‘ಮೋದಿ ಉಪನಾಮ’ದ ಟೀಕೆಗಾಗಿ ರಾಹುಲ್ ಗಾಂಧಿ ವಿರುದ್ಧ 2019ರಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಾಗಿತ್ತು. ಈ ಕುರಿತು ಗುರುವಾರ ತೀರ್ಪು ನೀಡಿದ ಗುಜರಾತ್ನ ಸೂರತ್ ನ್ಯಾಯಾಲಯವು ರಾಹುಲ್ ತಪ್ಪಿತಸ್ಥ ಎಂದು ಹೇಳಿದೆ. ಈ ಸಂಬಂಧ 2 ವರ್ಷ ಜೈಲು ಅಥವಾ ದಂಡ ಪಾವತಿಯ ಶಿಕ್ಷೆಯನ್ನು ವಿಧಿಸಿದೆ.
ಗುಜರಾತ್ ನ್ಯಾಯಾಲಯದ ತೀರ್ಪನ್ನು ಬಿಜೆಪಿ ಸ್ವಾಗತಿಸಿದೆ. ಆದರೆ ಪ್ರತಿಪಕ್ಷಗಳು ಇದನ್ನು ಪಿತೂರಿ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ತ್ವರಿತವಾಗಿ ಟ್ವೀಟ್ ಮಾಡಿದ ರಾಹುಲ್ ಗಾಂಧಿ ಅವರು, ಮಹಾತ್ಮ ಗಾಂಧಿಯವರ ಸಾಲುಗಳನ್ನು ಬರೆದಿದ್ದಾರೆ. ”ನನ್ನ ಧರ್ಮವು ಸತ್ಯ ಮತ್ತು ಅಹಿಂಸೆಯನ್ನು ಆಧರಿಸಿದೆ. ಸತ್ಯವೇ ನನ್ನ ದೇವರು, ಅದನ್ನು ಪಡೆಯುವ ಸಾಧನ ಅಹಿಂಸೆ” ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
मेरा धर्म सत्य और अहिंसा पर आधारित है। सत्य मेरा भगवान है, अहिंसा उसे पाने का साधन।
– महात्मा गांधी
— Rahul Gandhi (@RahulGandhi) March 23, 2023
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ತಮ್ಮ ಸಹೋದರ ರಾಹುಲ್ ಗಾಂಧಿ ಭಯಪಡುವುದಿಲ್ಲ ಮತ್ತು “ಸತ್ಯವನ್ನು ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.
”ಇಡೀ ಆಡಳಿತ ಯಂತ್ರ ಎಲ್ಲಾ ವಿಧಾನಗಳಿಂದ ರಾಹುಲ್ ಗಾಂಧಿಯವರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ, ನನ್ನ ಸಹೋದರ ಎಂದಿಗೂ ಹೆದರುವುದಿಲ್ಲ, ಅವನು ಎಂದಿಗೂ ಹೆದರುವುದಿಲ್ಲ. ಸತ್ಯದಿಂದ ಬದುಕಿದ್ದಾನೆ ಮತ್ತು ಸತ್ಯವನ್ನು ಹೇಳುವುದನ್ನು ಮುಂದುವರಿಸುತ್ತಾನೆ. ದೇಶದ ಜನರ ಧ್ವನಿಯಾಗಿ ಅವನು ಮಾತನಾಡುತ್ತಲೇ ಇರುತ್ತಾನೆ. ಕೋಟ್ಯಂತರ ದೇಶವಾಸಿಗಳ ಪ್ರೀತಿ ಅವನೊಂದಿಗಿದೆ” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.
डरी हुई सत्ता की पूरी मशीनरी साम, दाम, दंड, भेद लगाकर @RahulGandhi जी की आवाज को दबाने की कोशिश कर रही है।
मेरे भाई न कभी डरे हैं, न कभी डरेंगे। सच बोलते हुए जिये हैं, सच बोलते रहेंगे। देश के लोगों की आवाज उठाते रहेंगे।
सच्चाई की ताकत व करोड़ों देशवासियों का प्यार उनके साथ है।
— Priyanka Gandhi Vadra (@priyankagandhi) March 23, 2023
“ರಾಹುಲ್ ಗಾಂಧಿಯನ್ನು ಪದೇ ಪದೇ ಕರೆಸುತ್ತಿರುವುದನ್ನು ನೋಡಿದಾಗ ನಮಗೆ ಸುಳಿವು ಸಿಕ್ಕಿದೆ. ಬಿಜೆಪಿ ಇತರರತ್ತ ಬೆರಳು ತೋರಿಸಿದರೆ, ಉಳಿದ ನಾಲ್ಕು ಬೆರಳುಗಳು ತನ್ನತ್ತ ತೋರಿಸುತ್ತವೆ” ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
”ಹೇಡಿ, ಸರ್ವಾಧಿಕಾರಿ ಬಿಜೆಪಿ ಸರಕಾರದ ಕರಾಳ ಕೃತ್ಯಗಳನ್ನು ನಾವು ಬಯಲು ಮಾಡುತ್ತಿದ್ದೇವೆ ಎಂಬ ಕಾರಣಕ್ಕೆ ಈ ರೀತಿ ಮಾಡುತ್ತಿದೆ. ನಿಮಗೆ ಪ್ರತಿಪಕ್ಷಗಳಿಂದ ಧಿಕ್ಕಾರ, ಮೋದಿ ಸರಕಾರ ರಾಜಕೀಯ ದಿವಾಳಿತನಕ್ಕೆ ಬಲಿಯಾಗಿದೆ. ಪೊಲೀಸರನ್ನು ಕಳುಹಿಸಿ, ರಾಜಕೀಯ ಭಾಷಣಗಳ ಮೇಲೆ ಕೇಸುಗಳನ್ನು ಹಾಕುತ್ತಾರೆ. ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ” ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.
कायर, तानाशाह भाजपा सरकार श्री @RahulGandhi और विपक्ष से तिलमिलाई हुई है क्योंकि हम उनके काले कारनामों को उजागर कर रहे हैं। JPC की माँग कर रहे हैं।
राजनैतिक दिवालियेपन की शिकार मोदी सरकार,
ED, पुलिस भेजती है
राजनैतिक भाषणों पर केस थोपती है।हम Higher Court में अपील करेंगे।
— Mallikarjun Kharge (@kharge) March 23, 2023
”ಮೋದಿ” ಈ ಉಪನಾಮವನ್ನು ಯಾರಾದರೂ ಪುನರುಚ್ಚರಿಸಿದರೂ ಅದು ಮಾನನಷ್ಟ ಸಮಸ್ಯೆಯಾಗುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರು ಹೇಳಿದ್ದಾರೆ.
ಈ ಮಧ್ಯೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ”ಇದು ಪ್ರತಿಪಕ್ಷಗಳನ್ನು ಮುಗಿಸಲು ”ಪಿತೂರಿ”ಯಾಗಿದೆ ಎಂದು ಆರೋಪಿಸಿದ್ದಾರೆ.
”ಬಿಜೆಪಿಯೇತರ ನಾಯಕರು ಹಾಗೂ ಪಕ್ಷಗಳ ವಿರುದ್ಧ ಕಾನೂನು ಕ್ರಮ ಜರುಗಿಸುವ ಷಡ್ಯಂತ್ರ ನಡೆಯುತ್ತಿದೆ. ನಮಗೆ ಕಾಂಗ್ರೆಸ್ ಜೊತೆ ಭಿನ್ನಾಭಿಪ್ರಾಯವಿದೆ, ಆದರೆ ಈ ರೀತಿ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಸಿಲುಕಿಸುವುದು ಸರಿಯಲ್ಲ. ಪ್ರಶ್ನೆ ಕೇಳುವುದು ಸಾರ್ವಜನಿಕರು ಮತ್ತು ಪ್ರತಿಪಕ್ಷಗಳ ಕೆಲಸ. ನಾವು ನ್ಯಾಯಾಲಯವನ್ನು ಗೌರವಿಸುತ್ತೇವೆ ಆದರೆ ನಿರ್ಧಾರವನ್ನು ಒಪ್ಪುವುದಿಲ್ಲ”ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ग़ैर बीजेपी नेताओं और पार्टियों पर मुक़दमे करके उन्हें ख़त्म करने की साज़िश हो रही है
हमारे कांग्रेस से मतभेद हैं मगर राहुल गांधी जी को इस तरह मानहानि मुक़दमे में फ़साना ठीक नहीं। जनता और विपक्ष का काम है सवाल पूछना। हम अदालत का सम्मान करते हैं पर इस निर्णय से असहमत हैं
— Arvind Kejriwal (@ArvindKejriwal) March 23, 2023
ಇದು 2024ರ ಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಹೊಸ ಸಮೀಕರಣವನ್ನು ಸೂಚಿಸುತ್ತದೆ.
Surprising. Courts are there.Rahul will get justice.