Homeಮುಖಪುಟ'ಮೋದಿ ಉಪನಾಮ' ಟೀಕೆ ಕೇಸ್‌ನಲ್ಲಿ ರಾಹುಲ್‌ಗೆ 2 ವರ್ಷ ಜೈಲು: ಬಿಜೆಪಿಯ ಪಿತೂರಿ ಎಂದ ಪ್ರತಿಪಕ್ಷಗಳು

‘ಮೋದಿ ಉಪನಾಮ’ ಟೀಕೆ ಕೇಸ್‌ನಲ್ಲಿ ರಾಹುಲ್‌ಗೆ 2 ವರ್ಷ ಜೈಲು: ಬಿಜೆಪಿಯ ಪಿತೂರಿ ಎಂದ ಪ್ರತಿಪಕ್ಷಗಳು

- Advertisement -
- Advertisement -

‘ಮೋದಿ ಉಪನಾಮ’ದ ಟೀಕೆಗಾಗಿ ರಾಹುಲ್ ಗಾಂಧಿ ವಿರುದ್ಧ 2019ರಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಾಗಿತ್ತು. ಈ ಕುರಿತು ಗುರುವಾರ ತೀರ್ಪು ನೀಡಿದ ಗುಜರಾತ್‌ನ ಸೂರತ್ ನ್ಯಾಯಾಲಯವು ರಾಹುಲ್ ತಪ್ಪಿತಸ್ಥ ಎಂದು ಹೇಳಿದೆ. ಈ ಸಂಬಂಧ 2 ವರ್ಷ ಜೈಲು ಅಥವಾ ದಂಡ ಪಾವತಿಯ ಶಿಕ್ಷೆಯನ್ನು ವಿಧಿಸಿದೆ.

ಗುಜರಾತ್ ನ್ಯಾಯಾಲಯದ ತೀರ್ಪನ್ನು ಬಿಜೆಪಿ ಸ್ವಾಗತಿಸಿದೆ. ಆದರೆ ಪ್ರತಿಪಕ್ಷಗಳು ಇದನ್ನು ಪಿತೂರಿ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ತ್ವರಿತವಾಗಿ ಟ್ವೀಟ್ ಮಾಡಿದ ರಾಹುಲ್‌ ಗಾಂಧಿ ಅವರು, ಮಹಾತ್ಮ ಗಾಂಧಿಯವರ ಸಾಲುಗಳನ್ನು ಬರೆದಿದ್ದಾರೆ. ”ನನ್ನ ಧರ್ಮವು ಸತ್ಯ ಮತ್ತು ಅಹಿಂಸೆಯನ್ನು ಆಧರಿಸಿದೆ. ಸತ್ಯವೇ ನನ್ನ ದೇವರು, ಅದನ್ನು ಪಡೆಯುವ ಸಾಧನ ಅಹಿಂಸೆ” ಎಂದು ರಾಹುಲ್‌ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ತಮ್ಮ ಸಹೋದರ ರಾಹುಲ್ ಗಾಂಧಿ ಭಯಪಡುವುದಿಲ್ಲ ಮತ್ತು “ಸತ್ಯವನ್ನು ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.

”ಇಡೀ ಆಡಳಿತ ಯಂತ್ರ ಎಲ್ಲಾ ವಿಧಾನಗಳಿಂದ ರಾಹುಲ್ ಗಾಂಧಿಯವರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ, ನನ್ನ ಸಹೋದರ ಎಂದಿಗೂ ಹೆದರುವುದಿಲ್ಲ, ಅವನು ಎಂದಿಗೂ ಹೆದರುವುದಿಲ್ಲ. ಸತ್ಯದಿಂದ ಬದುಕಿದ್ದಾನೆ ಮತ್ತು ಸತ್ಯವನ್ನು ಹೇಳುವುದನ್ನು ಮುಂದುವರಿಸುತ್ತಾನೆ. ದೇಶದ ಜನರ ಧ್ವನಿಯಾಗಿ ಅವನು ಮಾತನಾಡುತ್ತಲೇ ಇರುತ್ತಾನೆ. ಕೋಟ್ಯಂತರ ದೇಶವಾಸಿಗಳ ಪ್ರೀತಿ ಅವನೊಂದಿಗಿದೆ” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

“ರಾಹುಲ್ ಗಾಂಧಿಯನ್ನು ಪದೇ ಪದೇ ಕರೆಸುತ್ತಿರುವುದನ್ನು ನೋಡಿದಾಗ ನಮಗೆ ಸುಳಿವು ಸಿಕ್ಕಿದೆ. ಬಿಜೆಪಿ ಇತರರತ್ತ ಬೆರಳು ತೋರಿಸಿದರೆ, ಉಳಿದ ನಾಲ್ಕು ಬೆರಳುಗಳು ತನ್ನತ್ತ ತೋರಿಸುತ್ತವೆ” ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

”ಹೇಡಿ, ಸರ್ವಾಧಿಕಾರಿ ಬಿಜೆಪಿ ಸರಕಾರದ ಕರಾಳ ಕೃತ್ಯಗಳನ್ನು ನಾವು ಬಯಲು ಮಾಡುತ್ತಿದ್ದೇವೆ ಎಂಬ ಕಾರಣಕ್ಕೆ ಈ ರೀತಿ ಮಾಡುತ್ತಿದೆ. ನಿಮಗೆ ಪ್ರತಿಪಕ್ಷಗಳಿಂದ ಧಿಕ್ಕಾರ, ಮೋದಿ ಸರಕಾರ ರಾಜಕೀಯ ದಿವಾಳಿತನಕ್ಕೆ ಬಲಿಯಾಗಿದೆ. ಪೊಲೀಸರನ್ನು ಕಳುಹಿಸಿ, ರಾಜಕೀಯ ಭಾಷಣಗಳ ಮೇಲೆ ಕೇಸುಗಳನ್ನು ಹಾಕುತ್ತಾರೆ. ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ” ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.

”ಮೋದಿ” ಈ ಉಪನಾಮವನ್ನು ಯಾರಾದರೂ ಪುನರುಚ್ಚರಿಸಿದರೂ ಅದು ಮಾನನಷ್ಟ ಸಮಸ್ಯೆಯಾಗುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರು ಹೇಳಿದ್ದಾರೆ.

ಈ ಮಧ್ಯೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ”ಇದು ಪ್ರತಿಪಕ್ಷಗಳನ್ನು ಮುಗಿಸಲು ”ಪಿತೂರಿ”ಯಾಗಿದೆ ಎಂದು ಆರೋಪಿಸಿದ್ದಾರೆ.

”ಬಿಜೆಪಿಯೇತರ ನಾಯಕರು ಹಾಗೂ ಪಕ್ಷಗಳ ವಿರುದ್ಧ ಕಾನೂನು ಕ್ರಮ ಜರುಗಿಸುವ ಷಡ್ಯಂತ್ರ ನಡೆಯುತ್ತಿದೆ. ನಮಗೆ ಕಾಂಗ್ರೆಸ್ ಜೊತೆ ಭಿನ್ನಾಭಿಪ್ರಾಯವಿದೆ, ಆದರೆ ಈ ರೀತಿ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಸಿಲುಕಿಸುವುದು ಸರಿಯಲ್ಲ. ಪ್ರಶ್ನೆ ಕೇಳುವುದು ಸಾರ್ವಜನಿಕರು ಮತ್ತು ಪ್ರತಿಪಕ್ಷಗಳ ಕೆಲಸ. ನಾವು ನ್ಯಾಯಾಲಯವನ್ನು ಗೌರವಿಸುತ್ತೇವೆ ಆದರೆ ನಿರ್ಧಾರವನ್ನು ಒಪ್ಪುವುದಿಲ್ಲ”ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಇದು 2024ರ ಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಹೊಸ ಸಮೀಕರಣವನ್ನು ಸೂಚಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...