Homeಮುಖಪುಟಎರಡೇ ಪದದ ಟ್ವೀಟ್: ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪ ಮಾಡಿದ ರಾಹುಲ್ ಗಾಂಧಿ

ಎರಡೇ ಪದದ ಟ್ವೀಟ್: ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪ ಮಾಡಿದ ರಾಹುಲ್ ಗಾಂಧಿ

- Advertisement -
- Advertisement -

ಅಸ್ಸಾಂನ ಮತಗಟ್ಟೆಯೊಂದರ ಇವಿಎಂಗಳು ಬಿಜೆಪಿ ಮುಖಂಡರ ಕಾರಿನಲ್ಲಿ ಪತ್ತೆಯಾದ ಪ್ರಕರಣ ಮತ್ತು ಬಿಜೆಪಿ ಹಿರಿಯ ನಾಯಕನ ಚುನಾವಣಾ ಪ್ರಚಾರದಿಂದ ಹೊರಗುಳಿಯುವಿಕೆ ಶಿಕ್ಷೆಯನ್ನು ಅರ್ಧಕ್ಕೆ ಮೊಟಕುಗೊಳಿಸಿದ ಚುನಾವಣಾ ಆಯೋಗದ ನಿಲುವಿನ ಕುರಿತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇವಲ ಎರಡು ಪದಗಳಲ್ಲಿ ಟ್ವೀಟ್ ಮಾಡುವ ಮೂಲಕ ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಎಲೆಕ್ಷನ್ “ಕಮಿಷನ್” ಎಂಬ ಎರಡು ಪದಗಳ ಟ್ವೀಟ್ ಮಾಡುವ ಮೂಲಕ ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ತಮ್ಮ ಟ್ವೀಟ್‌ನಲ್ಲಿ ಕಮಿಷನ್ ಪದಕ್ಕೆ ಮಹತ್ವ ನೀಡುವುದರ ಮೂಲಕ ಚುನಾವಣಾ ಆಯೋಗ ಸ್ವತಂತ್ರವಾಗಿ ಉಳಿದಿಲ್ಲ, ಅದು ಬಿಜೆಪಿಗೆ ಮಾರಾಟವಾಗಿದೆ ಎಂದು ಪರೋಕ್ಷವಾಗಿ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ: ಮರುಮತದಾನಕ್ಕೆ ಆದೇಶ, 4 ಅಧಿಕಾರಿಗಳ ಅಮಾನತು!

ಏಪ್ರಿಲ್ 1 ರಂದು ಅಸ್ಸಾಂನಲ್ಲಿ ಎರಡನೇ ಹಂತದ ಮತದಾನ ಪೂರ್ಣಗೊಂಡಿದೆ. ಆದರೆ ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದ ಸ್ಟೇಷನ್ ನಂಬರ್ 149ರ ರತನಾರಿ – ಇಂದಿರಾ ಎಂವಿ ಸ್ಕೂಲ್ ಬೂತ್‌ನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಅನ್ನು ಪಕ್ಕದ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೃಷ್ಣೇಂದ್ರ ಪೌಲ್‌ರವರ ಪತ್ನಿಯ ಕಾರಿನಲ್ಲಿ ಸಾಗಿಸಿದ್ದರು. ಕಾರು ಸ್ಟ್ರಾಂಗ್‌ರೂಂ ಬಳಿ ಬರುತ್ತಲೇ ವಿರೋಧ ಪಕ್ಷದ ಕಾರ್ಯಕರ್ತರು ಘೇರಾವ್ ಹಾಕಿ ಪ್ರತಿಭಟಿಸಿದ್ದರು. ಹಿಂಸಾಚಾರ ಉಲ್ಭಣಗೊಂಡ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಲಾಠೀ ಚಾರ್ಜ್ ಮಾಡಿದ್ದರು. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಕರ್ತವ್ಯಲೋಪದ ಆರೋಪದ ಮೇಲೆ ಅಮಾನತು ಮಾಡಲಾಗಿದೆ. ಮತ್ತು ಆ ಕ್ಷೇತ್ರದಲ್ಲಿ ಮರುಮತದಾನ ನಡೆಸುವಂತೆ ಚುನಾವಣಾ ಆಯೋಗ ಆದೇಶ ನೀಡಿದೆ.

ಶುಕ್ರವಾರ ರಾತ್ರಿ ತಾನೇ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಅಸ್ಸಾಂ ಸಚಿವ ಮತ್ತು ಬಿಜೆಪಿಯ ಹಿರಿಯ ಮುಖಂಡ ಹಿಮಂತ ಬಿಸ್ವಾ ಶರ್ಮಾ ಅವರ ಮೇಲೆ 48 ಗಂಟೆಗಳ ಪ್ರಚಾರ ನಿಷೇಧ ಹೇರಿದ್ದ ಚುನಾವಣಾ ಆಯೋಗ ಶನಿವಾರ ಅದನ್ನು ಏಕಾಏಕಿ ಅರ್ಧಕ್ಕೆ ಇಳಿಸಿದೆ. ಹಾಗಾಗಿ ಹಿಮಂತ ಬಿಸ್ವಾ ಶರ್ಮಾ ನಾಳೆ ಪ್ರಚಾರ ನಡೆಸಬಹುದಾಗಿದೆ.

ಈ ಎರಡು ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ರಾಹುಲ್ ಗಾಂಧಿ ಚುನಾವಣಾ ಆಯೋಗವನ್ನು ಟೀಕಿಸಿದ್ದಾರೆ.


ಇದನ್ನೂ ಓದಿ: ಅಸ್ಸಾಂ: ಬಿಜೆಪಿ ಮುಖಂಡನ ಮೇಲಿನ ಪ್ರಚಾರ ನಿಷೇಧ ಅರ್ಧ ತೆರವುಗೊಳಿಸಿದ ಚುನಾವಣಾ ಆಯೋಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....