Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆ: ನಿರುದ್ಯೋಗ ಸಮಸ್ಯೆ ಬಗ್ಗೆ ಕೇಂದ್ರ, ಒಡಿಶಾ ಸರಕಾರಕ್ಕೆ ರಾಹುಲ್‌ ತರಾಟೆ

ಭಾರತ್ ಜೋಡೋ ನ್ಯಾಯ ಯಾತ್ರೆ: ನಿರುದ್ಯೋಗ ಸಮಸ್ಯೆ ಬಗ್ಗೆ ಕೇಂದ್ರ, ಒಡಿಶಾ ಸರಕಾರಕ್ಕೆ ರಾಹುಲ್‌ ತರಾಟೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಜಾರ್ಖಂಡ್ ಬಳಿಕ  ಒಡಿಶಾವನ್ನು ಪ್ರವೇಶಿಸಿದೆ. ಇಂದು ರೂರ್ಕೆಲಾದ ವೇದವ್ಯಾಸ್ ದೇವಸ್ಥಾನಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಈ ದೇವಾಲಯದ ಗುಹೆಯು ಋಷಿ ಮತ್ತು ಕವಿ ವೇದವ್ಯಾಸ್ ಅವರು ಮಹಾಭಾರತವನ್ನು ರಚಿಸಿದ ಸ್ಥಳವೆಂದು ಪರಿಗಣಿಸಲಾಗಿದೆ.

ಸುಂದರ್‌ಗಢ್ ಜಿಲ್ಲೆಯ ಸಣ್ಣ ಕೈಗಾರಿಕಾ ಪಟ್ಟಣವಾದ ಬೀರಮಿತ್ರಪುರದಲ್ಲಿ ಯಾತ್ರೆಗೆ ಭವ್ಯ ಸ್ವಾಗತ ನೀಡಲಾಗಿದೆ. ಈ ಸಂದರ್ಭದಲ್ಲಿ ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರು ಒಡಿಶಾ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟ್ನಾಯಕ್ ಅವರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. ಯಾತ್ರೆ ಪಟ್ಟಣ ಪ್ರವೇಶಿಸುವುದಕ್ಕೆ ಮೊದಲೇ ಬೀರಮಿತ್ರಪುರದಲ್ಲಿ ಬ್ಯಾನರ್‌ಗಳು, ಕಟೌಟ್‌ಗಳು ಮತ್ತು ರಾಹುಲ್ ಗಾಂಧಿಯವರ ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು.
ಒಡಿಶಾದಲ್ಲಿ ಬಿಜೆಪಿ ಮತ್ತು ಬಿಜೆಡಿ ಪಾಲುದಾರಿಕೆಯನ್ನು ಹೊಂದಿದೆ, ರಾಜ್ಯದ ಜನರ ಹಿತಾಸಕ್ತಿ ಕಾಪಾಡಲು ನಾವು ಬಿಜೆಪಿ ಮತ್ತು ಬಿಜೆಡಿಯನ್ನು ವಿರೋಧಿಸುತ್ತಿದ್ದೇವೆ. ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ಮತ್ತು ನರೇಂದ್ರ ಮೋದಿ ಪಾಲುದಾರಿ ಸರಕಾರವನ್ನು ಹೊಂದಿದ್ದಾರೆ. ಅವರಿಬ್ಬರೂ ಕೈ ಜೋಡಿಸಿ ಕೆಲಸ ಮಾಡುತ್ತಿದ್ದಾರೆ. ಬಿಜೆಡಿ ಬಿಜೆಪಿಯನ್ನು ಬೆಂಬಲಿಸುತ್ತದೆ ಎಂದು ನಾನು ಸಂಸತ್ತಿನಲ್ಲಿ ಕಂಡುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯಲು ನಾನು ಒಡಿಶಾಗೆ ಬಂದಿದ್ದೇನೆ. ರಾಜ್ಯದಿಂದ 30 ಲಕ್ಷ ಜನರು ಜೀವನೋಪಾಯಕ್ಕಾಗಿ ಇತರ ರಾಜ್ಯಗಳಿಗೆ ಕಾರ್ಮಿಕರಾಗಿ ವಲಸೆ ಹೋಗಿದ್ದಾರೆ ಎಂದು ಹೇಳಿದ್ದಾರೆ.

ಒಡಿಶಾದಲ್ಲಿ ಬುಡಕಟ್ಟು ಜನಾಂಗದ ಹೆಚ್ಚಿನ ಜನಸಂಖ್ಯೆ ಇದೆ. ದಲಿತರ ಜೊತೆಗೆ ಬುಡಕಟ್ಟು ಜನರನ್ನು ಕೂಡ ಸರ್ಕಾರವು ರಾಜ್ಯದಲ್ಲಿ ನಿರ್ಲಕ್ಷಿಸಿದೆ. ನಾನು 6-7 ಗಂಟೆಗಳ ಕಾಲ ನಿಮ್ಮ ‘ಮಾನ್ ಕಿ ಬಾತ್’ ಕೇಳಲು ಮತ್ತು 15 ನಿಮಿಷಗಳ ಕಾಲ ಸ್ವಲ್ಪ ಮಾತನಾಡಲು ಇಲ್ಲಿಗೆ ಬಂದಿದ್ದೇನೆ. ಕೈಗಾರಿಕೆಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಒಡಿಶಾದ ದೊಡ್ಡ ಸಮಸ್ಯೆ ನಿರುದ್ಯೋಗವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಖಿಲೇಶ್‌ ಯಾದವ್‌ ಹೇಳಿಕೆ: 

ಫೆಬ್ರವರಿ 16 ರಂದು ಉತ್ತರಪ್ರದೇಶಕ್ಕೆ ಪ್ರವೇಶಿಸಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಸೇರಲು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮಂಗಳವಾರ ಆಹ್ವಾನವನ್ನು ಸ್ವೀಕರಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಪ್ರದೇಶದಲ್ಲಿ ಯಾತ್ರೆಗೆ ಸೇರಲು ಅಖಿಲೇಶ್ ಯಾದವ್‌ಗೆ ನೀಡಿದ ಆಹ್ವಾನವನ್ನು ಸ್ವೀಕರಿಸುವ ಸಂದರ್ಭದಲ್ಲಿ ಅಖಿಲೇಶ್ ಕಾಂಗ್ರೆಸ್‌ಗೆ ಶುಭಾಶಯಗಳನ್ನು ಕೋರಿದ್ದಾರೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆ ಫೆಬ್ರವರಿ 16 ರಂದು ಉತ್ತರಪ್ರದೇಶದಲ್ಲಿ ಸಾಗಲಿದೆ. ಅಮೇಥಿ ಅಥವಾ ರಾಯ್ಬರೇಲಿಯಲ್ಲಿ ಯಾತ್ರೆಗೆ ಸೇರಲು ಅಖಿಲೇಶ್‌ ಯಾದವ್ ಒಪ್ಪಿಗೆ ನೀಡಿದ್ದಾರೆ ಎಂದು ಸಮಾಜವಾದಿ ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ.

ಜೈರಾಮ್‌ ರಮೇಶ್, ಕನ್ಹಯ್ಯಾ ಕುಮಾರ್ ಹೇಳಿಕೆ:

ಪ್ರಧಾನಿ ಮೋದಿ ಮೂರನೇ ಬಾರಿಗೆ ಬಂದರೆ, ನನ್ನ ಮಾತುಗಳನ್ನು ಗಮನದಲ್ಲಿಟ್ಟುಕೊಳ್ಳಿ, ರೂರ್ಕೆಲಾ (ಒಡಿಶಾದ  ನಗರ) ಕೂಡ ಮಾರಾಟ ಮಾಡುತ್ತಾರೆ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್ ಹೇಳಿದ್ದಾರೆ.

ಪ್ರಧಾನಿ ಮೋದಿ ಅಹಂಕಾರ ಆಚಾರ್ಯ, ಅವರನ್ನು ಪ್ರಶ್ನಿಸುವ ಧೈರ್ಯ ಯಾರಿಗೂ ಇಲ್ಲ. ಪ್ರಧಾನಿ ಮೋದಿ ನಮಗೆ ‘ಉದ್ಯೋಗ ನೀಡುವವರು’ ಎಂದು ಹೇಳುತ್ತಾರೆ. ಅವರು ಉದ್ಯೋಗ ಕಸಿದುಕೊಳ್ಳುವವರಾಗಿದ್ದಾರೆ.. ಮತ್ತೆ ಅವರು ಹೇಗೆ ಉದ್ಯೋಗ ನೀಡುವವರಾಗುತ್ತಾರೆ? ಮಾಧ್ಯಮಗಳು ಸ್ವತಂತ್ರವಾಗಿರಬೇಕು ಮತ್ತು ಮಾದ್ಯಮಗಳು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಭಾಗವಾಗಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ನಮ್ಮ ಯಾತ್ರೆಯು ಯುವ ನ್ಯಾಯ, ಸಹಭಾಗಿತ್ವ, ಮಹಿಳಾ ನ್ಯಾಯ, ರೈತರಿಗೆ ನ್ಯಾಯ ಮತ್ತು ಕಾರ್ಮಿಕರ ನ್ಯಾಯದ ಕುರಿತು ಮಾತನಾಡುತ್ತದೆ. ನಮ್ಮ ಯಾತ್ರೆಯು ಹಕ್ಕುಗಳಿಗಾಗಿ ಮತ್ತು ನ್ಯಾಯಕ್ಕಾಗಿದೆ ಎಂದು ಕನ್ಹಯ್ಯಾ ಕುಮಾರ್ ಇದೇ ವೇಳೆ ಹೇಳಿದ್ದಾರೆ.

 

 

 

 

 

 

 

 

ಇದನ್ನು ಓದಿ: ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 30 ಲಕ್ಷ ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...