Homeಕರ್ನಾಟಕರಾಹುಲ್ ಗಾಂಧಿ ಜಾಮೀನು ಅವಧಿ ಮುಕ್ತಾಯ; ಇಂದು ಮತ್ತೆ ವಿಚಾರಣೆ

ರಾಹುಲ್ ಗಾಂಧಿ ಜಾಮೀನು ಅವಧಿ ಮುಕ್ತಾಯ; ಇಂದು ಮತ್ತೆ ವಿಚಾರಣೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 2019ರಲ್ಲಿ ಮಾನಹಾನಿಕರ ಹೇಳಿಕೆಗಾಗಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ ಸೂರತ್‌ನ ಸೆಷನ್ಸ್ ನ್ಯಾಯಾಲಯವು ಏಪ್ರಿಲ್ 13 ರವರೆಗೆ ಜಾಮೀನು ನೀಡಿತ್ತು. ಇಂದು ಜಾಮೀನಿನ ಅವಧಿ ಮುಗಿಯಲಿದೆ. ಸೆಷನ್ಸ್ ನ್ಯಾಯಾಲಯವು ರಾಹುಲ್ ಗಾಂಧಿ ಅವರ ಮನವಿಯ ವಿಚಾರಣೆಯನ್ನು ಇಂದು ನಡೆಸಲಿದೆ.

ಸೂರತ್ ನ್ಯಾಯಾಲಯ ನೀಡಿದ ಶಿಕ್ಷೆಯ ತೀರ್ಪಿನಿಂದಾಗಿ ಅವರು ಲೋಕಸಭೆಯಿಂದಲೂ ಅಮಾನತ್ ಆಗಬೇಕಾಯಿತು. ಇದು ರಾಜಕೀಯವಾಗಿ ಭಾರೀ ವಿವಾದವನ್ನು ಹುಟ್ಟುಹಾಕಿತು. ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಲು ಕಾರಣವಾಯಿತು.

ಈ ಬಗ್ಗೆ ಪೂರ್ಣೇಶ್ ಮೋದಿಯವರ ಪ್ರತಿಕ್ರಿಸಿದ್ದು, ”ಪಕ್ಷದ ನಾಯಕರ ತಂಡದೊಂದಿಗೆ ರಾಹುಲ್ ಗಾಂಧಿ ಅವರು ತಮ್ಮ ತೀರ್ಪಿನ ವಿರುದ್ಧ ಮನವಿ ಸಲ್ಲಿಸಿರುವುದು ”ಅತ್ಯಂತ ದುರಹಂಕಾರ”ದ ನಡೆಯಾಗಿದೆ. ರಾಹುಲ್ ಗಾಂಧಿಯನ್ನು ಪದೇಪದೇ ಅಪರಾಧಿ ಎಂದು ಆರೋಪಿಸಿದ ಅವರು, ಕ್ರಿಮಿನಲ್ ಮಾನನಷ್ಟದ 11 ನಿದರ್ಶನಗಳೊಂದಿಗೆ, ”ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ” ಪ್ರಕರಣವನ್ನು ಉಲ್ಲೇಖಿಸಿದ್ದಾರೆ.

ಅಪರಾಧಿ ಎಂದು ಸಾಬೀತಾದ ನಂತರವೂ ರಾಹುಲ್ ಗಾಂಧಿ ಸಾರ್ವಜನಿಕ ವೇದಿಕೆಗಳಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ಮುಂದುವರೆಸಿದ್ದಾರೆ ಎಂದು ಪೂರ್ಣೇಶ್ ಮೋದಿ ಆರೋಪಿಸಿದ್ದಾರೆ.

ಏಪ್ರಿಲ್ 13ರಂದು, ಸೆಷನ್ಸ್ ನ್ಯಾಯಾಲಯವು ರಾಹುಲ್ ಗಾಂಧಿ ಅವರ ಮನವಿಯ ವಿಚಾರಣೆಯನ್ನು ನಡೆಸಲಿದೆ. ಇದೇ ವೇಳೆ ಗುಜರಾತ್ ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಅವರು, ”ಸಂಸದರೊಬ್ಬರು ಯಾವುದೇ ಕಾನೂನನ್ನು ಉಲ್ಲಂಘಿಸಿದರೆ, ಅದು ಸಮಾಜ ಮತ್ತು ನ್ಯಾಯಾಲಯಕ್ಕೆ ಹೆಚ್ಚು ಮಹತ್ವದ ಕಾಳಜಿಯಾಗುತ್ತದೆ ಎಂದು ಹೇಳಿದರು.

”ಎಲ್ಲಾ ಕಳ್ಳರು ಮೋದಿ ಉಪನಾಮವನ್ನು ಏಕೆ ಹೊಂದಿರುತ್ತಾರೆ? ನ್ಯಾಯಾಲಯವು ಈ ಹೇಳಿಕೆಯನ್ನು ಮಾನಹಾನಿಕರವೆಂದು ಪರಿಗಣಿಸಿದೆ ಮತ್ತು ರಾಜಕೀಯ ಟೀಕೆ ಮತ್ತು ವಾಕ್ ಸ್ವಾತಂತ್ರ್ಯದ ನೆಪದಲ್ಲಿ ಮಾನಹಾನಿ ಮತ್ತು ಒಂದು ಸಮಾಜದ ಜನರಿಗೆ ನೋವನ್ನುಂಟುಮಾಡುವ ಹೇಳಿಕೆಗಳನ್ನು ರಾಹುಲ್ ಗಾಂಧಿ ಮಾಡುತ್ತಿದ್ದಾರೆ” ಎಂದು ಮೋದಿ ಆರೋಪಿಸಿದರು.

ಪಾಟ್ನಾದಲ್ಲೂ ರಾಹುಲ್ ವಿಚಾರಣೆ

ಮೋದಿ ಉಪನಾಮದ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಪಾಟ್ನಾದ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಈ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪಾಟ್ನಾದ ನ್ಯಾಯಾಲಯವೊಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ  ಏಪ್ರಿಲ್ 25ರಂದು ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಜನಪ್ರತಿನಿಧಿಗಳ ನ್ಯಾಯಾಲಯದ ವಿಶೇಷ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆದಿ ದೇವ್ ಅವರು, ”ಮಾರ್ಚ್ 18ರಂದು ನೀಡಿದ ಆದೇಶದಲ್ಲಿ ಏಪ್ರಿಲ್ 12ರಂದು ತನ್ನ ಮುಂದೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ತಿಳಿಸಿತ್ತು.

ಬುಧವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ ಪ್ರತಿವಾದಿ ವಕೀಲರು, ಇಡೀ ತಂಡವು ಸೂರತ್ ಪ್ರಕರಣದಲ್ಲಿ ನಿರತವಾಗಿದೆ ಎಂದು ತಿಳಿಸಿ ಮತ್ತೊಂದು ದಿನಾಂಕವನ್ನು ಕೋರಿದರು. ಇದಕ್ಕೆ ನ್ಯಾಯಾಧೀಶರು, ಏಪ್ರಿಲ್ 25ರಂದು ಪ್ರಕರಣದ ಮುಂದಿನ ವಿಚಾರಣೆಯ ದಿನಾಂಕದಂದು ನ್ಯಾಯಾಲಯದ ಮುಂದೆ ಭೌತಿಕ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಲು ರಾಹುಲ್ ಗಾಂಧಿಯವರ ವಕೀಲರನ್ನು ಕೇಳಿದರು.

ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಸಿಕ್ಯೂಷನ್ ವಕೀಲ ಪ್ರಿಯಾ ಗುಪ್ತಾ ಅವರು, ”ದೂರುದಾರರ ಕಡೆಯಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ಎಲ್ಲಾ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈಗ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಮಾತ್ರ ದಾಖಲಿಸಬೇಕಾಗಿದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...