Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆ: ನಿರುದ್ಯೋಗ ಸಮಸ್ಯೆ ಬಗ್ಗೆ ಕೇಂದ್ರ, ಒಡಿಶಾ ಸರಕಾರಕ್ಕೆ ರಾಹುಲ್‌ ತರಾಟೆ

ಭಾರತ್ ಜೋಡೋ ನ್ಯಾಯ ಯಾತ್ರೆ: ನಿರುದ್ಯೋಗ ಸಮಸ್ಯೆ ಬಗ್ಗೆ ಕೇಂದ್ರ, ಒಡಿಶಾ ಸರಕಾರಕ್ಕೆ ರಾಹುಲ್‌ ತರಾಟೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಜಾರ್ಖಂಡ್ ಬಳಿಕ  ಒಡಿಶಾವನ್ನು ಪ್ರವೇಶಿಸಿದೆ. ಇಂದು ರೂರ್ಕೆಲಾದ ವೇದವ್ಯಾಸ್ ದೇವಸ್ಥಾನಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಈ ದೇವಾಲಯದ ಗುಹೆಯು ಋಷಿ ಮತ್ತು ಕವಿ ವೇದವ್ಯಾಸ್ ಅವರು ಮಹಾಭಾರತವನ್ನು ರಚಿಸಿದ ಸ್ಥಳವೆಂದು ಪರಿಗಣಿಸಲಾಗಿದೆ.

ಸುಂದರ್‌ಗಢ್ ಜಿಲ್ಲೆಯ ಸಣ್ಣ ಕೈಗಾರಿಕಾ ಪಟ್ಟಣವಾದ ಬೀರಮಿತ್ರಪುರದಲ್ಲಿ ಯಾತ್ರೆಗೆ ಭವ್ಯ ಸ್ವಾಗತ ನೀಡಲಾಗಿದೆ. ಈ ಸಂದರ್ಭದಲ್ಲಿ ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರು ಒಡಿಶಾ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟ್ನಾಯಕ್ ಅವರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. ಯಾತ್ರೆ ಪಟ್ಟಣ ಪ್ರವೇಶಿಸುವುದಕ್ಕೆ ಮೊದಲೇ ಬೀರಮಿತ್ರಪುರದಲ್ಲಿ ಬ್ಯಾನರ್‌ಗಳು, ಕಟೌಟ್‌ಗಳು ಮತ್ತು ರಾಹುಲ್ ಗಾಂಧಿಯವರ ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು.
ಒಡಿಶಾದಲ್ಲಿ ಬಿಜೆಪಿ ಮತ್ತು ಬಿಜೆಡಿ ಪಾಲುದಾರಿಕೆಯನ್ನು ಹೊಂದಿದೆ, ರಾಜ್ಯದ ಜನರ ಹಿತಾಸಕ್ತಿ ಕಾಪಾಡಲು ನಾವು ಬಿಜೆಪಿ ಮತ್ತು ಬಿಜೆಡಿಯನ್ನು ವಿರೋಧಿಸುತ್ತಿದ್ದೇವೆ. ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ಮತ್ತು ನರೇಂದ್ರ ಮೋದಿ ಪಾಲುದಾರಿ ಸರಕಾರವನ್ನು ಹೊಂದಿದ್ದಾರೆ. ಅವರಿಬ್ಬರೂ ಕೈ ಜೋಡಿಸಿ ಕೆಲಸ ಮಾಡುತ್ತಿದ್ದಾರೆ. ಬಿಜೆಡಿ ಬಿಜೆಪಿಯನ್ನು ಬೆಂಬಲಿಸುತ್ತದೆ ಎಂದು ನಾನು ಸಂಸತ್ತಿನಲ್ಲಿ ಕಂಡುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯಲು ನಾನು ಒಡಿಶಾಗೆ ಬಂದಿದ್ದೇನೆ. ರಾಜ್ಯದಿಂದ 30 ಲಕ್ಷ ಜನರು ಜೀವನೋಪಾಯಕ್ಕಾಗಿ ಇತರ ರಾಜ್ಯಗಳಿಗೆ ಕಾರ್ಮಿಕರಾಗಿ ವಲಸೆ ಹೋಗಿದ್ದಾರೆ ಎಂದು ಹೇಳಿದ್ದಾರೆ.

ಒಡಿಶಾದಲ್ಲಿ ಬುಡಕಟ್ಟು ಜನಾಂಗದ ಹೆಚ್ಚಿನ ಜನಸಂಖ್ಯೆ ಇದೆ. ದಲಿತರ ಜೊತೆಗೆ ಬುಡಕಟ್ಟು ಜನರನ್ನು ಕೂಡ ಸರ್ಕಾರವು ರಾಜ್ಯದಲ್ಲಿ ನಿರ್ಲಕ್ಷಿಸಿದೆ. ನಾನು 6-7 ಗಂಟೆಗಳ ಕಾಲ ನಿಮ್ಮ ‘ಮಾನ್ ಕಿ ಬಾತ್’ ಕೇಳಲು ಮತ್ತು 15 ನಿಮಿಷಗಳ ಕಾಲ ಸ್ವಲ್ಪ ಮಾತನಾಡಲು ಇಲ್ಲಿಗೆ ಬಂದಿದ್ದೇನೆ. ಕೈಗಾರಿಕೆಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಒಡಿಶಾದ ದೊಡ್ಡ ಸಮಸ್ಯೆ ನಿರುದ್ಯೋಗವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಖಿಲೇಶ್‌ ಯಾದವ್‌ ಹೇಳಿಕೆ: 

ಫೆಬ್ರವರಿ 16 ರಂದು ಉತ್ತರಪ್ರದೇಶಕ್ಕೆ ಪ್ರವೇಶಿಸಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಸೇರಲು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮಂಗಳವಾರ ಆಹ್ವಾನವನ್ನು ಸ್ವೀಕರಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಪ್ರದೇಶದಲ್ಲಿ ಯಾತ್ರೆಗೆ ಸೇರಲು ಅಖಿಲೇಶ್ ಯಾದವ್‌ಗೆ ನೀಡಿದ ಆಹ್ವಾನವನ್ನು ಸ್ವೀಕರಿಸುವ ಸಂದರ್ಭದಲ್ಲಿ ಅಖಿಲೇಶ್ ಕಾಂಗ್ರೆಸ್‌ಗೆ ಶುಭಾಶಯಗಳನ್ನು ಕೋರಿದ್ದಾರೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆ ಫೆಬ್ರವರಿ 16 ರಂದು ಉತ್ತರಪ್ರದೇಶದಲ್ಲಿ ಸಾಗಲಿದೆ. ಅಮೇಥಿ ಅಥವಾ ರಾಯ್ಬರೇಲಿಯಲ್ಲಿ ಯಾತ್ರೆಗೆ ಸೇರಲು ಅಖಿಲೇಶ್‌ ಯಾದವ್ ಒಪ್ಪಿಗೆ ನೀಡಿದ್ದಾರೆ ಎಂದು ಸಮಾಜವಾದಿ ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ.

ಜೈರಾಮ್‌ ರಮೇಶ್, ಕನ್ಹಯ್ಯಾ ಕುಮಾರ್ ಹೇಳಿಕೆ:

ಪ್ರಧಾನಿ ಮೋದಿ ಮೂರನೇ ಬಾರಿಗೆ ಬಂದರೆ, ನನ್ನ ಮಾತುಗಳನ್ನು ಗಮನದಲ್ಲಿಟ್ಟುಕೊಳ್ಳಿ, ರೂರ್ಕೆಲಾ (ಒಡಿಶಾದ  ನಗರ) ಕೂಡ ಮಾರಾಟ ಮಾಡುತ್ತಾರೆ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್ ಹೇಳಿದ್ದಾರೆ.

ಪ್ರಧಾನಿ ಮೋದಿ ಅಹಂಕಾರ ಆಚಾರ್ಯ, ಅವರನ್ನು ಪ್ರಶ್ನಿಸುವ ಧೈರ್ಯ ಯಾರಿಗೂ ಇಲ್ಲ. ಪ್ರಧಾನಿ ಮೋದಿ ನಮಗೆ ‘ಉದ್ಯೋಗ ನೀಡುವವರು’ ಎಂದು ಹೇಳುತ್ತಾರೆ. ಅವರು ಉದ್ಯೋಗ ಕಸಿದುಕೊಳ್ಳುವವರಾಗಿದ್ದಾರೆ.. ಮತ್ತೆ ಅವರು ಹೇಗೆ ಉದ್ಯೋಗ ನೀಡುವವರಾಗುತ್ತಾರೆ? ಮಾಧ್ಯಮಗಳು ಸ್ವತಂತ್ರವಾಗಿರಬೇಕು ಮತ್ತು ಮಾದ್ಯಮಗಳು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಭಾಗವಾಗಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ನಮ್ಮ ಯಾತ್ರೆಯು ಯುವ ನ್ಯಾಯ, ಸಹಭಾಗಿತ್ವ, ಮಹಿಳಾ ನ್ಯಾಯ, ರೈತರಿಗೆ ನ್ಯಾಯ ಮತ್ತು ಕಾರ್ಮಿಕರ ನ್ಯಾಯದ ಕುರಿತು ಮಾತನಾಡುತ್ತದೆ. ನಮ್ಮ ಯಾತ್ರೆಯು ಹಕ್ಕುಗಳಿಗಾಗಿ ಮತ್ತು ನ್ಯಾಯಕ್ಕಾಗಿದೆ ಎಂದು ಕನ್ಹಯ್ಯಾ ಕುಮಾರ್ ಇದೇ ವೇಳೆ ಹೇಳಿದ್ದಾರೆ.

 

 

 

 

 

 

 

 

ಇದನ್ನು ಓದಿ: ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 30 ಲಕ್ಷ ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...