Homeಮುಖಪುಟರಾಹುಲ್ ಗಾಂಧಿ ವಿದೇಶಿ ಟಿ-ಶರ್ಟ್ ಧರಿಸಿದ್ದಾರೆ: ಅಮಿತ್‌ ಶಾ

ರಾಹುಲ್ ಗಾಂಧಿ ವಿದೇಶಿ ಟಿ-ಶರ್ಟ್ ಧರಿಸಿದ್ದಾರೆ: ಅಮಿತ್‌ ಶಾ

- Advertisement -
- Advertisement -

ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ರಾಹುಲ್ ಗಾಂಧಿ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿ ‘ವಿದೇಶಿ ಟಿ-ಶರ್ಟ್’ ಧರಿಸಿ ದೇಶವನ್ನು ಒಂದುಗೂಡಿಸುವ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ರಾಜಸ್ಥಾನದ ಜೋಧ್‌ಪುರದಲ್ಲಿ ಮಾತನಾಡಿದ ಅವರು ಕಾಂಗ್ರೆಸ್‌ ಕೇವಲ ಎರಡು ರಾಜ್ಯಗಳಲ್ಲಿ ಮಾತ್ರ ತನ್ನ ಸರ್ಕಾರಗಳನ್ನು ಹೊಂದಿದೆ. 2023 ರ ವಿಧಾನಸಭಾ ಚುನಾವಣೆಯ ನಂತರ ಅವರಿಗೆ ಉಳಿಯುವುದಿಲ್ಲ ಎಂದು ಹೇಳಿದ್ದಾರೆ. “ಛತ್ತೀಸ್‌ಘಡ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ, ಕಾಂಗ್ರೆಸ್‌ಗೆ ಏನೂ ಉಳಿಯುವುದಿಲ್ಲ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2024 ರ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್‌‌ 150 ದಿನಗಳ ಭಾರತ್ ಜೋಡೋ ಯಾತ್ರೆಯನ್ನು ನಡೆಸುತ್ತಿದೆ. ಇದರಲ್ಲಿ 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 3,570 ಕಿಮೀ ಉದ್ದದ ದಾರಿನ್ನು ಪಾದಯಾತ್ರೆಗೆ ಕಾಂಗ್ರೆಸ್ ಆಯ್ಕೆ ಮಾಡಿಕೊಂಡಿದೆ.

ಇದನ್ನೂ ಓದಿ: ‘ಅಮಿತ್ ಶಾ ಭಾರತದ ದೊಡ್ಡ ಪಪ್ಪು’: ಟಿ-ಶರ್ಟ್ ಹಂಚಿದ ಟಿಎಂಸಿ

ತಮ್ಮ ಭಾಷಣದ ವೇಳೆ ಪಾದಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧರಿಸಿದ್ದ ಟೀ ಶರ್ಟ್ ಅನ್ನು ಉಲ್ಲೇಖಿಸಿದ ಅಮಿತ್‌ ಶಾ,“ಈಗ ಈ ರಾಹುಲ್ ಬಾಬಾ…ಭಾರತವನ್ನು ಒಗ್ಗೂಡಿಸಲು ಕಾಲ್ನಡಿಗೆಯಲ್ಲಿ ಹೊರಟಿದ್ದಾರೆ ಆದರೆ ಅವರು ಧರಿಸಿದ್ದು ವಿದೇಶಿ ಟಿ-ಶರ್ಟ್” ಎಂದು ಹೇಳಿದ್ದಾರೆ. ಭಾರತ್‌ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ಧರಿಸಿದ್ದ ಟಿ-ಶರ್ಟ್‌ನ ಬೆಲೆ 41 ಸಾವಿರ ಎಂದು ಬಿಜೆಪಿ ಪ್ರತಿಪಾದಿಸಿದೆ.

“ಅವರು ಒಮ್ಮೆ ಸಂಸತ್ತಿನಲ್ಲಿ ಭಾಷಣ ಮಾಡುವಾಗ ಭಾರತವು ಒಂದು ದೇಶವಲ್ಲ ಎಂದು ಹೇಳುತ್ತಾರೆ. ಹಲವಾರು ಧೀರ ಹೃದಯಗಳು ತ್ಯಾಗ ಬಲಿದಾನ ಮಾಡಿದ ದೇಶವಿದು. ರಾಹುಲ್ ಬಾಬಾ ಭಾರತವನ್ನು ಒಗ್ಗೂಡಿಸಲು ಪ್ರಯತ್ನಿಸುವ ಮೊದಲು ದೇಶದ ಇತಿಹಾಸವನ್ನು ಓದಬೇಕು” ಎಂದು ಅಮಿತ್‌ ಶಾ ಹೇಳಿದ್ದಾರೆ.

ಮುಖ್ಯಮಂತ್ರಿ ಗೆಹ್ಲೋಟ್ ವಿರುದ್ಧವೂ ಅಮಿತ್ ಶಾ ವಾಗ್ದಾಳಿ ನಡೆಸಿದ್ದು, “2018 ರಲ್ಲಿ ನೀವು ರಾಹುಲ್ ಗಾಂಧಿಯವರೊಂದಿಗೆ ಸೇರಿ ನೀಡಿದ ಭರವಸೆಗನ್ನು ನೆನಪಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಯುವಕರಿಗೆ 3,500 ರೂ.ಗಳ ನಿರುದ್ಯೋಗ ಭತ್ಯೆ ಏನಾಯಿತು? 20 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಯೋಜನೆ ಏನಾಯಿತು? ಕಾಂಗ್ರೆಸ್ ಪೊಳ್ಳು ಭರವಸೆಗಳನ್ನು ನೀಡಬಲ್ಲದೆ ಹೊರತು, ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ – ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸುವ ಪ್ರಯತ್ನ: ರಾಹುಲ್ ಗಾಂಧಿ

ಬಿಜೆಪಿಯ ರಾಷ್ಟ್ರೀಯ ಒಬಿಸಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಲು ಅಮಿತ್ ಶಾ ರಾಜಸ್ಥಾನದ ಜೋಧಪುರಕ್ಕೆ ಭೇಟಿ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಮೋದಿ ಹತ್ತು ಲಕ್ಷ ರೂ.ಬೆಲೆಯ ಸೂಟ್ ದರಿಸಿದಾಗ ಅಮಿತ್ ಶಾ ಕಣ್ಣು ಕುರುಡಾಗಿತ್ತಾ?

  2. ಹೌದ ಗುಂಡು ಬಾಬಾ. ನಿಮ್ಮ ಚೌಕಿದಾರ ಹಾಕುವ ಬಟ್ಟೆ ಬೆಲೆ ಗೊತ್ತಾ ನಿಂಗೆ?? ಅವನು ಸೈನ್ ಮಾಡುವ ಪೆನ್ನಿನ ಬೆಲೆ ಗೊತ್ತಾ ನಿಂಗೆ? ಅದು ಬಿಡು ಗುಂಡು ಬಾಬಾ ನಿಮ್ಮ ಪಕ್ಷ 2014ರ ಲೋಕ ಸಭಾ ಚುನಾವಣೆ ಅಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಯೋಗ್ಯತೆ ನಿಮಗೆ ಇಲ್ಲ. ಎಲ್ಲಿ ಹೋದವು ವರ್ಷಕ್ಕೆ 2ಕೋಟಿ ಉದ್ಯೋಗ? ಎಲ್ಲಿ 40 ರೂಪಾಯಿಯ ಪೆಟ್ರೋಲ್? ಎಲ್ಲಿ ಒಂದು ರೂಪಾಯಿಗೆ ಒಂದು ಡಾಲರ್? ಎಲ್ಲಿ ಅಚ್ಚೆ ದಿನ? ಒಂದು ತಿಳಿದು ಗುಂಡು ಬಾಬಾ ನಿಮ್ಮದೇ ಪಕ್ಷ ಅಧಿಕಾರದಲ್ಲಿ ಇರುವ ಕರ್ನಾಟಕದಲ್ಲಿ ಇಂದು ಅತಿವೃಷ್ಟಿ ಯಿಂದ ರಾಜ್ಯದ ಸುಮಾರು ಅರ್ಧಕ್ಕೂ ಹೆಚ್ಚಿನ ಭಾಗ ಜಲವೃತ್ತ ಗೊಂಡು ಬೆಲೆ ನಾಶ, ಮನೆಗಳು ಬಿದ್ದು, ಅನ್ನ ಆಹಾರ ಇಲ್ಲದೆ ಸಂಕಷ್ಟದಲ್ಲಿ ಇದ್ದಾರೆ. ಆದರೆ ನಿಮ್ಮ ಡಬ್ಬಲ್ ಇಂಜಿನ್ ಸರ್ಕಾರ ಇದರ ಪರಿವೆ ಇಲ್ಲದೆ ಏನೋ ಸಾಧಿಸಿರುವ ಹಾಗೆ ಜನಸ್ಪಂದನ ಕಾರ್ಯಕ್ರಮ ಮಾಡಿದ್ದಾರೆ. ಮೇಲಿನ ಯಾವುದಕ್ಕೂ ಸ್ಪಂದನೆ ನೀಡದ ನಿಮ್ಮ ಪಕ್ಷ ಸಾರ್ವಜನಿಕರಿಂದ ಪಡೆದ ತೆರಿಗೆ ಹಣದಲ್ಲಿ ಕಾರ್ಯಕ್ರಮ ಮಾಡುವುದು ಎಷ್ಟು ಯೋಗ್ಯ? ನಿಮ್ಮ ಪಕ್ಷಕ್ಕೆ ಜನತೆಯ ಅಭಿವೃದ್ದಿ ಮುಖ್ಯ ಅಲ್ಲ. ನಿಮ್ಮವರ ನಿಮ್ಮ ಪಕ್ಷದ ಅಭಿವೃದ್ದಿ ಅಷ್ಟೇ ಮುಖ್ಯ. ನಿಮ್ಮ ಆಡಳಿತ ವ್ಯವಸ್ಥೆ ನೋಡಿದರೆ ಒಂದು ಪುರಾತನ ಗಾದೆ ಮಾತು ನೆನಪಿಗೆ ಬರುತ್ತೆ ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಿತು ಅಂತ ಅದಕ್ಕೆ ಅನ್ವರ್ಥಕ ವಾಗಿ ನಿಮ್ಮ ಪಕ್ಷ ನಡೆದುಕೊಳ್ಳುತ್ತಿದ್ದಾರೆ

  3. Amith shah a great buffoon has he forgotten the 2cr job , 15 lakh,dollars =rupees,petrol 30 rs ,gas above this PM changes his dress 3 times a day costing around lakhs , imported mushroom etc 🤣

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...