Homeಮುಖಪುಟತನ್ನ ಭಾಷಣದ ಭಾಗಗಳನ್ನು ಕಡತದಿಂದ ತೆಗೆದು ಹಾಕಿದ ಕ್ರಮ ಪ್ರಶ್ನಿಸಿ ಸ್ಪೀಕರ್‌ಗೆ ಪತ್ರ ಬರೆದ ರಾಹುಲ್‌...

ತನ್ನ ಭಾಷಣದ ಭಾಗಗಳನ್ನು ಕಡತದಿಂದ ತೆಗೆದು ಹಾಕಿದ ಕ್ರಮ ಪ್ರಶ್ನಿಸಿ ಸ್ಪೀಕರ್‌ಗೆ ಪತ್ರ ಬರೆದ ರಾಹುಲ್‌ ಗಾಂಧಿ

- Advertisement -
- Advertisement -

ಸಂಸತ್‌ನಲ್ಲಿ ತಾನು ಮಾಡಿದ ಭಾಷಣದ ಭಾಗಗಳನ್ನು ಕಡತದಿಂದ ತೆಗೆದು ಹಾಕುವ ಸ್ಪೀಕರ್ ಓಂ ಬಿರ್ಲಾ ಅವರ ಕ್ರಮ ಪ್ರಶ್ನಿಸಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.

ಸ್ಪೀಕರ್‌ ಅವರ ಕ್ರಮ ಸಂಸದೀಯ ಪ್ರಜಾಪ್ರಭುತ್ವದ ಸಿದ್ಧಾಂತಗಳಿಗೆ ವಿರುದ್ಧವಾಗಿದೆ ಎಂದು ರಾಹುಲ್‌ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

“ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಜುಲೈ 1ರಂದು ನಾನು ಮಾಡಿದ ಭಾಷಣದ ಭಾಗಗಳನ್ನು ಕಡತದಿಂದ ತೆಗೆದು ಹಾಕುವ ಸ್ಪೀಕರ್ ಅವರ ನಿರ್ಧಾರಕ್ಕೆ ಸಂಬಂಧಪಟ್ಟಂತೆ ನಾನು ಪತ್ರ ಬರೆಯುತ್ತಿದ್ದೇನೆ. ಲೋಕಸಭೆಯ ವ್ಯವಹಾರಗಳ ನಿಯಮ 380ರ ಅಡಿ ವಿರೋಧಿಸಲಾದ ಪದಗಳನ್ನು ಕಡತದಿಂದ ತೆಗೆದು ಹಾಕುವ ಅಧಿಕಾರ ಅಧ್ಯಕ್ಷರಿಗಿದೆ. ಆದರೆ, ನಾನು ಅಂತಹ ಪದಗಳನ್ನು ಬಳಸಿಲ್ಲ” ಎಂದು ರಾಹುಲ್ ಗಾಂಧಿ ಪತ್ರದಲ್ಲಿ ಹೇಳಿದ್ದಾರೆ.

“ನನ್ನ ಭಾಷಣದ ಹಲವು ಭಾಗಗಳನ್ನು ಕಡತದಿಂದ ತೆಗೆದು ಹಾಕುವ ನಿರ್ಧಾರದಿಂದ ನಾನು ಆಘಾತಗೊಂಡಿದ್ದೇನೆ. ನಾನು ಸದನದಲ್ಲಿ ತಿಳಿಸಿದ್ದು ನೆಲದ ವಾಸ್ತವಿಕತೆಯನ್ನಾಗಿದೆ. ಭಾರತದ ಸಂವಿಧಾನದ 105(1)ನೇ ಪರಿಚ್ಛೇದದಲ್ಲಿ ಪ್ರತಿಪಾದಿಸಿರುವಂತೆ ತನ್ನ ಮತ್ತ ತಾನು ಪ್ರತಿನಿಧಿಸುವ ಜನರ ಸಾಮೂಹಿಕ ಧ್ವನಿಯನ್ನು ವ್ಯಕ್ತಪಡಿಸುವ ಹಕ್ಕು ಸದನದ ಪ್ರತಿಯೊಬ್ಬ ಸದಸ್ಯರಿಗೂ ಇದೆ. ಸದನದಲ್ಲಿ ಜನಪರ ಕಾಳಜಿ ವ್ಯಕ್ತಪಡಿಸುವುದು ಪ್ರತಿಯೊಬ್ಬ ಸದಸ್ಯರ ಹಕ್ಕು” ಎಂದಿದ್ದಾರೆ.

ಬಿಜೆಪಿ ಸಂಸದ ಅನುರಾಗ್‌ ಠಾಕುರ್‌ ಅವರ ಭಾಷಣದಲ್ಲಿ ತುಂಬಾ ಆರೋಪಗಳಿದ್ದರೂ, ಅಚ್ಚರಿಯೆಂಬಂತೆ ಕೇವಲ ಒಂದು ಪದವನ್ನು ಕಡತದಿಂದ ತೆಗೆದು ಹಾಕಲಾಗಿದೆ ಎಂದು ರಾಹುಲ್‌ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಮ್ಮ ಭಾಷಣದ ರಾಹುಲ್ ಗಾಂಧಿ “ಪ್ರವಾದಿ ಮುಹಮ್ಮದ್ ಅವರನ್ನು ಉಲ್ಲೇಖಿಸಿ ಖುರಾನ್‌ನಲ್ಲಿ ತಿಳಿಸಲಾದ ನಿರ್ಭಯತೆಯ ಬಗ್ಗೆ ಮಾತನಾಡಿದ್ದರು. ಭಗವಾನ್ ಶಿವ, ಗುರುನಾನಕ್ ಮತ್ತು ಏಸು ಕ್ರೈಸ್ತನ ಫೋಟೋಗಳನ್ನು ಪ್ರದರ್ಶಿಸಿ ಹಿಂದೂ, ಇಸ್ಲಾಂ, ಸಿಖ್, ಕ್ರೈಸ್ತ, ಬೌದ್ಧ ಮತ್ತು ಜೈನ ಧರ್ಮಗಳಲ್ಲಿ ಉಲ್ಲೇಖಿಸಲಾದ ನಿರ್ಭಯತೆಯ ಮಹತ್ವವನ್ನು ಒತ್ತಿ ಹೇಳಿದ್ದರು. ಭಗವಾನ್ ಶಿವನ ಗುಣ ಲಕ್ಷಣಗಳನ್ನು ಮತ್ತು ಗುರುನಾನಕ್, ಏಸು ಕ್ರಿಸ್ತ, ಬುದ್ಧ ಮತ್ತು ಮಹಾವೀರರ ಬೋಧನೆಗಳನ್ನು ಉಲ್ಲೇಖಿಸಿ, ದೇಶದ ಎಲ್ಲಾ ಧರ್ಮಗಳು ಮತ್ತು ಮಹಾನ್ ವ್ಯಕ್ತಿಗಳು “ಹೆದರಬೇಡಿ, ಇತರರನ್ನು ಹೆದರಿಸಬೇಡಿ” ಎಂದು ಹೇಳಿದ್ದಾರೆ. ಶಿವಾಜಿ ಕೂಡ ಅಹಿಂಸೆಯ ಬಗ್ಗೆ ಮಾತನಾಡಿದ್ದಾರೆ ಎಂದಿದ್ದರು.

ಇದನ್ನೂ ಓದಿ : ಇಂಜಿನಿಯರ್ ರಶೀದ್‌ಗೆ 2 ಗಂಟೆಗಳ ಪೆರೋಲ್; ಜುಲೈ 5 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...