Homeಮುಖಪುಟಗುಜರಾತ್‌ನಲ್ಲಿ 4,300 ಕೋಟಿ ರೂ. ದೇಣಿಗೆ ಪಡೆದ 'ಅನಾಮಧೇಯ ಪಕ್ಷಗಳು': ಚು. ಆಯೋಗದಿಂದ ತನಿಖೆಗೆ ಒತ್ತಾಯಿಸಿದ...

ಗುಜರಾತ್‌ನಲ್ಲಿ 4,300 ಕೋಟಿ ರೂ. ದೇಣಿಗೆ ಪಡೆದ ‘ಅನಾಮಧೇಯ ಪಕ್ಷಗಳು’: ಚು. ಆಯೋಗದಿಂದ ತನಿಖೆಗೆ ಒತ್ತಾಯಿಸಿದ ರಾಹುಲ್ ಗಾಂಧಿ

- Advertisement -
- Advertisement -

ಗುಜರಾತ್‌ನಲ್ಲಿ ಹತ್ತು ಅನಾಮಧೇಯ ಪಕ್ಷಗಳು’ ಅಪರೂಪಕ್ಕೆ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದರೂ, ಐದು ವರ್ಷಗಳಲ್ಲಿ 4,300 ಕೋಟಿ ರೂಪಾಯಿ ದೇಣಿಗೆ ಪಡೆದಿವೆ ಎಂಬ ವರದಿಗೆ ಪ್ರತಿಕ್ರಿಯಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ (ಆ.27) ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

2019-20ರಿಂದ 2023-24ರವರೆಗೆ ಹತ್ತು ರಾಜಕೀಯ ಪಕ್ಷಗಳು ಹಣ ಪಡೆದಿವೆ ಎಂದು ದೈನಿಕ್ ಭಾಸ್ಕರ್ ಮಂಗಳವಾರ (ಆ.26) ವರದಿ ಮಾಡಿತ್ತು.

ಈ ಅವಧಿಯಲ್ಲಿ 2019 ಮತ್ತು 2024ರಲ್ಲಿ ಎರಡು ಲೋಕಸಭಾ ಚುನಾವಣೆಗಳು ಮತ್ತು 2022ರಲ್ಲಿ ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣೆ ನಡೆದಿವೆ. ಈ ಚುನಾವಣೆಗಳಲ್ಲಿ ಹತ್ತು ಪಕ್ಷಗಳು ಕೇವಲ 43 ಅಭ್ಯರ್ಥಿಗಳನ್ನು ಮಾತ್ರ ಕಣಕ್ಕಿಳಿಸಿದ್ದವು, ಅವರು ಒಟ್ಟು 54,069 ಮತಗಳನ್ನು ಮಾತ್ರ ಗಳಿಸಿದ್ದರು ಎಂದು ಪತ್ರಿಕೆಯ ವರದಿ ಹೇಳಿದೆ.

ಇದಲ್ಲದೆ, ಈ ಪಕ್ಷಗಳು ಕೇವಲ 39.02 ಲಕ್ಷ ರೂ.ಗಳನ್ನು ಚುನಾವಣೆಗಳಿಗೆ ವೆಚ್ಚ ಮಾಡಿವೆ. ಆದರೆ, ಆಡಿಟ್ ವರದಿಯಲ್ಲಿ 3,500 ಕೋಟಿ ರೂ.ಗಳ ವೆಚ್ಚವನ್ನು ತೋರಿಸಿವೆ ಎಂದು ದೈನಿಕ್ ಭಾಸ್ಕರ್ ವಿವರಿಸಿದೆ.

ಲೋಕಶಾಹಿ ಸತ್ತಾ ಪಕ್ಷ, ಭಾರತೀಯ ರಾಷ್ಟ್ರೀಯ ಜನತಾ ದಳ, ಸ್ವತಂತ್ರ ಅಭಿವ್ಯಕ್ತಿ ಪಕ್ಷ, ನ್ಯೂ ಇಂಡಿಯಾ ಯುನೈಟೆಡ್ ಪಾರ್ಟಿ, ಸತ್ಯವಾದಿ ರಕ್ಷಕ ಪಕ್ಷ, ಭಾರತೀಯ ಜನಪರಿಷದ್, ಸೌರಾಷ್ಟ್ರ ಜನತಾ ಪಕ್ಷ, ಜನ್ ಮನ್ ಪಾರ್ಟಿ, ಮಾನವಾಧಿಕಾರ ರಾಷ್ಟ್ರೀಯ ಪಕ್ಷ ಮತ್ತು ಗರೀಬ್ ಕಲ್ಯಾಣ್ ಪಕ್ಷ ಹತ್ತು ಅನಾಮಧೇಯ ಪಕ್ಷಗಳು ಎಂದು ವರದಿ ತಿಳಿಸಿದೆ.

ಈ ಪಕ್ಷಗಳು ಸಾವಿರಾರು ಕೋಟಿ ರೂಪಾಯಿಗಳನ್ನು ಹೇಗೆ ಸಂಪಾದಿಸಿದವು ಮತ್ತು ಆ ಹಣ ಎಲ್ಲಿಗೆ ಹೋಯಿತು ಎಂದು ರಾಹುಲ್ ಗಾಂಧಿಯವರು ಬುಧವಾರ ಪ್ರಶ್ನಿಸಿದ್ದಾರೆ.

“ಚುನಾವಣಾ ಆಯೋಗವು ಈ ಬಗ್ಗೆ ತನಿಖೆ ನಡೆಸುತ್ತದೆಯೇ?..ಇಲ್ಲಾ ಇಲ್ಲಿಯೂ ಅಫಿಡವಿಟ್ ಕೇಳುತ್ತದೆಯೇ? ಅಥವಾ ಈ ಡೇಟಾವನ್ನು ಮರೆಮಾಚಲು ಸಾಧ್ಯವಾಗುವಂತೆ ಕಾನೂನುಗಳನ್ನು ಬದಲಾಯಿಸುತ್ತದೆಯೇ?” ಎಂದು ರಾಹುಲ್ ಗಾಂಧಿ ಎಕ್ಸ್‌ ಪೋಸ್ಟ್‌ನಲ್ಲಿ ಕೇಳಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿಯವರ ಆರೋಪಕ್ಕೆ ಚುನಾವಣಾ ಆಯೋಗ ಅಫಿಡವಿಟ್ ಕೇಳಿದೆ. ಅದನ್ನು ಉಲ್ಲೇಖಿಸಿ ಆಯೋಗಕ್ಕೆ ರಾಹುಲ್ ಗಾಂಧಿ ಕುಟುಕಿದ್ದಾರೆ.

ನಾವು ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಆರು ತಿಂಗಳು ಪರಿಶೀಲಿಸಿದ್ದೇವೆ. ಈ ವೇಳೆ 1,00,250 ಹೆಸರುಗಳಲ್ಲಿ ವ್ಯತ್ಯಾಸಗಳು ಕಂಡುಬಂದಿವೆ ಎಂದು ರಾಹುಲ್ ಗಾಂಧಿ ಹೇಳಿಕೊಂಡಿದ್ದರು. ಚುನಾವಣಾ ಆಯೋಗವು ಬಿಜೆಪಿ ಜೊತೆ ಕೈ ಜೋಡಿಸಿದೆ ಎಂಬುವುದಕ್ಕೆ ಇದು ಸಾಕ್ಷಿ ಎಂದು ಆರೋಪಿಸಿದ್ದರು.

ರಾಹುಲ್ ಗಾಂಧಿಯವರ ಆರೋಪಗಳಿಗೆ ಪ್ರತಿಕ್ರಿಯಿಸಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು, ರಾಹುಲ್ ಗಾಂಧಿಯ ತನ್ನ ಆರೋಪಕ್ಕೆ ಅಫಿಡವಿಟ್ ಸಲ್ಲಿಸಬೇಕು, ಇಲ್ಲದಿದ್ದರೆ ದೇಶದ ಕ್ಷಮೆಯಾಚಿಸಬೇಕು ಎಂದಿದ್ದರು.

ಅನುಕೂಲಕರ ಆದೇಶ ಪಡೆಯಲು ನ್ಯಾಯಾಧೀಶರನ್ನು ಸಂಪರ್ಕಿಸಿದ ಆರೋಪ: ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...