Homeಮುಖಪುಟಮಣಿಪುರದ ಚುರಾಚಂದ್‌ಪುರ ಜಿಲ್ಲೆಗೆ ಹೊರಟಿದ್ದ ರಾಹುಲ್ ಗಾಂಧಿಗೆ ಪೊಲೀಸರಿಂದ ತಡೆ

ಮಣಿಪುರದ ಚುರಾಚಂದ್‌ಪುರ ಜಿಲ್ಲೆಗೆ ಹೊರಟಿದ್ದ ರಾಹುಲ್ ಗಾಂಧಿಗೆ ಪೊಲೀಸರಿಂದ ತಡೆ

- Advertisement -
- Advertisement -

ಕಳೆದ ಎರಡು ತಿಂಗಳುಗಳಿಂದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಿಂದ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಲ್ಲಿ ಒಂದಾದ ಚುರಾಚಂದ್‌ಪುರಕ್ಕೆ ಭೇಟಿ ನೀಡಲು ಮುಂದಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಪೊಲೀಸರು ತಡೆದಿದ್ದಾರೆ.

ರಾಹುಲ್ ಗಾಂದಿ ಇಂದು ಮುಂಜಾನೆ ಇಂಫಾಲ್‌ಗೆ ಬಂದಿಳಿದ ನಂತರ ಕಾರಿನಲ್ಲಿ ಚುರಾಚಂದ್‌ಪುರಕ್ಕೆ ತೆರಳುತ್ತಿದ್ದರು. ಅಲ್ಲಿ ಅವರು ಜನಾಂಗೀಯ ಕಲಹದಿಂದ ಸ್ಥಳಾಂತರಗೊಂಡ ಜನರನ್ನು ಪರಿಹಾರ ಶಿಬಿರಗಳಲ್ಲಿ ಭೇಟಿ ಮಾಡಲು ಉದ್ದೇಶಿಸಿದ್ದರು.

ರಾಹುಲ್ ಗಾಂಧಿಯನ್ನು ತಡೆದಿರುವುದು ಬಿಜೆಪಿ ಸರ್ಕಾರ ಎಂದು ಕಾಂಗ್ರೆಸ್ ಕಿಡಿಕಾರಿದೆ. “ರಾಹುಲ್ ಗಾಂಧಿಯವರು ಶಾಂತಿ ಸಂದೇಶದೊಂದಿಗೆ ಮಣಿಪುರಕ್ಕೆ ತೆರಳಿದ್ದಾರೆ. ಆದರೆ ಅಧಿಕಾರದಲ್ಲಿರುವ ಜನರು ಶಾಂತಿ, ಪ್ರೀತಿ ಮತ್ತು ಸಹೋದರತ್ವದ ಬಗ್ಗೆ ಬಲವಾದ ದ್ವೇಷವನ್ನು ಹೊಂದಿದ್ದಾರೆ. ಆದರೆ ಅವರು ನೆನಪಿಟ್ಟುಕೊಳ್ಳಬೇಕು… ಈ ದೇಶ ಗಾಂಧೀ ಮಾರ್ಗದಲ್ಲಿ ಸಾಗುತ್ತದೆ, ಈ ದೇಶ ಪ್ರೀತಿಯ ಹಾದಿಯಲ್ಲಿ ಸಾಗುತ್ತದೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

“ಮಣಿಪುರದ ಬಿಷ್ಣುಪುರ ಬಳಿ ರಾಹುಲ್ ಗಾಂಧಿ ಬೆಂಗಾವಲು ವಾಹನವನ್ನು ಪೊಲೀಸರು ತಡೆದಿದ್ದಾರೆ. ನಮಗೆ ಅವಕಾಶ ಕೊಡುವ ಸ್ಥಿತಿಯಲ್ಲಿಲ್ಲ ಎನ್ನುತ್ತಾರೆ ಪೊಲೀಸರು. ರಾಹುಲ್ ಗಾಂಧಿಗೆ ಕೈ ಬೀಸಲು ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದಾರೆ. ನಮ್ಮನ್ನು ಏಕೆ ತಡೆದಿದ್ದಾರೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ? ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.

ಪೊಲೀಸರು ನಮಗೆ ಏಕೆ ಅವಕಾಶ ನೀಡುತ್ತಿಲ್ಲ ಎಂಬುದು ಗೊತ್ತಿಲ್ಲ. ಸಂತ್ರಸ್ತ ಜನರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ಹೊರಟಿದ್ದಾರೆ. ಸುಮಾರು 20-25 ಕಿ.ಮೀ ಸಂಚರಿಸಿದರೂ ಎಲ್ಲಿಯೂ ರಸ್ತೆ ತಡೆ ಆಗಿಲ್ಲ. ರಾಹುಲ್ ಗಾಂಧಿ ಕಾರಿನೊಳಗೆ ಕುಳಿತಿದ್ದಾರೆ. ಸ್ಥಳೀಯ ಪೊಲೀಸರಿಗೆ ಯಾರು ಸೂಚನೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಈ ವರ್ಷದ ಮೇನಲ್ಲಿ ಮಣಿಪುರದಲ್ಲಿ ಜನಾಂಗೀಯ ಕಲಹ ಪ್ರಾರಂಭವಾದಾಗಿನಿಂದ ಸುಮಾರು 50,000 ಜನರು ಈಗ ರಾಜ್ಯದಾದ್ಯಂತ 300 ಕ್ಕೂ ಹೆಚ್ಚು ಪರಿಹಾರ ಶಿಬಿರಗಳಲ್ಲಿ ತಂಗಿದ್ದಾರೆ.

”ಮಣಿಪುರವು ಸುಮಾರು ಎರಡು ತಿಂಗಳುಗಳಿಂದ ಹೊತ್ತಿ ಉರಿಯುತ್ತಿದೆ. ಸಮಾಜವು ಸಂಘರ್ಷದಿಂದ ಶಾಂತಿಯತ್ತ ಸಾಗಬೇಕಿದೆ. ಅದಕ್ಕೆ ಸಂತೈಸುವ ಸ್ಪರ್ಶ ಬೇಕಿದೆ. ಆ ಮೂಲಕ ಗಾಯವನ್ನು ಗುಣಪಡಿಸುವ ಅಗತ್ಯವಿದೆ. ಇದು ಮಾನವೀಯ ದುರಂತವಾಗಿದೆ. ದ್ವೇಷವಲ್ಲವನ್ನಲ್ಲ, ಪ್ರೀತಿಯನ್ನು ಶಕ್ತಿಯನ್ನಾಗಿಸುವುದು ನಮ್ಮ ಜವಾಬ್ದಾರಿಯಾಗಿದೆ. ಅದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಣಿಪುರಕ್ಕೆ ತೆರಳಿ ಸಂತ್ರಸ್ತರನ್ನು ಸಂತೈಸಲಿದ್ದಾರೆ” ಎಂದು ಕಾಂಗ್ರೆಸ್ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ನಿನ್ನೆ ಟ್ವೀಟ್ ಮಾಡಿದ್ದರು.

ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭವಾದಾಗಿನಿಂದ ಪ್ರಧಾನಿ ಮೋದಿ ಭೇಟಿ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಬೇಕು ಎಂಬುದು ಹಲವರ ಒತ್ತಾಯವಾಗಿದೆ. ಆದರೆ ಮೋದಿಯವರು ಕರ್ನಾಟಕದ ನಂತರ ಸದ್ಯ ಮಧ್ಯಪ್ರದೇಶ ಚುನಾವಣಾ ಪ್ರಚಾರದಲ್ಲಿ ನಿರತವಾಗಿದ್ದಾರೆಯೇ ಹೊರತು ಮಣಿಪುರಕ್ಕೆ ಭೇಟಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತವಾಗಿತ್ತು.

ಇನ್ನೊಂದೆಡೆ ಪ್ರತಿಪಕ್ಷದ ಮುಖಂಡ ರಾಹುಲ್ ಗಾಂಧಿಯವರು ಮಣಿಪುರಕ್ಕೆ ತೆರಳಲು ಮುಂದಾದರೆ ಅವರಿಗೂ ಅವಕಾಶ ನೀಡದೆ ತಡೆಯೊಡ್ಡಲಾಗಿದೆ.

ಮೇ 3 ರಂದು ಈಶಾನ್ಯ ರಾಜ್ಯದಲ್ಲಿ ಭುಗಿಲೆದ್ದ ಹಿಂಸಾಚಾರದಿಂದ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಮೈತಿ ಸಮುದಾಯದ ಬೇಡಿಕೆಯ ವಿರುದ್ಧ ಪ್ರತಿಭಟಿಸಲು ಗುಡ್ಡಗಾಡು ಜಿಲ್ಲೆಗಳಲ್ಲಿ ‘ಕುಕಿ ಬುಡಕಟ್ಟು ಸಮುದಾಯದವರು ಒಗ್ಗಟ್ಟಿನ ಮೆರವಣಿಗೆ’ಯ ಸಂದರ್ಭದಲ್ಲಿ ಘರ್ಷಣೆಗಳು ಭುಗಿಲೆದ್ದವು.

ಇದನ್ನೂ ಓದಿ; ಹಿಂಸಾಚಾರ ಪೀಡಿತ ಮಣಿಪುರಕ್ಕೆ ನಾಳೆ ರಾಹುಲ್ ಭೇಟಿ; ವಿವಿಧ ಸಮುದಾಯಗಳೊಂದಿಗೆ ಸಂವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...