Homeಮುಖಪುಟರಾಹುಲ್ ಗಾಂಧಿ ಲೋಕಸಭಾ ಸ್ಥಾನ ಅನರ್ಹ: ಕಿಡಿಕಾರಿದ ಕಾಂಗ್ರೆಸ್, ಪ್ರತಿಪಕ್ಷಗಳು

ರಾಹುಲ್ ಗಾಂಧಿ ಲೋಕಸಭಾ ಸ್ಥಾನ ಅನರ್ಹ: ಕಿಡಿಕಾರಿದ ಕಾಂಗ್ರೆಸ್, ಪ್ರತಿಪಕ್ಷಗಳು

- Advertisement -
- Advertisement -

ಕಾಂಗ್ರೆಸ್ ನಾಯಕ, ವಯನಾಡ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹಗೊಳಿಸಿರುವುದಕ್ಕೆ ಕಾಂಗ್ರೆಸ್ ಕಿಡಿಕಾರಿದೆ. ಲೋಕಸಭಾ ಸೆಕ್ರಟೇರಿಯಟ್‌ರವರ ಕ್ರಮವನ್ನು ಉಗ್ರವಾಗಿ ಖಂಡಿಸಿರುವ ಕಾಂಗ್ರೆಸ್ ಮತ್ತು ಪ್ರತಿಪಕ್ಷದ ನಾಯಕರು ಪ್ರಜಾಪ್ರಭುತ್ವ ಸತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಂಡರೆ ಅತ್ಯಂತ ಭಯ. ಹಾಗಾಗಿ ಬಿಜೆಪಿಯವರು ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಲು ಎಲ್ಲಾ ರೀತಿಯಲ್ಲಿ ಪ್ರಯತ್ನಿಸಿದರು. ಸತ್ಯ ಹೇಳುವವರನ್ನು ಸದನದಲ್ಲಿ ಇಟ್ಟುಕೊಳ್ಳಲು ಅವರು ಬಯಸುವುದಿಲ್ಲ ಆದರೆ ನಾವು ಸತ್ಯವನ್ನೇ ಮಾತನಾಡುತ್ತೇವೆ. ಜೆಪಿಸಿಗೆ ಬೇಡಿಕೆ ಇಡುತ್ತೇವೆ, ಪ್ರಜಾಪ್ರಭುತ್ವ ಉಳಿಸಲು ಅಗತ್ಯಬಿದ್ದರೆ ಜೈಲಿಗೆ ಹೋಗುತ್ತೇವೆ” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

“ಈ ಕ್ರಮದಿಂದ ನಾವು ಹೆದರುವುದಿಲ್ಲ ಮತ್ತು ಮೌನವಾಗುವುದಿಲ್ಲ. ಪ್ರಧಾನಮಂತ್ರಿ-ಸಂಯೋಜಿತ ಅದಾನಿ ಮಹಾಮೆಗಾ ಹಗರಣಕ್ಕೆ JPC ತನಿಖೆ ನಡೆಸುವುದರ ಬದಲು ರಾಹುಲ್ ಗಾಂಧಿಯವರ ಸಂಸತ್ ಸ್ಥಾನ ಅನರ್ಹಗೊಳಿಸಲಾಗಿದೆ. ಈ ಹೋರಾಟವನ್ನು ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಎದುರಿಸುತ್ತೇವೆ. ಭಾರತೀಯ ಪ್ರಜಾಪ್ರಭುತ್ವ ಓಂ ಶಾಂತಿ” ಎಂದು ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.

“ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ. ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ” ಎಂದು ಕರ್ನಾಟಕದ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರು ಅದಾನಿ ಬಗ್ಗೆ ಪ್ರಶ್ನೆಗಳನ್ನು ಎತ್ತಿದ ದಿನದಿಂದ ಅವರ ಧ್ವನಿಯನ್ನು ಅಡಗಿಸುವ ಷಡ್ಯಂತ್ರವನ್ನು ಪ್ರಾರಂಭಿಸಲಾಯಿತು. ಅವರಿಗೆ ಎಂದಿಗೂ ಮಾತನಾಡಲು ಅವಕಾಶ ನೀಡಲಿಲ್ಲ, ಇದು ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ಸರ್ವಾಧಿಕಾರಿ ಧೋರಣೆಯ ಸ್ಪಷ್ಟ ನಿದರ್ಶನವಾಗಿದೆ ಎಂದು ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ.

“ನ್ಯಾಯಾಲಯದ ತೀರ್ಪಿನ 24 ಗಂಟೆಗಳ ಒಳಗೆ ಮತ್ತು ಮೇಲ್ಮನವಿ ಪ್ರಕ್ರಿಯೆಯಲ್ಲಿದೆ ಎಂದು ತಿಳಿದಿದ್ದಾಗಲೂ ಇಷ್ಟು ಬೇಗ ಈ ಕ್ರಮ ತೆಗೆದುಕೊಂಡಿರುವುದರಿಮದ ನಾನು ದಿಗ್ಭ್ರಮೆಗೊಂಡಿದ್ದೇನೆ. ಇದು ಕೈಗವಸುಗಳನ್ನು ಮುಚ್ಚಿದ ರಾಜಕೀಯ ಮತ್ತು ಇದು ನಮ್ಮ ಪ್ರಜಾಪ್ರಭುತ್ವಕ್ಕೆ ಕೆಟ್ಟದ್ದನ್ನು ಸೂಚಿಸುತ್ತದೆ” ಎಂದು ಸಂಸದ ಶಶಿ ತರೂರ್ ಹೇಳಿದ್ದಾರೆ.

“ಪ್ರಧಾನಿ ಮೋದಿಯವರ ನವ ಭಾರತದಲ್ಲಿ, ವಿರೋಧ ಪಕ್ಷದ ನಾಯಕರು ಬಿಜೆಪಿಯ ಪ್ರಧಾನ ಗುರಿಯಾಗಿದ್ದಾರೆ! ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಬಿಜೆಪಿ ನಾಯಕರನ್ನು ಸಂಪುಟಕ್ಕೆ ಸೇರಿಸಿಕೊಂಡರೆ, ವಿರೋಧ ಪಕ್ಷದ ನಾಯಕರನ್ನು ಅವರ ಮಾತಿಗಾಗಿ ಅನರ್ಹಗೊಳಿಸಲಾಗಿದೆ. ಇಂದು ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವದ ಹೊಸ ಕುಸಿತಕ್ಕೆ ನಾವು ಸಾಕ್ಷಿಯಾಗಿದ್ದೇವೆ” ಎಂದು ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

“ರಾಹುಲ್ ಗಾಂಧಿ ಅವರ ಉಮೇದುವಾರಿಕೆಯನ್ನು ರದ್ದುಗೊಳಿಸಲಾಗಿದೆ. ನಮ್ಮ ದೇಶದಲ್ಲಿ ಕಳ್ಳನನ್ನು ಕಳ್ಳ ಎಂದು ಕರೆಯುವುದು ಅಪರಾಧವಾಗಿಬಿಟ್ಟಿದೆ. ಕಳ್ಳರು ಮತ್ತು ಲೂಟಿಕೋರರು ಇನ್ನೂ ಮುಕ್ತರಾಗಿದ್ದಾರೆ ಮತ್ತು ರಾಹುಲ್ ಗಾಂಧಿಗೆ ಶಿಕ್ಷೆಯಾಗಿದೆ. ಇದು ಪ್ರಜಾಪ್ರಭುತ್ವದ ನೇರ ಕೊಲೆ. ಎಲ್ಲಾ ಸರ್ಕಾರಿ ವ್ಯವಸ್ಥೆಗಳು ಒತ್ತಡದಲ್ಲಿವೆ. ಇದು ಸರ್ವಾಧಿಕಾರದ ಅಂತ್ಯದ ಆರಂಭ. ಹೋರಾಟವೇ ನಮ್ಮೆಲ್ಲದರ ದಾರಿಯಾಗಿದೆ” ಎಂದು ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಅಭಿಪ್ರಾಯಪಟ್ಟಿದ್ದಾರೆ.

“ನೀವು ರಾಹುಲ್ ಗಾಂಧಿಯವರನ್ನು ಸಂಸತ್ ಸ್ಥಾನದಿಂದ ತೆಗೆದುಹಾಕಬಹುದು ಆದರೆ ಕೋಟ್ಯಂತರ ಭಾರತೀಯರು ಹೃದಯದಲ್ಲಿ ನೀಡಿರುವ ಸ್ಥಾನದಿಂದ ತೆಗೆದುಹಾಕುವುದು ಅಸಾಧ್ಯ. ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ಧೋರಣೆಗೆ ನನ್ನ ಧಿಕ್ಕಾರ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ; ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹಗೊಳಿಸಿದ ಲೋಕಸಭಾ ಸೆಕ್ರೆಟರಿಯೇಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....