Homeಕರ್ನಾಟಕರಾಹುಲ್ ಗಾಂಧಿ ಜಾಮೀನು ಅವಧಿ ಮುಕ್ತಾಯ; ಇಂದು ಮತ್ತೆ ವಿಚಾರಣೆ

ರಾಹುಲ್ ಗಾಂಧಿ ಜಾಮೀನು ಅವಧಿ ಮುಕ್ತಾಯ; ಇಂದು ಮತ್ತೆ ವಿಚಾರಣೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 2019ರಲ್ಲಿ ಮಾನಹಾನಿಕರ ಹೇಳಿಕೆಗಾಗಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ ಸೂರತ್‌ನ ಸೆಷನ್ಸ್ ನ್ಯಾಯಾಲಯವು ಏಪ್ರಿಲ್ 13 ರವರೆಗೆ ಜಾಮೀನು ನೀಡಿತ್ತು. ಇಂದು ಜಾಮೀನಿನ ಅವಧಿ ಮುಗಿಯಲಿದೆ. ಸೆಷನ್ಸ್ ನ್ಯಾಯಾಲಯವು ರಾಹುಲ್ ಗಾಂಧಿ ಅವರ ಮನವಿಯ ವಿಚಾರಣೆಯನ್ನು ಇಂದು ನಡೆಸಲಿದೆ.

ಸೂರತ್ ನ್ಯಾಯಾಲಯ ನೀಡಿದ ಶಿಕ್ಷೆಯ ತೀರ್ಪಿನಿಂದಾಗಿ ಅವರು ಲೋಕಸಭೆಯಿಂದಲೂ ಅಮಾನತ್ ಆಗಬೇಕಾಯಿತು. ಇದು ರಾಜಕೀಯವಾಗಿ ಭಾರೀ ವಿವಾದವನ್ನು ಹುಟ್ಟುಹಾಕಿತು. ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಲು ಕಾರಣವಾಯಿತು.

ಈ ಬಗ್ಗೆ ಪೂರ್ಣೇಶ್ ಮೋದಿಯವರ ಪ್ರತಿಕ್ರಿಸಿದ್ದು, ”ಪಕ್ಷದ ನಾಯಕರ ತಂಡದೊಂದಿಗೆ ರಾಹುಲ್ ಗಾಂಧಿ ಅವರು ತಮ್ಮ ತೀರ್ಪಿನ ವಿರುದ್ಧ ಮನವಿ ಸಲ್ಲಿಸಿರುವುದು ”ಅತ್ಯಂತ ದುರಹಂಕಾರ”ದ ನಡೆಯಾಗಿದೆ. ರಾಹುಲ್ ಗಾಂಧಿಯನ್ನು ಪದೇಪದೇ ಅಪರಾಧಿ ಎಂದು ಆರೋಪಿಸಿದ ಅವರು, ಕ್ರಿಮಿನಲ್ ಮಾನನಷ್ಟದ 11 ನಿದರ್ಶನಗಳೊಂದಿಗೆ, ”ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ” ಪ್ರಕರಣವನ್ನು ಉಲ್ಲೇಖಿಸಿದ್ದಾರೆ.

ಅಪರಾಧಿ ಎಂದು ಸಾಬೀತಾದ ನಂತರವೂ ರಾಹುಲ್ ಗಾಂಧಿ ಸಾರ್ವಜನಿಕ ವೇದಿಕೆಗಳಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ಮುಂದುವರೆಸಿದ್ದಾರೆ ಎಂದು ಪೂರ್ಣೇಶ್ ಮೋದಿ ಆರೋಪಿಸಿದ್ದಾರೆ.

ಏಪ್ರಿಲ್ 13ರಂದು, ಸೆಷನ್ಸ್ ನ್ಯಾಯಾಲಯವು ರಾಹುಲ್ ಗಾಂಧಿ ಅವರ ಮನವಿಯ ವಿಚಾರಣೆಯನ್ನು ನಡೆಸಲಿದೆ. ಇದೇ ವೇಳೆ ಗುಜರಾತ್ ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಅವರು, ”ಸಂಸದರೊಬ್ಬರು ಯಾವುದೇ ಕಾನೂನನ್ನು ಉಲ್ಲಂಘಿಸಿದರೆ, ಅದು ಸಮಾಜ ಮತ್ತು ನ್ಯಾಯಾಲಯಕ್ಕೆ ಹೆಚ್ಚು ಮಹತ್ವದ ಕಾಳಜಿಯಾಗುತ್ತದೆ ಎಂದು ಹೇಳಿದರು.

”ಎಲ್ಲಾ ಕಳ್ಳರು ಮೋದಿ ಉಪನಾಮವನ್ನು ಏಕೆ ಹೊಂದಿರುತ್ತಾರೆ? ನ್ಯಾಯಾಲಯವು ಈ ಹೇಳಿಕೆಯನ್ನು ಮಾನಹಾನಿಕರವೆಂದು ಪರಿಗಣಿಸಿದೆ ಮತ್ತು ರಾಜಕೀಯ ಟೀಕೆ ಮತ್ತು ವಾಕ್ ಸ್ವಾತಂತ್ರ್ಯದ ನೆಪದಲ್ಲಿ ಮಾನಹಾನಿ ಮತ್ತು ಒಂದು ಸಮಾಜದ ಜನರಿಗೆ ನೋವನ್ನುಂಟುಮಾಡುವ ಹೇಳಿಕೆಗಳನ್ನು ರಾಹುಲ್ ಗಾಂಧಿ ಮಾಡುತ್ತಿದ್ದಾರೆ” ಎಂದು ಮೋದಿ ಆರೋಪಿಸಿದರು.

ಪಾಟ್ನಾದಲ್ಲೂ ರಾಹುಲ್ ವಿಚಾರಣೆ

ಮೋದಿ ಉಪನಾಮದ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಪಾಟ್ನಾದ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಈ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪಾಟ್ನಾದ ನ್ಯಾಯಾಲಯವೊಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ  ಏಪ್ರಿಲ್ 25ರಂದು ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಜನಪ್ರತಿನಿಧಿಗಳ ನ್ಯಾಯಾಲಯದ ವಿಶೇಷ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆದಿ ದೇವ್ ಅವರು, ”ಮಾರ್ಚ್ 18ರಂದು ನೀಡಿದ ಆದೇಶದಲ್ಲಿ ಏಪ್ರಿಲ್ 12ರಂದು ತನ್ನ ಮುಂದೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ತಿಳಿಸಿತ್ತು.

ಬುಧವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ ಪ್ರತಿವಾದಿ ವಕೀಲರು, ಇಡೀ ತಂಡವು ಸೂರತ್ ಪ್ರಕರಣದಲ್ಲಿ ನಿರತವಾಗಿದೆ ಎಂದು ತಿಳಿಸಿ ಮತ್ತೊಂದು ದಿನಾಂಕವನ್ನು ಕೋರಿದರು. ಇದಕ್ಕೆ ನ್ಯಾಯಾಧೀಶರು, ಏಪ್ರಿಲ್ 25ರಂದು ಪ್ರಕರಣದ ಮುಂದಿನ ವಿಚಾರಣೆಯ ದಿನಾಂಕದಂದು ನ್ಯಾಯಾಲಯದ ಮುಂದೆ ಭೌತಿಕ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಲು ರಾಹುಲ್ ಗಾಂಧಿಯವರ ವಕೀಲರನ್ನು ಕೇಳಿದರು.

ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಸಿಕ್ಯೂಷನ್ ವಕೀಲ ಪ್ರಿಯಾ ಗುಪ್ತಾ ಅವರು, ”ದೂರುದಾರರ ಕಡೆಯಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ಎಲ್ಲಾ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈಗ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಮಾತ್ರ ದಾಖಲಿಸಬೇಕಾಗಿದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...