Homeಮುಖಪುಟನೇಪಾಳದ ಸ್ನೇಹಿತೆ ಮದುವೆಯಲ್ಲಿ ರಾಹುಲ್ ಇದ್ದಾರೆ ಹೊರತು ನವಾಜ಼್ ಶರೀಫ್‌ ಜೊತೆ ಕೇಕ್‌ ಕಟ್‌‌ ಮಾಡಿಲ್ಲ:...

ನೇಪಾಳದ ಸ್ನೇಹಿತೆ ಮದುವೆಯಲ್ಲಿ ರಾಹುಲ್ ಇದ್ದಾರೆ ಹೊರತು ನವಾಜ಼್ ಶರೀಫ್‌ ಜೊತೆ ಕೇಕ್‌ ಕಟ್‌‌ ಮಾಡಿಲ್ಲ: ಕಾಂಗ್ರೆ‌ಸ್‌

- Advertisement -
- Advertisement -

ಸ್ನೇಹಿತೆಯ ವಿವಾಹಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇಪಾಳಕ್ಕೆ ಭೇಟಿ ನೀಡಿದ್ದನ್ನೂ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ವಿವಾದವನ್ನಾಗಿಸಿದ್ದು, ಕಾಂಗ್ರೆಸ್ ಖಡಕ್‌ ಪ್ರತಿಕ್ರಿಯೆ ನೀಡಿದೆ.

ಮಂಗಳವಾರ ಬಿಜೆಪಿ ಮುಖಂಡರು ಹಾಗೂ ಬೆಂಬಲಿಗರು ಟ್ವೀಟ್‌ಗಳ ಸುರಿಮಳೆ ಸುರಿಸಿದ್ದು, ರಾಹುಲ್‌ ಗಾಂಧಿ ಪಬ್‌‌ನಲ್ಲಿದ್ದಾರೆ ಎಂದು ಆರೋಪಿಸಿದ್ದಾರೆ.

“ಸ್ನೇಹಿತೆಯ ಮದುವೆಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಆಪ್ತ ಹಾಗೂ ನೆರೆಯ ರಾಷ್ಟ್ರಕ್ಕೆ ಭೇಟಿ ನೀಡುವುದು ಅಪರಾಧವಲ್ಲ” ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ. “ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪುತ್ರಿಯ ವಿವಾಹಕ್ಕೆ 2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಠಾತ್ ಭೇಟಿ ನೀಡಿದ್ದಕ್ಕಿಂತ ಇದು ತುಂಬಾ ದೊಡ್ಡ ವಿಷಯವೇನಲ್ಲ” ಎಂದು ಕಾಂಗ್ರೆಸ್ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಹುಲ್ ಗಾಂಧಿ ಅವರು ನವಾಜ್ ಷರೀಫ್ ಅವರೊಂದಿಗೆ ಕೇಕ್ ಕತ್ತರಿಸಲು ಪ್ರಧಾನಿ ಮೋದಿಯಂತೆ ಆಹ್ವಾನಿತ ಅತಿಥಿಯಾಗಿ ಪಾಕಿಸ್ತಾನಕ್ಕೆ ಹೋಗಿಲ್ಲ. ಪಠಾಣ್‌ಕೋಟ್‌ನಲ್ಲಿ ಏನಾಗುತ್ತದೆ ಎಂದು ನಮಗೆ ತಿಳಿದಿದೆ” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

“ಸ್ನೇಹಿತೆಯ ವಿವಾಹದಲ್ಲಿ ಪಾಲ್ಗೊಳ್ಳಲು ನೆರೆಯ ಆಪ್ತ ದೇಶವಾದ ನೇಪಾಳಕ್ಕೆ ರಾಹುಲ್ ಗಾಂಧಿ ಹೋಗಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ. ಇದು ನಮ್ಮ ಸಂಸ್ಕೃತಿಯ ವಿಷಯ. ಇದು ಅಪರಾಧವಲ್ಲ. ಸ್ನೇಹಿತರು ಮತ್ತು ಕುಟುಂಬ ಸದಸ್ಯರೊಂದಿಗೆ ಮದುವೆಯಲ್ಲಿ ಪಾಲ್ಗೊಳ್ಳುವುದು ಅಪರಾಧ ಎಂದು ಪ್ರಧಾನಿ ಮತ್ತು ಬಿಜೆಪಿ ಶೀಘ್ರದಲ್ಲೇ ನಿರ್ಧರಿಸಬಹುದು” ಎಂದು ಕುಟುಕಿದ್ದಾರೆ.

ಬಿಜೆಪಿ ಮುಖಂಡ ಅಮಿತ್ ಮಾಳವಿಯಾ ಮಾಡಿರುವ ಟ್ವೀಟ್‌ಗೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನೇಪಾಳದ ಕಠ್ಮಂಡುವಿಗೆ ಸೋಮವಾರ ರಾಹುಲ್ ಭೇಟಿ ನೀಡಿರುವುದಾಗಿ ‘ದಿ ಕಠ್ಮಂಡು ಪೋಸ್ಟ್‌’ ಸುದ್ದಿ ಜಾಲತಾಣ ವರದಿ ಮಾಡಿದೆ.

“ರಾಹುಲ್‌ ಅವರು ಸೋಮವಾರ ಸಂಜೆ 4:40ರ ವೇಳೆಗೆ ವಿಸ್ತಾರಾ ಏರ್‌ಲೈನ್ಸ್ ವಿಮಾನದಲ್ಲಿ ಕಠ್ಮಂಡುವಿಗೆ ಬಂದಿಳಿದರು. ಇವರೊಂದಿಗೆ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಇತರ ಮೂವರು ಇದ್ದರು” ಎಂದು ಭದ್ರತಾ ಮೂಲಗಳು ಖಚಿತಪಡಿಸಿರುವುದಾಗಿ ವರದಿ ಹೇಳಿದೆ.

ರಾಹುಲ್‌ ಗಾಂಧಿ ಮತ್ತು ಅವರ ಸ್ನೇಹಿತರು ನೇಪಾಳದ ನಕ್ಸಲ್‌ನ ಕಠ್ಮಂಡು ಮ್ಯಾರಿಯಟ್ ಹೋಟೆಲ್‌ನಲ್ಲಿ ತಂಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಹುಲ್‌ ಅವರು ತಮ್ಮ ನೇಪಾಳಿ ಸ್ನೇಹಿತೆ, ಸಿಎನ್‌ಎನ್‌ ಮಾಧ್ಯಮದ ಮಾಜಿ ಪತ್ರಕರ್ತೆ ಸುಮ್ನಿಮಾ ಉದಾಸ್ ಅವರ ವಿವಾಹದಲ್ಲಿ ಪಾಲ್ಗೊಳ್ಳಲು ಕಠ್ಮಂಡುವಿಗೆ ತೆರಳಿದ್ದಾರೆ.

ಮ್ಯಾನ್ಮಾರ್‌ಗೆ ನೇಪಾಳಿ ರಾಯಭಾರಿಯಾಗಿ ಸೇವೆ ಸಲ್ಲಿಸಿದ ಸುಮ್ನಿಮಾ ಅವರ ತಂದೆ ಭೀಮ್ ಉದಾಸ್, “ನನ್ನ ಮಗಳ ಮದುವೆಗೆ ಹಾಜರಾಗಲು ನಾವು ರಾಹುಲ್‌ ಅವರಿಗೆ ಆಹ್ವಾನವನ್ನು ನೀಡಿದ್ದೇವೆ” ಎಂದು ತಿಳಿಸಿದ್ದಾರೆ.

ಸಿಎನ್‌ಎನ್ ವರದಿಗಾರ್ತಿಯಾಗಿದ್ದ ಸುಮ್ನಿಮಾ ಅವರು ನಿಮಾ ಮಾರ್ಟಿನ್ ಶೆರ್ಪಾ ಅವರನ್ನು ವಿವಾಹವಾಗಲಿದ್ದಾರೆ. ಸುಮ್ನಿಮಾ ಅವರೀಗ ‘ದಿ ಲುಂಬಿನಿ ಮ್ಯೂಸಿಯಂ’ನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.

ಇದನ್ನೂ ಓದಿರಿ: ರಾಜಸ್ಥಾನ: ಧಾರ್ಮಿಕ ಧ್ವಜಗಳ ಹೆಸರಲ್ಲಿ ಘರ್ಷಣೆ; ಇಂಟರ್‌‌ನೆಟ್‌ ಸ್ಥಗಿತ

ಮಂಗಳವಾರದಂದು ವಿವಾಹ ಕಾರ್ಯಕ್ರಮವನ್ನು ಆಯೋಜಿಸಿದ್ದು, ಬೌದ್ದದಲ್ಲಿರುವ ಹಯಾತ್ ರೀಜೆನ್ಸಿ ಹೋಟೆಲ್‌ನಲ್ಲಿ ಮೇ 5 ರಂದು ಆರತಕ್ಷತೆ ನಡೆಯಲಿದೆ ಎಂದು ವಧುವಿನ ತಂದೆ ಭೀಮ್ ಅವರು ಕಠ್ಮಂಡು ಪೋಸ್ಟ್‌ಗೆ ತಿಳಿಸಿದ್ದಾರೆ.

ಕೆಲವು ಭಾರತೀಯ ವಿವಿಐಪಿಗಳು ಮದುವೆಯಲ್ಲಿ ಪಾಲ್ಗೊಳ್ಳಲು ಕಠ್ಮಂಡುವಿಗೆ ಆಗಮಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ಮಾಳವಿಯಾನಿಗೆ ಮಾಡಲು ಕೆಲಸವಿಲ್ಲಾ… ಇದನ್ನ ಮಾಡಿದ್ದಾನೆ… ಇಲ್ಲಿ ಅಶ್ವತ್ತನಾರಾಯಣ ಎಷ್ಟು ನುಂಗ್ಯಾನ ಅನ್ನೋದರ ಬಗ್ಗೆ ಮಾಳವೀಯಾ ಮುಕ್ಳ್ಯಾಗ ಧಮ್ ಇದ್ದ್ರ ಮಾತನಾಡಲಿ….

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...