Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ರಾಹುಲ್‌ ಗಾಂಧಿಯ ಕಾರಿನ ಮೇಲೆ ಕಲ್ಲು ತೂರಾಟ

ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ರಾಹುಲ್‌ ಗಾಂಧಿಯ ಕಾರಿನ ಮೇಲೆ ಕಲ್ಲು ತೂರಾಟ

- Advertisement -
- Advertisement -

ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆ ಇಂದು ಮತ್ತೆ ಪ.ಬಂಗಾಳವನ್ನು ಪ್ರವೇಶಿಸಿದ್ದು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಂಚರಿಸುತ್ತಿದ್ದ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಪ.ಬಂಗಾಳಲ್ಲಿ ನಡೆದಿದೆ.

ರಾಹುಲ್ ಗಾಂಧಿ ಬುಧವಾರ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ರೋಡ್ ಶೋ ಮೂಲಕ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಪುನರಾರಂಭಿಸಿದರು. ಮಾಲ್ಡಾ ಜಿಲ್ಲೆಯ ದೇಬಿಪುರ, ರತುವಾ ಮೂಲಕ ಯಾತ್ರೆ ಮತ್ತೆ ಬಂಗಾಳವನ್ನು ಪ್ರವೇಶಿಸಿತ್ತು. ಬಂಗಾಳದಲ್ಲಿ ಮೊದಲ ಹಂತದ ಯಾತ್ರೆ ಸೋಮವಾರ ಮುಕ್ತಾಯಗೊಂಡಿತ್ತು.

ಪ.ಬಂಗಾಳ ಕಾಂಗ್ರೆಸ್‌ ಘಟಕದ ಮುಖ್ಯಸ್ಥ ಅಧೀರ್ ರಂಜನ್ ಚೌಧುರಿ ಪ್ರಕಾರ, ಯಾತ್ರೆ ಬಿಹಾರದಿಂದ ಪಶ್ಚಿಮ ಬಂಗಾಳಕ್ಕೆ ಮರು ಪ್ರವೇಶಿಸುತ್ತಿದ್ದಂತೆ ಮಾಲ್ಡಾದ ಹರಿಶ್ಚಂದ್ರಪುರ ಪ್ರದೇಶದಲ್ಲಿ ದಾಳಿ ನಡೆದಿದೆ. ರಾಹುಲ್‌ ಗಾಂಧಿ ಸಂಚರಿಸುತ್ತಿದ್ದ ಕಾರಿನ ಮೇಲೆ ಕಲ್ಲುಗಳನ್ನು ಎಸೆಯಲಾಗಿದೆ. ದಾಳಿಯಿಂದ ವಾಹನದ ಹಿಂಬದಿಯ ಗಾಜು ಪುಡಿಪುಡಿಯಾಗಿದೆ. ರಾಹುಲ್‌ ಗಾಂಧಿಗೆ ಯಾವುದೇ ಗಾಯಗಳಾಗಿಲ್ಲ, ಆದರೆ ಇದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ರಾಹುಲ್‌ ಗಾಂಧಿ ಘಟನೆ ಬಳಿಕ ಕಾರಿನಿಂದ ಇಳಿದು ಹಾನಿಗೊಳಗಾದ ವಿಂಡ್‌ಸ್ಕ್ರೀನ್‌ನ್ನು ವೀಕ್ಷಿಸುತ್ತಿರುವ ದೃಶ್ಯದ ವಿಡಿಯೋ ವೈರಲ್‌ ಆಗಿದೆ. ರಾಹುಲ್‌ ಗಾಂಧಿ ಕಾರಿನಲ್ಲಿ ಕುಳಿತಿದ್ದು, ರಸ್ತೆಯುದ್ದಕ್ಕೂ ನೆರೆದಿದ್ದ ಉತ್ಸಾಹಿ ಜನಸಮೂಹದತ್ತ ಕೈಬೀಸುತ್ತ ನಿಧಾನವಾಗಿ ಕಾರು ಚಲಿಸುತ್ತಿತ್ತು. ಈ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.

ನಮ್ಮ ಕಾರಿನ ವಿಂಡ್ ಶೀಲ್ಡ್ ಮುರಿದುಹೋಗಿದೆ ಆದರೆ ನಮ್ಮ ಯಾತ್ರೆಗೆ ಅಡ್ಡಿಯಾಗುವುದಿಲ್ಲ. INDIA ಮೈತ್ರಿಯು ಎಂದಿಗೂ ತಲೆಬಾಗುವುದಿಲ್ಲ. INDIA ಬಣವನ್ನು ಬಲಪಡಿಸುವುದು ನಮ್ಮ ಗುರಿ ಎಂದು ಬಂಗಾಳದ ಮುಖ್ಯಮಂತ್ರಿ ಹೇಳಿರುವುದನ್ನು ನಾನು ನೆನಪಿಸುತ್ತೇನೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ಕಳೆದ ವಾರ ಕೂಚ್ ಬೆಹಾರ್ ಪಟ್ಟಣದಲ್ಲಿ ರಾಹುಲ್‌ ಗಾಂಧಿಯನ್ನು ಸ್ವಾಗತಿಸುವ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳನ್ನು ಹರಿದು ಹಾಕಲಾಗಿತ್ತು. ರಾಜ್ಯ ಅತಿಥಿ ಗೃಹದಲ್ಲಿ ರಾಹುಲ್‌ ಗಾಂಧಿ ಅವರಿಗೆ ಆತಿಥ್ಯ ನೀಡಲು ರಾಜ್ಯ ಕಾಂಗ್ರೆಸ್‌ಗೆ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿದೆ ಎಂದು ಆರೋಪಿಸಲಾಗಿತ್ತು.

ಭಾರತ್‌ ಜೋಡೋ ನ್ಯಾಯ ಯಾತ್ರೆಯು ಇದುವರೆಗೆ ಪಶ್ಚಿಮ ಬಂಗಾಳದ 6 ಜಿಲ್ಲೆಗಳಲ್ಲಿ 523ಕಿ.ಮೀ ಕ್ರಮಿಸಿದ್ದು, ಯಾತ್ರೆಯು ಡಾರ್ಜಿಲಿಂಗ್, ಜಲ್ಪೈಗುರಿ, ಅಲಿಪುರ್ದೌರ್ ಮತ್ತು ಉತ್ತರ ದಿನಾಜ್‌ಪುರದಲ್ಲಿ ಕ್ರಮಿಸಿದೆ. ಮಾಲ್ಡಾ ಮತ್ತು ಮುರ್ಷಿದಾಬಾದ್‌ನೊಂದಿಗೆ ಎರಡನೇ ಹಂತದಲ್ಲಿ ಯಾತ್ರೆಯನ್ನು ನಡೆಸಲಾಗುವುದು ಎಂದು ಪಕ್ಷದ ಮುಖಂಡರು ತಿಳಿಸಿದ್ದರು.

ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಉತ್ತರ ಬಂಗಾಳದ ಮೂಲಕ ಯಾತ್ರೆಯು ಸಾಗಿದೆ. ರಾಹುಲ್‌ ಗಾಂಧಿ ಯಾತ್ರೆಯ ಮಾರ್ಗದುದ್ದಕ್ಕೂ ಸ್ಥಳೀಯರೊಂದಿಗೆ ಸಂವಾದ ನಡೆಸಿದ್ದಾರೆ.

ಅಸ್ಸಾಂ ಮತ್ತು ಮಣಿಪುರದಂತಹ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಕಾಂಗ್ರೆಸ್ ಎದುರಿಸಿದ ಅಡೆತಡೆಗಳನ್ನು ಟಿಎಂಸಿ ಆಡಳಿತವಿರುವ ಬಂಗಾಳದ ಜಲ್ಪೈಗುರಿ, ಮಾಲ್ಡಾ ಮತ್ತು ಮುರ್ಷಿದಾಬಾದ್ ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳು ಮತ್ತು ವಸತಿ ವ್ಯವಸ್ಥೆಗಳಿಗೆ ಅನುಮತಿ ಪಡೆಯುವಾಗ ಎದುರಿಸಿದೆ.

ಜನವರಿ 14ರಂದು ಮಣಿಪುರದಲ್ಲಿ ಪ್ರಾರಂಭವಾದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ 67 ದಿನಗಳಲ್ಲಿ 6,713ಕಿ.ಮೀ ಕ್ರಮಿಸಲಿದ್ದು, 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಹಾದುಹೋಗಿ ಮಾ.20ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಇದನ್ನು ಓದಿ: ದೇವಾಲಯಕ್ಕೆ ಹಿಂದೂಯೇತರರಿಗೆ ಪ್ರವೇಶ ನಿರಾಕರಿಸಿದ ಮದ್ರಾಸ್ ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...