Homeಮುಖಪುಟ‘ರಾಹುಲ್ ಗಾಂಧಿಯ ಸಮಸ್ಯೆಯೇನೆಂದರೆ...!’: ಪ್ರಶಾಂತ್ ಕಿಶೋರ್ ಖಾಸಗಿ ಮಾತು ವೈರಲ್

‘ರಾಹುಲ್ ಗಾಂಧಿಯ ಸಮಸ್ಯೆಯೇನೆಂದರೆ…!’: ಪ್ರಶಾಂತ್ ಕಿಶೋರ್ ಖಾಸಗಿ ಮಾತು ವೈರಲ್

- Advertisement -
- Advertisement -

ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಪ್ರಸ್ತುತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪರ ಲಾಬಿ ನಡೆಸುತ್ತಿರುವ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಬಿಜೆಪಿ ಭಾರತೀಯ ರಾಜಕೀಯದ ಕೇಂದ್ರಬಿಂದುವಾಗಿ ಉಳಿಯುತ್ತದೆ ಮತ್ತು “ಮುಂದಿನ ಹಲವು ದಶಕಗಳವರೆಗೆ” ಎಲ್ಲಿಯೂ ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಜನರು ತಕ್ಷಣ ಬಿಜೆಪಿಯನ್ನು ಕಿತ್ತೊಗೆಯುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: 30 ಲಕ್ಷ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ ನೀಡಿದ ಬಿಜೆಪಿ 

ಪ್ರಶಾಂತ್‌ ಕಿಶೋರ್ ಗೋವಾದಲ್ಲಿ ಖಾಸಗಿ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ವಿಡಿಯೋ ಕ್ಲಿಪ್ ವೈರಲ್ ಆಗಿದೆ. ಈ ವಿಡಿಯೋ ಗೋವಾದಲ್ಲಿ ಬುಧವಾರ ನಡೆದ ಖಾಸಗಿ ಸಭೆಯ ವೀಡಿಯೊ ಎಂದು ಅವರ ನೇತೃತ್ವದ ಗುಂಪಾದ ಐ-ಪ್ಯಾಕ್‌‌ ಹಿರಿಯ ನಾಯಕರೊಬ್ಬರು ಖಚಿತಪಡಿಸಿದ್ದಾರೆ.

ವೀಡಿಯೋದಲ್ಲಿ, ಕಿಶೋರ್, “ಬಿಜೆಪಿ ಭಾರತದ ರಾಜಕೀಯದ ಕೇಂದ್ರವಾಗಲಿದೆ, ಅವರು ಗೆದ್ದರೂ, ಸೋತರೂ, ಕಾಂಗ್ರೆಸ್ಸಿಗೆ ಮೊದಲ 40 ವರ್ಷಗಳಂತೆ ಬಿಜೆಪಿ ಎಲ್ಲಿಯೂ ಹೋಗುವುದಿಲ್ಲ” ಎಂದು ಹೇಳುವುದು ಕೇಳಿಬರುತ್ತಿದೆ.

“ಒಮ್ಮೆ ನೀವು ಭಾರತೀಯ ಮಟ್ಟದಲ್ಲಿ 30% ದಷ್ಟು ಮತಗಳನ್ನು ಪಡೆದುಕೊಂಡರೆ, ಅಷ್ಟು ಬೇಗ ರಾಜಕೀಯ ವಲಯದಿಂದ ದೂರ ಹೋಗಲು ಆಗುವುದಿಲ್ಲ. ಆದ್ದರಿಂದ, ಜನರು ಕೋಪಗೊಳ್ಳುತ್ತಾರೆ ಮತ್ತು ಅವರು ಪ್ರಧಾನಿ ಮೋದಿಯನ್ನು ಕಿತ್ತೊಗೆಯುತ್ತಾರೆ ಎಂಬ ಟ್ರಾಪ್‌ಗೆ ಬೀಳದಿರಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಮೂರು ವಾರಗಳ ಬಳಿಕ ಆರ್ಯನ್‌ ಖಾನ್‌ಗೆ ಜಾಮೀನು ಮಂಜೂರು

“ಬಹುಶಃ, ಜನರು ಮೋದಿಯನ್ನು ಕಿತ್ತೊಗೆದರೂ, ಬಿಜೆಪಿ ಎಲ್ಲಿಯೂ ಹೋಗುತ್ತಿಲ್ಲ. ಅವರು ಇಲ್ಲಿಯೆ ಇರುತ್ತಾರೆ, ಮುಂದಿನ ಹಲವು ದಶಕಗಳವರೆಗೆ ನೀವು ಅವರ ವಿರುದ್ಧ ಹೋರಾಡಬೇಕು. ಬಿಜೆಪಿ ಅಷ್ಟು ಬೇಗ ಹೋಗುವುದಿಲ್ಲ. ರಾಹುಲ್‌ ಗಾಂಧಿಗೆ ಸಮಸ್ಯೆ ಇರುವುದು ಇಲ್ಲಿಯೆ. ಬಹುಶಃ, ಜನರು ಮೋದಿಯನ್ನು ದೂರವಿಡುತ್ತಾರೆ ಎಂದು ಅವರು ಭಾವಿಸುತ್ತಾರೆ. ಅದು ಆಗುತ್ತಿಲ್ಲ” ಎಂದು ಪ್ರಶಾಂಶ್‌ ಕಿಶೋರ್‌ ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ನಡೆದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಮತ್ತು ಡಿಎಂಕೆಗೆ ಚುನಾವಣಾ ಕಾರ್ಯತಂತ್ರಗಳನ್ನು ರೂಪಿಸಲು ಕಿಶೋರ್ ಸಹಾಯ ಮಾಡಿದ್ದರು. ಆ ರಾಜ್ಯಗಳಲ್ಲಿ ಈ ಪಕ್ಷಗಳು ಜಯಭೇರಿ ಬಾರಿಸಿದ್ದವು.

ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಟಿಎಂಸಿ ಘೋಷಿಸಿದೆ. ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಇಂದು ಸಂಜೆಯಿಂದ ಗೋವಾಕ್ಕೆ ಮೂರು ದಿನಗಳ ಭೇಟಿಯನ್ನು ಆರಂಭಿಸಲಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್‌, ಬಿಜೆಪಿಯಲ್ಲಿ ಭಾರೀ ಭ್ರಷ್ಟಾಚಾರ: ಮೇಘಾಲಯ ರಾಜ್ಯಪಾಲರ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...