Homeಕರ್ನಾಟಕರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಸ್ಫೂರ್ತಿದಾಯಕ: ಶಿವಣ್ಣ ಮೆಚ್ಚುಗೆ

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಸ್ಫೂರ್ತಿದಾಯಕ: ಶಿವಣ್ಣ ಮೆಚ್ಚುಗೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ನಡೆಸಿರುವ ಭಾರತ್ ಜೋಡೋ ಯಾತ್ರೆ ಸ್ಫೂರ್ತಿದಾಯಕ ಎಂದು ಕನ್ನಡದ ಹಿರಿಯ ನಟ ಶಿವರಾಜ್‌ಕುಮಾರ್ ಬಣ್ಣಿಸಿದ್ದಾರೆ.

ತೀರ್ಥಹಳ್ಳಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರದಲ್ಲಿ, ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಮಾತನಾಡಿರುವ ಶಿವಣ್ಣ, “ತೀರ್ಥಹಳ್ಳಿಯ ಅಭಿಮಾನಿ ದೇವರುಗಳಿಗೆ ನಮಸ್ಕಾರ. ನಾನು ನಿಮ್ಮಂತೆಯೇ ಒಬ್ಬ ಅಭಿಮಾನಿಯಾಗಿ ರಾಹುಲ್ ಗಾಂಧಿಯವರನ್ನು ನೋಡುವ ಆಸೆ ಮತ್ತು ಪ್ರೀತಿಯಿಂದ ಇಲ್ಲಿಗೆ ಬಂದಿದ್ದೇನೆ. ಯಾಕೆಂದರೆ ಇತ್ತೀಚೆಗೆ ಅವರು ಮಾಡಿರುವ ಭಾರತ್ ಜೋಡೋ ಯಾತ್ರೆ ನೋಡಿ ಸ್ಫೂರ್ತಿ ಪಡೆದೆ’’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಜೋಡೋ ಯಾತ್ರೆಯನ್ನು ನೋಡಿ ಖುಷಿಯಾಯಿತು. ನನಗೆ ಫಿಟ್ನೇಸ್ ಎಂದರೆ ಇಷ್ಟ. ಫಿಟ್ನೆಸ್ ಜೊತೆಗೆ ಒಂದು ಪರ್ಪಸ್ ಗಾಗಿ (ಉದ್ದೇಶಕ್ಕಾಗಿ) ಇಡೀ ದೇಶದ್ಯಾಂತ ನಡೆದುಕೊಂಡು ಹೋಗಿದ್ದನ್ನು ನೋಡಿ ಉತ್ತೇಜನ ಸಿಕ್ಕಿತು, ಖುಷಿ ಸಿಕ್ಕಿತು’’ ಎಂದು ಹೊಗಳಿದ್ದಾರೆ.

“ನಾನೊಬ್ಬ ನಟನಷ್ಟೇ. ನನಗೆ ರಾಜಕಾರಣ ಗೊತ್ತಿಲ್ಲ. ನಮ್ಮ ಮಾವರಾದ ಬಂಗಾರಪ್ಪನವರು ರಾಜಕಾರಣದಲ್ಲಿ ಇದ್ದರು. ಅವರ ಪುತ್ರ ಮಧು ಅವರು ರಾಜಕಾರಣದಲ್ಲಿ ಇದ್ದಾರೆ. ಪತ್ನಿ ಗೀತಾ ಅವರು ಒಮ್ಮೆ ಎಂ.ಪಿ. ಎಲೆಕ್ಷನ್ನಲ್ಲಿ ಸ್ಪರ್ಧಿಸಿದ್ದರು. ಈಗ ಕಾಂಗ್ರೆಸ್ ಸೇರಿದ್ದಾರೆ. ನನ್ನ ಪತ್ನಿ ನಿಮ್ಮ ಪಕ್ಷದೊಂದಿಗೆ ಇರುತ್ತಾರೆ. ಆಕೆಗೆ ನನ್ನ ಬೆಂಬಲ ಇರುತ್ತದೆ’’ ಎಂದಿದ್ದಾರೆ.

“ಯಾರನ್ನು ಆಯ್ಕೆ ಮಾಡಬೇಕು ಎಂಬುದು ನಿಮಗೆ ಗೊತ್ತು. ಯಾರು ಒಳ್ಳೆಯದನ್ನು ಮಾಡುತ್ತಾರೆ ಎಂಬುದು ನಿಮಗೆ ತಿಳಿದಿದೆ. ಈ ಭಾರಿ ಜಯಭೇರಿ ಬಾರಿಸಲಿ, ನೀವೆಲ್ಲರೂ ಆಶೀರ್ವಾದ ಮಾಡಿರಿ ಎಂದು ಕೇಳಿಕೊಳ್ಳುತ್ತೇನೆ’’ ಎಂದು ತಿಳಿಸಿದ್ದಾರೆ.

ಶಿವರಾಜ್ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಇತ್ತೀಚೆಗೆ ಸೇರ್ಪಡೆಯಾಗಿದ್ದರು.

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್‌. ಬಂಗಾರಪ್ಪ ಅವರ ಪುತ್ರಿಯಾಗಿರುವ ಗೀತಾ ಅವರು, ಹಿಂದೆ ಜೆಡಿಎಸ್‌ನಿಂದ ಲೋಕಸಭಾ ಚುನಾವಣೆಗೆ ಬಿ.ಎಸ್.ಯಡಿಯೂರಪ್ಪನವರ ಎದುರಾಳಿಯಾಗಿ ಸ್ಪರ್ಧಿಸಿದ್ದರು. ಆದರೆ, ಯಡಿಯೂರಪ್ಪ ಅವರ ಎದುರು ಸೋತಿದ್ದರು.

2014 ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್‌ ಜೆಡಿಎಸ್ ಟಿಕೆಟ್‌ ಪಡೆದು ಗೀತಾ ಶಿವರಾಜ್‌ಕುಮಾರ್‌ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. 2008ರಲ್ಲಿ ಜೆಡಿಎಸ್‌ನಿಂದ ಗೀತಾ ಅವರು ಸ್ಪರ್ಧಿಸಿದ್ದರು.

ಬಂಗಾರಪ್ಪ ಅವರ ಐವರು ಮಕ್ಕಳಲ್ಲಿ ಮಧು ಬಂಗಾರಪ್ಪ, ಕುಮಾರ್ ಬಂಗಾರಪ್ಪ ಮತ್ತು ಗೀತಾ ಶಿವರಾಜ್‌ಕುಮಾರ್ ಅವರು ರಾಜಕೀಯ ಜೀವನದಲ್ಲಿದ್ದಾರೆ. ಮಧು ಬಂಗಾರಪ್ಪ ಕಾಂಗ್ರೆಸ್‌ ಪಕ್ಷದಲ್ಲಿ, ಕುಮಾರ್ ಬಂಗಾರಪ್ಪ ಬಿಜೆಪಿಯಲ್ಲಿದ್ದು, ಬಾರಿ ಸೊರಬ ವಿಧಾನಸಭಾ ಚುನಾವಣೆಯಲ್ಲಿ ಪರಸ್ಪರ ಸೆಣಸಲಿದ್ದಾರೆ.

2021 ಜುಲೈನಲ್ಲಿ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಇದೀಗ ಗೀತಾ ಶಿವರಾಜ್‌‌ಕುಮಾರ್ ಸಹ ಕಾಂಗ್ರೆಸ್ ಸೇರಿದ್ದಾರೆ. ತಮ್ಮ ಪತ್ನಿಯ ಒತ್ತಾಸೆಯಂತೆ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಪಕ್ಷದ ವೇದಿಕೆಯಲ್ಲಿ ಮಾತನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...