Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆ: ನಿರುದ್ಯೋಗ ಸಮಸ್ಯೆ ಬಗ್ಗೆ ಕೇಂದ್ರ, ಒಡಿಶಾ ಸರಕಾರಕ್ಕೆ ರಾಹುಲ್‌ ತರಾಟೆ

ಭಾರತ್ ಜೋಡೋ ನ್ಯಾಯ ಯಾತ್ರೆ: ನಿರುದ್ಯೋಗ ಸಮಸ್ಯೆ ಬಗ್ಗೆ ಕೇಂದ್ರ, ಒಡಿಶಾ ಸರಕಾರಕ್ಕೆ ರಾಹುಲ್‌ ತರಾಟೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಜಾರ್ಖಂಡ್ ಬಳಿಕ  ಒಡಿಶಾವನ್ನು ಪ್ರವೇಶಿಸಿದೆ. ಇಂದು ರೂರ್ಕೆಲಾದ ವೇದವ್ಯಾಸ್ ದೇವಸ್ಥಾನಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಈ ದೇವಾಲಯದ ಗುಹೆಯು ಋಷಿ ಮತ್ತು ಕವಿ ವೇದವ್ಯಾಸ್ ಅವರು ಮಹಾಭಾರತವನ್ನು ರಚಿಸಿದ ಸ್ಥಳವೆಂದು ಪರಿಗಣಿಸಲಾಗಿದೆ.

ಸುಂದರ್‌ಗಢ್ ಜಿಲ್ಲೆಯ ಸಣ್ಣ ಕೈಗಾರಿಕಾ ಪಟ್ಟಣವಾದ ಬೀರಮಿತ್ರಪುರದಲ್ಲಿ ಯಾತ್ರೆಗೆ ಭವ್ಯ ಸ್ವಾಗತ ನೀಡಲಾಗಿದೆ. ಈ ಸಂದರ್ಭದಲ್ಲಿ ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರು ಒಡಿಶಾ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟ್ನಾಯಕ್ ಅವರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. ಯಾತ್ರೆ ಪಟ್ಟಣ ಪ್ರವೇಶಿಸುವುದಕ್ಕೆ ಮೊದಲೇ ಬೀರಮಿತ್ರಪುರದಲ್ಲಿ ಬ್ಯಾನರ್‌ಗಳು, ಕಟೌಟ್‌ಗಳು ಮತ್ತು ರಾಹುಲ್ ಗಾಂಧಿಯವರ ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು.
ಒಡಿಶಾದಲ್ಲಿ ಬಿಜೆಪಿ ಮತ್ತು ಬಿಜೆಡಿ ಪಾಲುದಾರಿಕೆಯನ್ನು ಹೊಂದಿದೆ, ರಾಜ್ಯದ ಜನರ ಹಿತಾಸಕ್ತಿ ಕಾಪಾಡಲು ನಾವು ಬಿಜೆಪಿ ಮತ್ತು ಬಿಜೆಡಿಯನ್ನು ವಿರೋಧಿಸುತ್ತಿದ್ದೇವೆ. ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ಮತ್ತು ನರೇಂದ್ರ ಮೋದಿ ಪಾಲುದಾರಿ ಸರಕಾರವನ್ನು ಹೊಂದಿದ್ದಾರೆ. ಅವರಿಬ್ಬರೂ ಕೈ ಜೋಡಿಸಿ ಕೆಲಸ ಮಾಡುತ್ತಿದ್ದಾರೆ. ಬಿಜೆಡಿ ಬಿಜೆಪಿಯನ್ನು ಬೆಂಬಲಿಸುತ್ತದೆ ಎಂದು ನಾನು ಸಂಸತ್ತಿನಲ್ಲಿ ಕಂಡುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯಲು ನಾನು ಒಡಿಶಾಗೆ ಬಂದಿದ್ದೇನೆ. ರಾಜ್ಯದಿಂದ 30 ಲಕ್ಷ ಜನರು ಜೀವನೋಪಾಯಕ್ಕಾಗಿ ಇತರ ರಾಜ್ಯಗಳಿಗೆ ಕಾರ್ಮಿಕರಾಗಿ ವಲಸೆ ಹೋಗಿದ್ದಾರೆ ಎಂದು ಹೇಳಿದ್ದಾರೆ.

ಒಡಿಶಾದಲ್ಲಿ ಬುಡಕಟ್ಟು ಜನಾಂಗದ ಹೆಚ್ಚಿನ ಜನಸಂಖ್ಯೆ ಇದೆ. ದಲಿತರ ಜೊತೆಗೆ ಬುಡಕಟ್ಟು ಜನರನ್ನು ಕೂಡ ಸರ್ಕಾರವು ರಾಜ್ಯದಲ್ಲಿ ನಿರ್ಲಕ್ಷಿಸಿದೆ. ನಾನು 6-7 ಗಂಟೆಗಳ ಕಾಲ ನಿಮ್ಮ ‘ಮಾನ್ ಕಿ ಬಾತ್’ ಕೇಳಲು ಮತ್ತು 15 ನಿಮಿಷಗಳ ಕಾಲ ಸ್ವಲ್ಪ ಮಾತನಾಡಲು ಇಲ್ಲಿಗೆ ಬಂದಿದ್ದೇನೆ. ಕೈಗಾರಿಕೆಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಒಡಿಶಾದ ದೊಡ್ಡ ಸಮಸ್ಯೆ ನಿರುದ್ಯೋಗವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಖಿಲೇಶ್‌ ಯಾದವ್‌ ಹೇಳಿಕೆ: 

ಫೆಬ್ರವರಿ 16 ರಂದು ಉತ್ತರಪ್ರದೇಶಕ್ಕೆ ಪ್ರವೇಶಿಸಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಸೇರಲು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮಂಗಳವಾರ ಆಹ್ವಾನವನ್ನು ಸ್ವೀಕರಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಪ್ರದೇಶದಲ್ಲಿ ಯಾತ್ರೆಗೆ ಸೇರಲು ಅಖಿಲೇಶ್ ಯಾದವ್‌ಗೆ ನೀಡಿದ ಆಹ್ವಾನವನ್ನು ಸ್ವೀಕರಿಸುವ ಸಂದರ್ಭದಲ್ಲಿ ಅಖಿಲೇಶ್ ಕಾಂಗ್ರೆಸ್‌ಗೆ ಶುಭಾಶಯಗಳನ್ನು ಕೋರಿದ್ದಾರೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆ ಫೆಬ್ರವರಿ 16 ರಂದು ಉತ್ತರಪ್ರದೇಶದಲ್ಲಿ ಸಾಗಲಿದೆ. ಅಮೇಥಿ ಅಥವಾ ರಾಯ್ಬರೇಲಿಯಲ್ಲಿ ಯಾತ್ರೆಗೆ ಸೇರಲು ಅಖಿಲೇಶ್‌ ಯಾದವ್ ಒಪ್ಪಿಗೆ ನೀಡಿದ್ದಾರೆ ಎಂದು ಸಮಾಜವಾದಿ ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ.

ಜೈರಾಮ್‌ ರಮೇಶ್, ಕನ್ಹಯ್ಯಾ ಕುಮಾರ್ ಹೇಳಿಕೆ:

ಪ್ರಧಾನಿ ಮೋದಿ ಮೂರನೇ ಬಾರಿಗೆ ಬಂದರೆ, ನನ್ನ ಮಾತುಗಳನ್ನು ಗಮನದಲ್ಲಿಟ್ಟುಕೊಳ್ಳಿ, ರೂರ್ಕೆಲಾ (ಒಡಿಶಾದ  ನಗರ) ಕೂಡ ಮಾರಾಟ ಮಾಡುತ್ತಾರೆ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್ ಹೇಳಿದ್ದಾರೆ.

ಪ್ರಧಾನಿ ಮೋದಿ ಅಹಂಕಾರ ಆಚಾರ್ಯ, ಅವರನ್ನು ಪ್ರಶ್ನಿಸುವ ಧೈರ್ಯ ಯಾರಿಗೂ ಇಲ್ಲ. ಪ್ರಧಾನಿ ಮೋದಿ ನಮಗೆ ‘ಉದ್ಯೋಗ ನೀಡುವವರು’ ಎಂದು ಹೇಳುತ್ತಾರೆ. ಅವರು ಉದ್ಯೋಗ ಕಸಿದುಕೊಳ್ಳುವವರಾಗಿದ್ದಾರೆ.. ಮತ್ತೆ ಅವರು ಹೇಗೆ ಉದ್ಯೋಗ ನೀಡುವವರಾಗುತ್ತಾರೆ? ಮಾಧ್ಯಮಗಳು ಸ್ವತಂತ್ರವಾಗಿರಬೇಕು ಮತ್ತು ಮಾದ್ಯಮಗಳು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಭಾಗವಾಗಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ನಮ್ಮ ಯಾತ್ರೆಯು ಯುವ ನ್ಯಾಯ, ಸಹಭಾಗಿತ್ವ, ಮಹಿಳಾ ನ್ಯಾಯ, ರೈತರಿಗೆ ನ್ಯಾಯ ಮತ್ತು ಕಾರ್ಮಿಕರ ನ್ಯಾಯದ ಕುರಿತು ಮಾತನಾಡುತ್ತದೆ. ನಮ್ಮ ಯಾತ್ರೆಯು ಹಕ್ಕುಗಳಿಗಾಗಿ ಮತ್ತು ನ್ಯಾಯಕ್ಕಾಗಿದೆ ಎಂದು ಕನ್ಹಯ್ಯಾ ಕುಮಾರ್ ಇದೇ ವೇಳೆ ಹೇಳಿದ್ದಾರೆ.

 

 

 

 

 

 

 

 

ಇದನ್ನು ಓದಿ: ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 30 ಲಕ್ಷ ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...