Homeಮುಖಪುಟರಾಹುಲ್ ಗಾಂಧಿ ವಿದೇಶಿ ಟಿ-ಶರ್ಟ್ ಧರಿಸಿದ್ದಾರೆ: ಅಮಿತ್‌ ಶಾ

ರಾಹುಲ್ ಗಾಂಧಿ ವಿದೇಶಿ ಟಿ-ಶರ್ಟ್ ಧರಿಸಿದ್ದಾರೆ: ಅಮಿತ್‌ ಶಾ

- Advertisement -
- Advertisement -

ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ರಾಹುಲ್ ಗಾಂಧಿ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿ ‘ವಿದೇಶಿ ಟಿ-ಶರ್ಟ್’ ಧರಿಸಿ ದೇಶವನ್ನು ಒಂದುಗೂಡಿಸುವ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ರಾಜಸ್ಥಾನದ ಜೋಧ್‌ಪುರದಲ್ಲಿ ಮಾತನಾಡಿದ ಅವರು ಕಾಂಗ್ರೆಸ್‌ ಕೇವಲ ಎರಡು ರಾಜ್ಯಗಳಲ್ಲಿ ಮಾತ್ರ ತನ್ನ ಸರ್ಕಾರಗಳನ್ನು ಹೊಂದಿದೆ. 2023 ರ ವಿಧಾನಸಭಾ ಚುನಾವಣೆಯ ನಂತರ ಅವರಿಗೆ ಉಳಿಯುವುದಿಲ್ಲ ಎಂದು ಹೇಳಿದ್ದಾರೆ. “ಛತ್ತೀಸ್‌ಘಡ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ, ಕಾಂಗ್ರೆಸ್‌ಗೆ ಏನೂ ಉಳಿಯುವುದಿಲ್ಲ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2024 ರ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್‌‌ 150 ದಿನಗಳ ಭಾರತ್ ಜೋಡೋ ಯಾತ್ರೆಯನ್ನು ನಡೆಸುತ್ತಿದೆ. ಇದರಲ್ಲಿ 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 3,570 ಕಿಮೀ ಉದ್ದದ ದಾರಿನ್ನು ಪಾದಯಾತ್ರೆಗೆ ಕಾಂಗ್ರೆಸ್ ಆಯ್ಕೆ ಮಾಡಿಕೊಂಡಿದೆ.

ಇದನ್ನೂ ಓದಿ: ‘ಅಮಿತ್ ಶಾ ಭಾರತದ ದೊಡ್ಡ ಪಪ್ಪು’: ಟಿ-ಶರ್ಟ್ ಹಂಚಿದ ಟಿಎಂಸಿ

ತಮ್ಮ ಭಾಷಣದ ವೇಳೆ ಪಾದಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧರಿಸಿದ್ದ ಟೀ ಶರ್ಟ್ ಅನ್ನು ಉಲ್ಲೇಖಿಸಿದ ಅಮಿತ್‌ ಶಾ,“ಈಗ ಈ ರಾಹುಲ್ ಬಾಬಾ…ಭಾರತವನ್ನು ಒಗ್ಗೂಡಿಸಲು ಕಾಲ್ನಡಿಗೆಯಲ್ಲಿ ಹೊರಟಿದ್ದಾರೆ ಆದರೆ ಅವರು ಧರಿಸಿದ್ದು ವಿದೇಶಿ ಟಿ-ಶರ್ಟ್” ಎಂದು ಹೇಳಿದ್ದಾರೆ. ಭಾರತ್‌ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ಧರಿಸಿದ್ದ ಟಿ-ಶರ್ಟ್‌ನ ಬೆಲೆ 41 ಸಾವಿರ ಎಂದು ಬಿಜೆಪಿ ಪ್ರತಿಪಾದಿಸಿದೆ.

“ಅವರು ಒಮ್ಮೆ ಸಂಸತ್ತಿನಲ್ಲಿ ಭಾಷಣ ಮಾಡುವಾಗ ಭಾರತವು ಒಂದು ದೇಶವಲ್ಲ ಎಂದು ಹೇಳುತ್ತಾರೆ. ಹಲವಾರು ಧೀರ ಹೃದಯಗಳು ತ್ಯಾಗ ಬಲಿದಾನ ಮಾಡಿದ ದೇಶವಿದು. ರಾಹುಲ್ ಬಾಬಾ ಭಾರತವನ್ನು ಒಗ್ಗೂಡಿಸಲು ಪ್ರಯತ್ನಿಸುವ ಮೊದಲು ದೇಶದ ಇತಿಹಾಸವನ್ನು ಓದಬೇಕು” ಎಂದು ಅಮಿತ್‌ ಶಾ ಹೇಳಿದ್ದಾರೆ.

ಮುಖ್ಯಮಂತ್ರಿ ಗೆಹ್ಲೋಟ್ ವಿರುದ್ಧವೂ ಅಮಿತ್ ಶಾ ವಾಗ್ದಾಳಿ ನಡೆಸಿದ್ದು, “2018 ರಲ್ಲಿ ನೀವು ರಾಹುಲ್ ಗಾಂಧಿಯವರೊಂದಿಗೆ ಸೇರಿ ನೀಡಿದ ಭರವಸೆಗನ್ನು ನೆನಪಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಯುವಕರಿಗೆ 3,500 ರೂ.ಗಳ ನಿರುದ್ಯೋಗ ಭತ್ಯೆ ಏನಾಯಿತು? 20 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಯೋಜನೆ ಏನಾಯಿತು? ಕಾಂಗ್ರೆಸ್ ಪೊಳ್ಳು ಭರವಸೆಗಳನ್ನು ನೀಡಬಲ್ಲದೆ ಹೊರತು, ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ – ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸುವ ಪ್ರಯತ್ನ: ರಾಹುಲ್ ಗಾಂಧಿ

ಬಿಜೆಪಿಯ ರಾಷ್ಟ್ರೀಯ ಒಬಿಸಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಲು ಅಮಿತ್ ಶಾ ರಾಜಸ್ಥಾನದ ಜೋಧಪುರಕ್ಕೆ ಭೇಟಿ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಮೋದಿ ಹತ್ತು ಲಕ್ಷ ರೂ.ಬೆಲೆಯ ಸೂಟ್ ದರಿಸಿದಾಗ ಅಮಿತ್ ಶಾ ಕಣ್ಣು ಕುರುಡಾಗಿತ್ತಾ?

  2. ಹೌದ ಗುಂಡು ಬಾಬಾ. ನಿಮ್ಮ ಚೌಕಿದಾರ ಹಾಕುವ ಬಟ್ಟೆ ಬೆಲೆ ಗೊತ್ತಾ ನಿಂಗೆ?? ಅವನು ಸೈನ್ ಮಾಡುವ ಪೆನ್ನಿನ ಬೆಲೆ ಗೊತ್ತಾ ನಿಂಗೆ? ಅದು ಬಿಡು ಗುಂಡು ಬಾಬಾ ನಿಮ್ಮ ಪಕ್ಷ 2014ರ ಲೋಕ ಸಭಾ ಚುನಾವಣೆ ಅಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಯೋಗ್ಯತೆ ನಿಮಗೆ ಇಲ್ಲ. ಎಲ್ಲಿ ಹೋದವು ವರ್ಷಕ್ಕೆ 2ಕೋಟಿ ಉದ್ಯೋಗ? ಎಲ್ಲಿ 40 ರೂಪಾಯಿಯ ಪೆಟ್ರೋಲ್? ಎಲ್ಲಿ ಒಂದು ರೂಪಾಯಿಗೆ ಒಂದು ಡಾಲರ್? ಎಲ್ಲಿ ಅಚ್ಚೆ ದಿನ? ಒಂದು ತಿಳಿದು ಗುಂಡು ಬಾಬಾ ನಿಮ್ಮದೇ ಪಕ್ಷ ಅಧಿಕಾರದಲ್ಲಿ ಇರುವ ಕರ್ನಾಟಕದಲ್ಲಿ ಇಂದು ಅತಿವೃಷ್ಟಿ ಯಿಂದ ರಾಜ್ಯದ ಸುಮಾರು ಅರ್ಧಕ್ಕೂ ಹೆಚ್ಚಿನ ಭಾಗ ಜಲವೃತ್ತ ಗೊಂಡು ಬೆಲೆ ನಾಶ, ಮನೆಗಳು ಬಿದ್ದು, ಅನ್ನ ಆಹಾರ ಇಲ್ಲದೆ ಸಂಕಷ್ಟದಲ್ಲಿ ಇದ್ದಾರೆ. ಆದರೆ ನಿಮ್ಮ ಡಬ್ಬಲ್ ಇಂಜಿನ್ ಸರ್ಕಾರ ಇದರ ಪರಿವೆ ಇಲ್ಲದೆ ಏನೋ ಸಾಧಿಸಿರುವ ಹಾಗೆ ಜನಸ್ಪಂದನ ಕಾರ್ಯಕ್ರಮ ಮಾಡಿದ್ದಾರೆ. ಮೇಲಿನ ಯಾವುದಕ್ಕೂ ಸ್ಪಂದನೆ ನೀಡದ ನಿಮ್ಮ ಪಕ್ಷ ಸಾರ್ವಜನಿಕರಿಂದ ಪಡೆದ ತೆರಿಗೆ ಹಣದಲ್ಲಿ ಕಾರ್ಯಕ್ರಮ ಮಾಡುವುದು ಎಷ್ಟು ಯೋಗ್ಯ? ನಿಮ್ಮ ಪಕ್ಷಕ್ಕೆ ಜನತೆಯ ಅಭಿವೃದ್ದಿ ಮುಖ್ಯ ಅಲ್ಲ. ನಿಮ್ಮವರ ನಿಮ್ಮ ಪಕ್ಷದ ಅಭಿವೃದ್ದಿ ಅಷ್ಟೇ ಮುಖ್ಯ. ನಿಮ್ಮ ಆಡಳಿತ ವ್ಯವಸ್ಥೆ ನೋಡಿದರೆ ಒಂದು ಪುರಾತನ ಗಾದೆ ಮಾತು ನೆನಪಿಗೆ ಬರುತ್ತೆ ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಿತು ಅಂತ ಅದಕ್ಕೆ ಅನ್ವರ್ಥಕ ವಾಗಿ ನಿಮ್ಮ ಪಕ್ಷ ನಡೆದುಕೊಳ್ಳುತ್ತಿದ್ದಾರೆ

  3. Amith shah a great buffoon has he forgotten the 2cr job , 15 lakh,dollars =rupees,petrol 30 rs ,gas above this PM changes his dress 3 times a day costing around lakhs , imported mushroom etc 🤣

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...