Homeಮುಖಪುಟರಾಹುಲ್ ಗಾಂಧಿ V/s ಹಿಮಂತ್ ಬಿಸ್ವಾ: ಉಭಯ ಪಕ್ಷಗಳಿಂದ ನೂರಾರು ಪ್ರಕರಣ ದಾಖಲು

ರಾಹುಲ್ ಗಾಂಧಿ V/s ಹಿಮಂತ್ ಬಿಸ್ವಾ: ಉಭಯ ಪಕ್ಷಗಳಿಂದ ನೂರಾರು ಪ್ರಕರಣ ದಾಖಲು

- Advertisement -
- Advertisement -

ಕಳೆದ ವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ “ಸ್ಪಿರಿಟ್ ಆಫ್ ಇಂಡಿಯಾ” ಟ್ವೀಟ್ ಕುರಿತು ಅಸ್ಸಾಂ ಬಿಜೆಪಿ ಮತ್ತು ಅದರ ವಿವಿಧ ಸಂಘಟನೆಗಳು ಸೋಮವಾರ ಒಂದು ಸಾವಿರ ಪೊಲೀಸ್ ದೂರುಗಳನ್ನು ದಾಖಲಿಸಿವೆ.

ವಯನಾಡ್ ಸಂಸದ ರಾಹುಲ್ ಗಾಂಧಿ ಅವರನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ “ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮಗ ಎಂಬುದಕ್ಕೆ ಬಿಜೆಪಿ ಎಂದಾದರೂ ಪುರಾವೆ ಕೇಳಿದೆಯೇ..?” ಎಂದು ಅಸಂವಿಧಾನಿಕವಾಗಿ ನಿಂದಿಸಿದ್ದರು. ಇದರ  ವಿರುದ್ಧ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ಪ್ರತಿಭಟನೆಯನ್ನು ಆರಂಭಿಸಿತ್ತು.

ಜೊತೆಗೆ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ಮತ್ತು ಯುವ ಘಟಕಗಳು ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ವಿರುದ್ಧ ವಿವಿಧ ರಾಜ್ಯಗಳಲ್ಲಿ ಹಲವಾರು ಎಫ್‌ಐಆರ್‌ಗಳನ್ನು ದಾಖಲಿಸಿವೆ.

ರಾಹುಲ್ ಟ್ವೀಟ್‌ನಲ್ಲಿ ಯಾವುದೇ ಈಶಾನ್ಯ ರಾಜ್ಯಗಳನ್ನು ಉಲ್ಲೇಖಿಸದೆ, ದೇಶದ ಇತರ ಭಾಗಗಳಿಂದ ಪ್ರತ್ಯೇಕಿಸಿ ಅಸಾಮರಸ್ಯವನ್ನು ಹರಡುತ್ತಿದ್ದಾರೆ ಎಂದು ಬಿಜೆಪಿ ಸದಸ್ಯರು ಆರೋಪಿಸಿದ್ದಾರೆ.

ಇದನ್ನೂ ಓದಿ: ಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

 

“ನಮ್ಮ ಒಕ್ಕೂಟದಲ್ಲಿ ಶಕ್ತಿ ಇದೆ. ನಮ್ಮ ಸಂಸ್ಕೃತಿಗಳ ಒಕ್ಕೂಟ. ನಮ್ಮ ವೈವಿಧ್ಯತೆಯ ಒಕ್ಕೂಟ. ನಮ್ಮ ಭಾಷೆಗಳ ಒಕ್ಕೂಟ. ನಮ್ಮ ಜನರ ಒಕ್ಕೂಟ. ನಮ್ಮ ರಾಜ್ಯಗಳ ಒಕ್ಕೂಟ. ಕಾಶ್ಮೀರದಿಂದ ಕೇರಳದವರೆಗೆ. ಗುಜರಾತ್‌ನಿಂದ ಪಶ್ಚಿಮ ಬಂಗಾಳಕ್ಕೆ. ಭಾರತವು ತನ್ನ ಎಲ್ಲಾ ಬಣ್ಣಗಳಲ್ಲಿ ಸುಂದರವಾಗಿದೆ. ಭಾರತದ ಚೈತನ್ಯವನ್ನು ಅವಮಾನಿಸಬೇಡಿ” ಎಂದು ಫೆಬ್ರವರಿ 10 ರಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.

ರಾಹುಲ್ ಗಾಂಧಿಯವರ ಟ್ವೀಟ್ ರಾಜ್ಯದ ವಿರುದ್ಧ ಸಮರ ಸಾರಿದೆ ಎಂದು ಬಿಜೆಪಿ ದೂರಿದೆ. ಅವರು ದೇಶದ ಪ್ರಾದೇಶಿಕ ಗಡಿಯಲ್ಲಿ ಚೀನಾದ ಅಜೆಂಡಾಕ್ಕೆ ಸೇರಿದ್ದಾರೆ. ತಮ್ಮ ಟ್ವೀಟ್‌ನಲ್ಲಿ ಭಾರತವನ್ನು ವಿವರಿಸುವಾಗ ಈಶಾನ್ಯ ಪ್ರದೇಶವನ್ನು ಹೊರಗಿಟ್ಟಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

“ಕಾಶ್ಮೀರದಿಂದ ಕೇರಳದವರೆಗೆ ಮತ್ತು ಗುಜರಾತ್‌ನಿಂದ ಪಶ್ಚಿಮ ಬಂಗಾಳದವರೆಗೆ ಭಾರತ ವ್ಯಾಪಿಸಿದೆ ಎಂದು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ. ಆ ಮೂಲಕ ಭಾರತದಿಂದ ಈಶಾನ್ಯ ರಾಜ್ಯಗಳನ್ನು ತೆಗೆದಿದ್ದಾರೆ. ಇದು ಭಾರತದ ಭೌಗೋಳಿಕ ಸಮಗ್ರತೆ ಮತ್ತು ಭದ್ರತೆಗೆ ಅಪಾಯವನ್ನುಂಟುಮಾಡುತ್ತದೆ” ಎಂದು ಅಸ್ಸಾಂ ಭಾರತೀಯ ಜನತಾ ಯುವ ಮೋರ್ಚಾದ (BJYM) ಮಾಧ್ಯಮ ಸಂಚಾಲಕ ಬಿಸ್ವಜಿತ್ ಖೌಂಡ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಸ್ಸಾಂ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ 1,000 ಕ್ಕೂ ಹೆಚ್ಚು ದೂರುಗಳನ್ನು ದಾಖಲಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಭಾರತಕ್ಕೆ ದುರದೃಷ್ಟಕರ ಮತ್ತು ರಾಹುಲ್ ಗಾಂಧಿಯೇ ಭಾರತದ ಸಮಸ್ಯೆ” ಎಂದು ಹೇಳಿದ್ದಾರೆ.

ಆದರೆ, ಈ ದೂರುಗಳನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಯಾವುದೇ ಪ್ರಕರಣ ದಾಖಲಾಗಿದೆಯೇ ಎಂಬುದು ತಕ್ಷಣವೇ ತಿಳಿದಿಲ್ಲ.

ಇನ್ನು, ಫೆಬ್ರವರಿ 11ರಂದು ಉತ್ತರಾಖಂಡ್‌ನಲ್ಲಿ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ್ದ ಹಿಮಂತ್ ಬಿಸ್ವಾ ಶರ್ಮಾ ಅವರು ರಾಹುಲ್ ಗಾಂಧಿಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸೆಪ್ಟೆಂಬರ್ 2016ರ ಸರ್ಜಿಕಲ್ ಸ್ಟ್ರೈಕ್‌ನ ಪುರಾವೆಯನ್ನು ಕೋರಿದ್ದಕ್ಕಾಗಿ ಮತ್ತು ಕೋವಿಡ್ ಲಸಿಕೆಗಳ ಪರಿಣಾಮಕಾರಿವನ್ನು ಪ್ರಶ್ನಿಸಿದ್ದಕ್ಕಾಗಿ ರಾಹುಲ್‌ ಅವರನ್ನು ಅಸಂವಿಧಾನಿಕವಾಗಿ ನಿಂದಿಸಿದ್ದರು. “ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮಗ ಎಂಬುದಕ್ಕೆ ಬಿಜೆಪಿ ಎಂದಾದರೂ ಪುರಾವೆ ಕೇಳಿದೆಯೇ?” ಎಂದು ಶರ್ಮಾ ಕೇಳಿದ್ದರು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...