Homeಮುಖಪುಟರಾಹುಲ್ ಗಾಂಧಿ ವಿದೇಶಿ ಟಿ-ಶರ್ಟ್ ಧರಿಸಿದ್ದಾರೆ: ಅಮಿತ್‌ ಶಾ

ರಾಹುಲ್ ಗಾಂಧಿ ವಿದೇಶಿ ಟಿ-ಶರ್ಟ್ ಧರಿಸಿದ್ದಾರೆ: ಅಮಿತ್‌ ಶಾ

- Advertisement -
- Advertisement -

ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ರಾಹುಲ್ ಗಾಂಧಿ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿ ‘ವಿದೇಶಿ ಟಿ-ಶರ್ಟ್’ ಧರಿಸಿ ದೇಶವನ್ನು ಒಂದುಗೂಡಿಸುವ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ರಾಜಸ್ಥಾನದ ಜೋಧ್‌ಪುರದಲ್ಲಿ ಮಾತನಾಡಿದ ಅವರು ಕಾಂಗ್ರೆಸ್‌ ಕೇವಲ ಎರಡು ರಾಜ್ಯಗಳಲ್ಲಿ ಮಾತ್ರ ತನ್ನ ಸರ್ಕಾರಗಳನ್ನು ಹೊಂದಿದೆ. 2023 ರ ವಿಧಾನಸಭಾ ಚುನಾವಣೆಯ ನಂತರ ಅವರಿಗೆ ಉಳಿಯುವುದಿಲ್ಲ ಎಂದು ಹೇಳಿದ್ದಾರೆ. “ಛತ್ತೀಸ್‌ಘಡ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ, ಕಾಂಗ್ರೆಸ್‌ಗೆ ಏನೂ ಉಳಿಯುವುದಿಲ್ಲ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2024 ರ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್‌‌ 150 ದಿನಗಳ ಭಾರತ್ ಜೋಡೋ ಯಾತ್ರೆಯನ್ನು ನಡೆಸುತ್ತಿದೆ. ಇದರಲ್ಲಿ 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 3,570 ಕಿಮೀ ಉದ್ದದ ದಾರಿನ್ನು ಪಾದಯಾತ್ರೆಗೆ ಕಾಂಗ್ರೆಸ್ ಆಯ್ಕೆ ಮಾಡಿಕೊಂಡಿದೆ.

ಇದನ್ನೂ ಓದಿ: ‘ಅಮಿತ್ ಶಾ ಭಾರತದ ದೊಡ್ಡ ಪಪ್ಪು’: ಟಿ-ಶರ್ಟ್ ಹಂಚಿದ ಟಿಎಂಸಿ

ತಮ್ಮ ಭಾಷಣದ ವೇಳೆ ಪಾದಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧರಿಸಿದ್ದ ಟೀ ಶರ್ಟ್ ಅನ್ನು ಉಲ್ಲೇಖಿಸಿದ ಅಮಿತ್‌ ಶಾ,“ಈಗ ಈ ರಾಹುಲ್ ಬಾಬಾ…ಭಾರತವನ್ನು ಒಗ್ಗೂಡಿಸಲು ಕಾಲ್ನಡಿಗೆಯಲ್ಲಿ ಹೊರಟಿದ್ದಾರೆ ಆದರೆ ಅವರು ಧರಿಸಿದ್ದು ವಿದೇಶಿ ಟಿ-ಶರ್ಟ್” ಎಂದು ಹೇಳಿದ್ದಾರೆ. ಭಾರತ್‌ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ಧರಿಸಿದ್ದ ಟಿ-ಶರ್ಟ್‌ನ ಬೆಲೆ 41 ಸಾವಿರ ಎಂದು ಬಿಜೆಪಿ ಪ್ರತಿಪಾದಿಸಿದೆ.

“ಅವರು ಒಮ್ಮೆ ಸಂಸತ್ತಿನಲ್ಲಿ ಭಾಷಣ ಮಾಡುವಾಗ ಭಾರತವು ಒಂದು ದೇಶವಲ್ಲ ಎಂದು ಹೇಳುತ್ತಾರೆ. ಹಲವಾರು ಧೀರ ಹೃದಯಗಳು ತ್ಯಾಗ ಬಲಿದಾನ ಮಾಡಿದ ದೇಶವಿದು. ರಾಹುಲ್ ಬಾಬಾ ಭಾರತವನ್ನು ಒಗ್ಗೂಡಿಸಲು ಪ್ರಯತ್ನಿಸುವ ಮೊದಲು ದೇಶದ ಇತಿಹಾಸವನ್ನು ಓದಬೇಕು” ಎಂದು ಅಮಿತ್‌ ಶಾ ಹೇಳಿದ್ದಾರೆ.

ಮುಖ್ಯಮಂತ್ರಿ ಗೆಹ್ಲೋಟ್ ವಿರುದ್ಧವೂ ಅಮಿತ್ ಶಾ ವಾಗ್ದಾಳಿ ನಡೆಸಿದ್ದು, “2018 ರಲ್ಲಿ ನೀವು ರಾಹುಲ್ ಗಾಂಧಿಯವರೊಂದಿಗೆ ಸೇರಿ ನೀಡಿದ ಭರವಸೆಗನ್ನು ನೆನಪಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಯುವಕರಿಗೆ 3,500 ರೂ.ಗಳ ನಿರುದ್ಯೋಗ ಭತ್ಯೆ ಏನಾಯಿತು? 20 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಯೋಜನೆ ಏನಾಯಿತು? ಕಾಂಗ್ರೆಸ್ ಪೊಳ್ಳು ಭರವಸೆಗಳನ್ನು ನೀಡಬಲ್ಲದೆ ಹೊರತು, ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ – ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸುವ ಪ್ರಯತ್ನ: ರಾಹುಲ್ ಗಾಂಧಿ

ಬಿಜೆಪಿಯ ರಾಷ್ಟ್ರೀಯ ಒಬಿಸಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಲು ಅಮಿತ್ ಶಾ ರಾಜಸ್ಥಾನದ ಜೋಧಪುರಕ್ಕೆ ಭೇಟಿ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಮೋದಿ ಹತ್ತು ಲಕ್ಷ ರೂ.ಬೆಲೆಯ ಸೂಟ್ ದರಿಸಿದಾಗ ಅಮಿತ್ ಶಾ ಕಣ್ಣು ಕುರುಡಾಗಿತ್ತಾ?

  2. ಹೌದ ಗುಂಡು ಬಾಬಾ. ನಿಮ್ಮ ಚೌಕಿದಾರ ಹಾಕುವ ಬಟ್ಟೆ ಬೆಲೆ ಗೊತ್ತಾ ನಿಂಗೆ?? ಅವನು ಸೈನ್ ಮಾಡುವ ಪೆನ್ನಿನ ಬೆಲೆ ಗೊತ್ತಾ ನಿಂಗೆ? ಅದು ಬಿಡು ಗುಂಡು ಬಾಬಾ ನಿಮ್ಮ ಪಕ್ಷ 2014ರ ಲೋಕ ಸಭಾ ಚುನಾವಣೆ ಅಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಯೋಗ್ಯತೆ ನಿಮಗೆ ಇಲ್ಲ. ಎಲ್ಲಿ ಹೋದವು ವರ್ಷಕ್ಕೆ 2ಕೋಟಿ ಉದ್ಯೋಗ? ಎಲ್ಲಿ 40 ರೂಪಾಯಿಯ ಪೆಟ್ರೋಲ್? ಎಲ್ಲಿ ಒಂದು ರೂಪಾಯಿಗೆ ಒಂದು ಡಾಲರ್? ಎಲ್ಲಿ ಅಚ್ಚೆ ದಿನ? ಒಂದು ತಿಳಿದು ಗುಂಡು ಬಾಬಾ ನಿಮ್ಮದೇ ಪಕ್ಷ ಅಧಿಕಾರದಲ್ಲಿ ಇರುವ ಕರ್ನಾಟಕದಲ್ಲಿ ಇಂದು ಅತಿವೃಷ್ಟಿ ಯಿಂದ ರಾಜ್ಯದ ಸುಮಾರು ಅರ್ಧಕ್ಕೂ ಹೆಚ್ಚಿನ ಭಾಗ ಜಲವೃತ್ತ ಗೊಂಡು ಬೆಲೆ ನಾಶ, ಮನೆಗಳು ಬಿದ್ದು, ಅನ್ನ ಆಹಾರ ಇಲ್ಲದೆ ಸಂಕಷ್ಟದಲ್ಲಿ ಇದ್ದಾರೆ. ಆದರೆ ನಿಮ್ಮ ಡಬ್ಬಲ್ ಇಂಜಿನ್ ಸರ್ಕಾರ ಇದರ ಪರಿವೆ ಇಲ್ಲದೆ ಏನೋ ಸಾಧಿಸಿರುವ ಹಾಗೆ ಜನಸ್ಪಂದನ ಕಾರ್ಯಕ್ರಮ ಮಾಡಿದ್ದಾರೆ. ಮೇಲಿನ ಯಾವುದಕ್ಕೂ ಸ್ಪಂದನೆ ನೀಡದ ನಿಮ್ಮ ಪಕ್ಷ ಸಾರ್ವಜನಿಕರಿಂದ ಪಡೆದ ತೆರಿಗೆ ಹಣದಲ್ಲಿ ಕಾರ್ಯಕ್ರಮ ಮಾಡುವುದು ಎಷ್ಟು ಯೋಗ್ಯ? ನಿಮ್ಮ ಪಕ್ಷಕ್ಕೆ ಜನತೆಯ ಅಭಿವೃದ್ದಿ ಮುಖ್ಯ ಅಲ್ಲ. ನಿಮ್ಮವರ ನಿಮ್ಮ ಪಕ್ಷದ ಅಭಿವೃದ್ದಿ ಅಷ್ಟೇ ಮುಖ್ಯ. ನಿಮ್ಮ ಆಡಳಿತ ವ್ಯವಸ್ಥೆ ನೋಡಿದರೆ ಒಂದು ಪುರಾತನ ಗಾದೆ ಮಾತು ನೆನಪಿಗೆ ಬರುತ್ತೆ ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಿತು ಅಂತ ಅದಕ್ಕೆ ಅನ್ವರ್ಥಕ ವಾಗಿ ನಿಮ್ಮ ಪಕ್ಷ ನಡೆದುಕೊಳ್ಳುತ್ತಿದ್ದಾರೆ

  3. Amith shah a great buffoon has he forgotten the 2cr job , 15 lakh,dollars =rupees,petrol 30 rs ,gas above this PM changes his dress 3 times a day costing around lakhs , imported mushroom etc 🤣

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...