Homeಮುಖಪುಟಅಂಬಾನಿ, ಅದಾನಿಯಿಂದ ಟೆಂಪೋದಲ್ಲಿ ಹಣ ಬಂದಿರುವುದು ನಿಮ್ಮ ಸ್ವಂತ ಅನುಭವನಾ? ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ...

ಅಂಬಾನಿ, ಅದಾನಿಯಿಂದ ಟೆಂಪೋದಲ್ಲಿ ಹಣ ಬಂದಿರುವುದು ನಿಮ್ಮ ಸ್ವಂತ ಅನುಭವನಾ? ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ತಿರುಗೇಟು

- Advertisement -
- Advertisement -

ತೆಲಂಗಾಣದ ವೇಮುಲವಾಡದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿಯನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದರು. ಅದಕ್ಕೆ ರಾಹುಲ್ ಗಾಂಧಿ ವಿಡಿಯೋ ಮೂಲಕ ತಿರುಗೇಟು ನೀಡಿದ್ದು, ಭಾರೀ ವೈರಲ್ ಆಗಿದೆ.

“ಕಳೆದ 5 ವರ್ಷಗಳಿಂದ ರಾಹುಲ್ ಗಾಂಧಿ ಅಂಬಾನಿ-ಅದಾನಿ ಜಪ ಮಾಡುತ್ತಿದ್ದರು. ಆದರೆ, ಚುನಾವಣೆ ಘೋಷಣೆಯಾದ ಬಳಿಕ ಅಂಬಾನಿ-ಅದಾನಿಗೆ ಗುಂಡು ಹೊಡೆಯುವುದನ್ನು ನಿಲ್ಲಿಸಿದ್ದಾರೆ. ನಾನಿವತ್ತು ತೆಲಂಗಾಣದ ಮಣ್ಣಿನಿಂದ ಕೇಳುತ್ತಿದ್ದೇನೆ.. ಉತ್ತರ ಹೇಳಿ, ಈ ಚುನಾವಣೆಗೆ ಅಂಬಾನಿ-ಅದಾನಿಯಿಂದ ಎಷ್ಟು ಹಣ ಪಡೆದಿದ್ದೀರಿ? ಎಷ್ಟು ಕಪ್ಪು ಹಣ ಬಂದಿದೆ. ಅಂಬಾನಿ-ಅದಾನಿ ಟೆಂಪೋದಲ್ಲಿ ಹಣ ತುಂಬಿ ಕಳಿಸಿದ್ದಾರಾ? ಯಾಕೆ ಮೌನವಾಗಿದ್ದೀರಾ?” ಎಂದು ಮೋದಿ ಭಾಷಣದಲ್ಲಿ ಪ್ರಶ್ನಿಸಿದ್ದರು.

ಇದಕ್ಕೆ ವಿಡಿಯೋ ಹೇಳಿಕೆಯ ಮೂಲಕ ಉತ್ತರ ನೀಡಿರುವ ರಾಹುಲ್ ಗಾಂಧಿ, “ನಮಸ್ಕಾರ ಮೋದಿಯವರೇ ಏನು ಭಯಗೊಂಡಿದ್ದೀರಾ? ಸಾಮಾನ್ಯವಾಗಿ ನೀವು ಮುಚ್ಚಿದ ಕೋಣೆಯಲ್ಲಿ ಅಂಬಾನಿ-ಅದಾನಿ ಬಗ್ಗೆ ಮಾತನಾಡುತ್ತಿದ್ದಿರಿ. ಆದರೆ, ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದೀರಿ. ಅವರು ಟೆಂಪೋದಲ್ಲಿ ಹಣ ಕಳಿಸ್ತಾರೆ ಎಂದು ನಿಮಗೆ ಗೊತ್ತು. ಇದು ನಿಮ್ಮ ಸ್ವಂತ ಅನುಭವದಿಂದ ಬಂದಿದ್ದೇ?” ಎಂದು ಪ್ರಶ್ನಿಸಿದ್ದಾರೆ.

“ಒಂದು ಕೆಲಸ ಮಾಡಿ, ಇದನ್ನು ಸಿಬಿಐ, ಇಡಿಗೆ ಕೊಡಿ. ಸಂಪೂರ್ಣ ತನಿಖೆ ನಡೆಸಿ. ಆದಷ್ಟು ಬೇಗ ಈ ಕೆಲಸ ಮಾಡಿಸಿ, ಹೆದರಬೇಡಿ. ನಾನು ಮತ್ತೊಮ್ಮೆ ಹೇಳುತ್ತೇನೆ, ಮೋದಿಯವರು ಅಂಬಾನಿ-ಅದಾನಿಗೆ ಎಷ್ಟು ಹಣ ಕೊಟ್ಟಿದ್ದಾರೋ, ಅಷ್ಟೇ ಹಣವನ್ನು ನಾವು ಭಾರತದ ಬಡಜನರಿಗೆ ನೀಡುತ್ತೇವೆ. ಮಹಾಲಕ್ಷಿ ಯೋಜನೆ, ಉದ್ಯೋಗ ಯೋಜನೆಗಳ ಮೂಲಕ ಕೋಟ್ಯಾಂತರ ಲಕ್ಷಾದಿಪತಿಗಳನ್ನು ಸೃಷ್ಟಿಸುತ್ತೇವೆ. ಮೋದಿಯವರು 22 ಜನರನ್ನು ಕೋಟ್ಯಾಧಿಪತಿ ಮಾಡಿದ್ದಾರೆ. ಆದರೆ, ನಾವು ಕೋಟ್ಯಾಂತರ ಜನರನ್ನು ಲಕ್ಷಾಧಿಪತಿ ಮಾಡಲಿದ್ದೇವೆ” ಎಂದು ರಾಹುಲ್‌ ಗಾಂಧಿ ಪ್ರಧಾನಿಗೆ ತಿರುಗೇಟು ನೀಡಿದ್ದಾರೆ.

ರಾಹುಲ್ ಗಾಂಧಿಯ ಈ ವಿಡಿಯೋವನ್ನು ಸಾವಿರಾರು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ರಾಹುಲ್ ಗಾಂಧಿಯ ಅಧಿಕೃತ ಎಕ್ಸ್‌ ಖಾತೆಯಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋ 3.7 ಮಿಲಿಯನ್‌ಗೂ ಅಧಿಕ ಜನರಿಗೆ ತಲುಪಿದೆ.

ಇದನ್ನೂ ಓದಿ : ‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...