Homeಮುಖಪುಟಗುಜರಾತ್‌ನಲ್ಲಿ 4,300 ಕೋಟಿ ರೂ. ದೇಣಿಗೆ ಪಡೆದ 'ಅನಾಮಧೇಯ ಪಕ್ಷಗಳು': ಚು. ಆಯೋಗದಿಂದ ತನಿಖೆಗೆ ಒತ್ತಾಯಿಸಿದ...

ಗುಜರಾತ್‌ನಲ್ಲಿ 4,300 ಕೋಟಿ ರೂ. ದೇಣಿಗೆ ಪಡೆದ ‘ಅನಾಮಧೇಯ ಪಕ್ಷಗಳು’: ಚು. ಆಯೋಗದಿಂದ ತನಿಖೆಗೆ ಒತ್ತಾಯಿಸಿದ ರಾಹುಲ್ ಗಾಂಧಿ

- Advertisement -
- Advertisement -

ಗುಜರಾತ್‌ನಲ್ಲಿ ಹತ್ತು ಅನಾಮಧೇಯ ಪಕ್ಷಗಳು’ ಅಪರೂಪಕ್ಕೆ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದರೂ, ಐದು ವರ್ಷಗಳಲ್ಲಿ 4,300 ಕೋಟಿ ರೂಪಾಯಿ ದೇಣಿಗೆ ಪಡೆದಿವೆ ಎಂಬ ವರದಿಗೆ ಪ್ರತಿಕ್ರಿಯಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ (ಆ.27) ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

2019-20ರಿಂದ 2023-24ರವರೆಗೆ ಹತ್ತು ರಾಜಕೀಯ ಪಕ್ಷಗಳು ಹಣ ಪಡೆದಿವೆ ಎಂದು ದೈನಿಕ್ ಭಾಸ್ಕರ್ ಮಂಗಳವಾರ (ಆ.26) ವರದಿ ಮಾಡಿತ್ತು.

ಈ ಅವಧಿಯಲ್ಲಿ 2019 ಮತ್ತು 2024ರಲ್ಲಿ ಎರಡು ಲೋಕಸಭಾ ಚುನಾವಣೆಗಳು ಮತ್ತು 2022ರಲ್ಲಿ ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣೆ ನಡೆದಿವೆ. ಈ ಚುನಾವಣೆಗಳಲ್ಲಿ ಹತ್ತು ಪಕ್ಷಗಳು ಕೇವಲ 43 ಅಭ್ಯರ್ಥಿಗಳನ್ನು ಮಾತ್ರ ಕಣಕ್ಕಿಳಿಸಿದ್ದವು, ಅವರು ಒಟ್ಟು 54,069 ಮತಗಳನ್ನು ಮಾತ್ರ ಗಳಿಸಿದ್ದರು ಎಂದು ಪತ್ರಿಕೆಯ ವರದಿ ಹೇಳಿದೆ.

ಇದಲ್ಲದೆ, ಈ ಪಕ್ಷಗಳು ಕೇವಲ 39.02 ಲಕ್ಷ ರೂ.ಗಳನ್ನು ಚುನಾವಣೆಗಳಿಗೆ ವೆಚ್ಚ ಮಾಡಿವೆ. ಆದರೆ, ಆಡಿಟ್ ವರದಿಯಲ್ಲಿ 3,500 ಕೋಟಿ ರೂ.ಗಳ ವೆಚ್ಚವನ್ನು ತೋರಿಸಿವೆ ಎಂದು ದೈನಿಕ್ ಭಾಸ್ಕರ್ ವಿವರಿಸಿದೆ.

ಲೋಕಶಾಹಿ ಸತ್ತಾ ಪಕ್ಷ, ಭಾರತೀಯ ರಾಷ್ಟ್ರೀಯ ಜನತಾ ದಳ, ಸ್ವತಂತ್ರ ಅಭಿವ್ಯಕ್ತಿ ಪಕ್ಷ, ನ್ಯೂ ಇಂಡಿಯಾ ಯುನೈಟೆಡ್ ಪಾರ್ಟಿ, ಸತ್ಯವಾದಿ ರಕ್ಷಕ ಪಕ್ಷ, ಭಾರತೀಯ ಜನಪರಿಷದ್, ಸೌರಾಷ್ಟ್ರ ಜನತಾ ಪಕ್ಷ, ಜನ್ ಮನ್ ಪಾರ್ಟಿ, ಮಾನವಾಧಿಕಾರ ರಾಷ್ಟ್ರೀಯ ಪಕ್ಷ ಮತ್ತು ಗರೀಬ್ ಕಲ್ಯಾಣ್ ಪಕ್ಷ ಹತ್ತು ಅನಾಮಧೇಯ ಪಕ್ಷಗಳು ಎಂದು ವರದಿ ತಿಳಿಸಿದೆ.

ಈ ಪಕ್ಷಗಳು ಸಾವಿರಾರು ಕೋಟಿ ರೂಪಾಯಿಗಳನ್ನು ಹೇಗೆ ಸಂಪಾದಿಸಿದವು ಮತ್ತು ಆ ಹಣ ಎಲ್ಲಿಗೆ ಹೋಯಿತು ಎಂದು ರಾಹುಲ್ ಗಾಂಧಿಯವರು ಬುಧವಾರ ಪ್ರಶ್ನಿಸಿದ್ದಾರೆ.

“ಚುನಾವಣಾ ಆಯೋಗವು ಈ ಬಗ್ಗೆ ತನಿಖೆ ನಡೆಸುತ್ತದೆಯೇ?..ಇಲ್ಲಾ ಇಲ್ಲಿಯೂ ಅಫಿಡವಿಟ್ ಕೇಳುತ್ತದೆಯೇ? ಅಥವಾ ಈ ಡೇಟಾವನ್ನು ಮರೆಮಾಚಲು ಸಾಧ್ಯವಾಗುವಂತೆ ಕಾನೂನುಗಳನ್ನು ಬದಲಾಯಿಸುತ್ತದೆಯೇ?” ಎಂದು ರಾಹುಲ್ ಗಾಂಧಿ ಎಕ್ಸ್‌ ಪೋಸ್ಟ್‌ನಲ್ಲಿ ಕೇಳಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿಯವರ ಆರೋಪಕ್ಕೆ ಚುನಾವಣಾ ಆಯೋಗ ಅಫಿಡವಿಟ್ ಕೇಳಿದೆ. ಅದನ್ನು ಉಲ್ಲೇಖಿಸಿ ಆಯೋಗಕ್ಕೆ ರಾಹುಲ್ ಗಾಂಧಿ ಕುಟುಕಿದ್ದಾರೆ.

ನಾವು ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಆರು ತಿಂಗಳು ಪರಿಶೀಲಿಸಿದ್ದೇವೆ. ಈ ವೇಳೆ 1,00,250 ಹೆಸರುಗಳಲ್ಲಿ ವ್ಯತ್ಯಾಸಗಳು ಕಂಡುಬಂದಿವೆ ಎಂದು ರಾಹುಲ್ ಗಾಂಧಿ ಹೇಳಿಕೊಂಡಿದ್ದರು. ಚುನಾವಣಾ ಆಯೋಗವು ಬಿಜೆಪಿ ಜೊತೆ ಕೈ ಜೋಡಿಸಿದೆ ಎಂಬುವುದಕ್ಕೆ ಇದು ಸಾಕ್ಷಿ ಎಂದು ಆರೋಪಿಸಿದ್ದರು.

ರಾಹುಲ್ ಗಾಂಧಿಯವರ ಆರೋಪಗಳಿಗೆ ಪ್ರತಿಕ್ರಿಯಿಸಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು, ರಾಹುಲ್ ಗಾಂಧಿಯ ತನ್ನ ಆರೋಪಕ್ಕೆ ಅಫಿಡವಿಟ್ ಸಲ್ಲಿಸಬೇಕು, ಇಲ್ಲದಿದ್ದರೆ ದೇಶದ ಕ್ಷಮೆಯಾಚಿಸಬೇಕು ಎಂದಿದ್ದರು.

ಅನುಕೂಲಕರ ಆದೇಶ ಪಡೆಯಲು ನ್ಯಾಯಾಧೀಶರನ್ನು ಸಂಪರ್ಕಿಸಿದ ಆರೋಪ: ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...