸಮರ್ಥನೆಯನ್ನು ಪಿಟಿಐ ಉಲ್ಲೇಖಿಸಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ “ರಾಹುಲ್ ಗಾಂಧಿಯನ್ನು ವೈಯಕ್ತಿಕ ಮಟ್ಟದಲ್ಲಿ ಟೀಕಿಸುವುದು ನಮ್ಮ ಶೈಲಿಯಲ್ಲ. ರಾಜಕೀಯವಾಗಿ, ನಾವು ಅಗತ್ಯವಿರುವ ಕಡೆ ಅವರನ್ನು ವಿರೋಧಿಸುವುದನ್ನು ಮುಂದುವರಿಸುತ್ತೇವೆ. ಆದರೆ ಈ ರೀತಿಯಲ್ಲಿ ಅಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....