Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆ: ನಿರುದ್ಯೋಗ ಸಮಸ್ಯೆ ಬಗ್ಗೆ ಕೇಂದ್ರ, ಒಡಿಶಾ ಸರಕಾರಕ್ಕೆ ರಾಹುಲ್‌ ತರಾಟೆ

ಭಾರತ್ ಜೋಡೋ ನ್ಯಾಯ ಯಾತ್ರೆ: ನಿರುದ್ಯೋಗ ಸಮಸ್ಯೆ ಬಗ್ಗೆ ಕೇಂದ್ರ, ಒಡಿಶಾ ಸರಕಾರಕ್ಕೆ ರಾಹುಲ್‌ ತರಾಟೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಜಾರ್ಖಂಡ್ ಬಳಿಕ  ಒಡಿಶಾವನ್ನು ಪ್ರವೇಶಿಸಿದೆ. ಇಂದು ರೂರ್ಕೆಲಾದ ವೇದವ್ಯಾಸ್ ದೇವಸ್ಥಾನಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಈ ದೇವಾಲಯದ ಗುಹೆಯು ಋಷಿ ಮತ್ತು ಕವಿ ವೇದವ್ಯಾಸ್ ಅವರು ಮಹಾಭಾರತವನ್ನು ರಚಿಸಿದ ಸ್ಥಳವೆಂದು ಪರಿಗಣಿಸಲಾಗಿದೆ.

ಸುಂದರ್‌ಗಢ್ ಜಿಲ್ಲೆಯ ಸಣ್ಣ ಕೈಗಾರಿಕಾ ಪಟ್ಟಣವಾದ ಬೀರಮಿತ್ರಪುರದಲ್ಲಿ ಯಾತ್ರೆಗೆ ಭವ್ಯ ಸ್ವಾಗತ ನೀಡಲಾಗಿದೆ. ಈ ಸಂದರ್ಭದಲ್ಲಿ ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರು ಒಡಿಶಾ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟ್ನಾಯಕ್ ಅವರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. ಯಾತ್ರೆ ಪಟ್ಟಣ ಪ್ರವೇಶಿಸುವುದಕ್ಕೆ ಮೊದಲೇ ಬೀರಮಿತ್ರಪುರದಲ್ಲಿ ಬ್ಯಾನರ್‌ಗಳು, ಕಟೌಟ್‌ಗಳು ಮತ್ತು ರಾಹುಲ್ ಗಾಂಧಿಯವರ ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು.
ಒಡಿಶಾದಲ್ಲಿ ಬಿಜೆಪಿ ಮತ್ತು ಬಿಜೆಡಿ ಪಾಲುದಾರಿಕೆಯನ್ನು ಹೊಂದಿದೆ, ರಾಜ್ಯದ ಜನರ ಹಿತಾಸಕ್ತಿ ಕಾಪಾಡಲು ನಾವು ಬಿಜೆಪಿ ಮತ್ತು ಬಿಜೆಡಿಯನ್ನು ವಿರೋಧಿಸುತ್ತಿದ್ದೇವೆ. ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ಮತ್ತು ನರೇಂದ್ರ ಮೋದಿ ಪಾಲುದಾರಿ ಸರಕಾರವನ್ನು ಹೊಂದಿದ್ದಾರೆ. ಅವರಿಬ್ಬರೂ ಕೈ ಜೋಡಿಸಿ ಕೆಲಸ ಮಾಡುತ್ತಿದ್ದಾರೆ. ಬಿಜೆಡಿ ಬಿಜೆಪಿಯನ್ನು ಬೆಂಬಲಿಸುತ್ತದೆ ಎಂದು ನಾನು ಸಂಸತ್ತಿನಲ್ಲಿ ಕಂಡುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯಲು ನಾನು ಒಡಿಶಾಗೆ ಬಂದಿದ್ದೇನೆ. ರಾಜ್ಯದಿಂದ 30 ಲಕ್ಷ ಜನರು ಜೀವನೋಪಾಯಕ್ಕಾಗಿ ಇತರ ರಾಜ್ಯಗಳಿಗೆ ಕಾರ್ಮಿಕರಾಗಿ ವಲಸೆ ಹೋಗಿದ್ದಾರೆ ಎಂದು ಹೇಳಿದ್ದಾರೆ.

ಒಡಿಶಾದಲ್ಲಿ ಬುಡಕಟ್ಟು ಜನಾಂಗದ ಹೆಚ್ಚಿನ ಜನಸಂಖ್ಯೆ ಇದೆ. ದಲಿತರ ಜೊತೆಗೆ ಬುಡಕಟ್ಟು ಜನರನ್ನು ಕೂಡ ಸರ್ಕಾರವು ರಾಜ್ಯದಲ್ಲಿ ನಿರ್ಲಕ್ಷಿಸಿದೆ. ನಾನು 6-7 ಗಂಟೆಗಳ ಕಾಲ ನಿಮ್ಮ ‘ಮಾನ್ ಕಿ ಬಾತ್’ ಕೇಳಲು ಮತ್ತು 15 ನಿಮಿಷಗಳ ಕಾಲ ಸ್ವಲ್ಪ ಮಾತನಾಡಲು ಇಲ್ಲಿಗೆ ಬಂದಿದ್ದೇನೆ. ಕೈಗಾರಿಕೆಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಒಡಿಶಾದ ದೊಡ್ಡ ಸಮಸ್ಯೆ ನಿರುದ್ಯೋಗವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಖಿಲೇಶ್‌ ಯಾದವ್‌ ಹೇಳಿಕೆ: 

ಫೆಬ್ರವರಿ 16 ರಂದು ಉತ್ತರಪ್ರದೇಶಕ್ಕೆ ಪ್ರವೇಶಿಸಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಸೇರಲು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮಂಗಳವಾರ ಆಹ್ವಾನವನ್ನು ಸ್ವೀಕರಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಪ್ರದೇಶದಲ್ಲಿ ಯಾತ್ರೆಗೆ ಸೇರಲು ಅಖಿಲೇಶ್ ಯಾದವ್‌ಗೆ ನೀಡಿದ ಆಹ್ವಾನವನ್ನು ಸ್ವೀಕರಿಸುವ ಸಂದರ್ಭದಲ್ಲಿ ಅಖಿಲೇಶ್ ಕಾಂಗ್ರೆಸ್‌ಗೆ ಶುಭಾಶಯಗಳನ್ನು ಕೋರಿದ್ದಾರೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆ ಫೆಬ್ರವರಿ 16 ರಂದು ಉತ್ತರಪ್ರದೇಶದಲ್ಲಿ ಸಾಗಲಿದೆ. ಅಮೇಥಿ ಅಥವಾ ರಾಯ್ಬರೇಲಿಯಲ್ಲಿ ಯಾತ್ರೆಗೆ ಸೇರಲು ಅಖಿಲೇಶ್‌ ಯಾದವ್ ಒಪ್ಪಿಗೆ ನೀಡಿದ್ದಾರೆ ಎಂದು ಸಮಾಜವಾದಿ ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ.

ಜೈರಾಮ್‌ ರಮೇಶ್, ಕನ್ಹಯ್ಯಾ ಕುಮಾರ್ ಹೇಳಿಕೆ:

ಪ್ರಧಾನಿ ಮೋದಿ ಮೂರನೇ ಬಾರಿಗೆ ಬಂದರೆ, ನನ್ನ ಮಾತುಗಳನ್ನು ಗಮನದಲ್ಲಿಟ್ಟುಕೊಳ್ಳಿ, ರೂರ್ಕೆಲಾ (ಒಡಿಶಾದ  ನಗರ) ಕೂಡ ಮಾರಾಟ ಮಾಡುತ್ತಾರೆ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್ ಹೇಳಿದ್ದಾರೆ.

ಪ್ರಧಾನಿ ಮೋದಿ ಅಹಂಕಾರ ಆಚಾರ್ಯ, ಅವರನ್ನು ಪ್ರಶ್ನಿಸುವ ಧೈರ್ಯ ಯಾರಿಗೂ ಇಲ್ಲ. ಪ್ರಧಾನಿ ಮೋದಿ ನಮಗೆ ‘ಉದ್ಯೋಗ ನೀಡುವವರು’ ಎಂದು ಹೇಳುತ್ತಾರೆ. ಅವರು ಉದ್ಯೋಗ ಕಸಿದುಕೊಳ್ಳುವವರಾಗಿದ್ದಾರೆ.. ಮತ್ತೆ ಅವರು ಹೇಗೆ ಉದ್ಯೋಗ ನೀಡುವವರಾಗುತ್ತಾರೆ? ಮಾಧ್ಯಮಗಳು ಸ್ವತಂತ್ರವಾಗಿರಬೇಕು ಮತ್ತು ಮಾದ್ಯಮಗಳು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಭಾಗವಾಗಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ನಮ್ಮ ಯಾತ್ರೆಯು ಯುವ ನ್ಯಾಯ, ಸಹಭಾಗಿತ್ವ, ಮಹಿಳಾ ನ್ಯಾಯ, ರೈತರಿಗೆ ನ್ಯಾಯ ಮತ್ತು ಕಾರ್ಮಿಕರ ನ್ಯಾಯದ ಕುರಿತು ಮಾತನಾಡುತ್ತದೆ. ನಮ್ಮ ಯಾತ್ರೆಯು ಹಕ್ಕುಗಳಿಗಾಗಿ ಮತ್ತು ನ್ಯಾಯಕ್ಕಾಗಿದೆ ಎಂದು ಕನ್ಹಯ್ಯಾ ಕುಮಾರ್ ಇದೇ ವೇಳೆ ಹೇಳಿದ್ದಾರೆ.

 

 

 

 

 

 

 

 

ಇದನ್ನು ಓದಿ: ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 30 ಲಕ್ಷ ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...