Homeಮುಖಪುಟಮಣಿಪುರದ ಚುರಾಚಂದ್‌ಪುರ ಜಿಲ್ಲೆಗೆ ಹೊರಟಿದ್ದ ರಾಹುಲ್ ಗಾಂಧಿಗೆ ಪೊಲೀಸರಿಂದ ತಡೆ

ಮಣಿಪುರದ ಚುರಾಚಂದ್‌ಪುರ ಜಿಲ್ಲೆಗೆ ಹೊರಟಿದ್ದ ರಾಹುಲ್ ಗಾಂಧಿಗೆ ಪೊಲೀಸರಿಂದ ತಡೆ

- Advertisement -
- Advertisement -

ಕಳೆದ ಎರಡು ತಿಂಗಳುಗಳಿಂದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಿಂದ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಲ್ಲಿ ಒಂದಾದ ಚುರಾಚಂದ್‌ಪುರಕ್ಕೆ ಭೇಟಿ ನೀಡಲು ಮುಂದಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಪೊಲೀಸರು ತಡೆದಿದ್ದಾರೆ.

ರಾಹುಲ್ ಗಾಂದಿ ಇಂದು ಮುಂಜಾನೆ ಇಂಫಾಲ್‌ಗೆ ಬಂದಿಳಿದ ನಂತರ ಕಾರಿನಲ್ಲಿ ಚುರಾಚಂದ್‌ಪುರಕ್ಕೆ ತೆರಳುತ್ತಿದ್ದರು. ಅಲ್ಲಿ ಅವರು ಜನಾಂಗೀಯ ಕಲಹದಿಂದ ಸ್ಥಳಾಂತರಗೊಂಡ ಜನರನ್ನು ಪರಿಹಾರ ಶಿಬಿರಗಳಲ್ಲಿ ಭೇಟಿ ಮಾಡಲು ಉದ್ದೇಶಿಸಿದ್ದರು.

ರಾಹುಲ್ ಗಾಂಧಿಯನ್ನು ತಡೆದಿರುವುದು ಬಿಜೆಪಿ ಸರ್ಕಾರ ಎಂದು ಕಾಂಗ್ರೆಸ್ ಕಿಡಿಕಾರಿದೆ. “ರಾಹುಲ್ ಗಾಂಧಿಯವರು ಶಾಂತಿ ಸಂದೇಶದೊಂದಿಗೆ ಮಣಿಪುರಕ್ಕೆ ತೆರಳಿದ್ದಾರೆ. ಆದರೆ ಅಧಿಕಾರದಲ್ಲಿರುವ ಜನರು ಶಾಂತಿ, ಪ್ರೀತಿ ಮತ್ತು ಸಹೋದರತ್ವದ ಬಗ್ಗೆ ಬಲವಾದ ದ್ವೇಷವನ್ನು ಹೊಂದಿದ್ದಾರೆ. ಆದರೆ ಅವರು ನೆನಪಿಟ್ಟುಕೊಳ್ಳಬೇಕು… ಈ ದೇಶ ಗಾಂಧೀ ಮಾರ್ಗದಲ್ಲಿ ಸಾಗುತ್ತದೆ, ಈ ದೇಶ ಪ್ರೀತಿಯ ಹಾದಿಯಲ್ಲಿ ಸಾಗುತ್ತದೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

“ಮಣಿಪುರದ ಬಿಷ್ಣುಪುರ ಬಳಿ ರಾಹುಲ್ ಗಾಂಧಿ ಬೆಂಗಾವಲು ವಾಹನವನ್ನು ಪೊಲೀಸರು ತಡೆದಿದ್ದಾರೆ. ನಮಗೆ ಅವಕಾಶ ಕೊಡುವ ಸ್ಥಿತಿಯಲ್ಲಿಲ್ಲ ಎನ್ನುತ್ತಾರೆ ಪೊಲೀಸರು. ರಾಹುಲ್ ಗಾಂಧಿಗೆ ಕೈ ಬೀಸಲು ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದಾರೆ. ನಮ್ಮನ್ನು ಏಕೆ ತಡೆದಿದ್ದಾರೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ? ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.

ಪೊಲೀಸರು ನಮಗೆ ಏಕೆ ಅವಕಾಶ ನೀಡುತ್ತಿಲ್ಲ ಎಂಬುದು ಗೊತ್ತಿಲ್ಲ. ಸಂತ್ರಸ್ತ ಜನರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ಹೊರಟಿದ್ದಾರೆ. ಸುಮಾರು 20-25 ಕಿ.ಮೀ ಸಂಚರಿಸಿದರೂ ಎಲ್ಲಿಯೂ ರಸ್ತೆ ತಡೆ ಆಗಿಲ್ಲ. ರಾಹುಲ್ ಗಾಂಧಿ ಕಾರಿನೊಳಗೆ ಕುಳಿತಿದ್ದಾರೆ. ಸ್ಥಳೀಯ ಪೊಲೀಸರಿಗೆ ಯಾರು ಸೂಚನೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಈ ವರ್ಷದ ಮೇನಲ್ಲಿ ಮಣಿಪುರದಲ್ಲಿ ಜನಾಂಗೀಯ ಕಲಹ ಪ್ರಾರಂಭವಾದಾಗಿನಿಂದ ಸುಮಾರು 50,000 ಜನರು ಈಗ ರಾಜ್ಯದಾದ್ಯಂತ 300 ಕ್ಕೂ ಹೆಚ್ಚು ಪರಿಹಾರ ಶಿಬಿರಗಳಲ್ಲಿ ತಂಗಿದ್ದಾರೆ.

”ಮಣಿಪುರವು ಸುಮಾರು ಎರಡು ತಿಂಗಳುಗಳಿಂದ ಹೊತ್ತಿ ಉರಿಯುತ್ತಿದೆ. ಸಮಾಜವು ಸಂಘರ್ಷದಿಂದ ಶಾಂತಿಯತ್ತ ಸಾಗಬೇಕಿದೆ. ಅದಕ್ಕೆ ಸಂತೈಸುವ ಸ್ಪರ್ಶ ಬೇಕಿದೆ. ಆ ಮೂಲಕ ಗಾಯವನ್ನು ಗುಣಪಡಿಸುವ ಅಗತ್ಯವಿದೆ. ಇದು ಮಾನವೀಯ ದುರಂತವಾಗಿದೆ. ದ್ವೇಷವಲ್ಲವನ್ನಲ್ಲ, ಪ್ರೀತಿಯನ್ನು ಶಕ್ತಿಯನ್ನಾಗಿಸುವುದು ನಮ್ಮ ಜವಾಬ್ದಾರಿಯಾಗಿದೆ. ಅದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಣಿಪುರಕ್ಕೆ ತೆರಳಿ ಸಂತ್ರಸ್ತರನ್ನು ಸಂತೈಸಲಿದ್ದಾರೆ” ಎಂದು ಕಾಂಗ್ರೆಸ್ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ನಿನ್ನೆ ಟ್ವೀಟ್ ಮಾಡಿದ್ದರು.

ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭವಾದಾಗಿನಿಂದ ಪ್ರಧಾನಿ ಮೋದಿ ಭೇಟಿ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಬೇಕು ಎಂಬುದು ಹಲವರ ಒತ್ತಾಯವಾಗಿದೆ. ಆದರೆ ಮೋದಿಯವರು ಕರ್ನಾಟಕದ ನಂತರ ಸದ್ಯ ಮಧ್ಯಪ್ರದೇಶ ಚುನಾವಣಾ ಪ್ರಚಾರದಲ್ಲಿ ನಿರತವಾಗಿದ್ದಾರೆಯೇ ಹೊರತು ಮಣಿಪುರಕ್ಕೆ ಭೇಟಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತವಾಗಿತ್ತು.

ಇನ್ನೊಂದೆಡೆ ಪ್ರತಿಪಕ್ಷದ ಮುಖಂಡ ರಾಹುಲ್ ಗಾಂಧಿಯವರು ಮಣಿಪುರಕ್ಕೆ ತೆರಳಲು ಮುಂದಾದರೆ ಅವರಿಗೂ ಅವಕಾಶ ನೀಡದೆ ತಡೆಯೊಡ್ಡಲಾಗಿದೆ.

ಮೇ 3 ರಂದು ಈಶಾನ್ಯ ರಾಜ್ಯದಲ್ಲಿ ಭುಗಿಲೆದ್ದ ಹಿಂಸಾಚಾರದಿಂದ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಮೈತಿ ಸಮುದಾಯದ ಬೇಡಿಕೆಯ ವಿರುದ್ಧ ಪ್ರತಿಭಟಿಸಲು ಗುಡ್ಡಗಾಡು ಜಿಲ್ಲೆಗಳಲ್ಲಿ ‘ಕುಕಿ ಬುಡಕಟ್ಟು ಸಮುದಾಯದವರು ಒಗ್ಗಟ್ಟಿನ ಮೆರವಣಿಗೆ’ಯ ಸಂದರ್ಭದಲ್ಲಿ ಘರ್ಷಣೆಗಳು ಭುಗಿಲೆದ್ದವು.

ಇದನ್ನೂ ಓದಿ; ಹಿಂಸಾಚಾರ ಪೀಡಿತ ಮಣಿಪುರಕ್ಕೆ ನಾಳೆ ರಾಹುಲ್ ಭೇಟಿ; ವಿವಿಧ ಸಮುದಾಯಗಳೊಂದಿಗೆ ಸಂವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...