Homeಮುಖಪುಟನೇಪಾಳದ ಸ್ನೇಹಿತೆ ಮದುವೆಯಲ್ಲಿ ರಾಹುಲ್ ಇದ್ದಾರೆ ಹೊರತು ನವಾಜ಼್ ಶರೀಫ್‌ ಜೊತೆ ಕೇಕ್‌ ಕಟ್‌‌ ಮಾಡಿಲ್ಲ:...

ನೇಪಾಳದ ಸ್ನೇಹಿತೆ ಮದುವೆಯಲ್ಲಿ ರಾಹುಲ್ ಇದ್ದಾರೆ ಹೊರತು ನವಾಜ಼್ ಶರೀಫ್‌ ಜೊತೆ ಕೇಕ್‌ ಕಟ್‌‌ ಮಾಡಿಲ್ಲ: ಕಾಂಗ್ರೆ‌ಸ್‌

- Advertisement -
- Advertisement -

ಸ್ನೇಹಿತೆಯ ವಿವಾಹಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇಪಾಳಕ್ಕೆ ಭೇಟಿ ನೀಡಿದ್ದನ್ನೂ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ವಿವಾದವನ್ನಾಗಿಸಿದ್ದು, ಕಾಂಗ್ರೆಸ್ ಖಡಕ್‌ ಪ್ರತಿಕ್ರಿಯೆ ನೀಡಿದೆ.

ಮಂಗಳವಾರ ಬಿಜೆಪಿ ಮುಖಂಡರು ಹಾಗೂ ಬೆಂಬಲಿಗರು ಟ್ವೀಟ್‌ಗಳ ಸುರಿಮಳೆ ಸುರಿಸಿದ್ದು, ರಾಹುಲ್‌ ಗಾಂಧಿ ಪಬ್‌‌ನಲ್ಲಿದ್ದಾರೆ ಎಂದು ಆರೋಪಿಸಿದ್ದಾರೆ.

“ಸ್ನೇಹಿತೆಯ ಮದುವೆಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಆಪ್ತ ಹಾಗೂ ನೆರೆಯ ರಾಷ್ಟ್ರಕ್ಕೆ ಭೇಟಿ ನೀಡುವುದು ಅಪರಾಧವಲ್ಲ” ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ. “ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪುತ್ರಿಯ ವಿವಾಹಕ್ಕೆ 2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಠಾತ್ ಭೇಟಿ ನೀಡಿದ್ದಕ್ಕಿಂತ ಇದು ತುಂಬಾ ದೊಡ್ಡ ವಿಷಯವೇನಲ್ಲ” ಎಂದು ಕಾಂಗ್ರೆಸ್ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಹುಲ್ ಗಾಂಧಿ ಅವರು ನವಾಜ್ ಷರೀಫ್ ಅವರೊಂದಿಗೆ ಕೇಕ್ ಕತ್ತರಿಸಲು ಪ್ರಧಾನಿ ಮೋದಿಯಂತೆ ಆಹ್ವಾನಿತ ಅತಿಥಿಯಾಗಿ ಪಾಕಿಸ್ತಾನಕ್ಕೆ ಹೋಗಿಲ್ಲ. ಪಠಾಣ್‌ಕೋಟ್‌ನಲ್ಲಿ ಏನಾಗುತ್ತದೆ ಎಂದು ನಮಗೆ ತಿಳಿದಿದೆ” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

“ಸ್ನೇಹಿತೆಯ ವಿವಾಹದಲ್ಲಿ ಪಾಲ್ಗೊಳ್ಳಲು ನೆರೆಯ ಆಪ್ತ ದೇಶವಾದ ನೇಪಾಳಕ್ಕೆ ರಾಹುಲ್ ಗಾಂಧಿ ಹೋಗಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ. ಇದು ನಮ್ಮ ಸಂಸ್ಕೃತಿಯ ವಿಷಯ. ಇದು ಅಪರಾಧವಲ್ಲ. ಸ್ನೇಹಿತರು ಮತ್ತು ಕುಟುಂಬ ಸದಸ್ಯರೊಂದಿಗೆ ಮದುವೆಯಲ್ಲಿ ಪಾಲ್ಗೊಳ್ಳುವುದು ಅಪರಾಧ ಎಂದು ಪ್ರಧಾನಿ ಮತ್ತು ಬಿಜೆಪಿ ಶೀಘ್ರದಲ್ಲೇ ನಿರ್ಧರಿಸಬಹುದು” ಎಂದು ಕುಟುಕಿದ್ದಾರೆ.

ಬಿಜೆಪಿ ಮುಖಂಡ ಅಮಿತ್ ಮಾಳವಿಯಾ ಮಾಡಿರುವ ಟ್ವೀಟ್‌ಗೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನೇಪಾಳದ ಕಠ್ಮಂಡುವಿಗೆ ಸೋಮವಾರ ರಾಹುಲ್ ಭೇಟಿ ನೀಡಿರುವುದಾಗಿ ‘ದಿ ಕಠ್ಮಂಡು ಪೋಸ್ಟ್‌’ ಸುದ್ದಿ ಜಾಲತಾಣ ವರದಿ ಮಾಡಿದೆ.

“ರಾಹುಲ್‌ ಅವರು ಸೋಮವಾರ ಸಂಜೆ 4:40ರ ವೇಳೆಗೆ ವಿಸ್ತಾರಾ ಏರ್‌ಲೈನ್ಸ್ ವಿಮಾನದಲ್ಲಿ ಕಠ್ಮಂಡುವಿಗೆ ಬಂದಿಳಿದರು. ಇವರೊಂದಿಗೆ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಇತರ ಮೂವರು ಇದ್ದರು” ಎಂದು ಭದ್ರತಾ ಮೂಲಗಳು ಖಚಿತಪಡಿಸಿರುವುದಾಗಿ ವರದಿ ಹೇಳಿದೆ.

ರಾಹುಲ್‌ ಗಾಂಧಿ ಮತ್ತು ಅವರ ಸ್ನೇಹಿತರು ನೇಪಾಳದ ನಕ್ಸಲ್‌ನ ಕಠ್ಮಂಡು ಮ್ಯಾರಿಯಟ್ ಹೋಟೆಲ್‌ನಲ್ಲಿ ತಂಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಹುಲ್‌ ಅವರು ತಮ್ಮ ನೇಪಾಳಿ ಸ್ನೇಹಿತೆ, ಸಿಎನ್‌ಎನ್‌ ಮಾಧ್ಯಮದ ಮಾಜಿ ಪತ್ರಕರ್ತೆ ಸುಮ್ನಿಮಾ ಉದಾಸ್ ಅವರ ವಿವಾಹದಲ್ಲಿ ಪಾಲ್ಗೊಳ್ಳಲು ಕಠ್ಮಂಡುವಿಗೆ ತೆರಳಿದ್ದಾರೆ.

ಮ್ಯಾನ್ಮಾರ್‌ಗೆ ನೇಪಾಳಿ ರಾಯಭಾರಿಯಾಗಿ ಸೇವೆ ಸಲ್ಲಿಸಿದ ಸುಮ್ನಿಮಾ ಅವರ ತಂದೆ ಭೀಮ್ ಉದಾಸ್, “ನನ್ನ ಮಗಳ ಮದುವೆಗೆ ಹಾಜರಾಗಲು ನಾವು ರಾಹುಲ್‌ ಅವರಿಗೆ ಆಹ್ವಾನವನ್ನು ನೀಡಿದ್ದೇವೆ” ಎಂದು ತಿಳಿಸಿದ್ದಾರೆ.

ಸಿಎನ್‌ಎನ್ ವರದಿಗಾರ್ತಿಯಾಗಿದ್ದ ಸುಮ್ನಿಮಾ ಅವರು ನಿಮಾ ಮಾರ್ಟಿನ್ ಶೆರ್ಪಾ ಅವರನ್ನು ವಿವಾಹವಾಗಲಿದ್ದಾರೆ. ಸುಮ್ನಿಮಾ ಅವರೀಗ ‘ದಿ ಲುಂಬಿನಿ ಮ್ಯೂಸಿಯಂ’ನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.

ಇದನ್ನೂ ಓದಿರಿ: ರಾಜಸ್ಥಾನ: ಧಾರ್ಮಿಕ ಧ್ವಜಗಳ ಹೆಸರಲ್ಲಿ ಘರ್ಷಣೆ; ಇಂಟರ್‌‌ನೆಟ್‌ ಸ್ಥಗಿತ

ಮಂಗಳವಾರದಂದು ವಿವಾಹ ಕಾರ್ಯಕ್ರಮವನ್ನು ಆಯೋಜಿಸಿದ್ದು, ಬೌದ್ದದಲ್ಲಿರುವ ಹಯಾತ್ ರೀಜೆನ್ಸಿ ಹೋಟೆಲ್‌ನಲ್ಲಿ ಮೇ 5 ರಂದು ಆರತಕ್ಷತೆ ನಡೆಯಲಿದೆ ಎಂದು ವಧುವಿನ ತಂದೆ ಭೀಮ್ ಅವರು ಕಠ್ಮಂಡು ಪೋಸ್ಟ್‌ಗೆ ತಿಳಿಸಿದ್ದಾರೆ.

ಕೆಲವು ಭಾರತೀಯ ವಿವಿಐಪಿಗಳು ಮದುವೆಯಲ್ಲಿ ಪಾಲ್ಗೊಳ್ಳಲು ಕಠ್ಮಂಡುವಿಗೆ ಆಗಮಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ಮಾಳವಿಯಾನಿಗೆ ಮಾಡಲು ಕೆಲಸವಿಲ್ಲಾ… ಇದನ್ನ ಮಾಡಿದ್ದಾನೆ… ಇಲ್ಲಿ ಅಶ್ವತ್ತನಾರಾಯಣ ಎಷ್ಟು ನುಂಗ್ಯಾನ ಅನ್ನೋದರ ಬಗ್ಗೆ ಮಾಳವೀಯಾ ಮುಕ್ಳ್ಯಾಗ ಧಮ್ ಇದ್ದ್ರ ಮಾತನಾಡಲಿ….

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...