Homeಮುಖಪುಟ‘ರಾಹುಲ್ ಗಾಂಧಿಯ ಸಮಸ್ಯೆಯೇನೆಂದರೆ...!’: ಪ್ರಶಾಂತ್ ಕಿಶೋರ್ ಖಾಸಗಿ ಮಾತು ವೈರಲ್

‘ರಾಹುಲ್ ಗಾಂಧಿಯ ಸಮಸ್ಯೆಯೇನೆಂದರೆ…!’: ಪ್ರಶಾಂತ್ ಕಿಶೋರ್ ಖಾಸಗಿ ಮಾತು ವೈರಲ್

- Advertisement -
- Advertisement -

ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಪ್ರಸ್ತುತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪರ ಲಾಬಿ ನಡೆಸುತ್ತಿರುವ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಬಿಜೆಪಿ ಭಾರತೀಯ ರಾಜಕೀಯದ ಕೇಂದ್ರಬಿಂದುವಾಗಿ ಉಳಿಯುತ್ತದೆ ಮತ್ತು “ಮುಂದಿನ ಹಲವು ದಶಕಗಳವರೆಗೆ” ಎಲ್ಲಿಯೂ ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಜನರು ತಕ್ಷಣ ಬಿಜೆಪಿಯನ್ನು ಕಿತ್ತೊಗೆಯುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: 30 ಲಕ್ಷ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ ನೀಡಿದ ಬಿಜೆಪಿ 

ಪ್ರಶಾಂತ್‌ ಕಿಶೋರ್ ಗೋವಾದಲ್ಲಿ ಖಾಸಗಿ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ವಿಡಿಯೋ ಕ್ಲಿಪ್ ವೈರಲ್ ಆಗಿದೆ. ಈ ವಿಡಿಯೋ ಗೋವಾದಲ್ಲಿ ಬುಧವಾರ ನಡೆದ ಖಾಸಗಿ ಸಭೆಯ ವೀಡಿಯೊ ಎಂದು ಅವರ ನೇತೃತ್ವದ ಗುಂಪಾದ ಐ-ಪ್ಯಾಕ್‌‌ ಹಿರಿಯ ನಾಯಕರೊಬ್ಬರು ಖಚಿತಪಡಿಸಿದ್ದಾರೆ.

ವೀಡಿಯೋದಲ್ಲಿ, ಕಿಶೋರ್, “ಬಿಜೆಪಿ ಭಾರತದ ರಾಜಕೀಯದ ಕೇಂದ್ರವಾಗಲಿದೆ, ಅವರು ಗೆದ್ದರೂ, ಸೋತರೂ, ಕಾಂಗ್ರೆಸ್ಸಿಗೆ ಮೊದಲ 40 ವರ್ಷಗಳಂತೆ ಬಿಜೆಪಿ ಎಲ್ಲಿಯೂ ಹೋಗುವುದಿಲ್ಲ” ಎಂದು ಹೇಳುವುದು ಕೇಳಿಬರುತ್ತಿದೆ.

“ಒಮ್ಮೆ ನೀವು ಭಾರತೀಯ ಮಟ್ಟದಲ್ಲಿ 30% ದಷ್ಟು ಮತಗಳನ್ನು ಪಡೆದುಕೊಂಡರೆ, ಅಷ್ಟು ಬೇಗ ರಾಜಕೀಯ ವಲಯದಿಂದ ದೂರ ಹೋಗಲು ಆಗುವುದಿಲ್ಲ. ಆದ್ದರಿಂದ, ಜನರು ಕೋಪಗೊಳ್ಳುತ್ತಾರೆ ಮತ್ತು ಅವರು ಪ್ರಧಾನಿ ಮೋದಿಯನ್ನು ಕಿತ್ತೊಗೆಯುತ್ತಾರೆ ಎಂಬ ಟ್ರಾಪ್‌ಗೆ ಬೀಳದಿರಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಮೂರು ವಾರಗಳ ಬಳಿಕ ಆರ್ಯನ್‌ ಖಾನ್‌ಗೆ ಜಾಮೀನು ಮಂಜೂರು

“ಬಹುಶಃ, ಜನರು ಮೋದಿಯನ್ನು ಕಿತ್ತೊಗೆದರೂ, ಬಿಜೆಪಿ ಎಲ್ಲಿಯೂ ಹೋಗುತ್ತಿಲ್ಲ. ಅವರು ಇಲ್ಲಿಯೆ ಇರುತ್ತಾರೆ, ಮುಂದಿನ ಹಲವು ದಶಕಗಳವರೆಗೆ ನೀವು ಅವರ ವಿರುದ್ಧ ಹೋರಾಡಬೇಕು. ಬಿಜೆಪಿ ಅಷ್ಟು ಬೇಗ ಹೋಗುವುದಿಲ್ಲ. ರಾಹುಲ್‌ ಗಾಂಧಿಗೆ ಸಮಸ್ಯೆ ಇರುವುದು ಇಲ್ಲಿಯೆ. ಬಹುಶಃ, ಜನರು ಮೋದಿಯನ್ನು ದೂರವಿಡುತ್ತಾರೆ ಎಂದು ಅವರು ಭಾವಿಸುತ್ತಾರೆ. ಅದು ಆಗುತ್ತಿಲ್ಲ” ಎಂದು ಪ್ರಶಾಂಶ್‌ ಕಿಶೋರ್‌ ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ನಡೆದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಮತ್ತು ಡಿಎಂಕೆಗೆ ಚುನಾವಣಾ ಕಾರ್ಯತಂತ್ರಗಳನ್ನು ರೂಪಿಸಲು ಕಿಶೋರ್ ಸಹಾಯ ಮಾಡಿದ್ದರು. ಆ ರಾಜ್ಯಗಳಲ್ಲಿ ಈ ಪಕ್ಷಗಳು ಜಯಭೇರಿ ಬಾರಿಸಿದ್ದವು.

ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಟಿಎಂಸಿ ಘೋಷಿಸಿದೆ. ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಇಂದು ಸಂಜೆಯಿಂದ ಗೋವಾಕ್ಕೆ ಮೂರು ದಿನಗಳ ಭೇಟಿಯನ್ನು ಆರಂಭಿಸಲಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್‌, ಬಿಜೆಪಿಯಲ್ಲಿ ಭಾರೀ ಭ್ರಷ್ಟಾಚಾರ: ಮೇಘಾಲಯ ರಾಜ್ಯಪಾಲರ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...