Homeಮುಖಪುಟರಾಹುಲ್ ಗಾಂಧಿ ವಿದೇಶಿ ಟಿ-ಶರ್ಟ್ ಧರಿಸಿದ್ದಾರೆ: ಅಮಿತ್‌ ಶಾ

ರಾಹುಲ್ ಗಾಂಧಿ ವಿದೇಶಿ ಟಿ-ಶರ್ಟ್ ಧರಿಸಿದ್ದಾರೆ: ಅಮಿತ್‌ ಶಾ

- Advertisement -
- Advertisement -

ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ರಾಹುಲ್ ಗಾಂಧಿ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿ ‘ವಿದೇಶಿ ಟಿ-ಶರ್ಟ್’ ಧರಿಸಿ ದೇಶವನ್ನು ಒಂದುಗೂಡಿಸುವ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ರಾಜಸ್ಥಾನದ ಜೋಧ್‌ಪುರದಲ್ಲಿ ಮಾತನಾಡಿದ ಅವರು ಕಾಂಗ್ರೆಸ್‌ ಕೇವಲ ಎರಡು ರಾಜ್ಯಗಳಲ್ಲಿ ಮಾತ್ರ ತನ್ನ ಸರ್ಕಾರಗಳನ್ನು ಹೊಂದಿದೆ. 2023 ರ ವಿಧಾನಸಭಾ ಚುನಾವಣೆಯ ನಂತರ ಅವರಿಗೆ ಉಳಿಯುವುದಿಲ್ಲ ಎಂದು ಹೇಳಿದ್ದಾರೆ. “ಛತ್ತೀಸ್‌ಘಡ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ, ಕಾಂಗ್ರೆಸ್‌ಗೆ ಏನೂ ಉಳಿಯುವುದಿಲ್ಲ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2024 ರ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್‌‌ 150 ದಿನಗಳ ಭಾರತ್ ಜೋಡೋ ಯಾತ್ರೆಯನ್ನು ನಡೆಸುತ್ತಿದೆ. ಇದರಲ್ಲಿ 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 3,570 ಕಿಮೀ ಉದ್ದದ ದಾರಿನ್ನು ಪಾದಯಾತ್ರೆಗೆ ಕಾಂಗ್ರೆಸ್ ಆಯ್ಕೆ ಮಾಡಿಕೊಂಡಿದೆ.

ಇದನ್ನೂ ಓದಿ: ‘ಅಮಿತ್ ಶಾ ಭಾರತದ ದೊಡ್ಡ ಪಪ್ಪು’: ಟಿ-ಶರ್ಟ್ ಹಂಚಿದ ಟಿಎಂಸಿ

ತಮ್ಮ ಭಾಷಣದ ವೇಳೆ ಪಾದಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧರಿಸಿದ್ದ ಟೀ ಶರ್ಟ್ ಅನ್ನು ಉಲ್ಲೇಖಿಸಿದ ಅಮಿತ್‌ ಶಾ,“ಈಗ ಈ ರಾಹುಲ್ ಬಾಬಾ…ಭಾರತವನ್ನು ಒಗ್ಗೂಡಿಸಲು ಕಾಲ್ನಡಿಗೆಯಲ್ಲಿ ಹೊರಟಿದ್ದಾರೆ ಆದರೆ ಅವರು ಧರಿಸಿದ್ದು ವಿದೇಶಿ ಟಿ-ಶರ್ಟ್” ಎಂದು ಹೇಳಿದ್ದಾರೆ. ಭಾರತ್‌ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ಧರಿಸಿದ್ದ ಟಿ-ಶರ್ಟ್‌ನ ಬೆಲೆ 41 ಸಾವಿರ ಎಂದು ಬಿಜೆಪಿ ಪ್ರತಿಪಾದಿಸಿದೆ.

“ಅವರು ಒಮ್ಮೆ ಸಂಸತ್ತಿನಲ್ಲಿ ಭಾಷಣ ಮಾಡುವಾಗ ಭಾರತವು ಒಂದು ದೇಶವಲ್ಲ ಎಂದು ಹೇಳುತ್ತಾರೆ. ಹಲವಾರು ಧೀರ ಹೃದಯಗಳು ತ್ಯಾಗ ಬಲಿದಾನ ಮಾಡಿದ ದೇಶವಿದು. ರಾಹುಲ್ ಬಾಬಾ ಭಾರತವನ್ನು ಒಗ್ಗೂಡಿಸಲು ಪ್ರಯತ್ನಿಸುವ ಮೊದಲು ದೇಶದ ಇತಿಹಾಸವನ್ನು ಓದಬೇಕು” ಎಂದು ಅಮಿತ್‌ ಶಾ ಹೇಳಿದ್ದಾರೆ.

ಮುಖ್ಯಮಂತ್ರಿ ಗೆಹ್ಲೋಟ್ ವಿರುದ್ಧವೂ ಅಮಿತ್ ಶಾ ವಾಗ್ದಾಳಿ ನಡೆಸಿದ್ದು, “2018 ರಲ್ಲಿ ನೀವು ರಾಹುಲ್ ಗಾಂಧಿಯವರೊಂದಿಗೆ ಸೇರಿ ನೀಡಿದ ಭರವಸೆಗನ್ನು ನೆನಪಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಯುವಕರಿಗೆ 3,500 ರೂ.ಗಳ ನಿರುದ್ಯೋಗ ಭತ್ಯೆ ಏನಾಯಿತು? 20 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಯೋಜನೆ ಏನಾಯಿತು? ಕಾಂಗ್ರೆಸ್ ಪೊಳ್ಳು ಭರವಸೆಗಳನ್ನು ನೀಡಬಲ್ಲದೆ ಹೊರತು, ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ – ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸುವ ಪ್ರಯತ್ನ: ರಾಹುಲ್ ಗಾಂಧಿ

ಬಿಜೆಪಿಯ ರಾಷ್ಟ್ರೀಯ ಒಬಿಸಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಲು ಅಮಿತ್ ಶಾ ರಾಜಸ್ಥಾನದ ಜೋಧಪುರಕ್ಕೆ ಭೇಟಿ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಮೋದಿ ಹತ್ತು ಲಕ್ಷ ರೂ.ಬೆಲೆಯ ಸೂಟ್ ದರಿಸಿದಾಗ ಅಮಿತ್ ಶಾ ಕಣ್ಣು ಕುರುಡಾಗಿತ್ತಾ?

  2. ಹೌದ ಗುಂಡು ಬಾಬಾ. ನಿಮ್ಮ ಚೌಕಿದಾರ ಹಾಕುವ ಬಟ್ಟೆ ಬೆಲೆ ಗೊತ್ತಾ ನಿಂಗೆ?? ಅವನು ಸೈನ್ ಮಾಡುವ ಪೆನ್ನಿನ ಬೆಲೆ ಗೊತ್ತಾ ನಿಂಗೆ? ಅದು ಬಿಡು ಗುಂಡು ಬಾಬಾ ನಿಮ್ಮ ಪಕ್ಷ 2014ರ ಲೋಕ ಸಭಾ ಚುನಾವಣೆ ಅಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಯೋಗ್ಯತೆ ನಿಮಗೆ ಇಲ್ಲ. ಎಲ್ಲಿ ಹೋದವು ವರ್ಷಕ್ಕೆ 2ಕೋಟಿ ಉದ್ಯೋಗ? ಎಲ್ಲಿ 40 ರೂಪಾಯಿಯ ಪೆಟ್ರೋಲ್? ಎಲ್ಲಿ ಒಂದು ರೂಪಾಯಿಗೆ ಒಂದು ಡಾಲರ್? ಎಲ್ಲಿ ಅಚ್ಚೆ ದಿನ? ಒಂದು ತಿಳಿದು ಗುಂಡು ಬಾಬಾ ನಿಮ್ಮದೇ ಪಕ್ಷ ಅಧಿಕಾರದಲ್ಲಿ ಇರುವ ಕರ್ನಾಟಕದಲ್ಲಿ ಇಂದು ಅತಿವೃಷ್ಟಿ ಯಿಂದ ರಾಜ್ಯದ ಸುಮಾರು ಅರ್ಧಕ್ಕೂ ಹೆಚ್ಚಿನ ಭಾಗ ಜಲವೃತ್ತ ಗೊಂಡು ಬೆಲೆ ನಾಶ, ಮನೆಗಳು ಬಿದ್ದು, ಅನ್ನ ಆಹಾರ ಇಲ್ಲದೆ ಸಂಕಷ್ಟದಲ್ಲಿ ಇದ್ದಾರೆ. ಆದರೆ ನಿಮ್ಮ ಡಬ್ಬಲ್ ಇಂಜಿನ್ ಸರ್ಕಾರ ಇದರ ಪರಿವೆ ಇಲ್ಲದೆ ಏನೋ ಸಾಧಿಸಿರುವ ಹಾಗೆ ಜನಸ್ಪಂದನ ಕಾರ್ಯಕ್ರಮ ಮಾಡಿದ್ದಾರೆ. ಮೇಲಿನ ಯಾವುದಕ್ಕೂ ಸ್ಪಂದನೆ ನೀಡದ ನಿಮ್ಮ ಪಕ್ಷ ಸಾರ್ವಜನಿಕರಿಂದ ಪಡೆದ ತೆರಿಗೆ ಹಣದಲ್ಲಿ ಕಾರ್ಯಕ್ರಮ ಮಾಡುವುದು ಎಷ್ಟು ಯೋಗ್ಯ? ನಿಮ್ಮ ಪಕ್ಷಕ್ಕೆ ಜನತೆಯ ಅಭಿವೃದ್ದಿ ಮುಖ್ಯ ಅಲ್ಲ. ನಿಮ್ಮವರ ನಿಮ್ಮ ಪಕ್ಷದ ಅಭಿವೃದ್ದಿ ಅಷ್ಟೇ ಮುಖ್ಯ. ನಿಮ್ಮ ಆಡಳಿತ ವ್ಯವಸ್ಥೆ ನೋಡಿದರೆ ಒಂದು ಪುರಾತನ ಗಾದೆ ಮಾತು ನೆನಪಿಗೆ ಬರುತ್ತೆ ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಿತು ಅಂತ ಅದಕ್ಕೆ ಅನ್ವರ್ಥಕ ವಾಗಿ ನಿಮ್ಮ ಪಕ್ಷ ನಡೆದುಕೊಳ್ಳುತ್ತಿದ್ದಾರೆ

  3. Amith shah a great buffoon has he forgotten the 2cr job , 15 lakh,dollars =rupees,petrol 30 rs ,gas above this PM changes his dress 3 times a day costing around lakhs , imported mushroom etc 🤣

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....