Homeಮುಖಪುಟಲೋಕಸಭೆ ದಾಖಲೆಯಿಂದ 'ಭಾರತ ಮಾತೆ' ಗೆ ಸಂಬಂಧಿಸಿದ ರಾಹುಲ್ ಗಾಂಧಿ ಟೀಕೆ ಕಡಿತ

ಲೋಕಸಭೆ ದಾಖಲೆಯಿಂದ ‘ಭಾರತ ಮಾತೆ’ ಗೆ ಸಂಬಂಧಿಸಿದ ರಾಹುಲ್ ಗಾಂಧಿ ಟೀಕೆ ಕಡಿತ

- Advertisement -
- Advertisement -

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ನರೇಂದ್ರ ಮೋದಿ ಸರ್ಕಾರದ ಕ್ರಮಗಳನ್ನು ಟೀಕಿಸುವ ಭಾಷಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರು ”ಭಾರತ ಮಾತೆ” ಗೆ ಸಂಬಂಧಿಸಿದ ಟೀಕೆಗಳನ್ನು ಲೋಕಸಭೆಯ ದಾಖಲೆಗಳಿಂದ ಬುಧವಾರ ತೆಗೆದುಹಾಕಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವಯನಾಡ್ ಸಂಸದರಾಗಿ ಮರುಸೇರ್ಪಡೆಯಾದ ನಂತರ ಕೆಳಮನೆಯಲ್ಲಿ ಮಾಡಿದ ಮೊದಲ ಭಾಷಣದಲ್ಲಿ ಕಾಂಗ್ರೆಸ್ ನಾಯಕರು ಕೇಂದ್ರವನ್ನು ಕಟು ಶಬ್ಧಗಳಿಂದ ಟೀಕಿಸಿದ್ದಾರೆ. ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಅವರ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ಮೂರು ದಿನಗಳ ನಂತರ ಅವರನ್ನು ಮರುಸೇರ್ಪಡೆ ಮಾಡಲಾಗಿದೆ.

ಮಣಿಪುರ ವಿಚಾರವಾಗಿ ಲೋಕಸಭೆಯಲ್ಲಿ ರಾಹುಲ್ ಮಾತನಾಡಿದ್ದು, ”ಕೆಲವು ದಿನಗಳ ಹಿಂದೆಯಷ್ಟೇ ನಾನು ಮಣಿಪುರಕ್ಕೆ ಭೇಟಿ ನೀಡಿದ್ದೇನೆ ಆದರೆ, ಪುಧಾನಿ ಮೋದಿ ಇದುವರೆಗೆ ಅಲ್ಲಿಗೆ ಹೋಗಿಲ್ಲ. ಅವರು ಮಣಿಪುರವನ್ನು ದೇಶದ ಭಾಗವೆಂದು ಪರಿಗಣಿಸಿಲ್ಲ. ನಾನು ಮಣಿಪುರ ಎಂಬ ಪದವನ್ನು ಬಳಕೆ ಮಾಡಿದ್ದೇನೆ. ಅದರೆ ನಿಜಾಂಶವೆಂದರೆ ಮಣಿಪುರ ಅಸ್ತಿತ್ವದಲ್ಲಿಲ್ಲ. ಬಿಜೆಪಿ ಸರ್ಕಾರ ಮಣಿಪುರವನ್ನು ಇಬ್ಬಾಗ ಮಾಡಿದೆ. ಮಣಿಪುರವನ್ನು ಒಡೆಯಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

”ಮಣಿಪುರದಲ್ಲಿ ಭಾರತಮಾತೆಯ ಕೊಲೆಯಾಗಿದೆ. ಬಿಜೆಪಿಯವರ ರಾಜಕೀಯ ಮಣಿಪುರವನ್ನು ಮಾತ್ರವಲ್ಲ ಹಿಂದೂಸ್ತಾನವನ್ನು ಕೊಲೆ ಮಾಡಿದೆ. ಮಣಿಪುರದಲ್ಲಿ ಜನರನ್ನು ಹೊಂದಿರುವ ನೀವು ಭಾರತ ಮಾತೆಯನ್ನೂ ಕೊಂದಿದಿರಿ, ನೀವು ದೇಶಭಕ್ತರಲ್ಲ, ದೇಶದ್ರೋಹಿಗಳು” ಎಂದು ಬಿಜೆಪಿಗರ ವಿರುದ್ಧ ರಾಹುಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿಯವರ ಭಾಷಣದ ಈ ಭಾಗಗಳನ್ನು ದಾಖಲೆಯಿಂದ ಕಡಿತ ಮಾಡಿದ ನಂತರ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಈ ನಿರ್ಧಾರವನ್ನು “ಘೋರ ಅನ್ಯಾಯ” ಎಂದು ಬಣ್ಣಿಸಿದರು ಮತ್ತು ಸರ್ಕಾರವು ಸಂಸತ್ತನ್ನು ಅವಮಾನಿಸುತ್ತಿದೆ ಎಂದು ಆರೋಪಿಸಿದರು.

ಚೌಧರಿ ಅವರು ಗುರುವಾರ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಲಿದ್ದು, ತೆಗೆದುಹಾಕಲಾದ ಟೀಕೆಗಳನ್ನು ಕಡತಕ್ಕೆ ಮತ್ತೆ ಸೇರಿಸಬೇಕು ಎಂದು ಕೇಳಿಕೊಳ್ಳಲಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮೇ 3 ರಂದು ಹಿಂಸಾಚಾರ ಭುಗಿಲೆದ್ದ ನಂತರ ಈಶಾನ್ಯ ರಾಜ್ಯದಲ್ಲಿ ಕನಿಷ್ಠ 187 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 60,000 ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರು ಭಾರತ ಮಾತೆಯ ರಕ್ಷಕರಲ್ಲ, ಹಂತಕರು: ರಾಹುಲ್ ವಾಗ್ದಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read