Homeಮುಖಪುಟರಾಹುಲ್ ಗಾಂಧಿ V/s ಹಿಮಂತ್ ಬಿಸ್ವಾ: ಉಭಯ ಪಕ್ಷಗಳಿಂದ ನೂರಾರು ಪ್ರಕರಣ ದಾಖಲು

ರಾಹುಲ್ ಗಾಂಧಿ V/s ಹಿಮಂತ್ ಬಿಸ್ವಾ: ಉಭಯ ಪಕ್ಷಗಳಿಂದ ನೂರಾರು ಪ್ರಕರಣ ದಾಖಲು

- Advertisement -
- Advertisement -

ಕಳೆದ ವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ “ಸ್ಪಿರಿಟ್ ಆಫ್ ಇಂಡಿಯಾ” ಟ್ವೀಟ್ ಕುರಿತು ಅಸ್ಸಾಂ ಬಿಜೆಪಿ ಮತ್ತು ಅದರ ವಿವಿಧ ಸಂಘಟನೆಗಳು ಸೋಮವಾರ ಒಂದು ಸಾವಿರ ಪೊಲೀಸ್ ದೂರುಗಳನ್ನು ದಾಖಲಿಸಿವೆ.

ವಯನಾಡ್ ಸಂಸದ ರಾಹುಲ್ ಗಾಂಧಿ ಅವರನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ “ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮಗ ಎಂಬುದಕ್ಕೆ ಬಿಜೆಪಿ ಎಂದಾದರೂ ಪುರಾವೆ ಕೇಳಿದೆಯೇ..?” ಎಂದು ಅಸಂವಿಧಾನಿಕವಾಗಿ ನಿಂದಿಸಿದ್ದರು. ಇದರ  ವಿರುದ್ಧ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ಪ್ರತಿಭಟನೆಯನ್ನು ಆರಂಭಿಸಿತ್ತು.

ಜೊತೆಗೆ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ಮತ್ತು ಯುವ ಘಟಕಗಳು ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ವಿರುದ್ಧ ವಿವಿಧ ರಾಜ್ಯಗಳಲ್ಲಿ ಹಲವಾರು ಎಫ್‌ಐಆರ್‌ಗಳನ್ನು ದಾಖಲಿಸಿವೆ.

ರಾಹುಲ್ ಟ್ವೀಟ್‌ನಲ್ಲಿ ಯಾವುದೇ ಈಶಾನ್ಯ ರಾಜ್ಯಗಳನ್ನು ಉಲ್ಲೇಖಿಸದೆ, ದೇಶದ ಇತರ ಭಾಗಗಳಿಂದ ಪ್ರತ್ಯೇಕಿಸಿ ಅಸಾಮರಸ್ಯವನ್ನು ಹರಡುತ್ತಿದ್ದಾರೆ ಎಂದು ಬಿಜೆಪಿ ಸದಸ್ಯರು ಆರೋಪಿಸಿದ್ದಾರೆ.

ಇದನ್ನೂ ಓದಿ: ಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

 

“ನಮ್ಮ ಒಕ್ಕೂಟದಲ್ಲಿ ಶಕ್ತಿ ಇದೆ. ನಮ್ಮ ಸಂಸ್ಕೃತಿಗಳ ಒಕ್ಕೂಟ. ನಮ್ಮ ವೈವಿಧ್ಯತೆಯ ಒಕ್ಕೂಟ. ನಮ್ಮ ಭಾಷೆಗಳ ಒಕ್ಕೂಟ. ನಮ್ಮ ಜನರ ಒಕ್ಕೂಟ. ನಮ್ಮ ರಾಜ್ಯಗಳ ಒಕ್ಕೂಟ. ಕಾಶ್ಮೀರದಿಂದ ಕೇರಳದವರೆಗೆ. ಗುಜರಾತ್‌ನಿಂದ ಪಶ್ಚಿಮ ಬಂಗಾಳಕ್ಕೆ. ಭಾರತವು ತನ್ನ ಎಲ್ಲಾ ಬಣ್ಣಗಳಲ್ಲಿ ಸುಂದರವಾಗಿದೆ. ಭಾರತದ ಚೈತನ್ಯವನ್ನು ಅವಮಾನಿಸಬೇಡಿ” ಎಂದು ಫೆಬ್ರವರಿ 10 ರಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.

ರಾಹುಲ್ ಗಾಂಧಿಯವರ ಟ್ವೀಟ್ ರಾಜ್ಯದ ವಿರುದ್ಧ ಸಮರ ಸಾರಿದೆ ಎಂದು ಬಿಜೆಪಿ ದೂರಿದೆ. ಅವರು ದೇಶದ ಪ್ರಾದೇಶಿಕ ಗಡಿಯಲ್ಲಿ ಚೀನಾದ ಅಜೆಂಡಾಕ್ಕೆ ಸೇರಿದ್ದಾರೆ. ತಮ್ಮ ಟ್ವೀಟ್‌ನಲ್ಲಿ ಭಾರತವನ್ನು ವಿವರಿಸುವಾಗ ಈಶಾನ್ಯ ಪ್ರದೇಶವನ್ನು ಹೊರಗಿಟ್ಟಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

“ಕಾಶ್ಮೀರದಿಂದ ಕೇರಳದವರೆಗೆ ಮತ್ತು ಗುಜರಾತ್‌ನಿಂದ ಪಶ್ಚಿಮ ಬಂಗಾಳದವರೆಗೆ ಭಾರತ ವ್ಯಾಪಿಸಿದೆ ಎಂದು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ. ಆ ಮೂಲಕ ಭಾರತದಿಂದ ಈಶಾನ್ಯ ರಾಜ್ಯಗಳನ್ನು ತೆಗೆದಿದ್ದಾರೆ. ಇದು ಭಾರತದ ಭೌಗೋಳಿಕ ಸಮಗ್ರತೆ ಮತ್ತು ಭದ್ರತೆಗೆ ಅಪಾಯವನ್ನುಂಟುಮಾಡುತ್ತದೆ” ಎಂದು ಅಸ್ಸಾಂ ಭಾರತೀಯ ಜನತಾ ಯುವ ಮೋರ್ಚಾದ (BJYM) ಮಾಧ್ಯಮ ಸಂಚಾಲಕ ಬಿಸ್ವಜಿತ್ ಖೌಂಡ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಸ್ಸಾಂ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ 1,000 ಕ್ಕೂ ಹೆಚ್ಚು ದೂರುಗಳನ್ನು ದಾಖಲಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಭಾರತಕ್ಕೆ ದುರದೃಷ್ಟಕರ ಮತ್ತು ರಾಹುಲ್ ಗಾಂಧಿಯೇ ಭಾರತದ ಸಮಸ್ಯೆ” ಎಂದು ಹೇಳಿದ್ದಾರೆ.

ಆದರೆ, ಈ ದೂರುಗಳನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಯಾವುದೇ ಪ್ರಕರಣ ದಾಖಲಾಗಿದೆಯೇ ಎಂಬುದು ತಕ್ಷಣವೇ ತಿಳಿದಿಲ್ಲ.

ಇನ್ನು, ಫೆಬ್ರವರಿ 11ರಂದು ಉತ್ತರಾಖಂಡ್‌ನಲ್ಲಿ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ್ದ ಹಿಮಂತ್ ಬಿಸ್ವಾ ಶರ್ಮಾ ಅವರು ರಾಹುಲ್ ಗಾಂಧಿಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸೆಪ್ಟೆಂಬರ್ 2016ರ ಸರ್ಜಿಕಲ್ ಸ್ಟ್ರೈಕ್‌ನ ಪುರಾವೆಯನ್ನು ಕೋರಿದ್ದಕ್ಕಾಗಿ ಮತ್ತು ಕೋವಿಡ್ ಲಸಿಕೆಗಳ ಪರಿಣಾಮಕಾರಿವನ್ನು ಪ್ರಶ್ನಿಸಿದ್ದಕ್ಕಾಗಿ ರಾಹುಲ್‌ ಅವರನ್ನು ಅಸಂವಿಧಾನಿಕವಾಗಿ ನಿಂದಿಸಿದ್ದರು. “ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮಗ ಎಂಬುದಕ್ಕೆ ಬಿಜೆಪಿ ಎಂದಾದರೂ ಪುರಾವೆ ಕೇಳಿದೆಯೇ?” ಎಂದು ಶರ್ಮಾ ಕೇಳಿದ್ದರು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...