Homeಮುಖಪುಟಗುಜರಾತ್‌ನಲ್ಲಿ 4,300 ಕೋಟಿ ರೂ. ದೇಣಿಗೆ ಪಡೆದ 'ಅನಾಮಧೇಯ ಪಕ್ಷಗಳು': ಚು. ಆಯೋಗದಿಂದ ತನಿಖೆಗೆ ಒತ್ತಾಯಿಸಿದ...

ಗುಜರಾತ್‌ನಲ್ಲಿ 4,300 ಕೋಟಿ ರೂ. ದೇಣಿಗೆ ಪಡೆದ ‘ಅನಾಮಧೇಯ ಪಕ್ಷಗಳು’: ಚು. ಆಯೋಗದಿಂದ ತನಿಖೆಗೆ ಒತ್ತಾಯಿಸಿದ ರಾಹುಲ್ ಗಾಂಧಿ

- Advertisement -
- Advertisement -

ಗುಜರಾತ್‌ನಲ್ಲಿ ಹತ್ತು ಅನಾಮಧೇಯ ಪಕ್ಷಗಳು’ ಅಪರೂಪಕ್ಕೆ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದರೂ, ಐದು ವರ್ಷಗಳಲ್ಲಿ 4,300 ಕೋಟಿ ರೂಪಾಯಿ ದೇಣಿಗೆ ಪಡೆದಿವೆ ಎಂಬ ವರದಿಗೆ ಪ್ರತಿಕ್ರಿಯಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ (ಆ.27) ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

2019-20ರಿಂದ 2023-24ರವರೆಗೆ ಹತ್ತು ರಾಜಕೀಯ ಪಕ್ಷಗಳು ಹಣ ಪಡೆದಿವೆ ಎಂದು ದೈನಿಕ್ ಭಾಸ್ಕರ್ ಮಂಗಳವಾರ (ಆ.26) ವರದಿ ಮಾಡಿತ್ತು.

ಈ ಅವಧಿಯಲ್ಲಿ 2019 ಮತ್ತು 2024ರಲ್ಲಿ ಎರಡು ಲೋಕಸಭಾ ಚುನಾವಣೆಗಳು ಮತ್ತು 2022ರಲ್ಲಿ ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣೆ ನಡೆದಿವೆ. ಈ ಚುನಾವಣೆಗಳಲ್ಲಿ ಹತ್ತು ಪಕ್ಷಗಳು ಕೇವಲ 43 ಅಭ್ಯರ್ಥಿಗಳನ್ನು ಮಾತ್ರ ಕಣಕ್ಕಿಳಿಸಿದ್ದವು, ಅವರು ಒಟ್ಟು 54,069 ಮತಗಳನ್ನು ಮಾತ್ರ ಗಳಿಸಿದ್ದರು ಎಂದು ಪತ್ರಿಕೆಯ ವರದಿ ಹೇಳಿದೆ.

ಇದಲ್ಲದೆ, ಈ ಪಕ್ಷಗಳು ಕೇವಲ 39.02 ಲಕ್ಷ ರೂ.ಗಳನ್ನು ಚುನಾವಣೆಗಳಿಗೆ ವೆಚ್ಚ ಮಾಡಿವೆ. ಆದರೆ, ಆಡಿಟ್ ವರದಿಯಲ್ಲಿ 3,500 ಕೋಟಿ ರೂ.ಗಳ ವೆಚ್ಚವನ್ನು ತೋರಿಸಿವೆ ಎಂದು ದೈನಿಕ್ ಭಾಸ್ಕರ್ ವಿವರಿಸಿದೆ.

ಲೋಕಶಾಹಿ ಸತ್ತಾ ಪಕ್ಷ, ಭಾರತೀಯ ರಾಷ್ಟ್ರೀಯ ಜನತಾ ದಳ, ಸ್ವತಂತ್ರ ಅಭಿವ್ಯಕ್ತಿ ಪಕ್ಷ, ನ್ಯೂ ಇಂಡಿಯಾ ಯುನೈಟೆಡ್ ಪಾರ್ಟಿ, ಸತ್ಯವಾದಿ ರಕ್ಷಕ ಪಕ್ಷ, ಭಾರತೀಯ ಜನಪರಿಷದ್, ಸೌರಾಷ್ಟ್ರ ಜನತಾ ಪಕ್ಷ, ಜನ್ ಮನ್ ಪಾರ್ಟಿ, ಮಾನವಾಧಿಕಾರ ರಾಷ್ಟ್ರೀಯ ಪಕ್ಷ ಮತ್ತು ಗರೀಬ್ ಕಲ್ಯಾಣ್ ಪಕ್ಷ ಹತ್ತು ಅನಾಮಧೇಯ ಪಕ್ಷಗಳು ಎಂದು ವರದಿ ತಿಳಿಸಿದೆ.

ಈ ಪಕ್ಷಗಳು ಸಾವಿರಾರು ಕೋಟಿ ರೂಪಾಯಿಗಳನ್ನು ಹೇಗೆ ಸಂಪಾದಿಸಿದವು ಮತ್ತು ಆ ಹಣ ಎಲ್ಲಿಗೆ ಹೋಯಿತು ಎಂದು ರಾಹುಲ್ ಗಾಂಧಿಯವರು ಬುಧವಾರ ಪ್ರಶ್ನಿಸಿದ್ದಾರೆ.

“ಚುನಾವಣಾ ಆಯೋಗವು ಈ ಬಗ್ಗೆ ತನಿಖೆ ನಡೆಸುತ್ತದೆಯೇ?..ಇಲ್ಲಾ ಇಲ್ಲಿಯೂ ಅಫಿಡವಿಟ್ ಕೇಳುತ್ತದೆಯೇ? ಅಥವಾ ಈ ಡೇಟಾವನ್ನು ಮರೆಮಾಚಲು ಸಾಧ್ಯವಾಗುವಂತೆ ಕಾನೂನುಗಳನ್ನು ಬದಲಾಯಿಸುತ್ತದೆಯೇ?” ಎಂದು ರಾಹುಲ್ ಗಾಂಧಿ ಎಕ್ಸ್‌ ಪೋಸ್ಟ್‌ನಲ್ಲಿ ಕೇಳಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿಯವರ ಆರೋಪಕ್ಕೆ ಚುನಾವಣಾ ಆಯೋಗ ಅಫಿಡವಿಟ್ ಕೇಳಿದೆ. ಅದನ್ನು ಉಲ್ಲೇಖಿಸಿ ಆಯೋಗಕ್ಕೆ ರಾಹುಲ್ ಗಾಂಧಿ ಕುಟುಕಿದ್ದಾರೆ.

ನಾವು ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಆರು ತಿಂಗಳು ಪರಿಶೀಲಿಸಿದ್ದೇವೆ. ಈ ವೇಳೆ 1,00,250 ಹೆಸರುಗಳಲ್ಲಿ ವ್ಯತ್ಯಾಸಗಳು ಕಂಡುಬಂದಿವೆ ಎಂದು ರಾಹುಲ್ ಗಾಂಧಿ ಹೇಳಿಕೊಂಡಿದ್ದರು. ಚುನಾವಣಾ ಆಯೋಗವು ಬಿಜೆಪಿ ಜೊತೆ ಕೈ ಜೋಡಿಸಿದೆ ಎಂಬುವುದಕ್ಕೆ ಇದು ಸಾಕ್ಷಿ ಎಂದು ಆರೋಪಿಸಿದ್ದರು.

ರಾಹುಲ್ ಗಾಂಧಿಯವರ ಆರೋಪಗಳಿಗೆ ಪ್ರತಿಕ್ರಿಯಿಸಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು, ರಾಹುಲ್ ಗಾಂಧಿಯ ತನ್ನ ಆರೋಪಕ್ಕೆ ಅಫಿಡವಿಟ್ ಸಲ್ಲಿಸಬೇಕು, ಇಲ್ಲದಿದ್ದರೆ ದೇಶದ ಕ್ಷಮೆಯಾಚಿಸಬೇಕು ಎಂದಿದ್ದರು.

ಅನುಕೂಲಕರ ಆದೇಶ ಪಡೆಯಲು ನ್ಯಾಯಾಧೀಶರನ್ನು ಸಂಪರ್ಕಿಸಿದ ಆರೋಪ: ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...