Homeಕರ್ನಾಟಕರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಸ್ಫೂರ್ತಿದಾಯಕ: ಶಿವಣ್ಣ ಮೆಚ್ಚುಗೆ

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಸ್ಫೂರ್ತಿದಾಯಕ: ಶಿವಣ್ಣ ಮೆಚ್ಚುಗೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ನಡೆಸಿರುವ ಭಾರತ್ ಜೋಡೋ ಯಾತ್ರೆ ಸ್ಫೂರ್ತಿದಾಯಕ ಎಂದು ಕನ್ನಡದ ಹಿರಿಯ ನಟ ಶಿವರಾಜ್‌ಕುಮಾರ್ ಬಣ್ಣಿಸಿದ್ದಾರೆ.

ತೀರ್ಥಹಳ್ಳಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರದಲ್ಲಿ, ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಮಾತನಾಡಿರುವ ಶಿವಣ್ಣ, “ತೀರ್ಥಹಳ್ಳಿಯ ಅಭಿಮಾನಿ ದೇವರುಗಳಿಗೆ ನಮಸ್ಕಾರ. ನಾನು ನಿಮ್ಮಂತೆಯೇ ಒಬ್ಬ ಅಭಿಮಾನಿಯಾಗಿ ರಾಹುಲ್ ಗಾಂಧಿಯವರನ್ನು ನೋಡುವ ಆಸೆ ಮತ್ತು ಪ್ರೀತಿಯಿಂದ ಇಲ್ಲಿಗೆ ಬಂದಿದ್ದೇನೆ. ಯಾಕೆಂದರೆ ಇತ್ತೀಚೆಗೆ ಅವರು ಮಾಡಿರುವ ಭಾರತ್ ಜೋಡೋ ಯಾತ್ರೆ ನೋಡಿ ಸ್ಫೂರ್ತಿ ಪಡೆದೆ’’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಜೋಡೋ ಯಾತ್ರೆಯನ್ನು ನೋಡಿ ಖುಷಿಯಾಯಿತು. ನನಗೆ ಫಿಟ್ನೇಸ್ ಎಂದರೆ ಇಷ್ಟ. ಫಿಟ್ನೆಸ್ ಜೊತೆಗೆ ಒಂದು ಪರ್ಪಸ್ ಗಾಗಿ (ಉದ್ದೇಶಕ್ಕಾಗಿ) ಇಡೀ ದೇಶದ್ಯಾಂತ ನಡೆದುಕೊಂಡು ಹೋಗಿದ್ದನ್ನು ನೋಡಿ ಉತ್ತೇಜನ ಸಿಕ್ಕಿತು, ಖುಷಿ ಸಿಕ್ಕಿತು’’ ಎಂದು ಹೊಗಳಿದ್ದಾರೆ.

“ನಾನೊಬ್ಬ ನಟನಷ್ಟೇ. ನನಗೆ ರಾಜಕಾರಣ ಗೊತ್ತಿಲ್ಲ. ನಮ್ಮ ಮಾವರಾದ ಬಂಗಾರಪ್ಪನವರು ರಾಜಕಾರಣದಲ್ಲಿ ಇದ್ದರು. ಅವರ ಪುತ್ರ ಮಧು ಅವರು ರಾಜಕಾರಣದಲ್ಲಿ ಇದ್ದಾರೆ. ಪತ್ನಿ ಗೀತಾ ಅವರು ಒಮ್ಮೆ ಎಂ.ಪಿ. ಎಲೆಕ್ಷನ್ನಲ್ಲಿ ಸ್ಪರ್ಧಿಸಿದ್ದರು. ಈಗ ಕಾಂಗ್ರೆಸ್ ಸೇರಿದ್ದಾರೆ. ನನ್ನ ಪತ್ನಿ ನಿಮ್ಮ ಪಕ್ಷದೊಂದಿಗೆ ಇರುತ್ತಾರೆ. ಆಕೆಗೆ ನನ್ನ ಬೆಂಬಲ ಇರುತ್ತದೆ’’ ಎಂದಿದ್ದಾರೆ.

“ಯಾರನ್ನು ಆಯ್ಕೆ ಮಾಡಬೇಕು ಎಂಬುದು ನಿಮಗೆ ಗೊತ್ತು. ಯಾರು ಒಳ್ಳೆಯದನ್ನು ಮಾಡುತ್ತಾರೆ ಎಂಬುದು ನಿಮಗೆ ತಿಳಿದಿದೆ. ಈ ಭಾರಿ ಜಯಭೇರಿ ಬಾರಿಸಲಿ, ನೀವೆಲ್ಲರೂ ಆಶೀರ್ವಾದ ಮಾಡಿರಿ ಎಂದು ಕೇಳಿಕೊಳ್ಳುತ್ತೇನೆ’’ ಎಂದು ತಿಳಿಸಿದ್ದಾರೆ.

ಶಿವರಾಜ್ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಇತ್ತೀಚೆಗೆ ಸೇರ್ಪಡೆಯಾಗಿದ್ದರು.

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್‌. ಬಂಗಾರಪ್ಪ ಅವರ ಪುತ್ರಿಯಾಗಿರುವ ಗೀತಾ ಅವರು, ಹಿಂದೆ ಜೆಡಿಎಸ್‌ನಿಂದ ಲೋಕಸಭಾ ಚುನಾವಣೆಗೆ ಬಿ.ಎಸ್.ಯಡಿಯೂರಪ್ಪನವರ ಎದುರಾಳಿಯಾಗಿ ಸ್ಪರ್ಧಿಸಿದ್ದರು. ಆದರೆ, ಯಡಿಯೂರಪ್ಪ ಅವರ ಎದುರು ಸೋತಿದ್ದರು.

2014 ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್‌ ಜೆಡಿಎಸ್ ಟಿಕೆಟ್‌ ಪಡೆದು ಗೀತಾ ಶಿವರಾಜ್‌ಕುಮಾರ್‌ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. 2008ರಲ್ಲಿ ಜೆಡಿಎಸ್‌ನಿಂದ ಗೀತಾ ಅವರು ಸ್ಪರ್ಧಿಸಿದ್ದರು.

ಬಂಗಾರಪ್ಪ ಅವರ ಐವರು ಮಕ್ಕಳಲ್ಲಿ ಮಧು ಬಂಗಾರಪ್ಪ, ಕುಮಾರ್ ಬಂಗಾರಪ್ಪ ಮತ್ತು ಗೀತಾ ಶಿವರಾಜ್‌ಕುಮಾರ್ ಅವರು ರಾಜಕೀಯ ಜೀವನದಲ್ಲಿದ್ದಾರೆ. ಮಧು ಬಂಗಾರಪ್ಪ ಕಾಂಗ್ರೆಸ್‌ ಪಕ್ಷದಲ್ಲಿ, ಕುಮಾರ್ ಬಂಗಾರಪ್ಪ ಬಿಜೆಪಿಯಲ್ಲಿದ್ದು, ಬಾರಿ ಸೊರಬ ವಿಧಾನಸಭಾ ಚುನಾವಣೆಯಲ್ಲಿ ಪರಸ್ಪರ ಸೆಣಸಲಿದ್ದಾರೆ.

2021 ಜುಲೈನಲ್ಲಿ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಇದೀಗ ಗೀತಾ ಶಿವರಾಜ್‌‌ಕುಮಾರ್ ಸಹ ಕಾಂಗ್ರೆಸ್ ಸೇರಿದ್ದಾರೆ. ತಮ್ಮ ಪತ್ನಿಯ ಒತ್ತಾಸೆಯಂತೆ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಪಕ್ಷದ ವೇದಿಕೆಯಲ್ಲಿ ಮಾತನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...