Homeಮುಖಪುಟಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

- Advertisement -
- Advertisement -

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನನಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನಾಂಕವನ್ನು ನಿರ್ಧರಿಸಲು ತಿಳಿಸಿದ್ದರು, ಆದರೆ ಅಮೆರಿಕದಿಂದ ರಾಹುಲ್ ಗಾಂಧಿ ಹಸ್ತಕ್ಷೇಪ ಮಾಡಿದ ನಂತರ ಪಕ್ಷದ ನಿರ್ಧಾರ ಬದಲಾಯಿತು” ಎಂದು ಹೇಳಿದ್ದಾರೆ.

“ಸೋನಿಯಾ ಗಾಂಧಿ ಅವರು ನನ್ನನ್ನು ತಮ್ಮ ನಿವಾಸಕ್ಕೆ ಕರೆಸಿ, ಪ್ರಮಾಣವಚನ ಸ್ವೀಕರಿಸುವ ದಿನಾಂಕವನ್ನು ನಿರ್ಧರಿಸಲು ತಿಳಿಸಿದ್ದರು. ನಾನು ಅಂಬುಬಾಚಿ ಮೇಳದ ಮರುದಿನ ಪ್ರಮಾಣವಚನ ಸ್ವೀಕರಿಸುವುದಾಗಿ ಮೇಡಂ ಅವರಿಗೆ ಹೇಳಿದ್ದೆ. ಆದರೆ ನಂತರ ನಮಗೆ ತಿಳಿದುಬಂದ ವಿಷಯವೇನೆಂದರೆ, ಅಮೆರಿಕದಲ್ಲಿದ್ದ ರಾಹುಲ್ ಗಾಂಧಿ ಅವರು ಅಲ್ಲಿಂದಲೇ ಫೋನ್ ಕರೆ ಮಾಡಿದ್ದರು ಮತ್ತು ಅದರ ಬೆನ್ನಲ್ಲೇ ಕಾಂಗ್ರೆಸ್ ತನ್ನ ನಿರ್ಧಾರವನ್ನು ಬದಲಿಸಿತು” ಎಂದು ಶರ್ಮಾ ಅವರು ತಿಳಿಸಿದ್ದಾರೆ.

ಅದಾದ ನಂತರ, ಕಾಂಗ್ರೆಸ್ ನಾಯಕರು ನನ್ನನ್ನು ಟೀಕಿಸಿದಾಗಲೆಲ್ಲಾ, ಶಾಸಕರು ನನ್ನ (ಶರ್ಮಾ) ಪರವಾಗಿದ್ದಾರೆ ಎಂದು ಖರ್ಗೆ ಅವರು ಅವರಿಗೆ ಹೇಳುತ್ತಿದ್ದರು ಎಂದು ಶರ್ಮಾ ಹೇಳಿಕೊಂಡಿದ್ದಾರೆ.

“ಅಂದು ನ್ಯಾಯ ಸಿಗಲಿಲ್ಲ, ಅದಕ್ಕೆ ಅನೇಕ ಸಾಕ್ಷಿಗಳಿವೆ. ಆದರೆ ಅಂದು ಪ್ರಮಾಣವಚನ ನಡೆಯದೇ ಹೋದದ್ದು ತಾಯಿ ಕಾಮಾಕ್ಯ ಮತ್ತು ಮಹಾಪುರುಷ ಶಂಕರದೇವ ಅವರ ಆಶೀರ್ವಾದ ಎಂದೇ ನಾನು ಭಾವಿಸುತ್ತೇನೆ. ಒಂದು ವೇಳೆ ನಾನು ಕಾಂಗ್ರೆಸ್ ಮುಖ್ಯಮಂತ್ರಿಯಾಗಿದ್ದರೆ, ಅದು ನನ್ನ ಜೀವನದ ಮೇಲೆ ಎಂದೆಂದಿಗೂ ಒಂದು ಕಪ್ಪು ಚುಕ್ಕೆಯಾಗಿ ಉಳಿಯುತ್ತಿತ್ತು. ಅಂದು ನನಗೆ ಸನಾತನ ಧರ್ಮಕ್ಕಾಗಿ ಮತ್ತು ಅಸ್ಸಾಮಿ ಜನರಿಗಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ” ಎಂದು ಶರ್ಮಾ ಅವರು ಹೇಳಿದ್ದಾರೆ.

ತನ್ನನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸುವುದನ್ನು ರಾಹುಲ್ ಗಾಂಧಿ ತಡೆದಿದ್ದಕ್ಕಾಗಿ ರಾಹುಲ್ ಗಾಂಧಿಯವರಿಗೆ ಧನ್ಯವಾದ ಎಂದ ಶರ್ಮಾ, ರಾಹುಲ್ ಗಾಂಧಿ ಅಂದು ವಿರೋಧ ವ್ಯಕ್ತಪಡಿಸಿದ್ದರಿಂದಲೇ ಇಂದು ನನಗೆ ‘ಸನಾತನ ಧರ್ಮ ಮತ್ತು ಅಸ್ಸಾಂನ ಹಿತದೃಷ್ಟಿಯಿಂದ ನಿರ್ಭಯವಾಗಿ ಕೆಲಸ ಮಾಡಲು ಸಾಧ್ಯವಾಗಿದೆ ಎಂದಿದ್ದಾರೆ.

“ಆ ಸಮಯದಲ್ಲಿ ನನಗೆ ತುಂಬಾ ನೋವಾಗಿತ್ತು, ಆದರೆ ಈಗ ನಾನು ನಂಬುವುದೇನೆಂದರೆ, ಒಬ್ಬರ ಜೀವನದಲ್ಲಿ ಏನೇ ಸಂಭವಿಸಿದರೂ ಅದು ಒಳ್ಳೆಯದಕ್ಕೇ ಆಗಿರುತ್ತದೆ. ಒಂದು ವೇಳೆ ನಾನು ಕಾಂಗ್ರೆಸ್‌ನಲ್ಲೇ ಉಳಿದುಕೊಂಡಿದ್ದರೆ ನನಗೆ ಏನು ಸಿಗುತ್ತಿತ್ತೋ, ಅದಕ್ಕಿಂತ ಹೆಚ್ಚಿನದನ್ನು ದೇವರು ಇಂದು ನನಗೆ ನೀಡಿದ್ದಾನೆ” ಎಂದು ಶರ್ಮಾ ಅವರು ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿ ಬಂಡಾಯವೆದ್ದ ನಂತರ ಶರ್ಮಾ ತಮ್ಮ ಆಪ್ತ ಶಾಸಕರೊಂದಿಗೆ ಬಿಜೆಪಿ ಸೇರಿದರು. 2016ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂತು, ಸರ್ಬಾನಂದ ಸೋನೋವಾಲ್ ಸಂಪುಟದಲ್ಲಿ ಶರ್ಮಾ ಸಚಿವರಾಗಿ ನೇಮಕಗೊಂಡರು. 2021ರಲ್ಲಿ ಬಿಜೆಪಿ ಮತ್ತೆ ಅಧಿಕಾರ ಉಳಿಸಿಕೊಂಡಾಗ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...