Homeಮುಖಪುಟಗುಜರಾತ್‌ನಲ್ಲಿ 4,300 ಕೋಟಿ ರೂ. ದೇಣಿಗೆ ಪಡೆದ 'ಅನಾಮಧೇಯ ಪಕ್ಷಗಳು': ಚು. ಆಯೋಗದಿಂದ ತನಿಖೆಗೆ ಒತ್ತಾಯಿಸಿದ...

ಗುಜರಾತ್‌ನಲ್ಲಿ 4,300 ಕೋಟಿ ರೂ. ದೇಣಿಗೆ ಪಡೆದ ‘ಅನಾಮಧೇಯ ಪಕ್ಷಗಳು’: ಚು. ಆಯೋಗದಿಂದ ತನಿಖೆಗೆ ಒತ್ತಾಯಿಸಿದ ರಾಹುಲ್ ಗಾಂಧಿ

- Advertisement -
- Advertisement -

ಗುಜರಾತ್‌ನಲ್ಲಿ ಹತ್ತು ಅನಾಮಧೇಯ ಪಕ್ಷಗಳು’ ಅಪರೂಪಕ್ಕೆ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದರೂ, ಐದು ವರ್ಷಗಳಲ್ಲಿ 4,300 ಕೋಟಿ ರೂಪಾಯಿ ದೇಣಿಗೆ ಪಡೆದಿವೆ ಎಂಬ ವರದಿಗೆ ಪ್ರತಿಕ್ರಿಯಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ (ಆ.27) ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

2019-20ರಿಂದ 2023-24ರವರೆಗೆ ಹತ್ತು ರಾಜಕೀಯ ಪಕ್ಷಗಳು ಹಣ ಪಡೆದಿವೆ ಎಂದು ದೈನಿಕ್ ಭಾಸ್ಕರ್ ಮಂಗಳವಾರ (ಆ.26) ವರದಿ ಮಾಡಿತ್ತು.

ಈ ಅವಧಿಯಲ್ಲಿ 2019 ಮತ್ತು 2024ರಲ್ಲಿ ಎರಡು ಲೋಕಸಭಾ ಚುನಾವಣೆಗಳು ಮತ್ತು 2022ರಲ್ಲಿ ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣೆ ನಡೆದಿವೆ. ಈ ಚುನಾವಣೆಗಳಲ್ಲಿ ಹತ್ತು ಪಕ್ಷಗಳು ಕೇವಲ 43 ಅಭ್ಯರ್ಥಿಗಳನ್ನು ಮಾತ್ರ ಕಣಕ್ಕಿಳಿಸಿದ್ದವು, ಅವರು ಒಟ್ಟು 54,069 ಮತಗಳನ್ನು ಮಾತ್ರ ಗಳಿಸಿದ್ದರು ಎಂದು ಪತ್ರಿಕೆಯ ವರದಿ ಹೇಳಿದೆ.

ಇದಲ್ಲದೆ, ಈ ಪಕ್ಷಗಳು ಕೇವಲ 39.02 ಲಕ್ಷ ರೂ.ಗಳನ್ನು ಚುನಾವಣೆಗಳಿಗೆ ವೆಚ್ಚ ಮಾಡಿವೆ. ಆದರೆ, ಆಡಿಟ್ ವರದಿಯಲ್ಲಿ 3,500 ಕೋಟಿ ರೂ.ಗಳ ವೆಚ್ಚವನ್ನು ತೋರಿಸಿವೆ ಎಂದು ದೈನಿಕ್ ಭಾಸ್ಕರ್ ವಿವರಿಸಿದೆ.

ಲೋಕಶಾಹಿ ಸತ್ತಾ ಪಕ್ಷ, ಭಾರತೀಯ ರಾಷ್ಟ್ರೀಯ ಜನತಾ ದಳ, ಸ್ವತಂತ್ರ ಅಭಿವ್ಯಕ್ತಿ ಪಕ್ಷ, ನ್ಯೂ ಇಂಡಿಯಾ ಯುನೈಟೆಡ್ ಪಾರ್ಟಿ, ಸತ್ಯವಾದಿ ರಕ್ಷಕ ಪಕ್ಷ, ಭಾರತೀಯ ಜನಪರಿಷದ್, ಸೌರಾಷ್ಟ್ರ ಜನತಾ ಪಕ್ಷ, ಜನ್ ಮನ್ ಪಾರ್ಟಿ, ಮಾನವಾಧಿಕಾರ ರಾಷ್ಟ್ರೀಯ ಪಕ್ಷ ಮತ್ತು ಗರೀಬ್ ಕಲ್ಯಾಣ್ ಪಕ್ಷ ಹತ್ತು ಅನಾಮಧೇಯ ಪಕ್ಷಗಳು ಎಂದು ವರದಿ ತಿಳಿಸಿದೆ.

ಈ ಪಕ್ಷಗಳು ಸಾವಿರಾರು ಕೋಟಿ ರೂಪಾಯಿಗಳನ್ನು ಹೇಗೆ ಸಂಪಾದಿಸಿದವು ಮತ್ತು ಆ ಹಣ ಎಲ್ಲಿಗೆ ಹೋಯಿತು ಎಂದು ರಾಹುಲ್ ಗಾಂಧಿಯವರು ಬುಧವಾರ ಪ್ರಶ್ನಿಸಿದ್ದಾರೆ.

“ಚುನಾವಣಾ ಆಯೋಗವು ಈ ಬಗ್ಗೆ ತನಿಖೆ ನಡೆಸುತ್ತದೆಯೇ?..ಇಲ್ಲಾ ಇಲ್ಲಿಯೂ ಅಫಿಡವಿಟ್ ಕೇಳುತ್ತದೆಯೇ? ಅಥವಾ ಈ ಡೇಟಾವನ್ನು ಮರೆಮಾಚಲು ಸಾಧ್ಯವಾಗುವಂತೆ ಕಾನೂನುಗಳನ್ನು ಬದಲಾಯಿಸುತ್ತದೆಯೇ?” ಎಂದು ರಾಹುಲ್ ಗಾಂಧಿ ಎಕ್ಸ್‌ ಪೋಸ್ಟ್‌ನಲ್ಲಿ ಕೇಳಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿಯವರ ಆರೋಪಕ್ಕೆ ಚುನಾವಣಾ ಆಯೋಗ ಅಫಿಡವಿಟ್ ಕೇಳಿದೆ. ಅದನ್ನು ಉಲ್ಲೇಖಿಸಿ ಆಯೋಗಕ್ಕೆ ರಾಹುಲ್ ಗಾಂಧಿ ಕುಟುಕಿದ್ದಾರೆ.

ನಾವು ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಆರು ತಿಂಗಳು ಪರಿಶೀಲಿಸಿದ್ದೇವೆ. ಈ ವೇಳೆ 1,00,250 ಹೆಸರುಗಳಲ್ಲಿ ವ್ಯತ್ಯಾಸಗಳು ಕಂಡುಬಂದಿವೆ ಎಂದು ರಾಹುಲ್ ಗಾಂಧಿ ಹೇಳಿಕೊಂಡಿದ್ದರು. ಚುನಾವಣಾ ಆಯೋಗವು ಬಿಜೆಪಿ ಜೊತೆ ಕೈ ಜೋಡಿಸಿದೆ ಎಂಬುವುದಕ್ಕೆ ಇದು ಸಾಕ್ಷಿ ಎಂದು ಆರೋಪಿಸಿದ್ದರು.

ರಾಹುಲ್ ಗಾಂಧಿಯವರ ಆರೋಪಗಳಿಗೆ ಪ್ರತಿಕ್ರಿಯಿಸಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು, ರಾಹುಲ್ ಗಾಂಧಿಯ ತನ್ನ ಆರೋಪಕ್ಕೆ ಅಫಿಡವಿಟ್ ಸಲ್ಲಿಸಬೇಕು, ಇಲ್ಲದಿದ್ದರೆ ದೇಶದ ಕ್ಷಮೆಯಾಚಿಸಬೇಕು ಎಂದಿದ್ದರು.

ಅನುಕೂಲಕರ ಆದೇಶ ಪಡೆಯಲು ನ್ಯಾಯಾಧೀಶರನ್ನು ಸಂಪರ್ಕಿಸಿದ ಆರೋಪ: ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...