Homeಮುಖಪುಟಅಂಬಾನಿ, ಅದಾನಿಯಿಂದ ಟೆಂಪೋದಲ್ಲಿ ಹಣ ಬಂದಿರುವುದು ನಿಮ್ಮ ಸ್ವಂತ ಅನುಭವನಾ? ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ...

ಅಂಬಾನಿ, ಅದಾನಿಯಿಂದ ಟೆಂಪೋದಲ್ಲಿ ಹಣ ಬಂದಿರುವುದು ನಿಮ್ಮ ಸ್ವಂತ ಅನುಭವನಾ? ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ತಿರುಗೇಟು

- Advertisement -
- Advertisement -

ತೆಲಂಗಾಣದ ವೇಮುಲವಾಡದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿಯನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದರು. ಅದಕ್ಕೆ ರಾಹುಲ್ ಗಾಂಧಿ ವಿಡಿಯೋ ಮೂಲಕ ತಿರುಗೇಟು ನೀಡಿದ್ದು, ಭಾರೀ ವೈರಲ್ ಆಗಿದೆ.

“ಕಳೆದ 5 ವರ್ಷಗಳಿಂದ ರಾಹುಲ್ ಗಾಂಧಿ ಅಂಬಾನಿ-ಅದಾನಿ ಜಪ ಮಾಡುತ್ತಿದ್ದರು. ಆದರೆ, ಚುನಾವಣೆ ಘೋಷಣೆಯಾದ ಬಳಿಕ ಅಂಬಾನಿ-ಅದಾನಿಗೆ ಗುಂಡು ಹೊಡೆಯುವುದನ್ನು ನಿಲ್ಲಿಸಿದ್ದಾರೆ. ನಾನಿವತ್ತು ತೆಲಂಗಾಣದ ಮಣ್ಣಿನಿಂದ ಕೇಳುತ್ತಿದ್ದೇನೆ.. ಉತ್ತರ ಹೇಳಿ, ಈ ಚುನಾವಣೆಗೆ ಅಂಬಾನಿ-ಅದಾನಿಯಿಂದ ಎಷ್ಟು ಹಣ ಪಡೆದಿದ್ದೀರಿ? ಎಷ್ಟು ಕಪ್ಪು ಹಣ ಬಂದಿದೆ. ಅಂಬಾನಿ-ಅದಾನಿ ಟೆಂಪೋದಲ್ಲಿ ಹಣ ತುಂಬಿ ಕಳಿಸಿದ್ದಾರಾ? ಯಾಕೆ ಮೌನವಾಗಿದ್ದೀರಾ?” ಎಂದು ಮೋದಿ ಭಾಷಣದಲ್ಲಿ ಪ್ರಶ್ನಿಸಿದ್ದರು.

ಇದಕ್ಕೆ ವಿಡಿಯೋ ಹೇಳಿಕೆಯ ಮೂಲಕ ಉತ್ತರ ನೀಡಿರುವ ರಾಹುಲ್ ಗಾಂಧಿ, “ನಮಸ್ಕಾರ ಮೋದಿಯವರೇ ಏನು ಭಯಗೊಂಡಿದ್ದೀರಾ? ಸಾಮಾನ್ಯವಾಗಿ ನೀವು ಮುಚ್ಚಿದ ಕೋಣೆಯಲ್ಲಿ ಅಂಬಾನಿ-ಅದಾನಿ ಬಗ್ಗೆ ಮಾತನಾಡುತ್ತಿದ್ದಿರಿ. ಆದರೆ, ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದೀರಿ. ಅವರು ಟೆಂಪೋದಲ್ಲಿ ಹಣ ಕಳಿಸ್ತಾರೆ ಎಂದು ನಿಮಗೆ ಗೊತ್ತು. ಇದು ನಿಮ್ಮ ಸ್ವಂತ ಅನುಭವದಿಂದ ಬಂದಿದ್ದೇ?” ಎಂದು ಪ್ರಶ್ನಿಸಿದ್ದಾರೆ.

“ಒಂದು ಕೆಲಸ ಮಾಡಿ, ಇದನ್ನು ಸಿಬಿಐ, ಇಡಿಗೆ ಕೊಡಿ. ಸಂಪೂರ್ಣ ತನಿಖೆ ನಡೆಸಿ. ಆದಷ್ಟು ಬೇಗ ಈ ಕೆಲಸ ಮಾಡಿಸಿ, ಹೆದರಬೇಡಿ. ನಾನು ಮತ್ತೊಮ್ಮೆ ಹೇಳುತ್ತೇನೆ, ಮೋದಿಯವರು ಅಂಬಾನಿ-ಅದಾನಿಗೆ ಎಷ್ಟು ಹಣ ಕೊಟ್ಟಿದ್ದಾರೋ, ಅಷ್ಟೇ ಹಣವನ್ನು ನಾವು ಭಾರತದ ಬಡಜನರಿಗೆ ನೀಡುತ್ತೇವೆ. ಮಹಾಲಕ್ಷಿ ಯೋಜನೆ, ಉದ್ಯೋಗ ಯೋಜನೆಗಳ ಮೂಲಕ ಕೋಟ್ಯಾಂತರ ಲಕ್ಷಾದಿಪತಿಗಳನ್ನು ಸೃಷ್ಟಿಸುತ್ತೇವೆ. ಮೋದಿಯವರು 22 ಜನರನ್ನು ಕೋಟ್ಯಾಧಿಪತಿ ಮಾಡಿದ್ದಾರೆ. ಆದರೆ, ನಾವು ಕೋಟ್ಯಾಂತರ ಜನರನ್ನು ಲಕ್ಷಾಧಿಪತಿ ಮಾಡಲಿದ್ದೇವೆ” ಎಂದು ರಾಹುಲ್‌ ಗಾಂಧಿ ಪ್ರಧಾನಿಗೆ ತಿರುಗೇಟು ನೀಡಿದ್ದಾರೆ.

ರಾಹುಲ್ ಗಾಂಧಿಯ ಈ ವಿಡಿಯೋವನ್ನು ಸಾವಿರಾರು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ರಾಹುಲ್ ಗಾಂಧಿಯ ಅಧಿಕೃತ ಎಕ್ಸ್‌ ಖಾತೆಯಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋ 3.7 ಮಿಲಿಯನ್‌ಗೂ ಅಧಿಕ ಜನರಿಗೆ ತಲುಪಿದೆ.

ಇದನ್ನೂ ಓದಿ : ‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...