Homeಮುಖಪುಟತನ್ನ ಭಾಷಣದ ಭಾಗಗಳನ್ನು ಕಡತದಿಂದ ತೆಗೆದು ಹಾಕಿದ ಕ್ರಮ ಪ್ರಶ್ನಿಸಿ ಸ್ಪೀಕರ್‌ಗೆ ಪತ್ರ ಬರೆದ ರಾಹುಲ್‌...

ತನ್ನ ಭಾಷಣದ ಭಾಗಗಳನ್ನು ಕಡತದಿಂದ ತೆಗೆದು ಹಾಕಿದ ಕ್ರಮ ಪ್ರಶ್ನಿಸಿ ಸ್ಪೀಕರ್‌ಗೆ ಪತ್ರ ಬರೆದ ರಾಹುಲ್‌ ಗಾಂಧಿ

- Advertisement -
- Advertisement -

ಸಂಸತ್‌ನಲ್ಲಿ ತಾನು ಮಾಡಿದ ಭಾಷಣದ ಭಾಗಗಳನ್ನು ಕಡತದಿಂದ ತೆಗೆದು ಹಾಕುವ ಸ್ಪೀಕರ್ ಓಂ ಬಿರ್ಲಾ ಅವರ ಕ್ರಮ ಪ್ರಶ್ನಿಸಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.

ಸ್ಪೀಕರ್‌ ಅವರ ಕ್ರಮ ಸಂಸದೀಯ ಪ್ರಜಾಪ್ರಭುತ್ವದ ಸಿದ್ಧಾಂತಗಳಿಗೆ ವಿರುದ್ಧವಾಗಿದೆ ಎಂದು ರಾಹುಲ್‌ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

“ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಜುಲೈ 1ರಂದು ನಾನು ಮಾಡಿದ ಭಾಷಣದ ಭಾಗಗಳನ್ನು ಕಡತದಿಂದ ತೆಗೆದು ಹಾಕುವ ಸ್ಪೀಕರ್ ಅವರ ನಿರ್ಧಾರಕ್ಕೆ ಸಂಬಂಧಪಟ್ಟಂತೆ ನಾನು ಪತ್ರ ಬರೆಯುತ್ತಿದ್ದೇನೆ. ಲೋಕಸಭೆಯ ವ್ಯವಹಾರಗಳ ನಿಯಮ 380ರ ಅಡಿ ವಿರೋಧಿಸಲಾದ ಪದಗಳನ್ನು ಕಡತದಿಂದ ತೆಗೆದು ಹಾಕುವ ಅಧಿಕಾರ ಅಧ್ಯಕ್ಷರಿಗಿದೆ. ಆದರೆ, ನಾನು ಅಂತಹ ಪದಗಳನ್ನು ಬಳಸಿಲ್ಲ” ಎಂದು ರಾಹುಲ್ ಗಾಂಧಿ ಪತ್ರದಲ್ಲಿ ಹೇಳಿದ್ದಾರೆ.

“ನನ್ನ ಭಾಷಣದ ಹಲವು ಭಾಗಗಳನ್ನು ಕಡತದಿಂದ ತೆಗೆದು ಹಾಕುವ ನಿರ್ಧಾರದಿಂದ ನಾನು ಆಘಾತಗೊಂಡಿದ್ದೇನೆ. ನಾನು ಸದನದಲ್ಲಿ ತಿಳಿಸಿದ್ದು ನೆಲದ ವಾಸ್ತವಿಕತೆಯನ್ನಾಗಿದೆ. ಭಾರತದ ಸಂವಿಧಾನದ 105(1)ನೇ ಪರಿಚ್ಛೇದದಲ್ಲಿ ಪ್ರತಿಪಾದಿಸಿರುವಂತೆ ತನ್ನ ಮತ್ತ ತಾನು ಪ್ರತಿನಿಧಿಸುವ ಜನರ ಸಾಮೂಹಿಕ ಧ್ವನಿಯನ್ನು ವ್ಯಕ್ತಪಡಿಸುವ ಹಕ್ಕು ಸದನದ ಪ್ರತಿಯೊಬ್ಬ ಸದಸ್ಯರಿಗೂ ಇದೆ. ಸದನದಲ್ಲಿ ಜನಪರ ಕಾಳಜಿ ವ್ಯಕ್ತಪಡಿಸುವುದು ಪ್ರತಿಯೊಬ್ಬ ಸದಸ್ಯರ ಹಕ್ಕು” ಎಂದಿದ್ದಾರೆ.

ಬಿಜೆಪಿ ಸಂಸದ ಅನುರಾಗ್‌ ಠಾಕುರ್‌ ಅವರ ಭಾಷಣದಲ್ಲಿ ತುಂಬಾ ಆರೋಪಗಳಿದ್ದರೂ, ಅಚ್ಚರಿಯೆಂಬಂತೆ ಕೇವಲ ಒಂದು ಪದವನ್ನು ಕಡತದಿಂದ ತೆಗೆದು ಹಾಕಲಾಗಿದೆ ಎಂದು ರಾಹುಲ್‌ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಮ್ಮ ಭಾಷಣದ ರಾಹುಲ್ ಗಾಂಧಿ “ಪ್ರವಾದಿ ಮುಹಮ್ಮದ್ ಅವರನ್ನು ಉಲ್ಲೇಖಿಸಿ ಖುರಾನ್‌ನಲ್ಲಿ ತಿಳಿಸಲಾದ ನಿರ್ಭಯತೆಯ ಬಗ್ಗೆ ಮಾತನಾಡಿದ್ದರು. ಭಗವಾನ್ ಶಿವ, ಗುರುನಾನಕ್ ಮತ್ತು ಏಸು ಕ್ರೈಸ್ತನ ಫೋಟೋಗಳನ್ನು ಪ್ರದರ್ಶಿಸಿ ಹಿಂದೂ, ಇಸ್ಲಾಂ, ಸಿಖ್, ಕ್ರೈಸ್ತ, ಬೌದ್ಧ ಮತ್ತು ಜೈನ ಧರ್ಮಗಳಲ್ಲಿ ಉಲ್ಲೇಖಿಸಲಾದ ನಿರ್ಭಯತೆಯ ಮಹತ್ವವನ್ನು ಒತ್ತಿ ಹೇಳಿದ್ದರು. ಭಗವಾನ್ ಶಿವನ ಗುಣ ಲಕ್ಷಣಗಳನ್ನು ಮತ್ತು ಗುರುನಾನಕ್, ಏಸು ಕ್ರಿಸ್ತ, ಬುದ್ಧ ಮತ್ತು ಮಹಾವೀರರ ಬೋಧನೆಗಳನ್ನು ಉಲ್ಲೇಖಿಸಿ, ದೇಶದ ಎಲ್ಲಾ ಧರ್ಮಗಳು ಮತ್ತು ಮಹಾನ್ ವ್ಯಕ್ತಿಗಳು “ಹೆದರಬೇಡಿ, ಇತರರನ್ನು ಹೆದರಿಸಬೇಡಿ” ಎಂದು ಹೇಳಿದ್ದಾರೆ. ಶಿವಾಜಿ ಕೂಡ ಅಹಿಂಸೆಯ ಬಗ್ಗೆ ಮಾತನಾಡಿದ್ದಾರೆ ಎಂದಿದ್ದರು.

ಇದನ್ನೂ ಓದಿ : ಇಂಜಿನಿಯರ್ ರಶೀದ್‌ಗೆ 2 ಗಂಟೆಗಳ ಪೆರೋಲ್; ಜುಲೈ 5 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...