Homeಮುಖಪುಟನೇಪಾಳದ ಸ್ನೇಹಿತೆ ಮದುವೆಯಲ್ಲಿ ರಾಹುಲ್ ಇದ್ದಾರೆ ಹೊರತು ನವಾಜ಼್ ಶರೀಫ್‌ ಜೊತೆ ಕೇಕ್‌ ಕಟ್‌‌ ಮಾಡಿಲ್ಲ:...

ನೇಪಾಳದ ಸ್ನೇಹಿತೆ ಮದುವೆಯಲ್ಲಿ ರಾಹುಲ್ ಇದ್ದಾರೆ ಹೊರತು ನವಾಜ಼್ ಶರೀಫ್‌ ಜೊತೆ ಕೇಕ್‌ ಕಟ್‌‌ ಮಾಡಿಲ್ಲ: ಕಾಂಗ್ರೆ‌ಸ್‌

- Advertisement -
- Advertisement -

ಸ್ನೇಹಿತೆಯ ವಿವಾಹಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇಪಾಳಕ್ಕೆ ಭೇಟಿ ನೀಡಿದ್ದನ್ನೂ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ವಿವಾದವನ್ನಾಗಿಸಿದ್ದು, ಕಾಂಗ್ರೆಸ್ ಖಡಕ್‌ ಪ್ರತಿಕ್ರಿಯೆ ನೀಡಿದೆ.

ಮಂಗಳವಾರ ಬಿಜೆಪಿ ಮುಖಂಡರು ಹಾಗೂ ಬೆಂಬಲಿಗರು ಟ್ವೀಟ್‌ಗಳ ಸುರಿಮಳೆ ಸುರಿಸಿದ್ದು, ರಾಹುಲ್‌ ಗಾಂಧಿ ಪಬ್‌‌ನಲ್ಲಿದ್ದಾರೆ ಎಂದು ಆರೋಪಿಸಿದ್ದಾರೆ.

“ಸ್ನೇಹಿತೆಯ ಮದುವೆಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಆಪ್ತ ಹಾಗೂ ನೆರೆಯ ರಾಷ್ಟ್ರಕ್ಕೆ ಭೇಟಿ ನೀಡುವುದು ಅಪರಾಧವಲ್ಲ” ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ. “ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪುತ್ರಿಯ ವಿವಾಹಕ್ಕೆ 2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಠಾತ್ ಭೇಟಿ ನೀಡಿದ್ದಕ್ಕಿಂತ ಇದು ತುಂಬಾ ದೊಡ್ಡ ವಿಷಯವೇನಲ್ಲ” ಎಂದು ಕಾಂಗ್ರೆಸ್ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಹುಲ್ ಗಾಂಧಿ ಅವರು ನವಾಜ್ ಷರೀಫ್ ಅವರೊಂದಿಗೆ ಕೇಕ್ ಕತ್ತರಿಸಲು ಪ್ರಧಾನಿ ಮೋದಿಯಂತೆ ಆಹ್ವಾನಿತ ಅತಿಥಿಯಾಗಿ ಪಾಕಿಸ್ತಾನಕ್ಕೆ ಹೋಗಿಲ್ಲ. ಪಠಾಣ್‌ಕೋಟ್‌ನಲ್ಲಿ ಏನಾಗುತ್ತದೆ ಎಂದು ನಮಗೆ ತಿಳಿದಿದೆ” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

“ಸ್ನೇಹಿತೆಯ ವಿವಾಹದಲ್ಲಿ ಪಾಲ್ಗೊಳ್ಳಲು ನೆರೆಯ ಆಪ್ತ ದೇಶವಾದ ನೇಪಾಳಕ್ಕೆ ರಾಹುಲ್ ಗಾಂಧಿ ಹೋಗಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ. ಇದು ನಮ್ಮ ಸಂಸ್ಕೃತಿಯ ವಿಷಯ. ಇದು ಅಪರಾಧವಲ್ಲ. ಸ್ನೇಹಿತರು ಮತ್ತು ಕುಟುಂಬ ಸದಸ್ಯರೊಂದಿಗೆ ಮದುವೆಯಲ್ಲಿ ಪಾಲ್ಗೊಳ್ಳುವುದು ಅಪರಾಧ ಎಂದು ಪ್ರಧಾನಿ ಮತ್ತು ಬಿಜೆಪಿ ಶೀಘ್ರದಲ್ಲೇ ನಿರ್ಧರಿಸಬಹುದು” ಎಂದು ಕುಟುಕಿದ್ದಾರೆ.

ಬಿಜೆಪಿ ಮುಖಂಡ ಅಮಿತ್ ಮಾಳವಿಯಾ ಮಾಡಿರುವ ಟ್ವೀಟ್‌ಗೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನೇಪಾಳದ ಕಠ್ಮಂಡುವಿಗೆ ಸೋಮವಾರ ರಾಹುಲ್ ಭೇಟಿ ನೀಡಿರುವುದಾಗಿ ‘ದಿ ಕಠ್ಮಂಡು ಪೋಸ್ಟ್‌’ ಸುದ್ದಿ ಜಾಲತಾಣ ವರದಿ ಮಾಡಿದೆ.

“ರಾಹುಲ್‌ ಅವರು ಸೋಮವಾರ ಸಂಜೆ 4:40ರ ವೇಳೆಗೆ ವಿಸ್ತಾರಾ ಏರ್‌ಲೈನ್ಸ್ ವಿಮಾನದಲ್ಲಿ ಕಠ್ಮಂಡುವಿಗೆ ಬಂದಿಳಿದರು. ಇವರೊಂದಿಗೆ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಇತರ ಮೂವರು ಇದ್ದರು” ಎಂದು ಭದ್ರತಾ ಮೂಲಗಳು ಖಚಿತಪಡಿಸಿರುವುದಾಗಿ ವರದಿ ಹೇಳಿದೆ.

ರಾಹುಲ್‌ ಗಾಂಧಿ ಮತ್ತು ಅವರ ಸ್ನೇಹಿತರು ನೇಪಾಳದ ನಕ್ಸಲ್‌ನ ಕಠ್ಮಂಡು ಮ್ಯಾರಿಯಟ್ ಹೋಟೆಲ್‌ನಲ್ಲಿ ತಂಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಹುಲ್‌ ಅವರು ತಮ್ಮ ನೇಪಾಳಿ ಸ್ನೇಹಿತೆ, ಸಿಎನ್‌ಎನ್‌ ಮಾಧ್ಯಮದ ಮಾಜಿ ಪತ್ರಕರ್ತೆ ಸುಮ್ನಿಮಾ ಉದಾಸ್ ಅವರ ವಿವಾಹದಲ್ಲಿ ಪಾಲ್ಗೊಳ್ಳಲು ಕಠ್ಮಂಡುವಿಗೆ ತೆರಳಿದ್ದಾರೆ.

ಮ್ಯಾನ್ಮಾರ್‌ಗೆ ನೇಪಾಳಿ ರಾಯಭಾರಿಯಾಗಿ ಸೇವೆ ಸಲ್ಲಿಸಿದ ಸುಮ್ನಿಮಾ ಅವರ ತಂದೆ ಭೀಮ್ ಉದಾಸ್, “ನನ್ನ ಮಗಳ ಮದುವೆಗೆ ಹಾಜರಾಗಲು ನಾವು ರಾಹುಲ್‌ ಅವರಿಗೆ ಆಹ್ವಾನವನ್ನು ನೀಡಿದ್ದೇವೆ” ಎಂದು ತಿಳಿಸಿದ್ದಾರೆ.

ಸಿಎನ್‌ಎನ್ ವರದಿಗಾರ್ತಿಯಾಗಿದ್ದ ಸುಮ್ನಿಮಾ ಅವರು ನಿಮಾ ಮಾರ್ಟಿನ್ ಶೆರ್ಪಾ ಅವರನ್ನು ವಿವಾಹವಾಗಲಿದ್ದಾರೆ. ಸುಮ್ನಿಮಾ ಅವರೀಗ ‘ದಿ ಲುಂಬಿನಿ ಮ್ಯೂಸಿಯಂ’ನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.

ಇದನ್ನೂ ಓದಿರಿ: ರಾಜಸ್ಥಾನ: ಧಾರ್ಮಿಕ ಧ್ವಜಗಳ ಹೆಸರಲ್ಲಿ ಘರ್ಷಣೆ; ಇಂಟರ್‌‌ನೆಟ್‌ ಸ್ಥಗಿತ

ಮಂಗಳವಾರದಂದು ವಿವಾಹ ಕಾರ್ಯಕ್ರಮವನ್ನು ಆಯೋಜಿಸಿದ್ದು, ಬೌದ್ದದಲ್ಲಿರುವ ಹಯಾತ್ ರೀಜೆನ್ಸಿ ಹೋಟೆಲ್‌ನಲ್ಲಿ ಮೇ 5 ರಂದು ಆರತಕ್ಷತೆ ನಡೆಯಲಿದೆ ಎಂದು ವಧುವಿನ ತಂದೆ ಭೀಮ್ ಅವರು ಕಠ್ಮಂಡು ಪೋಸ್ಟ್‌ಗೆ ತಿಳಿಸಿದ್ದಾರೆ.

ಕೆಲವು ಭಾರತೀಯ ವಿವಿಐಪಿಗಳು ಮದುವೆಯಲ್ಲಿ ಪಾಲ್ಗೊಳ್ಳಲು ಕಠ್ಮಂಡುವಿಗೆ ಆಗಮಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ಮಾಳವಿಯಾನಿಗೆ ಮಾಡಲು ಕೆಲಸವಿಲ್ಲಾ… ಇದನ್ನ ಮಾಡಿದ್ದಾನೆ… ಇಲ್ಲಿ ಅಶ್ವತ್ತನಾರಾಯಣ ಎಷ್ಟು ನುಂಗ್ಯಾನ ಅನ್ನೋದರ ಬಗ್ಗೆ ಮಾಳವೀಯಾ ಮುಕ್ಳ್ಯಾಗ ಧಮ್ ಇದ್ದ್ರ ಮಾತನಾಡಲಿ….

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...