Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆ: ನಿರುದ್ಯೋಗ ಸಮಸ್ಯೆ ಬಗ್ಗೆ ಕೇಂದ್ರ, ಒಡಿಶಾ ಸರಕಾರಕ್ಕೆ ರಾಹುಲ್‌ ತರಾಟೆ

ಭಾರತ್ ಜೋಡೋ ನ್ಯಾಯ ಯಾತ್ರೆ: ನಿರುದ್ಯೋಗ ಸಮಸ್ಯೆ ಬಗ್ಗೆ ಕೇಂದ್ರ, ಒಡಿಶಾ ಸರಕಾರಕ್ಕೆ ರಾಹುಲ್‌ ತರಾಟೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಜಾರ್ಖಂಡ್ ಬಳಿಕ  ಒಡಿಶಾವನ್ನು ಪ್ರವೇಶಿಸಿದೆ. ಇಂದು ರೂರ್ಕೆಲಾದ ವೇದವ್ಯಾಸ್ ದೇವಸ್ಥಾನಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಈ ದೇವಾಲಯದ ಗುಹೆಯು ಋಷಿ ಮತ್ತು ಕವಿ ವೇದವ್ಯಾಸ್ ಅವರು ಮಹಾಭಾರತವನ್ನು ರಚಿಸಿದ ಸ್ಥಳವೆಂದು ಪರಿಗಣಿಸಲಾಗಿದೆ.

ಸುಂದರ್‌ಗಢ್ ಜಿಲ್ಲೆಯ ಸಣ್ಣ ಕೈಗಾರಿಕಾ ಪಟ್ಟಣವಾದ ಬೀರಮಿತ್ರಪುರದಲ್ಲಿ ಯಾತ್ರೆಗೆ ಭವ್ಯ ಸ್ವಾಗತ ನೀಡಲಾಗಿದೆ. ಈ ಸಂದರ್ಭದಲ್ಲಿ ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರು ಒಡಿಶಾ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟ್ನಾಯಕ್ ಅವರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. ಯಾತ್ರೆ ಪಟ್ಟಣ ಪ್ರವೇಶಿಸುವುದಕ್ಕೆ ಮೊದಲೇ ಬೀರಮಿತ್ರಪುರದಲ್ಲಿ ಬ್ಯಾನರ್‌ಗಳು, ಕಟೌಟ್‌ಗಳು ಮತ್ತು ರಾಹುಲ್ ಗಾಂಧಿಯವರ ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು.
ಒಡಿಶಾದಲ್ಲಿ ಬಿಜೆಪಿ ಮತ್ತು ಬಿಜೆಡಿ ಪಾಲುದಾರಿಕೆಯನ್ನು ಹೊಂದಿದೆ, ರಾಜ್ಯದ ಜನರ ಹಿತಾಸಕ್ತಿ ಕಾಪಾಡಲು ನಾವು ಬಿಜೆಪಿ ಮತ್ತು ಬಿಜೆಡಿಯನ್ನು ವಿರೋಧಿಸುತ್ತಿದ್ದೇವೆ. ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ಮತ್ತು ನರೇಂದ್ರ ಮೋದಿ ಪಾಲುದಾರಿ ಸರಕಾರವನ್ನು ಹೊಂದಿದ್ದಾರೆ. ಅವರಿಬ್ಬರೂ ಕೈ ಜೋಡಿಸಿ ಕೆಲಸ ಮಾಡುತ್ತಿದ್ದಾರೆ. ಬಿಜೆಡಿ ಬಿಜೆಪಿಯನ್ನು ಬೆಂಬಲಿಸುತ್ತದೆ ಎಂದು ನಾನು ಸಂಸತ್ತಿನಲ್ಲಿ ಕಂಡುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯಲು ನಾನು ಒಡಿಶಾಗೆ ಬಂದಿದ್ದೇನೆ. ರಾಜ್ಯದಿಂದ 30 ಲಕ್ಷ ಜನರು ಜೀವನೋಪಾಯಕ್ಕಾಗಿ ಇತರ ರಾಜ್ಯಗಳಿಗೆ ಕಾರ್ಮಿಕರಾಗಿ ವಲಸೆ ಹೋಗಿದ್ದಾರೆ ಎಂದು ಹೇಳಿದ್ದಾರೆ.

ಒಡಿಶಾದಲ್ಲಿ ಬುಡಕಟ್ಟು ಜನಾಂಗದ ಹೆಚ್ಚಿನ ಜನಸಂಖ್ಯೆ ಇದೆ. ದಲಿತರ ಜೊತೆಗೆ ಬುಡಕಟ್ಟು ಜನರನ್ನು ಕೂಡ ಸರ್ಕಾರವು ರಾಜ್ಯದಲ್ಲಿ ನಿರ್ಲಕ್ಷಿಸಿದೆ. ನಾನು 6-7 ಗಂಟೆಗಳ ಕಾಲ ನಿಮ್ಮ ‘ಮಾನ್ ಕಿ ಬಾತ್’ ಕೇಳಲು ಮತ್ತು 15 ನಿಮಿಷಗಳ ಕಾಲ ಸ್ವಲ್ಪ ಮಾತನಾಡಲು ಇಲ್ಲಿಗೆ ಬಂದಿದ್ದೇನೆ. ಕೈಗಾರಿಕೆಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಒಡಿಶಾದ ದೊಡ್ಡ ಸಮಸ್ಯೆ ನಿರುದ್ಯೋಗವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಖಿಲೇಶ್‌ ಯಾದವ್‌ ಹೇಳಿಕೆ: 

ಫೆಬ್ರವರಿ 16 ರಂದು ಉತ್ತರಪ್ರದೇಶಕ್ಕೆ ಪ್ರವೇಶಿಸಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಸೇರಲು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮಂಗಳವಾರ ಆಹ್ವಾನವನ್ನು ಸ್ವೀಕರಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಪ್ರದೇಶದಲ್ಲಿ ಯಾತ್ರೆಗೆ ಸೇರಲು ಅಖಿಲೇಶ್ ಯಾದವ್‌ಗೆ ನೀಡಿದ ಆಹ್ವಾನವನ್ನು ಸ್ವೀಕರಿಸುವ ಸಂದರ್ಭದಲ್ಲಿ ಅಖಿಲೇಶ್ ಕಾಂಗ್ರೆಸ್‌ಗೆ ಶುಭಾಶಯಗಳನ್ನು ಕೋರಿದ್ದಾರೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆ ಫೆಬ್ರವರಿ 16 ರಂದು ಉತ್ತರಪ್ರದೇಶದಲ್ಲಿ ಸಾಗಲಿದೆ. ಅಮೇಥಿ ಅಥವಾ ರಾಯ್ಬರೇಲಿಯಲ್ಲಿ ಯಾತ್ರೆಗೆ ಸೇರಲು ಅಖಿಲೇಶ್‌ ಯಾದವ್ ಒಪ್ಪಿಗೆ ನೀಡಿದ್ದಾರೆ ಎಂದು ಸಮಾಜವಾದಿ ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ.

ಜೈರಾಮ್‌ ರಮೇಶ್, ಕನ್ಹಯ್ಯಾ ಕುಮಾರ್ ಹೇಳಿಕೆ:

ಪ್ರಧಾನಿ ಮೋದಿ ಮೂರನೇ ಬಾರಿಗೆ ಬಂದರೆ, ನನ್ನ ಮಾತುಗಳನ್ನು ಗಮನದಲ್ಲಿಟ್ಟುಕೊಳ್ಳಿ, ರೂರ್ಕೆಲಾ (ಒಡಿಶಾದ  ನಗರ) ಕೂಡ ಮಾರಾಟ ಮಾಡುತ್ತಾರೆ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್ ಹೇಳಿದ್ದಾರೆ.

ಪ್ರಧಾನಿ ಮೋದಿ ಅಹಂಕಾರ ಆಚಾರ್ಯ, ಅವರನ್ನು ಪ್ರಶ್ನಿಸುವ ಧೈರ್ಯ ಯಾರಿಗೂ ಇಲ್ಲ. ಪ್ರಧಾನಿ ಮೋದಿ ನಮಗೆ ‘ಉದ್ಯೋಗ ನೀಡುವವರು’ ಎಂದು ಹೇಳುತ್ತಾರೆ. ಅವರು ಉದ್ಯೋಗ ಕಸಿದುಕೊಳ್ಳುವವರಾಗಿದ್ದಾರೆ.. ಮತ್ತೆ ಅವರು ಹೇಗೆ ಉದ್ಯೋಗ ನೀಡುವವರಾಗುತ್ತಾರೆ? ಮಾಧ್ಯಮಗಳು ಸ್ವತಂತ್ರವಾಗಿರಬೇಕು ಮತ್ತು ಮಾದ್ಯಮಗಳು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಭಾಗವಾಗಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ನಮ್ಮ ಯಾತ್ರೆಯು ಯುವ ನ್ಯಾಯ, ಸಹಭಾಗಿತ್ವ, ಮಹಿಳಾ ನ್ಯಾಯ, ರೈತರಿಗೆ ನ್ಯಾಯ ಮತ್ತು ಕಾರ್ಮಿಕರ ನ್ಯಾಯದ ಕುರಿತು ಮಾತನಾಡುತ್ತದೆ. ನಮ್ಮ ಯಾತ್ರೆಯು ಹಕ್ಕುಗಳಿಗಾಗಿ ಮತ್ತು ನ್ಯಾಯಕ್ಕಾಗಿದೆ ಎಂದು ಕನ್ಹಯ್ಯಾ ಕುಮಾರ್ ಇದೇ ವೇಳೆ ಹೇಳಿದ್ದಾರೆ.

 

 

 

 

 

 

 

 

ಇದನ್ನು ಓದಿ: ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 30 ಲಕ್ಷ ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...