Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ರಾಮಗಢದಲ್ಲಿ ಕಾರ್ಮಿಕರ ಜೊತೆ ರಾಹುಲ್‌ ಗಾಂಧಿ ಸಂವಾದ

ಭಾರತ್‌ ಜೋಡೋ ನ್ಯಾಯ ಯಾತ್ರೆ: ರಾಮಗಢದಲ್ಲಿ ಕಾರ್ಮಿಕರ ಜೊತೆ ರಾಹುಲ್‌ ಗಾಂಧಿ ಸಂವಾದ

- Advertisement -
- Advertisement -

ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆ ಜಾರ್ಖಾಂಡ್‌ನಲ್ಲಿ 4ನೇ ದಿನ ಮುಂದುವರಿದಿದ್ದು, ರಾಮಗಢ ಜಿಲ್ಲೆಯ ಕಲ್ಲಿದ್ದಲು ಪ್ರದೇಶದಲ್ಲಿ ರಾಹುಲ್‌ ಗಾಂಧಿ ಕಾರ್ಮಿಕರ ಜೊತೆ ಸಂವಾದವನ್ನು ನಡೆಸಿದ್ದಾರೆ.

ಭಾನುವಾರ ರಾತ್ರಿ ಜಿಲ್ಲೆಯ ಸಿದ್ದು-ಕನ್ಹು ಮೈದಾನದಲ್ಲಿ ಯಾತ್ರೆ ತಂಗಿತ್ತು, ಇಂದು ಬೆಳಗ್ಗೆ ಮಹಾತ್ಮ ಗಾಂಧಿ ಚೌಕ್‌ನಿಂದ ಯಾತ್ರೆ ಪುನರಾರಂಭಗೊಂಡು ಚುಟುಪಾಲು ಕಣಿವೆಗೆ ತೆರಳಿ ಅಲ್ಲಿ ರಾಹುಲ್‌ ಗಾಂಧಿ ಅವರು ಸ್ವಾತಂತ್ರ್ಯ ಹೋರಾಟಗಾರರಾದ ಶಹೀದ್ ಶೇಖ್ ಭಿಖಾರಿ ಮತ್ತು ಟಿಕಾಯ್ತ್ ಉಮಾರೋ ಸಿಂಗ್ ಅವರಿಗೆ ಗೌರವವನ್ನು ಸಲ್ಲಿಕೆ ಮಾಡಿದ್ದಾರೆ.

 

ಯಾತ್ರೆ ವೇಳೆ ಮಾತನಾಡಿದ ರಾಹುಲ್‌ ಗಾಂಧಿ, ಕಾಂಗ್ರೆಸ್‌ ಪಕ್ಷವು ಜಲ್-ಜಂಗಲ್-ಜಮಿನ್ (ನೀರು, ಅರಣ್ಯ ಮತ್ತು ಭೂ ಸಂಪನ್ಮೂಲಗಳ) ವಿಚಾರದಲ್ಲಿ ಆದಿವಾಸಿಗಳ ಹಕ್ಕುಗಳ ಪರವಾಗಿ ಸದಾ ನಿಂತುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ರಾಜ್ಯದ ಉಕ್ಕಿನ ಕಾರ್ಖಾನೆಗಳನ್ನು ತಮ್ಮ ಕೋಟ್ಯಾಧಿಪತಿ ಸ್ನೇಹಿತರಿಗೆ ಹಸ್ತಾಂತರಿಸಲಿದ್ದಾರೆ, ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ರಾಷ್ಟ್ರದ ಸಂಪತ್ತು ಮತ್ತು ಸಂಪನ್ಮೂಲಗಳನ್ನು ಕೆಲವೇ ಕೈಗಳಿಗೆ ಹಸ್ತಾಂತರಿಸುವ ಮೂಲಕ ಆರ್ಥಿಕ ಅನ್ಯಾಯವನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ವರ್ಷ ನಾನು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಷ್ಟ್ರವನ್ನು ಒಗ್ಗೂಡಿಸಲು ಮತ್ತು ಬಿಜೆಪಿ ಮತ್ತು ಆರೆಸ್ಸೆಸ್ ಕಾರ್ಯಕರ್ತರ ದ್ವೇಷದ ವಿರುದ್ಧ ಹೋರಾಡಲು ಭಾರತ್ ಜೋಡೋ ಯಾತ್ರೆ ಕೈಗೊಂಡಾಗ ನಮಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಕಾಂಗ್ರೆಸ್ ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯುತ್ತದೆ ಎಂದು ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ನಾವು ಯಶಸ್ವಿಯಾಗಿದ್ದೆವು. ಈ ಬಾರಿ ಮಣಿಪುರದಿಂದ ಮಹಾರಾಷ್ಟ್ರಕ್ಕೆ ಯಾತ್ರೆ ಸಾಗುತ್ತಿದ್ದು ನ್ಯಾಯ ಎಂಬ ಇನ್ನೊಂದು ಪದವನ್ನು ಸೇರಿಸಿದ್ದೇವೆ, ಜನರಿಗೆ ಆಗುತ್ತಿರುವ ಆರ್ಥಿಕ ಅನ್ಯಾಯದಂತಹ ಕೆಲವು ಅನ್ಯಾಯಗಳ ವಿರುದ್ಧ ನ್ಯಾಯಕ್ಕಾಗಿ ಒತ್ತಾಯಿಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆಯು ದೇಶದ ಸಂಪತ್ತನ್ನು ಕೆಲವು ಆಯ್ಕೆಯ ಮಿಲಿಯನೇರ್‌ಗಳಿಗೆ ವರ್ಗಾಯಿಸುವ ಪ್ರಯತ್ನದ ಅನ್ಯಾಯದ ವಿರುದ್ಧ ನಿಲ್ಲುವ ಗುರಿಯನ್ನು ಹೊಂದಿದೆ ಮತ್ತು ಜಿಎಸ್‌ಟಿ ಮತ್ತು ನೋಟು ಅಮಾನ್ಯೀಕರಣದಿಂದ ಉಂಟಾದ ನಿರುದ್ಯೋಗದ ವಿರುದ್ಧ ಪ್ರತಿಭಟಿಸುತ್ತದೆ. ಕೇಂದ್ರ ಸರ್ಕಾರವು ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿದೆ. ಅದು ಆದಿವಾಸಿಗಳಂತಹ ಸಾಮಾನ್ಯ ಜನರನ್ನು ಉದ್ಯೋಗದಿಂದ ವಂಚಿಸುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಜನವರಿ 14ರಂದು ಮಣಿಪುರದಲ್ಲಿ ಆರಂಭವಾದ ಭಾರತ್ ಜೋಡೋ ನ್ಯಾಯ ಯಾತ್ರೆ 67 ದಿನಗಳಲ್ಲಿ 6,713 ಕಿಮೀ ಕ್ರಮಿಸಲಿದ್ದು, 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಸಂಚರಿಸಿ ಮಾ.20ರಂದು ಮುಂಬೈನಲ್ಲಿ ಸಮಾಪ್ತಿ ಯಾಗಲಿದೆ.

ಇದನ್ನು ಓದಿ: ಸಾವಿತ್ರಿಬಾಯಿ ಫುಲೆ ವಿವಿಯಲ್ಲಿ ABVP ಕಾರ್ಯಕರ್ತರಿಂದ ದಾಂಧಲೆ: ಕ್ರಮ ಕೈಗೊಳ್ಳದ ಅಧಿಕಾರಿ ಅಮಾನತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...