Homeಮುಖಪುಟನರೇಂದ್ರ ಮೋದಿ ಕ್ಷಮೆ ಕೇಳಲಿ: ರಾಹುಲ್‌ ಗಾಂಧಿ ತಿರುಗೇಟು - ವಿಡಿಯೋ ನೋಡಿ

ನರೇಂದ್ರ ಮೋದಿ ಕ್ಷಮೆ ಕೇಳಲಿ: ರಾಹುಲ್‌ ಗಾಂಧಿ ತಿರುಗೇಟು – ವಿಡಿಯೋ ನೋಡಿ

- Advertisement -
- Advertisement -

“ನರೇಂದ್ರ ಮೋದಿ ಅವರು‘ ಮೇಕ್ ಇನ್ ಇಂಡಿಯಾ ’ಎಂದು ಹೇಳಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ನೀವು ಎಲ್ಲಿ ನೋಡಿದರೂ ಅದು ‘ರೇಪ್ ಇನ್ ಇಂಡಿಯಾ’ ಆಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಶಾಸಕರೊಬ್ಬರು ಮಹಿಳೆಯ ಮೇಲೆ ಅತ್ಯಾಚಾರವೆಸಗಿದರು, ನಂತರ ಸಂತ್ರಸ್ತೆ ಅಪಘಾತಕ್ಕೀಡಾದರು. ಆದರೆ ನರೇಂದ್ರ ಮೋದಿ ಅವರು ಈ ಬಗ್ಗೆ ಒಂದು ಮಾತನ್ನೂ ಹೇಳಲಿಲ್ಲ” ಎಂದು ಜಾರ್ಖಂಡ್‌ನ ಗೊಡ್ಡಾದಲ್ಲಿ ಗುರುವಾರ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಮಾತನಾಡುತ್ತಾ ರಾಹುಲ್‌ ಗಾಂಧಿ ಹೇಳಿದ್ದರು.

ರಾಹುಲ್ ಗಾಂಧಿಯವರ ‘ರೇಪ್ ಇನ್ ಇಂಡಿಯಾ’ ಎಂಬ ಹೇಳಿಕೆ ನೀಡಿದ್ದಕ್ಕಾಗಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಇಂದು ಲೋಕಸಭೆಯಲ್ಲಿ ಭಾರೀ ಗದ್ದಲ ಉಂಟುಮಾಡಿದ್ದರು. “ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಬ್ಬ ನಾಯಕ ಭಾರತೀಯ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಬೇಕೆಂದು ಸ್ಪಷ್ಟ ಕರೆ ನೀಡುತ್ತಿದ್ದಾನೆ. ಇದು ದೇಶದ ಜನರಿಗೆ ರಾಹುಲ್ ಗಾಂಧಿಯವರ ಸಂದೇಶವೇ? ಅವರಿಗೆ ಶಿಕ್ಷೆಯಾಗಬೇಕು, ಅವರು ಕೂಡಲೆ ಕ್ಷಮೇ ಕೇಳಬೇಕೆಂದು” ಪಟ್ಟು ಹಿಡಿದಿದ್ದರು.

ರಾಜ್ಯಸಭೆಯಲ್ಲಿ ಸದಸ್ಯರು ರಾಹುಲ್‌ ಗಾಂಧಿಯವರ ಹೇಳಿಕೆಗೆ ವಿರುದ್ಧವಾಗಿ ‘ರಾಹುಲ್ ಗಾಂಧಿ ಮಾಫಿ ಮಾವು’ ಎಂಬ ಘೋಷಣೆಗಳನ್ನು ಕೂಗಿದರು. ಇದರಿಂದಾಗಿ ಬಹಳ ಕಾಲ ಸದನವನ್ನು ಮುಂದೂಡಬೇಕಾಗಿ ಬಂದಿತ್ತು.

ಇದಕ್ಕೆ ಸರಿಯಾಗಿ ತಿರುಗೇಟು ನೀಡಿದರು ಕಾಂಗ್ರೆಸ್ ಸಂಸದ ರಾಹುಲ್‌ ಗಾಂಧಿ 2013ರ ಚುನಾವಣಾ ಸಂದರ್ಭದಲ್ಲಿ ನರೇಂದ್ರ ಮೋದಿಯವರು “ನೀವು ದಿಲ್ಲಿಯನ್ನು ರೇಪ್ ಕ್ಯಾಪಿಟಲ್ ಮಾಡಿದ್ದೀರಿ, ದೇಶವು ಇಂದು ವಿಶ್ವದ ಎದುರು ತಲೆತಗ್ಗಿಸುವಂತಾಗಿದೆ” ಎಂದು ಹೇಳಿದ್ದರ ವಿಡಿಯೋ ಕ್ಲಿಪ್‌ ಅನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್‌ ಮಾಡಿ ಇದಕ್ಕೆ ಮೊದಲು ನರೇಂದ್ರ ಮೋದಿಯವರು ಕ್ಷಮೆಯಾಚಿಸಲಿ ಎಂದು ಆಗ್ರಹಿಸಿದ್ದಾರೆ.

ಮೋದಿ ಕ್ಷಮೆಯಾಚಿಸಬೇಕು.

1. ಈಶಾನ್ಯವನ್ನು ಸುಡುತ್ತಿರುವುದಕ್ಕಾಗಿ,

2. ಭಾರತದ ಆರ್ಥಿಕತೆಯನ್ನು ನಾಶಮಾಡುತ್ತಿರುವುದಕ್ಕಾಗಿ

3. ಈ ಭಾಷಣಕ್ಕಾಗಿ, ನಾನು ಲಗತ್ತಿಸುವ ವಿಡಿಯೋ ನೋಡಿ ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದಾರೆ.

ಇನ್ನೊಂದೆಡೆ ಇದೊಂದು ಸಾಮಾನ್ಯ ಹೇಳಿಕೆಯಾಗಿದ್ದು ಕ್ಷಮೆ ಯಾಚಿಸುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಹೇಳುವ ಮೂಲಕ ರಾಹುಲ್‌ ಗಾಂಧಿ ಬೆನ್ನಿಗೆ ನಿಂತಿದ್ದಾರೆ.

ದೇಶಾದ್ಯಂತ ನಡೆಯುತ್ತಿರುವ ಸಿಎಬಿ ಕಾಯ್ದೆ ವಿರೋಧಿ ಬೃಹತ್‌ ಹೋರಾಟವನ್ನು ಮರೆಮಾಚಲು ಬಿಜೆಪಿ ಈ ಷಡ್ಯಂತ್ರ ನಡೆಸಿದೆ ಎಂದು ಅವರು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...