Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆ: ನಿರುದ್ಯೋಗ ಸಮಸ್ಯೆ ಬಗ್ಗೆ ಕೇಂದ್ರ, ಒಡಿಶಾ ಸರಕಾರಕ್ಕೆ ರಾಹುಲ್‌ ತರಾಟೆ

ಭಾರತ್ ಜೋಡೋ ನ್ಯಾಯ ಯಾತ್ರೆ: ನಿರುದ್ಯೋಗ ಸಮಸ್ಯೆ ಬಗ್ಗೆ ಕೇಂದ್ರ, ಒಡಿಶಾ ಸರಕಾರಕ್ಕೆ ರಾಹುಲ್‌ ತರಾಟೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಜಾರ್ಖಂಡ್ ಬಳಿಕ  ಒಡಿಶಾವನ್ನು ಪ್ರವೇಶಿಸಿದೆ. ಇಂದು ರೂರ್ಕೆಲಾದ ವೇದವ್ಯಾಸ್ ದೇವಸ್ಥಾನಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಈ ದೇವಾಲಯದ ಗುಹೆಯು ಋಷಿ ಮತ್ತು ಕವಿ ವೇದವ್ಯಾಸ್ ಅವರು ಮಹಾಭಾರತವನ್ನು ರಚಿಸಿದ ಸ್ಥಳವೆಂದು ಪರಿಗಣಿಸಲಾಗಿದೆ.

ಸುಂದರ್‌ಗಢ್ ಜಿಲ್ಲೆಯ ಸಣ್ಣ ಕೈಗಾರಿಕಾ ಪಟ್ಟಣವಾದ ಬೀರಮಿತ್ರಪುರದಲ್ಲಿ ಯಾತ್ರೆಗೆ ಭವ್ಯ ಸ್ವಾಗತ ನೀಡಲಾಗಿದೆ. ಈ ಸಂದರ್ಭದಲ್ಲಿ ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರು ಒಡಿಶಾ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟ್ನಾಯಕ್ ಅವರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. ಯಾತ್ರೆ ಪಟ್ಟಣ ಪ್ರವೇಶಿಸುವುದಕ್ಕೆ ಮೊದಲೇ ಬೀರಮಿತ್ರಪುರದಲ್ಲಿ ಬ್ಯಾನರ್‌ಗಳು, ಕಟೌಟ್‌ಗಳು ಮತ್ತು ರಾಹುಲ್ ಗಾಂಧಿಯವರ ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು.
ಒಡಿಶಾದಲ್ಲಿ ಬಿಜೆಪಿ ಮತ್ತು ಬಿಜೆಡಿ ಪಾಲುದಾರಿಕೆಯನ್ನು ಹೊಂದಿದೆ, ರಾಜ್ಯದ ಜನರ ಹಿತಾಸಕ್ತಿ ಕಾಪಾಡಲು ನಾವು ಬಿಜೆಪಿ ಮತ್ತು ಬಿಜೆಡಿಯನ್ನು ವಿರೋಧಿಸುತ್ತಿದ್ದೇವೆ. ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ಮತ್ತು ನರೇಂದ್ರ ಮೋದಿ ಪಾಲುದಾರಿ ಸರಕಾರವನ್ನು ಹೊಂದಿದ್ದಾರೆ. ಅವರಿಬ್ಬರೂ ಕೈ ಜೋಡಿಸಿ ಕೆಲಸ ಮಾಡುತ್ತಿದ್ದಾರೆ. ಬಿಜೆಡಿ ಬಿಜೆಪಿಯನ್ನು ಬೆಂಬಲಿಸುತ್ತದೆ ಎಂದು ನಾನು ಸಂಸತ್ತಿನಲ್ಲಿ ಕಂಡುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯಲು ನಾನು ಒಡಿಶಾಗೆ ಬಂದಿದ್ದೇನೆ. ರಾಜ್ಯದಿಂದ 30 ಲಕ್ಷ ಜನರು ಜೀವನೋಪಾಯಕ್ಕಾಗಿ ಇತರ ರಾಜ್ಯಗಳಿಗೆ ಕಾರ್ಮಿಕರಾಗಿ ವಲಸೆ ಹೋಗಿದ್ದಾರೆ ಎಂದು ಹೇಳಿದ್ದಾರೆ.

ಒಡಿಶಾದಲ್ಲಿ ಬುಡಕಟ್ಟು ಜನಾಂಗದ ಹೆಚ್ಚಿನ ಜನಸಂಖ್ಯೆ ಇದೆ. ದಲಿತರ ಜೊತೆಗೆ ಬುಡಕಟ್ಟು ಜನರನ್ನು ಕೂಡ ಸರ್ಕಾರವು ರಾಜ್ಯದಲ್ಲಿ ನಿರ್ಲಕ್ಷಿಸಿದೆ. ನಾನು 6-7 ಗಂಟೆಗಳ ಕಾಲ ನಿಮ್ಮ ‘ಮಾನ್ ಕಿ ಬಾತ್’ ಕೇಳಲು ಮತ್ತು 15 ನಿಮಿಷಗಳ ಕಾಲ ಸ್ವಲ್ಪ ಮಾತನಾಡಲು ಇಲ್ಲಿಗೆ ಬಂದಿದ್ದೇನೆ. ಕೈಗಾರಿಕೆಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಒಡಿಶಾದ ದೊಡ್ಡ ಸಮಸ್ಯೆ ನಿರುದ್ಯೋಗವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಖಿಲೇಶ್‌ ಯಾದವ್‌ ಹೇಳಿಕೆ: 

ಫೆಬ್ರವರಿ 16 ರಂದು ಉತ್ತರಪ್ರದೇಶಕ್ಕೆ ಪ್ರವೇಶಿಸಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಸೇರಲು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮಂಗಳವಾರ ಆಹ್ವಾನವನ್ನು ಸ್ವೀಕರಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಪ್ರದೇಶದಲ್ಲಿ ಯಾತ್ರೆಗೆ ಸೇರಲು ಅಖಿಲೇಶ್ ಯಾದವ್‌ಗೆ ನೀಡಿದ ಆಹ್ವಾನವನ್ನು ಸ್ವೀಕರಿಸುವ ಸಂದರ್ಭದಲ್ಲಿ ಅಖಿಲೇಶ್ ಕಾಂಗ್ರೆಸ್‌ಗೆ ಶುಭಾಶಯಗಳನ್ನು ಕೋರಿದ್ದಾರೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆ ಫೆಬ್ರವರಿ 16 ರಂದು ಉತ್ತರಪ್ರದೇಶದಲ್ಲಿ ಸಾಗಲಿದೆ. ಅಮೇಥಿ ಅಥವಾ ರಾಯ್ಬರೇಲಿಯಲ್ಲಿ ಯಾತ್ರೆಗೆ ಸೇರಲು ಅಖಿಲೇಶ್‌ ಯಾದವ್ ಒಪ್ಪಿಗೆ ನೀಡಿದ್ದಾರೆ ಎಂದು ಸಮಾಜವಾದಿ ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ.

ಜೈರಾಮ್‌ ರಮೇಶ್, ಕನ್ಹಯ್ಯಾ ಕುಮಾರ್ ಹೇಳಿಕೆ:

ಪ್ರಧಾನಿ ಮೋದಿ ಮೂರನೇ ಬಾರಿಗೆ ಬಂದರೆ, ನನ್ನ ಮಾತುಗಳನ್ನು ಗಮನದಲ್ಲಿಟ್ಟುಕೊಳ್ಳಿ, ರೂರ್ಕೆಲಾ (ಒಡಿಶಾದ  ನಗರ) ಕೂಡ ಮಾರಾಟ ಮಾಡುತ್ತಾರೆ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್ ಹೇಳಿದ್ದಾರೆ.

ಪ್ರಧಾನಿ ಮೋದಿ ಅಹಂಕಾರ ಆಚಾರ್ಯ, ಅವರನ್ನು ಪ್ರಶ್ನಿಸುವ ಧೈರ್ಯ ಯಾರಿಗೂ ಇಲ್ಲ. ಪ್ರಧಾನಿ ಮೋದಿ ನಮಗೆ ‘ಉದ್ಯೋಗ ನೀಡುವವರು’ ಎಂದು ಹೇಳುತ್ತಾರೆ. ಅವರು ಉದ್ಯೋಗ ಕಸಿದುಕೊಳ್ಳುವವರಾಗಿದ್ದಾರೆ.. ಮತ್ತೆ ಅವರು ಹೇಗೆ ಉದ್ಯೋಗ ನೀಡುವವರಾಗುತ್ತಾರೆ? ಮಾಧ್ಯಮಗಳು ಸ್ವತಂತ್ರವಾಗಿರಬೇಕು ಮತ್ತು ಮಾದ್ಯಮಗಳು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಭಾಗವಾಗಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ನಮ್ಮ ಯಾತ್ರೆಯು ಯುವ ನ್ಯಾಯ, ಸಹಭಾಗಿತ್ವ, ಮಹಿಳಾ ನ್ಯಾಯ, ರೈತರಿಗೆ ನ್ಯಾಯ ಮತ್ತು ಕಾರ್ಮಿಕರ ನ್ಯಾಯದ ಕುರಿತು ಮಾತನಾಡುತ್ತದೆ. ನಮ್ಮ ಯಾತ್ರೆಯು ಹಕ್ಕುಗಳಿಗಾಗಿ ಮತ್ತು ನ್ಯಾಯಕ್ಕಾಗಿದೆ ಎಂದು ಕನ್ಹಯ್ಯಾ ಕುಮಾರ್ ಇದೇ ವೇಳೆ ಹೇಳಿದ್ದಾರೆ.

 

 

 

 

 

 

 

 

ಇದನ್ನು ಓದಿ: ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 30 ಲಕ್ಷ ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...