Homeಮುಖಪುಟಸಮಯ ವ್ಯರ್ಥ ಎಂದು ರಕ್ಷಣಾ ಸಂಸದೀಯ ಸಮಿತಿ ಸಭೆಯಿಂದ ಹೊರನಡೆದ ರಾಹುಲ್

ಸಮಯ ವ್ಯರ್ಥ ಎಂದು ರಕ್ಷಣಾ ಸಂಸದೀಯ ಸಮಿತಿ ಸಭೆಯಿಂದ ಹೊರನಡೆದ ರಾಹುಲ್

’ಸಭೆಯಲ್ಲಿ ಸೈನಿಕರನ್ನು ಹೇಗೆ ಉತ್ತಮವಾಗಿ ಸಜ್ಜುಗೊಳಿಸಬೇಕು ಎಂಬುದರ ಕುರಿತು ಚರ್ಚಿಸುವ ಬದಲು, ಸಮವಸ್ತ್ರಗಳ ಬಗ್ಗೆ ಚರ್ಚೆ ನಡೆಸುತ್ತಾ ಸಮಯ ವ್ಯರ್ಥ ಮಾಡಲಾಯಿತು’

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಇತರ ಇಬ್ಬರು ಕಾಂಗ್ರೆಸ್ ಸದಸ್ಯರಾದ ರಾಜೀವ್ ಸತವ್ ಮತ್ತು ರೇವಂತ್ ರೆಡ್ಡಿ ಅವರು ಇಂದು ನಡೆದ ರಕ್ಷಣಾ ಸಂಸದೀಯ ಸಮಿತಿ ಸಭೆಯ ನಡುವೆಯೇ ಎದ್ದು ಹೊರ ನಡೆದಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ರಕ್ಷಣಾ ಸಂಸದೀಯ ಸಮಿತಿ ಸಭೆಯಲ್ಲಿ ಸೈನಿಕರನ್ನು ಹೇಗೆ ಉತ್ತಮವಾಗಿ ಸಜ್ಜುಗೊಳಿಸಬೇಕು ಎಂಬುದರ ಕುರಿತು ಚರ್ಚಿಸುವ ಬದಲು, ಸಶಸ್ತ್ರ ಪಡೆಗಳ ಸಮವಸ್ತ್ರಗಳ ಬಗ್ಗೆ ಚರ್ಚೆ ನಡೆಸುತ್ತಾ ಸಮಯವನ್ನು ವ್ಯರ್ಥ ಮಾಡಲಾಯಿತು ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಸಭೆಯಲ್ಲಿ ಭೂ ಸೇನೆ, ಜಲಸೇನೆ ಮತ್ತು ವಾಯುಸೇನೆಯ ಸಮವಸ್ತ್ರದ ಬಗ್ಗೆ ಸಮಿತಿ ಚರ್ಚಿಸುತ್ತಿದ್ದು, ಚರ್ಚೆ ನಡುವೆ ಮಧ್ಯಪ್ರವೇಶಿಸಿದ ರಾಹುಲ್ ಗಾಂಧಿ, ಇದನ್ನು ಸಶಸ್ತ್ರ ಪಡೆಗಳ ಹಿರಿಯ ರಕ್ಷಣಾ ಅಧಿಕಾರಿಗಳು ನಿರ್ಧರಿಸಬಹುದು ಎಂದು ಹೇಳಿದ್ದಾರೆ. ಜೊತೆಗೆ ಎಲ್‌ಎಸಿ (ಲಡಾಖ್ ಗಡಿ)ಯಲ್ಲಿ ಹೋರಾಡುತ್ತಿರುವ ಸೈನಿಕರ ವಿಷಯವನ್ನು ಮಾತಾಡಲು ಮುಂದಾಗಿದ್ದರು.

ಈ ಸಮಯದಲ್ಲಿ ಸಮಿತಿಯ ಅಧ್ಯಕ್ಷ, ಬಿಜೆಪಿ ಸಂಸದ ಜುವಾಲ್ ಓರಮ್, ರಾಹುಲ್ ಗಾಂಧಿಯವರಿಗೆ ಮಾತನಾಡಲು ಅನುಮತಿಸಲಿಲ್ಲ ಹಾಗಾಗಿ ಅವರು ಸಭೆಯಿಂದ ಹೊರನಡೆದರು ಎಂದು ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ: ಮೋದಿ ಸರ್ಕಾರಕ್ಕೆ ಬಂಡವಾಳಶಾಹಿಗಳೇ ಆಪ್ತ ಸ್ನೇಹಿತರು: ರಾಹುಲ್ ಗಾಂಧಿ

’ರಾಜಕೀಯ ನಾಯಕತ್ವವು ರಾಷ್ಟ್ರೀಯ ಭದ್ರತೆಯ ವಿಷಯಗಳು ಮತ್ತು ಲಡಾಖ್‌ನಲ್ಲಿ ಚೀನಿಯರ ವಿರುದ್ಧ ಹೋರಾಡುತ್ತಿರುವ ರಕ್ಷಣಾ ಪಡೆಗಳನ್ನು ಹೇಗೆ ಬಲಪಡಿಸುವುದು ಎಂಬುದರ ಕುರಿತು ಚರ್ಚಿಸಬೇಕು’ ಎಂದು ರಾಹುಲ್ ಗಾಂಧಿ ಹೇಳಿದರು. ಇದರ ನಂತರ ಅವರಿಗೆ ತಮ್ಮ ಮಾತು ಮುಂದುವರಿಸಲು ಅವಕಾಶ ನೀಡಿಲ್ಲ.

ರಾಹುಲ್ ಗಾಂಧಿ ಸಭೆಯನ್ನು ಸಮಯ ವ್ಯರ್ಥ ಎಂದು ಹೇಳಿ ಹೊರ ನಡೆಯುತ್ತಿದ್ದಂತೆ, ಅವರ ಹಿಂದೆಯೇ ಕಾಂಗ್ರೆಸ್ ಸದಸ್ಯ ರಾಜೀವ್ ಸತವ್ ಮತ್ತು ರೇವಂತ್ ರೆಡ್ಡಿ ಕೂಡ ಹೊರನಡೆದಿದ್ದಾರೆ ಎನ್ನಲಾಗಿದೆ.

ಈ ಹಿಂದೆಯೂ ಕಾಂಗ್ರೆಸ್ ಮುಖಂಡ ಹಲವಾರು ಭಾರಿ ದೇಶದ ಗಡಿಯನ್ನು ಕಾಪಾಡುವ ಸೈನಿಕರ ದುಃಸ್ಥಿತಿಯ ವಿಷಯ, ಶೀತದಲ್ಲಿ ಸೈನಿಕರು ಪರದಾಡುವ ಕುರಿತು ಧ್ವನಿ ಎತ್ತಿದ್ದರು. ಪ್ರಧಾನಿ ನರೇಂದ್ರ ಮೋದಿಯವರ ಪ್ರಯಾಣಕ್ಕೆಂದು ಸುಮಾರು 8,400 ಕೋಟಿ ವ್ಯಯಿಸಿ ಐಷಾರಾಮಿ ವಿಮಾನದ ವ್ಯವಸ್ಥೆ ಮಾಡಿರುವ ಸರ್ಕಾರ, ನಮ್ಮ ದೇಶದ ಸೈನಿಕರಿಗೆ ಬುಲ್ಲೆಟ್‌ಪ್ರೂಫ್ ಟ್ರಕ್ ಒದಗಿಸಲು ನಿರಾಕರಿಸಿದೆ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿ ಸರ್ಕಾರವನ್ನು ಟೀಕಿಸಿದ್ದರು.

ಪ್ರಧಾನಮಂತ್ರಿ ತನಗಾಗಿ 8,400 ಕೋಟಿ ಮೌಲ್ಯದ ವಿಮಾನವನ್ನು ಖರೀದಿಸಿದ್ದಾರೆ. ಈ ದುಡ್ಡಿನಲ್ಲಿ ಸಿಯಾಚಿನ್-ಲಡಾಕ್ ಗಡಿಯಲ್ಲಿರುವ ನಮ್ಮ ಸೈನಿಕರಿಗೆ ಏನೆಲ್ಲಾ ಖರೀದಿಸಬಹುದು? ಪ್ರಧಾನಿಯವರು ಕೇವಲ ತನ್ನ ಬಗ್ಗೆ ಮಾತ್ರ ಯೋಚಿಸುತ್ತಾರೆ” ಎಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದರು.


ಇದನ್ನೂ ಓದಿ: 17 ದಿನದಲ್ಲಿ 11 ರೈತರು ಬಲಿ: ಇನ್ನೆಷ್ಟು ಬಲಿಯಾಗಬೇಕು..? ಎಂದು ಪ್ರಶ್ನಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...