Homeಮುಖಪುಟಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

- Advertisement -
- Advertisement -

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನನಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನಾಂಕವನ್ನು ನಿರ್ಧರಿಸಲು ತಿಳಿಸಿದ್ದರು, ಆದರೆ ಅಮೆರಿಕದಿಂದ ರಾಹುಲ್ ಗಾಂಧಿ ಹಸ್ತಕ್ಷೇಪ ಮಾಡಿದ ನಂತರ ಪಕ್ಷದ ನಿರ್ಧಾರ ಬದಲಾಯಿತು” ಎಂದು ಹೇಳಿದ್ದಾರೆ.

“ಸೋನಿಯಾ ಗಾಂಧಿ ಅವರು ನನ್ನನ್ನು ತಮ್ಮ ನಿವಾಸಕ್ಕೆ ಕರೆಸಿ, ಪ್ರಮಾಣವಚನ ಸ್ವೀಕರಿಸುವ ದಿನಾಂಕವನ್ನು ನಿರ್ಧರಿಸಲು ತಿಳಿಸಿದ್ದರು. ನಾನು ಅಂಬುಬಾಚಿ ಮೇಳದ ಮರುದಿನ ಪ್ರಮಾಣವಚನ ಸ್ವೀಕರಿಸುವುದಾಗಿ ಮೇಡಂ ಅವರಿಗೆ ಹೇಳಿದ್ದೆ. ಆದರೆ ನಂತರ ನಮಗೆ ತಿಳಿದುಬಂದ ವಿಷಯವೇನೆಂದರೆ, ಅಮೆರಿಕದಲ್ಲಿದ್ದ ರಾಹುಲ್ ಗಾಂಧಿ ಅವರು ಅಲ್ಲಿಂದಲೇ ಫೋನ್ ಕರೆ ಮಾಡಿದ್ದರು ಮತ್ತು ಅದರ ಬೆನ್ನಲ್ಲೇ ಕಾಂಗ್ರೆಸ್ ತನ್ನ ನಿರ್ಧಾರವನ್ನು ಬದಲಿಸಿತು” ಎಂದು ಶರ್ಮಾ ಅವರು ತಿಳಿಸಿದ್ದಾರೆ.

ಅದಾದ ನಂತರ, ಕಾಂಗ್ರೆಸ್ ನಾಯಕರು ನನ್ನನ್ನು ಟೀಕಿಸಿದಾಗಲೆಲ್ಲಾ, ಶಾಸಕರು ನನ್ನ (ಶರ್ಮಾ) ಪರವಾಗಿದ್ದಾರೆ ಎಂದು ಖರ್ಗೆ ಅವರು ಅವರಿಗೆ ಹೇಳುತ್ತಿದ್ದರು ಎಂದು ಶರ್ಮಾ ಹೇಳಿಕೊಂಡಿದ್ದಾರೆ.

“ಅಂದು ನ್ಯಾಯ ಸಿಗಲಿಲ್ಲ, ಅದಕ್ಕೆ ಅನೇಕ ಸಾಕ್ಷಿಗಳಿವೆ. ಆದರೆ ಅಂದು ಪ್ರಮಾಣವಚನ ನಡೆಯದೇ ಹೋದದ್ದು ತಾಯಿ ಕಾಮಾಕ್ಯ ಮತ್ತು ಮಹಾಪುರುಷ ಶಂಕರದೇವ ಅವರ ಆಶೀರ್ವಾದ ಎಂದೇ ನಾನು ಭಾವಿಸುತ್ತೇನೆ. ಒಂದು ವೇಳೆ ನಾನು ಕಾಂಗ್ರೆಸ್ ಮುಖ್ಯಮಂತ್ರಿಯಾಗಿದ್ದರೆ, ಅದು ನನ್ನ ಜೀವನದ ಮೇಲೆ ಎಂದೆಂದಿಗೂ ಒಂದು ಕಪ್ಪು ಚುಕ್ಕೆಯಾಗಿ ಉಳಿಯುತ್ತಿತ್ತು. ಅಂದು ನನಗೆ ಸನಾತನ ಧರ್ಮಕ್ಕಾಗಿ ಮತ್ತು ಅಸ್ಸಾಮಿ ಜನರಿಗಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ” ಎಂದು ಶರ್ಮಾ ಅವರು ಹೇಳಿದ್ದಾರೆ.

ತನ್ನನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸುವುದನ್ನು ರಾಹುಲ್ ಗಾಂಧಿ ತಡೆದಿದ್ದಕ್ಕಾಗಿ ರಾಹುಲ್ ಗಾಂಧಿಯವರಿಗೆ ಧನ್ಯವಾದ ಎಂದ ಶರ್ಮಾ, ರಾಹುಲ್ ಗಾಂಧಿ ಅಂದು ವಿರೋಧ ವ್ಯಕ್ತಪಡಿಸಿದ್ದರಿಂದಲೇ ಇಂದು ನನಗೆ ‘ಸನಾತನ ಧರ್ಮ ಮತ್ತು ಅಸ್ಸಾಂನ ಹಿತದೃಷ್ಟಿಯಿಂದ ನಿರ್ಭಯವಾಗಿ ಕೆಲಸ ಮಾಡಲು ಸಾಧ್ಯವಾಗಿದೆ ಎಂದಿದ್ದಾರೆ.

“ಆ ಸಮಯದಲ್ಲಿ ನನಗೆ ತುಂಬಾ ನೋವಾಗಿತ್ತು, ಆದರೆ ಈಗ ನಾನು ನಂಬುವುದೇನೆಂದರೆ, ಒಬ್ಬರ ಜೀವನದಲ್ಲಿ ಏನೇ ಸಂಭವಿಸಿದರೂ ಅದು ಒಳ್ಳೆಯದಕ್ಕೇ ಆಗಿರುತ್ತದೆ. ಒಂದು ವೇಳೆ ನಾನು ಕಾಂಗ್ರೆಸ್‌ನಲ್ಲೇ ಉಳಿದುಕೊಂಡಿದ್ದರೆ ನನಗೆ ಏನು ಸಿಗುತ್ತಿತ್ತೋ, ಅದಕ್ಕಿಂತ ಹೆಚ್ಚಿನದನ್ನು ದೇವರು ಇಂದು ನನಗೆ ನೀಡಿದ್ದಾನೆ” ಎಂದು ಶರ್ಮಾ ಅವರು ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿ ಬಂಡಾಯವೆದ್ದ ನಂತರ ಶರ್ಮಾ ತಮ್ಮ ಆಪ್ತ ಶಾಸಕರೊಂದಿಗೆ ಬಿಜೆಪಿ ಸೇರಿದರು. 2016ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂತು, ಸರ್ಬಾನಂದ ಸೋನೋವಾಲ್ ಸಂಪುಟದಲ್ಲಿ ಶರ್ಮಾ ಸಚಿವರಾಗಿ ನೇಮಕಗೊಂಡರು. 2021ರಲ್ಲಿ ಬಿಜೆಪಿ ಮತ್ತೆ ಅಧಿಕಾರ ಉಳಿಸಿಕೊಂಡಾಗ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...