Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ರಾಹುಲ್‌ ಗಾಂಧಿಯ ಕಾರಿನ ಮೇಲೆ ಕಲ್ಲು ತೂರಾಟ

ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ರಾಹುಲ್‌ ಗಾಂಧಿಯ ಕಾರಿನ ಮೇಲೆ ಕಲ್ಲು ತೂರಾಟ

- Advertisement -
- Advertisement -

ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆ ಇಂದು ಮತ್ತೆ ಪ.ಬಂಗಾಳವನ್ನು ಪ್ರವೇಶಿಸಿದ್ದು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಂಚರಿಸುತ್ತಿದ್ದ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಪ.ಬಂಗಾಳಲ್ಲಿ ನಡೆದಿದೆ.

ರಾಹುಲ್ ಗಾಂಧಿ ಬುಧವಾರ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ರೋಡ್ ಶೋ ಮೂಲಕ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಪುನರಾರಂಭಿಸಿದರು. ಮಾಲ್ಡಾ ಜಿಲ್ಲೆಯ ದೇಬಿಪುರ, ರತುವಾ ಮೂಲಕ ಯಾತ್ರೆ ಮತ್ತೆ ಬಂಗಾಳವನ್ನು ಪ್ರವೇಶಿಸಿತ್ತು. ಬಂಗಾಳದಲ್ಲಿ ಮೊದಲ ಹಂತದ ಯಾತ್ರೆ ಸೋಮವಾರ ಮುಕ್ತಾಯಗೊಂಡಿತ್ತು.

ಪ.ಬಂಗಾಳ ಕಾಂಗ್ರೆಸ್‌ ಘಟಕದ ಮುಖ್ಯಸ್ಥ ಅಧೀರ್ ರಂಜನ್ ಚೌಧುರಿ ಪ್ರಕಾರ, ಯಾತ್ರೆ ಬಿಹಾರದಿಂದ ಪಶ್ಚಿಮ ಬಂಗಾಳಕ್ಕೆ ಮರು ಪ್ರವೇಶಿಸುತ್ತಿದ್ದಂತೆ ಮಾಲ್ಡಾದ ಹರಿಶ್ಚಂದ್ರಪುರ ಪ್ರದೇಶದಲ್ಲಿ ದಾಳಿ ನಡೆದಿದೆ. ರಾಹುಲ್‌ ಗಾಂಧಿ ಸಂಚರಿಸುತ್ತಿದ್ದ ಕಾರಿನ ಮೇಲೆ ಕಲ್ಲುಗಳನ್ನು ಎಸೆಯಲಾಗಿದೆ. ದಾಳಿಯಿಂದ ವಾಹನದ ಹಿಂಬದಿಯ ಗಾಜು ಪುಡಿಪುಡಿಯಾಗಿದೆ. ರಾಹುಲ್‌ ಗಾಂಧಿಗೆ ಯಾವುದೇ ಗಾಯಗಳಾಗಿಲ್ಲ, ಆದರೆ ಇದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ರಾಹುಲ್‌ ಗಾಂಧಿ ಘಟನೆ ಬಳಿಕ ಕಾರಿನಿಂದ ಇಳಿದು ಹಾನಿಗೊಳಗಾದ ವಿಂಡ್‌ಸ್ಕ್ರೀನ್‌ನ್ನು ವೀಕ್ಷಿಸುತ್ತಿರುವ ದೃಶ್ಯದ ವಿಡಿಯೋ ವೈರಲ್‌ ಆಗಿದೆ. ರಾಹುಲ್‌ ಗಾಂಧಿ ಕಾರಿನಲ್ಲಿ ಕುಳಿತಿದ್ದು, ರಸ್ತೆಯುದ್ದಕ್ಕೂ ನೆರೆದಿದ್ದ ಉತ್ಸಾಹಿ ಜನಸಮೂಹದತ್ತ ಕೈಬೀಸುತ್ತ ನಿಧಾನವಾಗಿ ಕಾರು ಚಲಿಸುತ್ತಿತ್ತು. ಈ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.

ನಮ್ಮ ಕಾರಿನ ವಿಂಡ್ ಶೀಲ್ಡ್ ಮುರಿದುಹೋಗಿದೆ ಆದರೆ ನಮ್ಮ ಯಾತ್ರೆಗೆ ಅಡ್ಡಿಯಾಗುವುದಿಲ್ಲ. INDIA ಮೈತ್ರಿಯು ಎಂದಿಗೂ ತಲೆಬಾಗುವುದಿಲ್ಲ. INDIA ಬಣವನ್ನು ಬಲಪಡಿಸುವುದು ನಮ್ಮ ಗುರಿ ಎಂದು ಬಂಗಾಳದ ಮುಖ್ಯಮಂತ್ರಿ ಹೇಳಿರುವುದನ್ನು ನಾನು ನೆನಪಿಸುತ್ತೇನೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ಕಳೆದ ವಾರ ಕೂಚ್ ಬೆಹಾರ್ ಪಟ್ಟಣದಲ್ಲಿ ರಾಹುಲ್‌ ಗಾಂಧಿಯನ್ನು ಸ್ವಾಗತಿಸುವ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳನ್ನು ಹರಿದು ಹಾಕಲಾಗಿತ್ತು. ರಾಜ್ಯ ಅತಿಥಿ ಗೃಹದಲ್ಲಿ ರಾಹುಲ್‌ ಗಾಂಧಿ ಅವರಿಗೆ ಆತಿಥ್ಯ ನೀಡಲು ರಾಜ್ಯ ಕಾಂಗ್ರೆಸ್‌ಗೆ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿದೆ ಎಂದು ಆರೋಪಿಸಲಾಗಿತ್ತು.

ಭಾರತ್‌ ಜೋಡೋ ನ್ಯಾಯ ಯಾತ್ರೆಯು ಇದುವರೆಗೆ ಪಶ್ಚಿಮ ಬಂಗಾಳದ 6 ಜಿಲ್ಲೆಗಳಲ್ಲಿ 523ಕಿ.ಮೀ ಕ್ರಮಿಸಿದ್ದು, ಯಾತ್ರೆಯು ಡಾರ್ಜಿಲಿಂಗ್, ಜಲ್ಪೈಗುರಿ, ಅಲಿಪುರ್ದೌರ್ ಮತ್ತು ಉತ್ತರ ದಿನಾಜ್‌ಪುರದಲ್ಲಿ ಕ್ರಮಿಸಿದೆ. ಮಾಲ್ಡಾ ಮತ್ತು ಮುರ್ಷಿದಾಬಾದ್‌ನೊಂದಿಗೆ ಎರಡನೇ ಹಂತದಲ್ಲಿ ಯಾತ್ರೆಯನ್ನು ನಡೆಸಲಾಗುವುದು ಎಂದು ಪಕ್ಷದ ಮುಖಂಡರು ತಿಳಿಸಿದ್ದರು.

ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಉತ್ತರ ಬಂಗಾಳದ ಮೂಲಕ ಯಾತ್ರೆಯು ಸಾಗಿದೆ. ರಾಹುಲ್‌ ಗಾಂಧಿ ಯಾತ್ರೆಯ ಮಾರ್ಗದುದ್ದಕ್ಕೂ ಸ್ಥಳೀಯರೊಂದಿಗೆ ಸಂವಾದ ನಡೆಸಿದ್ದಾರೆ.

ಅಸ್ಸಾಂ ಮತ್ತು ಮಣಿಪುರದಂತಹ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಕಾಂಗ್ರೆಸ್ ಎದುರಿಸಿದ ಅಡೆತಡೆಗಳನ್ನು ಟಿಎಂಸಿ ಆಡಳಿತವಿರುವ ಬಂಗಾಳದ ಜಲ್ಪೈಗುರಿ, ಮಾಲ್ಡಾ ಮತ್ತು ಮುರ್ಷಿದಾಬಾದ್ ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳು ಮತ್ತು ವಸತಿ ವ್ಯವಸ್ಥೆಗಳಿಗೆ ಅನುಮತಿ ಪಡೆಯುವಾಗ ಎದುರಿಸಿದೆ.

ಜನವರಿ 14ರಂದು ಮಣಿಪುರದಲ್ಲಿ ಪ್ರಾರಂಭವಾದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ 67 ದಿನಗಳಲ್ಲಿ 6,713ಕಿ.ಮೀ ಕ್ರಮಿಸಲಿದ್ದು, 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಹಾದುಹೋಗಿ ಮಾ.20ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಇದನ್ನು ಓದಿ: ದೇವಾಲಯಕ್ಕೆ ಹಿಂದೂಯೇತರರಿಗೆ ಪ್ರವೇಶ ನಿರಾಕರಿಸಿದ ಮದ್ರಾಸ್ ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...